Homeಮುಖಪುಟಕನ್ನಡದಲ್ಲಿ NET ಪರೀಕ್ಷೆ ನಡೆಸಲು ಒತ್ತಾಯ: ಕೇಂದ್ರಕ್ಕೆ ಪತ್ರಬರೆದ ಟಿ.ಎಸ್.ನಾಗಾಭರಣ

ಕನ್ನಡದಲ್ಲಿ NET ಪರೀಕ್ಷೆ ನಡೆಸಲು ಒತ್ತಾಯ: ಕೇಂದ್ರಕ್ಕೆ ಪತ್ರಬರೆದ ಟಿ.ಎಸ್.ನಾಗಾಭರಣ

1976ರ ಕೇಂದ್ರ ಭಾಷಾ ನೀತಿ ಅನ್ವಯ ದಕ್ಷಿಣ ರಾಜ್ಯಗಳಿಗೆ ಹಿಂದಿ ಭಾಷೆಯು ಆಯ್ಕೆಯೇ ಹೊರತು ಅನಿವಾರ್ಯವಲ್ಲ. ಹಾಗಾಗಿ ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸರ್ಕಾರ ಪರೀಕ್ಷೆಗಳನ್ನು ನಡೆಸಿ.

- Advertisement -
- Advertisement -

ರಾಷ್ಟ್ರೀಯ ಅರ್ಹತಾ ಪರೀಕ್ಷೆಗಳನ್ನು(NET) ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಕೇಂದ್ರದ ಸಚಿವರು, ಅಧಿಕಾರಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಪತ್ರ ಬರೆದು ಒತ್ತಾಯಿಸಿದ್ದಾರೆ.

ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಸಂಸ್ಥೆಯು ಪ್ರತೀ ವರ್ಷ ಎರಡು ಬಾರಿ ನಡೆಸಲಾಗುವ NET ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಇರುವುದರಿಂದ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಸಾಕಷ್ಟು ತೊಂದರೆಯಾಗುತ್ತಿದ್ದು ಈ ಬಗ್ಗೆ ಕೂಡಲೇ ಗಮನಹರಿಸಿ ಕನ್ನಡದಲ್ಲಿಯೂ ಪರೀಕ್ಷೆ ಎದುರಿಸಲು ಸಹಕಾರ ನೀಡುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಕೇಂದ್ರ ಮಾನವ ಸಂಪನ್ಮೂಲ ಸಚಿವರಾದ ರಮೇಶ್ ಪೊಕ್ರಿಯಲ್ ನಿಶಾಂಕ್‌ಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

“ರಾಜ್ಯ ಸರ್ಕಾರಗಳು ಪದವಿ ಕಾಲೇಜುಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯನ್ನು ನಡೆಸುತ್ತದೆ. ಸದರಿ ನೇಮಕಾತಿಗೆ ಅರ್ಹತೆ ಪಡೆಯಲು ಪ್ರತೀ ಯುಜಿಸಿ ನಡೆಸುವ NET ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಅವಶ್ಯಕವಾಗಿರುತ್ತದೆ. ಆದರೆ ಸದರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಪ್ರಾದೇಶಿಕ ಭಾಷೆಯಲ್ಲಿ ಇರದ ಕಾರಣ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ಇದು ಸಂವಿಧಾನದ 14 ಮತ್ತು 15ನೇ ವಿಧಿಯ ಸಂಪೂರ್ಣ ಉಲ್ಲಂಘನೆಯಾಗುತ್ತದೆ” ಎಂದು ತಿಳಿಸಿದ್ದಾರೆ.

“ಒಕ್ಕೂಟ ವ್ಯವಸ್ಥೆಯಲ್ಲಿ ಭಾರತ ಸರ್ಕಾರದ ಸಂವಿಧಾನದ 8ನೇ ಪರಿಚ್ಚೇದದಲ್ಲಿರುವ ಕನ್ನಡವೂ ಸೇರಿದಂತೆ 22 ಭಾಷೆಗಳಿಗೂ ಮಾನ್ಯ ನೀಡಬೇಕಿದೆ. ಆ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ಬಲಗೊಳಿಸಬೇಕಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

1976ರ ಕೇಂದ್ರ ಭಾಷಾ ನೀತಿ ಅನ್ವಯ ದಕ್ಷಿಣ ರಾಜ್ಯಗಳಿಗೆ ಹಿಂದಿ ಭಾಷೆಯು ಆಯ್ಕೆಯೇ ಹೊರತು ಅನಿವಾರ್ಯವಲ್ಲ. ಹಾಗಾಗಿ ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸರ್ಕಾರ ಪರೀಕ್ಷೆಗಳನ್ನು ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಒತ್ತಾಯಿಸಿದ್ದಾರೆ.

“ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಸಿದರೆ ಆರೋಗ್ಯಕರ ಸ್ಪರ್ಧೆ ಉಂಟಾಗುವಂತೆ ನೋಡಿಕೊಳ್ಳಲು ಭಾಷೆ ಸಹ ಪ್ರಮುಖ ಸಾಧನವಾಗಲಿದೆ. ಹಾಗಾಗಿ ಈ ಮಾದರಿಯ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲಿಯೇ ನಡೆಸಿದಲ್ಲಿ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳು ಸಹ ಉತ್ತರ ರಾಜ್ಯದ ವಿದ್ಯಾರ್ಥಿಗಳಿಗೆ ಸ್ಪರ್ಧೆ ನೀಡಬಲ್ಲರು ಎಂಬುದನ್ನು ತಿಳಿಸಿರುವ ಪ್ರಾಧಿಕಾರದ ಅಧ್ಯಕ್ಷರು, ಕೂಡಲೇ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಪರೀಕ್ಷೆಯನ್ನು ನಡೆಸಸಲು ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ” ಎಂದು ಟಿ.ಎಸ್.ನಾಗಾಭರಣ ಅವರ ಆಪ್ತ ಸಹಾಯಕಿ ಪಂಕಜ ತಿಳಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...