Homeಅಂಕಣಗಳುಆರ್ ಬಿ ಐ ಯ ಅಂತರಂಗವನ್ನರಸುತ್ತ...

ಆರ್ ಬಿ ಐ ಯ ಅಂತರಂಗವನ್ನರಸುತ್ತ…

- Advertisement -
- Advertisement -

ಭಾರತೀಯ ರಿಸರ್ವ್ ಬ್ಯಾಂಕಿನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅವರು ಬೆಳ್ಳುಳ್ಳಿ ದರ ರೂ 500 ರ  ಗಡಿ ದಾಟುತ್ತಿರುವಂತಹ ಸಂದರ್ಭದಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಂಕೆಗೆ ಸಿಗದ ಹಣದುಬ್ಬರದ ದಿನಮಾನದಲ್ಲಿ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡ ಸಂಜಯ್ ಮಲ್ಹೋತ್ರ  ಆರ್ಥಿಕ ಸ್ಥಿರತೆಯ ಜಪ ಮಾಡುತ್ತಾ ಜನರ ನಂಬಿಕೆ ಕಾಪಾಡಲು ಬದ್ಧ ಎಂದಿದ್ದಾರೆ.

ಅಧಿಕಾರ ವಹಿಸಿಕೊಂಡ ನಂತರ ಮಾಧ್ಯಮದವರೊಂದಿಗೆ  ಮಾತನಾಡುತ್ತಾ ದೇಶದ ಜನರು ಏನನ್ನು ಎದುರು ನೋಡುತ್ತಿದ್ದಾರೆ ಎಂಬ ಸ್ಪಷ್ಟ ಅರಿವಿದೆ. ಅವರ ನಂಬಿಕೆ ಬಗ್ಗೆಯೂ ತಿಳಿದಿದೆ. ಯಾವುದು ಆರ್ಥಿಕ ಬೆಳವಣಿಗೆ  ಯಾವುದು ಸ್ಥಿರ ಹಾಗೂ ನಿಶ್ಚಿತ ನೀತಿ ಎನ್ನುವ ತಿಳುವಳಿಕೆ ಇದೆ. ಈ ಗುರಿ ಸಾಧನೆಯ ಹಾದಿಯಲ್ಲಿ ಜನರ ಹಿತಾಸಕ್ತಿ ಕಾಪಾಡಲು ಒತ್ತು ನೀಡುವುದಾಗಿ ಹೇಳಿಕೊಂಡಿದ್ದಾರೆ.

ಸುಮಾರು 33 ವರ್ಷಗಳ ಹಣಕಾಸು ಇಲಾಖೆಗೆ ಸಂಬಂಧಪಟ್ಟ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಇರುವ ವಿಜಯ ಮಲೋಹೋತ್ರ ಅವರು ರಾಜಸ್ಥಾನ್ ಕೇಡರ್ ನ 1990 ಬ್ಯಾಚ್ಐಎಎಸ್ ಅಧಿಕಾರಿ. ಅವರು ಕಾನ್ಪುರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಯಿಂದ ಕಂಪ್ಯೂಟರ್ ಸೈನ್ಸ್ ನಲ್ಲಿ ಇಂಜಿನಿಯರಿಂಗ್ ಪದವಿ ಮತ್ತು ಅಮೆರಿಕಾದ ಪ್ರಿನ್ಸ್ ಟೌನ್ ವಿಶ್ವವಿದ್ಯಾನಿಲಯದಿಂದ ಸಾರ್ವಜನಿಕ ನೀತಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಇವರು ರಾಜಸ್ಥಾನ್ದ ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ನಂತರ ಕಂದಾಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಭಾರತದಲ್ಲಿ ಇಂದು ಜಾರಿಯಾಗಿರುವ ಹೊಸ ತೆರಿಗೆ ನೀತಿ ಜಿಎಸ್‌ಟಿಯ ಮಾಸ್ಟರ್ ಮೈಂಡ್ ಇವರೇ. ಭಾರತದಲ್ಲಿನ  ನೇರ ಆಗ ಪರೋಕ್ಷ ತೆರಿಗೆಗಳಿಗೆ ಸಂಬಂಧಿಸಿದಂತೆ  ಹೊಸ ತೆರಿಗೆ ನೀತಿ ರೂಪಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ.

ವಿಜಯ್ ಮಲ್ಹೋತ್ರರಿಗೆ  ಆರ್ಥಿಕ ವಿಚಾರಕ್ಕೆ ಸಂಬಂಧ ಪಟ್ಟಂತೆ ಸಾಕಷ್ಟು ಅನುಭವ  ಇದ್ದರೂ ನರೇಂದ್ರ ಮೋದಿಯಂತಹ ಸರ್ವಾಧಿಕಾರಿ ಮನೋಭಾವದ ವ್ಯಕ್ತಿಯೊಬ್ಬ ಪ್ರದಾನಿಯಾಗಿರುವ ಹಾಗು ದೇಶದ ಎಲ್ಲ ಸ್ವಾಯತ್ತ ಸಂಸ್ಥೆಗಳ ಸ್ವಾಯತ್ತತೆಯನ್ನು ಸರ್ವನಾಶ ಮಾಡಿರುವ ದೇಶದ ಸಂದರ್ಭದಲ್ಲಿ ಹೊಸ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡು ಮೋದಿ  ಅವರ ಅಣತಿಯಂತೆ ಕಾರ್ಯನಿರ್ವಹಿಸಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ಆದ್ದರಿಂದ ಆರ್ಥಿಕ ಸ್ಥಿರತೆಯ ಕುರಿತು ಬಾಲಿಸತನದಿಂದ ಕೂಡಿದ ಜಪ ಮಾಡುತ್ತಿದ್ದಾರೆ ಹಾಗು ಹೇಳಿಕೆ ನೀಡುತ್ತಿದ್ದಾರೆ.  ಹೀಗೆ ಆರ್ಥಿಕ ಸ್ಥಿರತೆ ಕುರಿತು ಜಪಿಸುತ್ತಿರುವ ಹೊಸ ಗವರ್ನರ್ ಗೆ  ಅಥವಾ ಅವರ ನೇತೃತ್ವದ  ಆರ್ ಬಿ ಐಗೆ  ಇಂದು ಬೆಳ್ಳುಳ್ಳಿಯ ಬೆಲೆ ರೂ.500ರ ಗಡಿ ದಾಟುತ್ತಿರುವಾಗ ಇದನ್ನು ತಡೆಯಲು ಸಾಧ್ಯವಾಗಬಹುದಾದ ಯಾವುದಾದರೂ ಮಾರ್ಗೋಪಾಯಗಳನ್ನು ರೂಪಿಸಲು ಸಾದ್ಯ ಇದೆಯೇ….. ಅಥವಾ ಬೆಲೆಯೇರಿಕೆಯನ್ನು ನಿಯಂತ್ರಿಸಲು  ಸಾದ್ಯವಿದೆಯೇ….?

ಹವಾನಿಯಂತ್ರಿತ ಕೊಠಡಿಯೊಳಗೆ ಕುಳಿತು ನೀಡಬಹುದಾದ ನಿರ್ದೇಶನಗಳು, ಸಲಹೆಗಳು ಈ ರೀತಿಯ ಬೆಲೆಯೇರಿಕೆಯನ್ನು ತಡೆಯಬಲ್ಲುದೇ….!?  ಈ ಕುರಿತು ಅವಲೋಕನ ನಡೆಸಿದಾಗ  ಕೆಲವೊಂದು ಸತ್ಯ  ಗೋಚರಿಸುತ್ತದೆ.  ಆರ್‌ಬಿಐಯ ಬಳಿ ಆರ್ಥಿಕ ಸ್ಥಿರತೆ ಕಾಯ್ದುಕೊಳ್ಳಲು ಇರುವ  ಸೂತ್ರ ರೆಪೋ ದರವನ್ನು ಏರಿಸುವ ಇಳಿಸುವ ಹಾಗೂ ನಗದು ಮೀಸಲು ಅನುಪಾತವನ್ನು (CRR- Cash Reserve Ratio-ನಗದು ಮೀಸಲು ಅನುಪಾತ. ಮೇಲ್ನೋಟಕ್ಕೆ ಇವರೆಡೂ ಬೇರೆ ಬೇರೆ ಎನಿಸಿದರೂ ಮೂಲದಲ್ಲಿ ಒಂದೇ ಆಗಿದೆ. ರೇಪೋ ಜನರನ್ನು ಸಾಲ ತೆಗೆದುಕೊಳ್ಳದಂತೆ ತಡೆದು ನಿಲ್ಲಿಸಿದರೆ  CRR ಹೆಚ್ಚಳ ಹೆಚ್ಚು ಸಾಲ ನೀಡದಂತೆ ಬ್ಯಾಂಕ್ ಗಳ ಕೈ ಕಟ್ಟಿ ಹಾಕುತ್ತದೆ )  ಹೆಚ್ಚಿಸುವ -ತಗ್ಗಿಸುವ ಕೆಲಸ ಮಾಡುವುದು. ಇದನ್ನು ಹೊರತುಪಡಿಸಿದರೆ ಇನ್ನೊಂದು ಯೋಜನೆ ನಮಗೆ ಕಾಣುತ್ತಿಲ್ಲ. ಹಣದುಬ್ಬರ ಉಂಟಾದಾಗ ಆರ್‌ಬಿಐ  ರೆಪೋ ದರ ಏರಿಸುತ್ತದೆ . ರೆಪೋ ದರವನ್ನು ಏರಿಸಿದರೆ ಬ್ಯಾಂಕ್ ಸಾಲಗಳ ಮೇಲಿನ ಬಡ್ಡಿ ಹೆಚ್ಚಾಗುತ್ತದೆಯಂತೆ. ಆರ್ ಬಿ ಐ ತನ್ನ ಈ ಕ್ರಮಕ್ಕೆ ಬ್ಯಾಂಕ್ ” ಸಾಲಗಳ ಮೇಲಿನ ಬಡ್ಡಿ ಕಡಿಮೆಯಾದರೆ ಜನತೆ ಹೆಚ್ಚು ಹೆಚ್ಚು ಸಾಲ ಪಡೆದುಕೊಳ್ಳಲು ಮುಂದಾಗುತ್ತಾರೆ ಮತ್ತು ಅದರಿಂದ ಮಾರುಕಟ್ಟೆಯಲ್ಲಿ ಹಣದ ಹರಿವು ಹೆಚ್ಚಾಗುತ್ತದೆ ಹಾಗೂ ಇದರಿಂದ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚುತ್ತದೆ. ಬೇಡಿಕೆ ಹೆಚ್ಚಾದರೆ ಗ್ರಾಹಕ ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ಇದೇ ಹಣದುಬ್ಬರ. ಬಡ್ಡಿದರ ಹೆಚ್ಚಾದರೆ ಜನತೆಗೆ ಸಾಲ ಪಡೆಯುವ ಆಸಕ್ತಿ ಕುಂದುತ್ತದೆ ಹಾಗೂ ಮಾರುಕಟ್ಟೆಯಲ್ಲಿ ಹಣದ ಹರಿವು ಕಡಿಮೆಯಾಗುತ್ತದೆ  ಮತ್ತು ಇದರಿಂದ ಗ್ರಾಹಕವಸ್ತುಗಳ ಬೇಡಿಕೆ ತಗ್ಗುತ್ತದೆ. ಈ ಮೂಲಕ ಬೆಲೆ ಏರಿಕೆಯನ್ನು ತಡೆಗಟ್ಟಬಹುದು  ಎಂಬ ಸಿದ್ದ ಉತ್ತರ ನೀಡುತ್ತದೆ.

ವಾಸ್ತವದಲ್ಲಿ  ಹಣದುಬ್ಬರವೆಂದರೆ ಬೆಲೆ ಏರಿಕೆ ಎಂಬುದು ನಿಜ. ಆದರೆ ಆರ್‌ಬಿಐ ಹೇಳುವಂತೆ ಹೆಚ್ಚಾಗುವ ಹಣದ ಹರಿವಿನ ಕಾರಣದಿಂದ ಹೆಚ್ಚುವ ಬೇಡಿಕೆ ಮಾತ್ರ ಬೆಲೆ ಏರಿಕೆಗೆ ಕಾರಣವಾಗುತ್ತದೆ ಎಂಬುದು ಶುದ್ಧ ಸುಳ್ಳು. ಹಣದುಬ್ಬರ ಉಂಟಾಗಲು ಮಾರುಕಟ್ಟೆಯಲ್ಲಿ ಹಣದ ಹೆಚ್ಚುವರಿ ಹರಿವು ಮಾತ್ರ ಕಾರಣವಾಗಲು ಸಾಧ್ಯವಿಲ್ಲ. ಬೇಡಿಕೆಗೆ ತಕ್ಕಂತೆ ವಸ್ತುಗಳ ಪೂರೈಕೆಯಾಗದಿದ್ದರೂ ವಸ್ತುಗಳ ಬೆಲೆ ಏರಿಕೆ ಕಂಡು ಬರುತ್ತದೆ ಹಾಗೂ ಈ ಮೂಲಕ ಹಣದುಬ್ಬರ ಉಂಟಾಗುತ್ತದೆ. ಉದಾಹರಣೆಗೆ ಬೆಳ್ಳುಳ್ಳಿ  ದರ ರೂ ಐದುನೂರು ದಾಟುತ್ತಿರುವುದು ಬೇಡಿಕೆಯಷ್ಟು ಬೆಳ್ಳುಳ್ಳಿ ಲಭ್ಯತೆ ಇರದಿರುವುದರರಿಂದ. ಅಕಾಲಿಕ ಅಥವಾ ಹೆಚ್ಚಾದ ಮಳೆಯಿಂದ ಬೆಳ್ಳುಳ್ಳಿ ಇಳುವರಿ ಕುಸಿತಕ್ಕೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ . ಆರ್ ಬಿ ಐ ಯ ರೆಪೋ ದರ ಏರಿಸುವಂತಹ ಕಾರ್ಯಗಳು ಕಾರ್ಯಸಾಧುವಾಗುತ್ತದೆಯೇ…..?. ಕೇವಲ ರೆಪೋ ದರ ಏರಿಸುವ ಅಥವಾ ಇಳಿಸುವ  ಕ್ರಮ ಕೈಗೊಂಡ ಮಾತ್ರಕ್ಕೆ ಎಲ್ಲವೂ ಸರಿ ಆಗುವುದಿಲ್ಲ.  ಹಾಗೆ ಆಗುವುದಿದ್ದರೆ ಟೊಮ್ಯಾಟೊ, ಮೆಣಸಿನ ಕಾಯಿ ಬೆಳೆಯುವಂತಹ  ರೈತರು ತಮ್ಮ ಬೆಳೆಗೆ ಸೂಕ್ತ ಬೆಲೆ ಸಿಗಧಿಧ್ಧಾಗ ತಮ್ಮ ಬೆಳೆಯನ್ನು ರಸ್ತೆಗಳಲ್ಲಿ ಚಲ್ಲಿ ಹೋಗುವಂತಹ ಪ್ರಸಂಗ ಬರುತ್ತಿರಲಿಲ್ಲ. ಇವುಗಳನ್ನು ಅರ್ಥಮಾಡಿಕೊಂಡರೆ ಆರ್‌ಬಿಐ ಸಮರ್ಥನೆ ಬರಿ ಬೂಸಿ ಅಷ್ಟೇ ಎನಿಸುವುದಿಲ್ಲವೇ?

ಮೇಲಾಗಿ ಆರ್ ಬಿ ಐ ಒಂದು ಬಂಡವಾಳಶಾಹಿ ನಿರ್ದೇಶಿತ ಸಂಸ್ಥೆ. ಅದರ ಕರ್ತವ್ಯಗಳು ಬಂಡವಾಳ ವ್ಯವಸ್ಥೆಯ ಬೆಳವಣಿಗೆಗೆ ಬೇಕಾದ ಅನುಕೂಲಕರ ವಾತಾವರಣ ನಿರ್ಮಿಸುವುದಾಗಿದೆ. ಕೇಂದ್ರದ ಬಂಡವಾಳಶಾಹಿಪರ ನೀತಿ ನಿಯಮಾವಳಿಗಳನ್ನು ಶಿರಸಾವಹಿಸಿ ಅನುಷ್ಠಾನಕ್ಕೆ ತರುವುದಷ್ಟೇ ಅದರ ಕರ್ತವ್ಯವಾಗಿದೆ. ಸದ್ಯದ ಚಿಲ್ಲರೆ ವಿಚಾರವನ್ನೇ ತೆಗೆದುಕೊಳ್ಳಿ. ಮಾರುಕಟ್ಟೆಯಲ್ಲಿ ಚಿಲ್ಲರೆ ಹಣದ ಅಭಾವ ತೀವ್ರವಾಗಿದೆ.  ಇಂತಹ ಸಂದರ್ಭದಲ್ಲಿ ಸಮರ್ಪಕ ಚಲಾವಣೆಗೆ ಬೇಕಾಗುವಷ್ಟು ಚಿಲ್ಲರೆ ಹಣ ಮುದ್ರಿಸಿ ಕೊರತೆ ನೀಗಲು ಗಮನ ಹರಿಸದೆ ಜಾಣ ಕುರುಡುತನ ಪ್ರದರ್ಶಿಸುತ್ತಿದೆ. ಚಿಲ್ಲರೆ ಅಭಾವವನ್ನು ಖುದ್ದು ಆರ್‌ಬಿಐಯೇ  ಮಾಡುತ್ತಿದೆ. ಈ ಮೂಲಕ  ಜನತೆ ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಡಿಜಿಟಲ್ ಹಣ ವರ್ಗಾವಣೆಗೆ ತೊಡಗಿಸಿಕೊಳ್ಳುತ್ತಿದ್ದಾರೆ. ಇದನ್ನು ನಾವು ಡಿಜಿಟಲ್ ಹಣ ವರ್ಗಾವಣೆಗೆ ಜನತೆಯನ್ನು ತೊಡಗುವಂತೆ ಮಾಡುತ್ತಿರುವ ಬಲತ್ಕಾರ ಎಂದು ವ್ಯಾಖ್ಯಾನಿಸದೆ ಇರಲು ಸಾದ್ಯವಿದೆಯೆ….? .

ಡಿಜಿಟಲ್ ಹಣ ವರ್ಗಾವಣೆ ಎಂಬುದು ಒಂದು ಸಾಮ್ರಾಜ್ಯವಾದಿ ಮಾರುಕಟ್ಟೆ, ಭಾರತದ ಈ ಅಗಾಧ ಜನ ಸಮೂಹ ನಗದು ಚಲಾವಣೆಯನ್ನು ತೊರೆದು ಡಿಜಿಟಲ್ ಹಣ ವರ್ಗಾವಣೆಗೆ ತೊಡಗಿಸಿಕೊಂಡರೆ ಅದೊಂದು ಅಗಾದವಾದ ಮಾರುಕಟ್ಟೆಯನ್ನು ನಿರ್ಮಿಸುತ್ತದೆ. ಹೀಗೆ ಜನತೆಯನ್ನು  ಗ್ರಾಹಕರನ್ನಾಗಿ ಮಾಡುವ ಹೊಣೆಗಾರಿಕೆಯನ್ನು ಆರ್ ಬಿ ಐ ಯೇ ಖುದ್ದು ತಾನೇ ಹೊತ್ತುಕೊಂಡಿದೆ. ಸ್ವಾವಲಂಬಿ ಜೀವಿಗಳು ತಮ್ಮ ನಿತ್ಯ ಬದುಕಿನ ಅವಶ್ಯಕತೆಗಾಗಿ ಮಾರುಕಟ್ಟೆಯನ್ನು ಅವಲಂಬಿಸಿ ಗ್ರಾಹಕರಾಗಿ ರೂಪುಗೊಂಡರೆಂದರೆ ಅದು ಹಣದುಬ್ಬರಕ್ಕೆ ಮುನ್ನುಡಿ ಬರೆದಂತೆ ಆಗುತ್ತದೆ. ಹಣದುಬ್ಬರದ ಮೂಲ ಪೀಠಿಕೆ ಅಲ್ಲಿಂದಲೇ ಆರಂಭಗೊಳ್ಳುತ್ತದೆ. ಹಾಗಾಗಿ ಹಣದುಬ್ಬರ ತರುವ ಮೇಲುಸ್ತುವಾರಿಯನ್ನು ಖುದ್ದು ಆರ್ ಬಿ ಐಯೇ ಹೊತ್ತುಕೊಂಡಿದೆ.

ಹಾಗಿದ್ದರೆ ರೆಪೋ ದರ ಏರಿಸುವ ಇಳಿಸುವ ಆರ್ ಬಿಐನ ಕ್ರಮ ಪ್ರಸ್ತುತ ಆರ್ಥಿಕತೆಯ ಮೇಲೆ ಬೀರಬಹುದಾದ  ಪರಿಣಾಮವಾದರೂ ಏನಿರಬಹುದು …?

ರೆಪೋ ದರ ಏರಿಸಿ ಆ ಮೂಲಕ ಸಾಲದ ಮೇಲಿನ ಬಡ್ಡಿದರ ಹೆಚ್ಚಿಸುವ ಕ್ರಮ ಸಹ ಹಣದುಬ್ಬರ ತಡೆಯುವ ನೆಪ ಹೇಳಿ ಬಂಡವಾಳಿಗರಿಗೆ ಲಾಭ ತಂದು ಕೊಡುವ ಕೆಲಸವನ್ನು ಮಾಡುತ್ತಿರುವುದನ್ನುಗಮನಿಸಬೇಕಿದೆ. ಮಾರುಕಟ್ಟೆಯಲ್ಲಿ ಹೆಚ್ಚು ಹಣ ಚಲಾವಣೆಯನ್ನು ತಡೆಯಬೇಕೆನ್ನುವ ಉದ್ದೇಶದಿಂದ ಹೊಸದಾಗಿ ಪಡೆಯುವ ಕಾಲದ ಮೇಲಿನ ಬಡ್ಡಿದರ ಏರಿಸುವುದೇನೋ ಖರೆ. ಆದರೆ ಹಳೆಯ ಸಾಲದ ಮೇಲಿನ ಬಡ್ಡಿದರ ಹೆಚ್ಚಿಸುವ ಉದ್ದೇಶವಾದರೂ ಏನು…!?

ಉದ್ದೇಶ ಇಷ್ಟೇ. ಹಣಕಾಸು ಸಂಸ್ಥೆಗಳನ್ನು ಈ ದೇಶದಲ್ಲಿ ತೆರೆದು ಸಾಲ ನೀಡುತ್ತಿರುವವರು ದೊಡ್ಡ ದೊಡ್ಡ ಬಂಡವಾಳಿಗರೆ ಆಗಿದ್ದಾರೆ. ಈ ರೀತಿ ಬಡ್ಡಿ ಏರಿಸುವುದರಿಂದ ಹೆಚ್ಚುವುದು ಈ ಬಂಡವಾಳಿಗರ ಲಾಭವೇ ಆಗುತ್ತದೆ.  ಇನ್ನೊಂದು ನೆಲೆಯಿಂದ ಹೇಳಬೇಕೆಂದರೆ ಹಳೆಯ ಸಾಲದ ಮೇಲಿನ ಬಡ್ಡಿದರ ಹೆಚ್ಚಿಸುವುದರಿಂದ ಮಾರುಕಟ್ಟೆಗೆ ಹೆಚ್ಚಿನ ಹಣ ಹರಿದು ಬರುವಂತೆ ಆಗುತ್ತದೆ. ಹಾಗು ಆ ಮೂಲಕ ಹಣದುಬ್ಬರವುಂಟಾಗುತ್ತದೆ. ಆದುದರಿಂದ ಮೇಲ್ನೋಟಕ್ಕೆ ರೆಪೋ ದರ ಏರಿಸುವ ಆರ್ ಬಿ ಐ ಈ ಕ್ರಮ  ವಿವೇಚನಾರಹಿತವಾದದ್ದು ಮತ್ತು ವಂಚನೆ  ಎಂದು ತೋರುತ್ತದೆ. ನಿತ್ಯ ಏರುತ್ತಿರುವ ಬೆಲೆ ಏರಿಕೆಯಿಂದಾಗಿ  ಉಂಟಾಗಬಹುದಾದ ಜನಾಕ್ರೋಶವನ್ನು  ತಣ್ಣಗಾಗಿಸುವ ನಿಟ್ಟಿನಲ್ಲಿ  ಆರ್‌ಬಿಐ ಈ ಒಂದು ಸುಂದರ ನಾಟಕವನ್ನು ಆಡುತ್ತಿದೆ. ಬಂಡವಾಳಶಾಹಿ ವ್ಯವಸ್ಥೆಯ ಸೂತ್ರದ ಗೊಂಬೆಯಂತೆ ಕುಣಿಯುತ್ತಿದೆ ಅಷ್ಟೇ.

ಡಿಸೆಂಬರ್ 25 – ಅಂಬೇಡ್ಕರ್ ‘ಮನುಸ್ಮೃತಿ’ ಸುಟ್ಟ ದಿನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...