Homeಅಂತರಾಷ್ಟ್ರೀಯಫೇಸ್‌ಬುಕ್ ಇಂಡಿಯಾ ಬಗ್ಗೆ ವಿಚಾರಣೆ ನಡೆಸಿ: ಮಾರ್ಕ್ ಜುಕರ್‌ಬರ್ಗ್‌ಗೆ ಕೆ.ಸಿ.ವೇಣುಗೋಪಾಲ್ ಪತ್ರ

ಫೇಸ್‌ಬುಕ್ ಇಂಡಿಯಾ ಬಗ್ಗೆ ವಿಚಾರಣೆ ನಡೆಸಿ: ಮಾರ್ಕ್ ಜುಕರ್‌ಬರ್ಗ್‌ಗೆ ಕೆ.ಸಿ.ವೇಣುಗೋಪಾಲ್ ಪತ್ರ

ಫೇಸ್‌ಬುಕ್ ಮತ್ತು ಬಿಜೆಪಿ ಸಂಬಂಧದ ಕುರಿತು ಅಮೇರಿಕಾದ ವಾಲ್‌ಸ್ಟ್ರೀಟ್‌ ಜರ್ನಲ್ ನಲ್ಲಿ ಪ್ರಕಟವಾದ ವರದಿಯ ನಂತರ ಭಾರತದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ.

- Advertisement -
- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್‌ಗೆ ಪತ್ರ ಬರೆದು, ಕಂಪನಿಯ ಪ್ರಧಾನ ಕಚೇರಿಯಿಂದ ಫೇಸ್‌ಬುಕ್ ಇಂಡಿಯಾ ನಾಯಕತ್ವದ ತಂಡದ ಬಗ್ಗೆ ಉನ್ನತ ಮಟ್ಟದ ವಿಚಾರಣೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಫೇಸ್‌ಬುಕ್ ಮತ್ತು ಬಿಜೆಪಿ ಸಂಬಂಧದ ಕುರಿತು ಅಮೇರಿಕಾದ ವಾಲ್‌ಸ್ಟ್ರೀಟ್‌ ಜರ್ನಲ್ ನಲ್ಲಿ ಪ್ರಕಟವಾದ ವರದಿಯ ನಂತರ ಭಾರತದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ.

ಫೇಸ್‌ಬುಕ್‌ನ ಕಟೆಂಟ್‌ ಪಾಲಿಸಿ ನಿಯಮಗಳು ಆಡಳಿತರೂಢ ಬಿಜೆಪಿ ಪರವಾಗಿವೆ. ಬಿಜೆಪಿ ಮತ್ತು ಹಿಂದೂತ್ವ ನಾಯಕರು ದ್ವೇಷ ಭಾಷಣಗಳು ತನ್ನ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದರೂ ಕೂಡ ಫೇಸ್ ಬುಕ್ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು “ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ” ಎಂದು ಫೇಸ್‌ಬುಕ್‌ನ ಹಿರಿಯ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ಕರ್ನಾಟಕದ ಸಂಸದ ಅನಂತ್ ಕುಮಾರ್ ಹೆಗಡೆ ಪ್ರಚೋದನಾಕಾರಿ ಭಾಷಣಗಳಿಗೆ ಹಲವು ಬಾರಿ ವಿವಾದಕ್ಕೆ ಈಡಾಗಿದ್ದಾರೆ. ಅವರ ಮುಸ್ಲಿಂ ವಿರೋಧಿ ಪೋಸ್ಟ್‌ಗಳನ್ನು ತೆಗೆದುಹಾಕಲು ಫೇಸ್‌ಬುಕ್ ಮುಂದಾಗಿರಲಿಲ್ಲ. ಹಾಗೆಯೇ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾಸಿಂಗ್ ಹಲವು ದ್ವೇ‍ಷ ಭಾಷಣಗಳನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ಆದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್‌ಬುಕ್ ಭಾರತದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿಣಿ ಅಂಖಿ ದಾಸ್ ನಿರಾಕರಿಸಿದ್ದಾರೆ. ಆಡಳಿತಾರೂಢ ಪಕ್ಷದೊಂದಿಗಿರುವ ಸಂಬಂಧಕ್ಕೆ ಧಕ್ಕೆಯಾದೀತು ಎಂಬ ಹೆದರಿಕೆಯೇ ಇದಕ್ಕೆ ಕಾರಣ ಎಂದು ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದೆ. ಇವುಗಳನ್ನು ಉಲ್ಲೇಖಿಸಿ, ವೇಣುಗೊಪಾಲ್ ಈ ಪತ್ರ ಬರೆದಿದ್ದಾರೆ.

ಫೇಸ್‌ಬುಕ್‌ನ ಪ್ರಧಾನ ಕಛೇರಿಯಿಂದ ಇದರ ಕುರಿತು ಉನ್ನತ ಮಟ್ಟದಲ್ಲಿ ವಿಚಾರಣೆ ನಡೆಯಬೇಕು ಎಂದು ಪತ್ರದಲ್ಲಿ ಅವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

0
2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ...