Homeಕರ್ನಾಟಕಮಕ್ಕಳ ಮನೋವಿಕಾಸಕ್ಕಾಗಿಯೇ ಸ್ಥಾಪಿತವಾದ ‘ಎಲ್ಲರ ಪುಸ್ತಕ’ ಪ್ರಕಾಶನದಿಂದ ವಿನೂತನ ಪ್ರಯೋಗ

ಮಕ್ಕಳ ಮನೋವಿಕಾಸಕ್ಕಾಗಿಯೇ ಸ್ಥಾಪಿತವಾದ ‘ಎಲ್ಲರ ಪುಸ್ತಕ’ ಪ್ರಕಾಶನದಿಂದ ವಿನೂತನ ಪ್ರಯೋಗ

ಮಕ್ಕಳಿಗಾಗಿಯೇ ಪುಸ್ತಕಗಳನ್ನು ಹೊರತರಲು ಸ್ಥಾಪಿತವಾಗಿರುವ ‘ಎಲ್ಲರ ಪುಸ್ತಕ’ ಪ್ರಕಾಶನ| ಮಕ್ಕಳ ದಿನಾಚರಣೆಯ ವಿಶೇಷ ವರದಿ

- Advertisement -
- Advertisement -

“ನನ್ನ ಮಗಳು ಸುರಗಿಗಾಗಿ ಕನ್ನಡದಲ್ಲಿ ಚಿತ್ರಪುಸ್ತಕಗಳನ್ನು ಹುಡುಕಲಾರಂಭಿಸಿದೆ. ಇಂಗ್ಲಿಷ್‌ನಲ್ಲಿ ಮಕ್ಕಳಿಗಾಗಿ ಚಿತ್ರ ಪುಸ್ತಕಗಳು ಸಿಗುತ್ತಿದ್ದವು. ಆದರೆ ಕನ್ನಡದಲ್ಲಿ ಇಲ್ಲದಿರುವುದನ್ನು ಗಮನಿಸಿದೆ. ನನ್ನ ಮಗಳಿಗಾಗಿ ಚಿತ್ರ ಪುಸ್ತಕವನ್ನು ಬರೆದೆ. ಇದೇ ಪುಸ್ತಕವನ್ನು ನನ್ನಲ್ಲಿ ಕಲಿಯುತ್ತಿದ್ದ ಮಕ್ಕಳಿಗೂ ತೋರಿಸಿದಾಗ ಆ ಮಕ್ಕಳು ಬಹಳ ಖುಷಿಪಡುತ್ತಿದ್ದರು. ಹೀಗಾಗಿ ಇಂತಹ ಪುಸ್ತಕಗಳನ್ನು ಹೊರತರಬೇಕೆಂದು ನಿರ್ಧರಿಸಿ, ‘ಎಲ್ಲರ ಪುಸ್ತಕ’ ಎಂಬ ಪ್ರಕಾಶನ ಆರಂಭಿಸಲಾಯಿತು” ಎನ್ನುತ್ತಾರೆ ಚಿತ್ರ ಕಲಾವಿದೆ, ಶಿಕ್ಷಕಿ ವನಿತಾ ಅಣ್ಣಯ್ಯ ಯಾಜಿ.

ಮೂಲತಃ ಹೊನ್ನಾವರದವರಾದ ವನಿತಾ ಯಾಜಿಯವರು ನೀನಾಸಂ ವಿದ್ಯಾರ್ಥಿಯೂ ಹೌದು.  ನೀನಾಸಂ ಮತ್ತು ಶಾಂತಿನಿಕೇತನದಲ್ಲಿ ಕಲೆ ಮತ್ತು ನಟನೆಯನ್ನು ಅಭ್ಯಾಸ ಮಾಡಿರುವ ಅವರು ತಮ್ಮ ಪತಿ ಕೈಲಾಶ್‌ ತಿಪಟೂರು ಅವರೊಂದಿಗೆ ಸೇರಿ ‘ಎಲ್ಲರ ಪುಸ್ತಕ’ ಎಂಬ ಪ್ರಕಾಶನವನ್ನು ಆರಂಭಿಸಿ ಮಕ್ಕಳಿಗಾಗಿ ಚಿತ್ರಪುಸ್ತಕಗಳನ್ನು ಹೊರತರುತ್ತಿದ್ದಾರೆ.

‘ಟೊಮೊಟೋ ಫಿಶ್‌’, ‘ಮೊದಲ ಓದು’, ‘ರುಚಿ’, ‘ನವಿಲೂರ ಸಂತೆ’, ‘ಏಕೆ ಬೇಕು ಕನ್ನಡ’, ‘ಬೀಜ’, ‘ಚಿಟ್ಟೆ’ ಎಂಬ ಚಿತ್ರಪುಸ್ತಕಗಳನ್ನು ಹೊರತರಲಾಗಿದ್ದು, ಅದರಲ್ಲಿ ‘ಚಿಟ್ಟೆ’ ಚಿತ್ರಪುಸ್ತಕವು ಮೂರನೇ ತರಗತಿಯ ಪುಟಾಣಿ ಕಾವೇರಿ ಬರೆದದ್ದಾಗಿದೆ. ಕಳೆದ ಮಾರ್ಚ್‌‌ನಲ್ಲಿ ಪ್ರಕಾಶನ ಆರಂಭವಾಗಿದ್ದು, ಹೊಸ ಪ್ರಯೋಗಗಳ ಮೂಲಕ ಮಕ್ಕಳ ಮನೋವಿಕಾಸಕ್ಕೆ ಪ್ರೋತ್ಸಾಹಿಸುತ್ತಿದೆ. ಡಿಜಿಟಲ್‌ ಕಲೆಯನ್ನು ಬಳಸದೆ ಕೈಯಲ್ಲೇ ಚಿತ್ರಗಳನ್ನು ಬರೆದು ಪ್ರಕಟಿಸುತ್ತಿರುವುದು ಮತ್ತೊಂದು ವಿಶೇಷ. ಮಕ್ಕಳಿಗೆ ಚಿತ್ರಕಲೆಯ ಮೂಲ ಪರಿಚಯವೂ ಆಗಬೇಕೆಂಬುದು ವನಿತಾ ದಂಪತಿಯ ಆಶಯ.

“ಚಿಟ್ಟೆ ಪುಸ್ತಕದ ಕರ್ತೃ ಕಾವೇರಿ, ಪೂರ್ಣ ಶಾಲೆಯಲ್ಲಿ ನನ್ನ ವಿದ್ಯಾರ್ಥಿ ಆಗಿದ್ದಳು. ಪುಟ್ಟ ಮಕ್ಕಳಿಗೆ ಪೇಪರ್, ಪೇಂಟ್ ಕೊಟ್ಟು ಇಷ್ಟಪಟ್ಟದ್ದನ್ನು ಚಿತ್ರಿಸಲು ಬಿಡುತ್ತಿದ್ದೆವು. ಏಳು ವರ್ಷದ ಮಗು ಕಾವೇರಿ ಮೂವತ್ತು ನಿಮಿಷಗಳ ತರಗತಿಯಲ್ಲಿ 15ರಿಂದ 20 ಪೇಂಟಿಂಗ್ ಮಾಡಿರುತ್ತಿದ್ದಳು. ಕಾವೇರಿಗೆ 8 ವರ್ಷವಾಗುವ ಹೊತ್ತಿಗೆ ಹೆಚ್ಚು ನಿಖರವಾಗಿ ಪೇಂಟಿಂಗ್ ಮಾಡಿ, ವಸ್ತು ವಿಷಯವನ್ನು ಒಳಗೊಂಡು ಚಿತ್ರಿಸಲು ಶುರುಮಾಡಿದಳು. ಈ ಪುಸ್ತಕ ಆಕೆ ಮೂರನೇ ತರಗತಿಯಲ್ಲಿದ್ದಾಗ ಚಿತ್ರಿಸಿದ್ದು” ಎನ್ನುತ್ತಾರೆ ವನಿತಾ ಯಾಜಿ.

ಇದನ್ನೂ ಓದಿರಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ಆನ್‌ಲೈನ್‌ ಮೂಲಕ ಮಕ್ಕಳಿಗೆ ತರಗತಿಗಳನ್ನು ವನಿತಾ ನಡೆಸಿಕೊಡುತ್ತಿದ್ದಾರೆ. ಕೇರಳಾ, ದೆಹಲಿಯ ಮಕ್ಕಳೂ ತರಗತಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇವರ ಚಿತ್ರಪುಸ್ತಕ ಪ್ರಯೋಗಕ್ಕೆ ಉತ್ತಮ ಪ್ರತಿಕ್ರಿಯೆಗಳೂ ವ್ಯಕ್ತವಾಗುತ್ತಿವೆ. ಈವರೆಗೆ ನಾಲ್ಕು ಪುಸ್ತಕಗಳನ್ನು ಹೊರತಂದಿದ್ದು, ಮಕ್ಕಳ ದಿನಾಚರಣೆಯಂದು (ಭಾನುವಾರ, ನವೆಂಬರ್‌‌ 14, 2021) ಮತ್ತೆ ಮೂರು ಪುಸ್ತಕಗಳನ್ನು ಎಲ್ಲರ ಪುಸ್ತಕ ಪ್ರಕಾಶನ ಪ್ರಕಟಿಸಿದೆ.

‘ಏಕೆ ಬೇಕು ಕನ್ನಡ!?’ ಪುಸ್ತಕವು ಕನ್ನಡ ಭಾಷೆಯ ಬೆಡಗು, ಕರ್ನಾಟಕದ ವೈವಿಧ್ಯತೆಯನ್ನು ಸರಳವಾಗಿ ಮಕ್ಕಳಿಗೆ ಪರಿಚಯಿಸುವ ಪುಸ್ತಕವಾಗಿದೆ. ‘ಟೊಮಾಟೊ ಫಿಶ್’ ಪ್ರಕಾಶನದ ಮೊದಲ ಕತೆ-ಚಿತ್ರ ಪುಸ್ತಕ. ‘ಚಿಟ್ಟೆ’ ಮಕ್ಕಳಲ್ಲಿ ಕಥೆಕಟ್ಟುವ, ಚಿತ್ರ ಬರೆಯುವ ಕೌಶಲವನ್ನು ಹೆಚ್ಚಿಸುವ ದೃಷ್ಟಿಯಿಂದ ಪ್ರಕಟವಾದ ಪುಸ್ತಕ.

“ನಮ್ಮ ಮೊದಲ ಎರಡು ಪುಸ್ತಕಗಳಿಂದಲೂ ಈವರೆಗೆ ಹೊಸತನ, ಗುಣಮಟ್ಟವನ್ನು ಹೆಚ್ಚಿಸಲು ಪರಿಶ್ರಮ ಪಡುತ್ತಿದ್ದೇವೆ. ನಮ್ಮ ಪುಸ್ತಕಗಳ ಪುಟವಿನ್ಯಾಸ ಮಾಡುತ್ತಿರುವ ಮನೋಜ್ ಹಾಗೂ ಎಲ್ಲಾ ಮುದ್ರಕರ ಶ್ರಮವನ್ನು ನಾವು ಇಲ್ಲಿ ನೆನೆಯಬಯಸುತ್ತೇವೆ. ಪ್ರಕಾಶನ ಪ್ರಾರಂಭವಾದ ಮೇಲೆ ನಮ್ಮ ಕಪಾಟಿನಲ್ಲಿ ಪುಸ್ತಕಗಳು ದ್ವಿಗುಣಗೊಂಡಿವೆ. ಹಲವು ಪ್ರಕಾಶಕರ ಅದ್ಭುತ ಪುಸ್ತಕಗಳು ನಮ್ಮನ್ನು ಬೆರಗುಗೊಳಿಸಿವೆ. ಕನ್ನಡದಲ್ಲಿ ಇಂಥ ಹತ್ತಾರು ಪುಸ್ತಕಗಳನ್ನು ರೂಪಿಸಬೇಕು ಎಂಬ ಉತ್ಸಾಹಕ್ಕೆ ಸ್ಫೂರ್ತಿ ನೀಡಿವೆ. ಇದರ ಫಲವಾಗಿ ಈ ಸಲದ ನಮ್ಮ ಪುಸ್ತಕಗಳು ಸುಂದರವಾಗಿ ಮೂಡಿಬಂದಿವೆ” ಎಂಬುದು ವನಿತಾ ದಂಪತಿಯ ಸಂತೃಪ್ತಿ.

ಮಕ್ಕಳಿಗಾಗಿ ಚಿತ್ರಪುಸ್ತಕಗಳನ್ನು ಪ್ರಕಟಿಸುತ್ತಿರುವ ವನಿತಾ ಯಾಜಿ, ಕೈಲಾಶ್‌ ತಿಪಟೂರು ಅವರು ತಮ್ಮ ಮಗು ಸುರಗಿಯೊಂದಿಗೆ.

“ಭಾಷೆಗೆ ಮೊದಲು ಮನುಷ್ಯ ಸಂವಹನಕ್ಕಾಗಿ ಚಿತ್ರಗಳನ್ನು ಬಿಡಿಸುತ್ತಿದ್ದ. ಬೇಟೆಯ ಸೊಗಸನ್ನು, ರೋಚಕತೆಯನ್ನು ಅಭಿನಯಿಸಿ ತೋರಿಸುತ್ತಿದ್ದ, ಚಪ್ಪಾಳೆ ಗಿಟ್ಟಿಸುತ್ತಿದ್ದ. ಪುರಾತನ ನಾಗರಿಕತೆಗಳ ಪುರಾವೆಯಂತೆ ಭೂಮಿಯ ತುಂಬ ಹಲವು ಚಿತ್ರ, ನಕಾಶೆಗಳು ಉಳಿದು ಹೋಗಿವೆ. ಚಿತ್ರ ಬರೆಯುವುದು ಆಡುವುದಕ್ಕೆ ಮೊದಲು ಮನುಷ್ಯ ಕಂಡುಕೊಂಡ ಅಭಿವ್ಯಕ್ತಿ. ಇಂದಿಗೆ ಚಿತ್ರಕಲೆಯನ್ನು ಆಡಲಾಗದ ಭಾವಗಳ ಅಭಿವ್ಯಕ್ತಿಗೆ ಬಳಸಿ ಚಿಕಿತ್ಸೆ ನೀಡುವುದಿದೆ. ಸಂತೋಷಕ್ಕೆ, ಏಕಾಗ್ರತೆಗೆ, ಕಾಲ ಕಳೆಯಲು, ಮಕ್ಕಳ ಬೆರಳುಗಳ ಸರಾಗ ಚಲನೆಗೆ, ಏನೂ ಕಾರಣವೇ ಇಲ್ಲದೆ ಚಿತ್ರ ಬರೆಯುವುದು ಎಲ್ಲಾ ವಯಸ್ಸಿನವರಿಗೂ ಅಚ್ಚು ಮೆಚ್ಚು. ಪ್ರತಿಯೊಬ್ಬ ವ್ಯಕ್ತಿಯೂ ಕಲಾವಿದನೇ. ಸರಿಯಾದ ಮಾರ್ಗದರ್ಶನವಿಲ್ಲದೆ, ಮುಜುಗರಕ್ಕೆ ಒಳಗಾಗಿ, ಬರೀ ಕೌಶಲವನ್ನು ಕಲೆಯೆಂದು ತಪ್ಪು ಗ್ರಹಿಸಿ ಚಿತ್ರಿಸುವುದ ಬಿಟ್ಟಿರುವ ಬಹುತೇಕ ಮಂದಿ ತಮ್ಮಗನಿಸಿದ್ದನ್ನು, ತಮ್ಮತನವನ್ನು ಚಿತ್ರಿಸಿದರೆ ನಿರಾಳವಾಗಿ ಬಿಡುತ್ತಾರೆ” ಎಂದು ಚಿತ್ರಕಲೆಯ ಮಹತ್ವವನ್ನು ವಿವರಿಸುತ್ತಾರೆ ವನಿತಾ ಯಾಜಿ.

(‘ಎಲ್ಲರ ಪುಸ್ತಕ’ ಪ್ರಕಾಶನದ ಚಿತ್ರಪುಸ್ತಕಗಳಿಗಾಗಿ ಮೊ.ಸಂ. 9141184535, ಇಮೇಲ್‌- [email protected] ಸಂಪರ್ಕಿಸಬಹುದು)


ಇದನ್ನೂ ಓದಿರಿ: ಕಿತ್ತೂರು ಕರ್ನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆ; ಜಿಲ್ಲೆಯಲ್ಲಿ ಗೊಂದಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...