Homeಅಂತರಾಷ್ಟ್ರೀಯಫೇಸ್‌ಬುಕ್ ಇಂಡಿಯಾ ಬಗ್ಗೆ ವಿಚಾರಣೆ ನಡೆಸಿ: ಮಾರ್ಕ್ ಜುಕರ್‌ಬರ್ಗ್‌ಗೆ ಕೆ.ಸಿ.ವೇಣುಗೋಪಾಲ್ ಪತ್ರ

ಫೇಸ್‌ಬುಕ್ ಇಂಡಿಯಾ ಬಗ್ಗೆ ವಿಚಾರಣೆ ನಡೆಸಿ: ಮಾರ್ಕ್ ಜುಕರ್‌ಬರ್ಗ್‌ಗೆ ಕೆ.ಸಿ.ವೇಣುಗೋಪಾಲ್ ಪತ್ರ

ಫೇಸ್‌ಬುಕ್ ಮತ್ತು ಬಿಜೆಪಿ ಸಂಬಂಧದ ಕುರಿತು ಅಮೇರಿಕಾದ ವಾಲ್‌ಸ್ಟ್ರೀಟ್‌ ಜರ್ನಲ್ ನಲ್ಲಿ ಪ್ರಕಟವಾದ ವರದಿಯ ನಂತರ ಭಾರತದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ.

- Advertisement -
- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್‌ಗೆ ಪತ್ರ ಬರೆದು, ಕಂಪನಿಯ ಪ್ರಧಾನ ಕಚೇರಿಯಿಂದ ಫೇಸ್‌ಬುಕ್ ಇಂಡಿಯಾ ನಾಯಕತ್ವದ ತಂಡದ ಬಗ್ಗೆ ಉನ್ನತ ಮಟ್ಟದ ವಿಚಾರಣೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಫೇಸ್‌ಬುಕ್ ಮತ್ತು ಬಿಜೆಪಿ ಸಂಬಂಧದ ಕುರಿತು ಅಮೇರಿಕಾದ ವಾಲ್‌ಸ್ಟ್ರೀಟ್‌ ಜರ್ನಲ್ ನಲ್ಲಿ ಪ್ರಕಟವಾದ ವರದಿಯ ನಂತರ ಭಾರತದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ.

ಫೇಸ್‌ಬುಕ್‌ನ ಕಟೆಂಟ್‌ ಪಾಲಿಸಿ ನಿಯಮಗಳು ಆಡಳಿತರೂಢ ಬಿಜೆಪಿ ಪರವಾಗಿವೆ. ಬಿಜೆಪಿ ಮತ್ತು ಹಿಂದೂತ್ವ ನಾಯಕರು ದ್ವೇಷ ಭಾಷಣಗಳು ತನ್ನ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದರೂ ಕೂಡ ಫೇಸ್ ಬುಕ್ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು “ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ” ಎಂದು ಫೇಸ್‌ಬುಕ್‌ನ ಹಿರಿಯ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ಕರ್ನಾಟಕದ ಸಂಸದ ಅನಂತ್ ಕುಮಾರ್ ಹೆಗಡೆ ಪ್ರಚೋದನಾಕಾರಿ ಭಾಷಣಗಳಿಗೆ ಹಲವು ಬಾರಿ ವಿವಾದಕ್ಕೆ ಈಡಾಗಿದ್ದಾರೆ. ಅವರ ಮುಸ್ಲಿಂ ವಿರೋಧಿ ಪೋಸ್ಟ್‌ಗಳನ್ನು ತೆಗೆದುಹಾಕಲು ಫೇಸ್‌ಬುಕ್ ಮುಂದಾಗಿರಲಿಲ್ಲ. ಹಾಗೆಯೇ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾಸಿಂಗ್ ಹಲವು ದ್ವೇ‍ಷ ಭಾಷಣಗಳನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ಆದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್‌ಬುಕ್ ಭಾರತದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿಣಿ ಅಂಖಿ ದಾಸ್ ನಿರಾಕರಿಸಿದ್ದಾರೆ. ಆಡಳಿತಾರೂಢ ಪಕ್ಷದೊಂದಿಗಿರುವ ಸಂಬಂಧಕ್ಕೆ ಧಕ್ಕೆಯಾದೀತು ಎಂಬ ಹೆದರಿಕೆಯೇ ಇದಕ್ಕೆ ಕಾರಣ ಎಂದು ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದೆ. ಇವುಗಳನ್ನು ಉಲ್ಲೇಖಿಸಿ, ವೇಣುಗೊಪಾಲ್ ಈ ಪತ್ರ ಬರೆದಿದ್ದಾರೆ.

ಫೇಸ್‌ಬುಕ್‌ನ ಪ್ರಧಾನ ಕಛೇರಿಯಿಂದ ಇದರ ಕುರಿತು ಉನ್ನತ ಮಟ್ಟದಲ್ಲಿ ವಿಚಾರಣೆ ನಡೆಯಬೇಕು ಎಂದು ಪತ್ರದಲ್ಲಿ ಅವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...