Homeಕರ್ನಾಟಕಮಕ್ಕಳ ಮನೋವಿಕಾಸಕ್ಕಾಗಿಯೇ ಸ್ಥಾಪಿತವಾದ ‘ಎಲ್ಲರ ಪುಸ್ತಕ’ ಪ್ರಕಾಶನದಿಂದ ವಿನೂತನ ಪ್ರಯೋಗ

ಮಕ್ಕಳ ಮನೋವಿಕಾಸಕ್ಕಾಗಿಯೇ ಸ್ಥಾಪಿತವಾದ ‘ಎಲ್ಲರ ಪುಸ್ತಕ’ ಪ್ರಕಾಶನದಿಂದ ವಿನೂತನ ಪ್ರಯೋಗ

ಮಕ್ಕಳಿಗಾಗಿಯೇ ಪುಸ್ತಕಗಳನ್ನು ಹೊರತರಲು ಸ್ಥಾಪಿತವಾಗಿರುವ ‘ಎಲ್ಲರ ಪುಸ್ತಕ’ ಪ್ರಕಾಶನ| ಮಕ್ಕಳ ದಿನಾಚರಣೆಯ ವಿಶೇಷ ವರದಿ

- Advertisement -
- Advertisement -

“ನನ್ನ ಮಗಳು ಸುರಗಿಗಾಗಿ ಕನ್ನಡದಲ್ಲಿ ಚಿತ್ರಪುಸ್ತಕಗಳನ್ನು ಹುಡುಕಲಾರಂಭಿಸಿದೆ. ಇಂಗ್ಲಿಷ್‌ನಲ್ಲಿ ಮಕ್ಕಳಿಗಾಗಿ ಚಿತ್ರ ಪುಸ್ತಕಗಳು ಸಿಗುತ್ತಿದ್ದವು. ಆದರೆ ಕನ್ನಡದಲ್ಲಿ ಇಲ್ಲದಿರುವುದನ್ನು ಗಮನಿಸಿದೆ. ನನ್ನ ಮಗಳಿಗಾಗಿ ಚಿತ್ರ ಪುಸ್ತಕವನ್ನು ಬರೆದೆ. ಇದೇ ಪುಸ್ತಕವನ್ನು ನನ್ನಲ್ಲಿ ಕಲಿಯುತ್ತಿದ್ದ ಮಕ್ಕಳಿಗೂ ತೋರಿಸಿದಾಗ ಆ ಮಕ್ಕಳು ಬಹಳ ಖುಷಿಪಡುತ್ತಿದ್ದರು. ಹೀಗಾಗಿ ಇಂತಹ ಪುಸ್ತಕಗಳನ್ನು ಹೊರತರಬೇಕೆಂದು ನಿರ್ಧರಿಸಿ, ‘ಎಲ್ಲರ ಪುಸ್ತಕ’ ಎಂಬ ಪ್ರಕಾಶನ ಆರಂಭಿಸಲಾಯಿತು” ಎನ್ನುತ್ತಾರೆ ಚಿತ್ರ ಕಲಾವಿದೆ, ಶಿಕ್ಷಕಿ ವನಿತಾ ಅಣ್ಣಯ್ಯ ಯಾಜಿ.

ಮೂಲತಃ ಹೊನ್ನಾವರದವರಾದ ವನಿತಾ ಯಾಜಿಯವರು ನೀನಾಸಂ ವಿದ್ಯಾರ್ಥಿಯೂ ಹೌದು.  ನೀನಾಸಂ ಮತ್ತು ಶಾಂತಿನಿಕೇತನದಲ್ಲಿ ಕಲೆ ಮತ್ತು ನಟನೆಯನ್ನು ಅಭ್ಯಾಸ ಮಾಡಿರುವ ಅವರು ತಮ್ಮ ಪತಿ ಕೈಲಾಶ್‌ ತಿಪಟೂರು ಅವರೊಂದಿಗೆ ಸೇರಿ ‘ಎಲ್ಲರ ಪುಸ್ತಕ’ ಎಂಬ ಪ್ರಕಾಶನವನ್ನು ಆರಂಭಿಸಿ ಮಕ್ಕಳಿಗಾಗಿ ಚಿತ್ರಪುಸ್ತಕಗಳನ್ನು ಹೊರತರುತ್ತಿದ್ದಾರೆ.

‘ಟೊಮೊಟೋ ಫಿಶ್‌’, ‘ಮೊದಲ ಓದು’, ‘ರುಚಿ’, ‘ನವಿಲೂರ ಸಂತೆ’, ‘ಏಕೆ ಬೇಕು ಕನ್ನಡ’, ‘ಬೀಜ’, ‘ಚಿಟ್ಟೆ’ ಎಂಬ ಚಿತ್ರಪುಸ್ತಕಗಳನ್ನು ಹೊರತರಲಾಗಿದ್ದು, ಅದರಲ್ಲಿ ‘ಚಿಟ್ಟೆ’ ಚಿತ್ರಪುಸ್ತಕವು ಮೂರನೇ ತರಗತಿಯ ಪುಟಾಣಿ ಕಾವೇರಿ ಬರೆದದ್ದಾಗಿದೆ. ಕಳೆದ ಮಾರ್ಚ್‌‌ನಲ್ಲಿ ಪ್ರಕಾಶನ ಆರಂಭವಾಗಿದ್ದು, ಹೊಸ ಪ್ರಯೋಗಗಳ ಮೂಲಕ ಮಕ್ಕಳ ಮನೋವಿಕಾಸಕ್ಕೆ ಪ್ರೋತ್ಸಾಹಿಸುತ್ತಿದೆ. ಡಿಜಿಟಲ್‌ ಕಲೆಯನ್ನು ಬಳಸದೆ ಕೈಯಲ್ಲೇ ಚಿತ್ರಗಳನ್ನು ಬರೆದು ಪ್ರಕಟಿಸುತ್ತಿರುವುದು ಮತ್ತೊಂದು ವಿಶೇಷ. ಮಕ್ಕಳಿಗೆ ಚಿತ್ರಕಲೆಯ ಮೂಲ ಪರಿಚಯವೂ ಆಗಬೇಕೆಂಬುದು ವನಿತಾ ದಂಪತಿಯ ಆಶಯ.

“ಚಿಟ್ಟೆ ಪುಸ್ತಕದ ಕರ್ತೃ ಕಾವೇರಿ, ಪೂರ್ಣ ಶಾಲೆಯಲ್ಲಿ ನನ್ನ ವಿದ್ಯಾರ್ಥಿ ಆಗಿದ್ದಳು. ಪುಟ್ಟ ಮಕ್ಕಳಿಗೆ ಪೇಪರ್, ಪೇಂಟ್ ಕೊಟ್ಟು ಇಷ್ಟಪಟ್ಟದ್ದನ್ನು ಚಿತ್ರಿಸಲು ಬಿಡುತ್ತಿದ್ದೆವು. ಏಳು ವರ್ಷದ ಮಗು ಕಾವೇರಿ ಮೂವತ್ತು ನಿಮಿಷಗಳ ತರಗತಿಯಲ್ಲಿ 15ರಿಂದ 20 ಪೇಂಟಿಂಗ್ ಮಾಡಿರುತ್ತಿದ್ದಳು. ಕಾವೇರಿಗೆ 8 ವರ್ಷವಾಗುವ ಹೊತ್ತಿಗೆ ಹೆಚ್ಚು ನಿಖರವಾಗಿ ಪೇಂಟಿಂಗ್ ಮಾಡಿ, ವಸ್ತು ವಿಷಯವನ್ನು ಒಳಗೊಂಡು ಚಿತ್ರಿಸಲು ಶುರುಮಾಡಿದಳು. ಈ ಪುಸ್ತಕ ಆಕೆ ಮೂರನೇ ತರಗತಿಯಲ್ಲಿದ್ದಾಗ ಚಿತ್ರಿಸಿದ್ದು” ಎನ್ನುತ್ತಾರೆ ವನಿತಾ ಯಾಜಿ.

ಇದನ್ನೂ ಓದಿರಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ಆನ್‌ಲೈನ್‌ ಮೂಲಕ ಮಕ್ಕಳಿಗೆ ತರಗತಿಗಳನ್ನು ವನಿತಾ ನಡೆಸಿಕೊಡುತ್ತಿದ್ದಾರೆ. ಕೇರಳಾ, ದೆಹಲಿಯ ಮಕ್ಕಳೂ ತರಗತಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇವರ ಚಿತ್ರಪುಸ್ತಕ ಪ್ರಯೋಗಕ್ಕೆ ಉತ್ತಮ ಪ್ರತಿಕ್ರಿಯೆಗಳೂ ವ್ಯಕ್ತವಾಗುತ್ತಿವೆ. ಈವರೆಗೆ ನಾಲ್ಕು ಪುಸ್ತಕಗಳನ್ನು ಹೊರತಂದಿದ್ದು, ಮಕ್ಕಳ ದಿನಾಚರಣೆಯಂದು (ಭಾನುವಾರ, ನವೆಂಬರ್‌‌ 14, 2021) ಮತ್ತೆ ಮೂರು ಪುಸ್ತಕಗಳನ್ನು ಎಲ್ಲರ ಪುಸ್ತಕ ಪ್ರಕಾಶನ ಪ್ರಕಟಿಸಿದೆ.

‘ಏಕೆ ಬೇಕು ಕನ್ನಡ!?’ ಪುಸ್ತಕವು ಕನ್ನಡ ಭಾಷೆಯ ಬೆಡಗು, ಕರ್ನಾಟಕದ ವೈವಿಧ್ಯತೆಯನ್ನು ಸರಳವಾಗಿ ಮಕ್ಕಳಿಗೆ ಪರಿಚಯಿಸುವ ಪುಸ್ತಕವಾಗಿದೆ. ‘ಟೊಮಾಟೊ ಫಿಶ್’ ಪ್ರಕಾಶನದ ಮೊದಲ ಕತೆ-ಚಿತ್ರ ಪುಸ್ತಕ. ‘ಚಿಟ್ಟೆ’ ಮಕ್ಕಳಲ್ಲಿ ಕಥೆಕಟ್ಟುವ, ಚಿತ್ರ ಬರೆಯುವ ಕೌಶಲವನ್ನು ಹೆಚ್ಚಿಸುವ ದೃಷ್ಟಿಯಿಂದ ಪ್ರಕಟವಾದ ಪುಸ್ತಕ.

“ನಮ್ಮ ಮೊದಲ ಎರಡು ಪುಸ್ತಕಗಳಿಂದಲೂ ಈವರೆಗೆ ಹೊಸತನ, ಗುಣಮಟ್ಟವನ್ನು ಹೆಚ್ಚಿಸಲು ಪರಿಶ್ರಮ ಪಡುತ್ತಿದ್ದೇವೆ. ನಮ್ಮ ಪುಸ್ತಕಗಳ ಪುಟವಿನ್ಯಾಸ ಮಾಡುತ್ತಿರುವ ಮನೋಜ್ ಹಾಗೂ ಎಲ್ಲಾ ಮುದ್ರಕರ ಶ್ರಮವನ್ನು ನಾವು ಇಲ್ಲಿ ನೆನೆಯಬಯಸುತ್ತೇವೆ. ಪ್ರಕಾಶನ ಪ್ರಾರಂಭವಾದ ಮೇಲೆ ನಮ್ಮ ಕಪಾಟಿನಲ್ಲಿ ಪುಸ್ತಕಗಳು ದ್ವಿಗುಣಗೊಂಡಿವೆ. ಹಲವು ಪ್ರಕಾಶಕರ ಅದ್ಭುತ ಪುಸ್ತಕಗಳು ನಮ್ಮನ್ನು ಬೆರಗುಗೊಳಿಸಿವೆ. ಕನ್ನಡದಲ್ಲಿ ಇಂಥ ಹತ್ತಾರು ಪುಸ್ತಕಗಳನ್ನು ರೂಪಿಸಬೇಕು ಎಂಬ ಉತ್ಸಾಹಕ್ಕೆ ಸ್ಫೂರ್ತಿ ನೀಡಿವೆ. ಇದರ ಫಲವಾಗಿ ಈ ಸಲದ ನಮ್ಮ ಪುಸ್ತಕಗಳು ಸುಂದರವಾಗಿ ಮೂಡಿಬಂದಿವೆ” ಎಂಬುದು ವನಿತಾ ದಂಪತಿಯ ಸಂತೃಪ್ತಿ.

ಮಕ್ಕಳಿಗಾಗಿ ಚಿತ್ರಪುಸ್ತಕಗಳನ್ನು ಪ್ರಕಟಿಸುತ್ತಿರುವ ವನಿತಾ ಯಾಜಿ, ಕೈಲಾಶ್‌ ತಿಪಟೂರು ಅವರು ತಮ್ಮ ಮಗು ಸುರಗಿಯೊಂದಿಗೆ.

“ಭಾಷೆಗೆ ಮೊದಲು ಮನುಷ್ಯ ಸಂವಹನಕ್ಕಾಗಿ ಚಿತ್ರಗಳನ್ನು ಬಿಡಿಸುತ್ತಿದ್ದ. ಬೇಟೆಯ ಸೊಗಸನ್ನು, ರೋಚಕತೆಯನ್ನು ಅಭಿನಯಿಸಿ ತೋರಿಸುತ್ತಿದ್ದ, ಚಪ್ಪಾಳೆ ಗಿಟ್ಟಿಸುತ್ತಿದ್ದ. ಪುರಾತನ ನಾಗರಿಕತೆಗಳ ಪುರಾವೆಯಂತೆ ಭೂಮಿಯ ತುಂಬ ಹಲವು ಚಿತ್ರ, ನಕಾಶೆಗಳು ಉಳಿದು ಹೋಗಿವೆ. ಚಿತ್ರ ಬರೆಯುವುದು ಆಡುವುದಕ್ಕೆ ಮೊದಲು ಮನುಷ್ಯ ಕಂಡುಕೊಂಡ ಅಭಿವ್ಯಕ್ತಿ. ಇಂದಿಗೆ ಚಿತ್ರಕಲೆಯನ್ನು ಆಡಲಾಗದ ಭಾವಗಳ ಅಭಿವ್ಯಕ್ತಿಗೆ ಬಳಸಿ ಚಿಕಿತ್ಸೆ ನೀಡುವುದಿದೆ. ಸಂತೋಷಕ್ಕೆ, ಏಕಾಗ್ರತೆಗೆ, ಕಾಲ ಕಳೆಯಲು, ಮಕ್ಕಳ ಬೆರಳುಗಳ ಸರಾಗ ಚಲನೆಗೆ, ಏನೂ ಕಾರಣವೇ ಇಲ್ಲದೆ ಚಿತ್ರ ಬರೆಯುವುದು ಎಲ್ಲಾ ವಯಸ್ಸಿನವರಿಗೂ ಅಚ್ಚು ಮೆಚ್ಚು. ಪ್ರತಿಯೊಬ್ಬ ವ್ಯಕ್ತಿಯೂ ಕಲಾವಿದನೇ. ಸರಿಯಾದ ಮಾರ್ಗದರ್ಶನವಿಲ್ಲದೆ, ಮುಜುಗರಕ್ಕೆ ಒಳಗಾಗಿ, ಬರೀ ಕೌಶಲವನ್ನು ಕಲೆಯೆಂದು ತಪ್ಪು ಗ್ರಹಿಸಿ ಚಿತ್ರಿಸುವುದ ಬಿಟ್ಟಿರುವ ಬಹುತೇಕ ಮಂದಿ ತಮ್ಮಗನಿಸಿದ್ದನ್ನು, ತಮ್ಮತನವನ್ನು ಚಿತ್ರಿಸಿದರೆ ನಿರಾಳವಾಗಿ ಬಿಡುತ್ತಾರೆ” ಎಂದು ಚಿತ್ರಕಲೆಯ ಮಹತ್ವವನ್ನು ವಿವರಿಸುತ್ತಾರೆ ವನಿತಾ ಯಾಜಿ.

(‘ಎಲ್ಲರ ಪುಸ್ತಕ’ ಪ್ರಕಾಶನದ ಚಿತ್ರಪುಸ್ತಕಗಳಿಗಾಗಿ ಮೊ.ಸಂ. 9141184535, ಇಮೇಲ್‌- [email protected] ಸಂಪರ್ಕಿಸಬಹುದು)


ಇದನ್ನೂ ಓದಿರಿ: ಕಿತ್ತೂರು ಕರ್ನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆ; ಜಿಲ್ಲೆಯಲ್ಲಿ ಗೊಂದಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...