Homeಮುಖಪುಟಶಾಹೀನ್ ಬಾಗ್: ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಪ್ರತಿಭಟಿಸಬೇಕು ಎಂದ ಸುಪ್ರೀಂ

ಶಾಹೀನ್ ಬಾಗ್: ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಪ್ರತಿಭಟಿಸಬೇಕು ಎಂದ ಸುಪ್ರೀಂ

ಶಾಂತಿಯುತವಾದ ಪ್ರತಿಭಟನೆಯ ಹಕ್ಕನ್ನು ನಾವು ಗೌರವಿಸುತ್ತೇವೆ. ಆದರೆ ಪ್ರತಿಭಟನೆಗೆಂದು ಗೊತ್ತುಪಡಿಸಿದ ಸ್ಥಳದಲ್ಲಿ ಮಾತ್ರ ಪ್ರತಿಭಟಿಸಬೇಕು" ಎಂದು ಸುಪ್ರೀಂ ಒತ್ತಿ ಹೇಳಿದೆ.

- Advertisement -
- Advertisement -

ಶಾಹಿನ್‌ಬಾಗ್‌ ಪ್ರತಿಭಟನೆಗೆ ಸಂಬಂಧಸಿದಂತೆ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, “ಸಾರ್ವಜನಿಕ ಸ್ಥಳಗಳನ್ನು ಅನಿರ್ದಿಷ್ಟಾವಧಿಗೆ ಆಕ್ರಮಿಸಿಕೊಳ್ಳಬಾರದು. ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಪ್ರತಿಭಟಿಸಬೇಕು” ಎಂದು ಹೇಳಿದೆ.

ಈ ವರ್ಷದ ಜನವರಿ-ಫೆಬ್ರವರಿ ತಿಂಗಳಿನಲ್ಲಿ ದೆಹಲಿಯ ಶಾಹೀನ್ ಬಾಗ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯ ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ, “ಭಿನ್ನಾಭಿಪ್ರಾಯ ಮತ್ತು ಪ್ರಜಾಪ್ರಭುತ್ವ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಹಾಗಾಗಿ ಇವೆರಡೂ ಜೊತೆಗೇ ಸಾಗುತ್ತವೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಶಾಹೀನ್‌ ಬಾಗ್‌ ಪ್ರತಿಭಟನಾಕಾರರನ್ನು ಹೊರಕಳಿಸಲು ಸಾಧ್ಯವಿಲ್ಲ, ಆದರೆ… : ಸುಪ್ರೀಂ ಕೋರ್ಟ್‌

“ಶಾಹಿನ್‌ಬಾಗ್ ಅಥವಾ ದೆಹಲಿಯಲ್ಲಿ ಅಥವಾ ಇನ್ನೆಲ್ಲಿಯಾದರೂ ಸಾರ್ವಜನಿಕ ಸ್ಥಳಗಳನ್ನು ಅನಿರ್ಧಿಷ್ಟವಾಗಿ ಆಕ್ರಮಿಸಿಕೊಳ್ಳುವಂತಿಲ್ಲ. ಈ ರೀತಿಯ ಪ್ರತಿಭಟನೆಗಳು ಸ್ವೀಕಾರಾರ್ಹವಲ್ಲ. ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಿ, ಇಂತಹ ಸ್ಥಳಗಳು ಅಡಚಣೆಯಿಂದ ಮುಕ್ತವಾಗಿದೆ ಎಂಬುದನ್ನು ಖಚಿತಪಡಿಸಬೇಕು. ಈ ಪ್ರತಿಭಟನೆಯನ್ನು ನಿಯಂತ್ರಿಸಲು ಆಡಳಿತವು ನ್ಯಾಯಾಲಯದ ಆದೇಶಕ್ಕಾಗಿ ಕಾಯಬಾರದು. ಶಾಂತಿಯುತವಾದ ಪ್ರತಿಭಟನೆಯ ಹಕ್ಕನ್ನು ನಾವು ಗೌರವಿಸುತ್ತೇವೆ. ಆದರೆ ಪ್ರತಿಭಟನೆಗೆಂದು ನಿರ್ದಿಷ್ಟ ಸ್ಥಳದಲ್ಲಿ ಮಾತ್ರ ಪ್ರತಿಭಟಿಸಬೇಕು” ಎಂದು ಸುಪ್ರೀಂ ಒತ್ತಿ ಹೇಳಿದೆ.

ಇದನ್ನೂ ಓದಿ: ದೆಹಲಿ ಲಾಕ್‌ಡೌನ್ ಮಧ್ಯೆ ಶಾಹೀನ್ ಬಾಗ್ ಸಿಎಎ ವಿರೋಧಿ ಪ್ರತಿಭಟನಾ ವೇದಿಕೆ ತೆರವು

ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್, ಕೃಷ್ಣ ಮುರಾರಿ ಮತ್ತು ಋಷಿಕೇಶ ರಾಯ್ ಅವರನ್ನೊಳಗೊಂಡ ನ್ಯಾಯಪೀಠವು, “ಸಾರ್ವಜನಿಕ ಸ್ಥಳಗಳಲ್ಲಿ ರಸ್ತೆ ತಡೆಯಂತಹ ಘಟನೆಗಳನ್ನು ತೆರವುಗೊಳಿಸುವುದು ಆಡಳಿತದ ಕರ್ತವ್ಯ. ಆದರೆ ಇದಕ್ಕೆ ಸಂಬಂಧಿಸಿದಂತೆ ಆಡಳಿತವು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ನ್ಯಾಯಾಲಯವು ಹಸ್ತಕ್ಷೇಪ ಮಾಡುತ್ತಿದೆ” ಎಂದು ಅಭಿಪ್ರಾಯಪಟ್ಟಿದೆ.

ಪೌರತ್ವ ತಿದ್ದುಪಡಿ ಕಾಯ್ದೆ, ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ವಿರುದ್ಧ ಪ್ರತಿಭಟನಾಕಾರರು, ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳು ದಕ್ಷಿಣ ದೆಹಲಿಯ ಶಾಹೀನ್ ಬಾಗ್‌ನಲ್ಲಿ ಹೋರಾಟ ನಡೆಸಿದ್ದರು.


ಇದನ್ನೂ ಓದಿ: ಅಂಬೇಡ್ಕರ್ ಪಟ – ತ್ರಿವರ್ಣ ಧ್ವಜ ಹಿಡಿದ ಮುಸ್ಲಿಂ ಮಹಿಳೆಯರು:ದೆಹಲಿಯಲ್ಲಿ ಹರ್ ಶಾಮ್ ಶಾಹೀನ್ ಬಾಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...