Homeಮುಖಪುಟಕನ್ನಡದಲ್ಲಿ NET ಪರೀಕ್ಷೆ ನಡೆಸಲು ಒತ್ತಾಯ: ಕೇಂದ್ರಕ್ಕೆ ಪತ್ರಬರೆದ ಟಿ.ಎಸ್.ನಾಗಾಭರಣ

ಕನ್ನಡದಲ್ಲಿ NET ಪರೀಕ್ಷೆ ನಡೆಸಲು ಒತ್ತಾಯ: ಕೇಂದ್ರಕ್ಕೆ ಪತ್ರಬರೆದ ಟಿ.ಎಸ್.ನಾಗಾಭರಣ

1976ರ ಕೇಂದ್ರ ಭಾಷಾ ನೀತಿ ಅನ್ವಯ ದಕ್ಷಿಣ ರಾಜ್ಯಗಳಿಗೆ ಹಿಂದಿ ಭಾಷೆಯು ಆಯ್ಕೆಯೇ ಹೊರತು ಅನಿವಾರ್ಯವಲ್ಲ. ಹಾಗಾಗಿ ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸರ್ಕಾರ ಪರೀಕ್ಷೆಗಳನ್ನು ನಡೆಸಿ.

- Advertisement -
- Advertisement -

ರಾಷ್ಟ್ರೀಯ ಅರ್ಹತಾ ಪರೀಕ್ಷೆಗಳನ್ನು(NET) ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಕೇಂದ್ರದ ಸಚಿವರು, ಅಧಿಕಾರಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಪತ್ರ ಬರೆದು ಒತ್ತಾಯಿಸಿದ್ದಾರೆ.

ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಸಂಸ್ಥೆಯು ಪ್ರತೀ ವರ್ಷ ಎರಡು ಬಾರಿ ನಡೆಸಲಾಗುವ NET ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಇರುವುದರಿಂದ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಸಾಕಷ್ಟು ತೊಂದರೆಯಾಗುತ್ತಿದ್ದು ಈ ಬಗ್ಗೆ ಕೂಡಲೇ ಗಮನಹರಿಸಿ ಕನ್ನಡದಲ್ಲಿಯೂ ಪರೀಕ್ಷೆ ಎದುರಿಸಲು ಸಹಕಾರ ನೀಡುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಕೇಂದ್ರ ಮಾನವ ಸಂಪನ್ಮೂಲ ಸಚಿವರಾದ ರಮೇಶ್ ಪೊಕ್ರಿಯಲ್ ನಿಶಾಂಕ್‌ಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

“ರಾಜ್ಯ ಸರ್ಕಾರಗಳು ಪದವಿ ಕಾಲೇಜುಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯನ್ನು ನಡೆಸುತ್ತದೆ. ಸದರಿ ನೇಮಕಾತಿಗೆ ಅರ್ಹತೆ ಪಡೆಯಲು ಪ್ರತೀ ಯುಜಿಸಿ ನಡೆಸುವ NET ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಅವಶ್ಯಕವಾಗಿರುತ್ತದೆ. ಆದರೆ ಸದರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಪ್ರಾದೇಶಿಕ ಭಾಷೆಯಲ್ಲಿ ಇರದ ಕಾರಣ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ಇದು ಸಂವಿಧಾನದ 14 ಮತ್ತು 15ನೇ ವಿಧಿಯ ಸಂಪೂರ್ಣ ಉಲ್ಲಂಘನೆಯಾಗುತ್ತದೆ” ಎಂದು ತಿಳಿಸಿದ್ದಾರೆ.

“ಒಕ್ಕೂಟ ವ್ಯವಸ್ಥೆಯಲ್ಲಿ ಭಾರತ ಸರ್ಕಾರದ ಸಂವಿಧಾನದ 8ನೇ ಪರಿಚ್ಚೇದದಲ್ಲಿರುವ ಕನ್ನಡವೂ ಸೇರಿದಂತೆ 22 ಭಾಷೆಗಳಿಗೂ ಮಾನ್ಯ ನೀಡಬೇಕಿದೆ. ಆ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ಬಲಗೊಳಿಸಬೇಕಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

1976ರ ಕೇಂದ್ರ ಭಾಷಾ ನೀತಿ ಅನ್ವಯ ದಕ್ಷಿಣ ರಾಜ್ಯಗಳಿಗೆ ಹಿಂದಿ ಭಾಷೆಯು ಆಯ್ಕೆಯೇ ಹೊರತು ಅನಿವಾರ್ಯವಲ್ಲ. ಹಾಗಾಗಿ ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸರ್ಕಾರ ಪರೀಕ್ಷೆಗಳನ್ನು ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಒತ್ತಾಯಿಸಿದ್ದಾರೆ.

“ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಸಿದರೆ ಆರೋಗ್ಯಕರ ಸ್ಪರ್ಧೆ ಉಂಟಾಗುವಂತೆ ನೋಡಿಕೊಳ್ಳಲು ಭಾಷೆ ಸಹ ಪ್ರಮುಖ ಸಾಧನವಾಗಲಿದೆ. ಹಾಗಾಗಿ ಈ ಮಾದರಿಯ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲಿಯೇ ನಡೆಸಿದಲ್ಲಿ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳು ಸಹ ಉತ್ತರ ರಾಜ್ಯದ ವಿದ್ಯಾರ್ಥಿಗಳಿಗೆ ಸ್ಪರ್ಧೆ ನೀಡಬಲ್ಲರು ಎಂಬುದನ್ನು ತಿಳಿಸಿರುವ ಪ್ರಾಧಿಕಾರದ ಅಧ್ಯಕ್ಷರು, ಕೂಡಲೇ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಪರೀಕ್ಷೆಯನ್ನು ನಡೆಸಸಲು ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ” ಎಂದು ಟಿ.ಎಸ್.ನಾಗಾಭರಣ ಅವರ ಆಪ್ತ ಸಹಾಯಕಿ ಪಂಕಜ ತಿಳಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...