Homeಅಂತರಾಷ್ಟ್ರೀಯಮೊಬೈಲ್ ಕ್ಯಾಮರ ಬಳಸಿ ಬಳಕೆದಾರರ ಖಾಸಗಿ ಮಾಹಿತಿ ಪಡೆದ ಇನ್ಸ್ಟಾಗ್ರಾಮ್- ಆರೋಪ; ದೂರು ದಾಖಲು

ಮೊಬೈಲ್ ಕ್ಯಾಮರ ಬಳಸಿ ಬಳಕೆದಾರರ ಖಾಸಗಿ ಮಾಹಿತಿ ಪಡೆದ ಇನ್ಸ್ಟಾಗ್ರಾಮ್- ಆರೋಪ; ದೂರು ದಾಖಲು

ಕಳೆದ ತಿಂಗಳು ಫೇಸ್‌ಬುಕ್ ತನ್ನ 100 ಮಿಲಿಯನ್‌ಗಿಂತಲೂ ಹೆಚ್ಚು ಇನ್‌ಸ್ಟಾಗ್ರಾಮ್ ಬಳಕೆದಾರರ ಬಯೋಮೆಟ್ರಿಕ್ ಡೇಟಾವನ್ನು ಅಕ್ರಮವಾಗಿ ಪಡೆಯಲು ಮಾಡಲು ಮುಖ-ಗುರುತಿಸುವಿಕೆ(facial-recognition) ತಂತ್ರಜ್ಞಾನವನ್ನು ಬಳಸಿದೆ ಎಂದು ಆರೋಪಿಸಲಾಗಿತ್ತು.

- Advertisement -
- Advertisement -

ಲೋಕಸಭಾ ಚುನಾವಣೆ ವೇಳೆ ಬಿಜೆಪಿಯನ್ನು ಬೆಂಬಲಿಸಿತ್ತು ಎಂದು ಕಳೆದ ತಿಂಗಳಷ್ಟೇ ಭಾರಿ ವಿವಾದಕ್ಕೊಳಗಾಗಿದ್ದ ಫೇಸ್‌ಬುಕ್ ಇದೀಗ ಮತ್ತೊಂದು ಸಮಸ್ಯೆಯನ್ನು ಮೈಗೆಳೆದು ಕೊಂಡಿದೆ. ಫೇಸ್‌ಬುಕ್‌ನ ಸಹ ಅಪ್ಲಿಕೇಶನ್‌ ಆದ ಇನ್ಸ್ಟಾಗ್ರಾಮ್ ತನ್ನ ಬಳಕೆದಾರರ ಮೊಬೈಲ್ ಫೋನಿನ ಕ್ಯಾಮರಾಗಳನ್ನು ಅನಧಿಕೃತವಾಗಿ ಬಳಸಿ ಬೇಹುಗಾರಿಕೆ ನಡೆಸುತ್ತಿದೆ ಎಂದು ಫೇಸ್‌ಬುಕ್‌ ಕಂಪೆನಿ ಮೇಲೆ ಮೊಕದ್ದಮೆ ಹೂಡಲಾಗಿದೆ.

ಫೋಟೋ ಹಂಚಿಕೆ ಅಪ್ಲಿಕೇಶನ್ ಆದ ಇನ್ಸ್ಟಾಗ್ರಾಮ್, ಐಫೋನ್ ಕ್ಯಾಮೆರಾಗಳನ್ನು ಆಪ್‌ ಬಳಸದ ಸಮಯದಲ್ಲೂ ಸಹ ತೆರೆಯುತ್ತಿದೆ ಎಂದು ಜುಲೈನಲ್ಲಿ ಮಾಧ್ಯಮಗಳು ವರದಿ ಮಾಡಿದ್ದವು. ಇದರಿಂದಾಗಿ ವಿವಾದ ಹುಟ್ಟಿಕೊಂಡಿತ್ತು. ಆದರೆ ಫೇಸ್‌ಬುಕ್ ಈ ವರದಿಗಳನ್ನು ನಿರಾಕರಿಸಿ, ಅಪ್ಲಿಕೇಷನ್‌ನಲ್ಲಿ ದೋಷಗಳಿವೆ, ಅದನ್ನು ಸರಿಪಡಿಸುತ್ತಿದ್ದೇವೆ ಎಂದು ಹೇಳಿತ್ತು.

ಇದನ್ನೂ ಓದಿ: ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!

ಇದೀಗ ನ್ಯೂಜೆರ್ಸಿಯ ಬ್ರಿಟಾನಿ ಕಾಂಡಿಟಿ ಎಂಬ ಇನ್ಸ್ಟಾಗ್ರಾಮ್ ಬಳಕೆದಾರ ಸ್ಯಾನ್ ಫ್ರಾನ್ಸಿಸ್ಕೋದ ಫೆಡರಲ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಅಪ್ಲಿಕೇಶನ್‌ ಕ್ಯಾಮೆರಾ ಬಳಕೆ ಮಾಡಿರುವುದು ಉದ್ದೇಶಪೂರ್ವಕವಾಗಿಯೆ ಆಗಿದೆ. ಬಳಕೆದಾರರ ಲಾಭದಾಯಕ ಮತ್ತು ಅಮೂಲ್ಯವಾದ ಡೇಟಾವನ್ನು ಸಂಗ್ರಹಿಸುವ ಉದ್ದೇಶದಿಂದ ಇದನ್ನು ಮಾಡಲಾಗಿದೆ ಎಂದು ಅವರು ಆರೋಪಿದ್ದಾರೆ.

ಫೇಸ್‌ಬುಕ್, ನಾನುಗೌರಿ, kannada news
PC: Reuters

“ತಮ್ಮ ಸ್ವಂತ ಮನೆಗಳ ಗೌಪ್ಯತೆ ಸೇರಿದಂತೆ ತಮ್ಮ ಬಳಕೆದಾರರ ಮೇಲೆ ಅತ್ಯಂತ ಖಾಸಗಿ ಮತ್ತು ನಿಕಟವಾದ ವೈಯಕ್ತಿಕ ಡೇಟಾವನ್ನು ಪಡೆದು ಅದನ್ನು ಮಾರ್ಕೆಟ್ ರಿಸರ್ಚ್‌ಗೆ ಬಳಕೆ ಮಾಡುವ ಸಾಧ್ಯತೆಯಿದೆ” ಎಂದು ಅವರು ಹೇಳಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯಿಸಲು ಫೇಸ್‌ಬುಕ್ ನಿರಾಕರಿಸಿದೆ.

ಕಳೆದ ತಿಂಗಳು ಸಲ್ಲಿಸಿದ ಮೊಕದ್ದಮೆಯೊಂದರಲ್ಲಿ, ಫೇಸ್‌ಬುಕ್ ತನ್ನ 100 ಮಿಲಿಯನ್‌ಗಿಂತಲೂ ಹೆಚ್ಚು ಇನ್‌ಸ್ಟಾಗ್ರಾಮ್ ಬಳಕೆದಾರರ ಬಯೋಮೆಟ್ರಿಕ್ ಡೇಟಾವನ್ನು ಅಕ್ರಮವಾಗಿ ಪಡೆಯಲು ಮಾಡಲು ಮುಖ-ಗುರುತಿಸುವಿಕೆ(facial-recognition) ತಂತ್ರಜ್ಞಾನವನ್ನು ಬಳಸಿದೆ ಎಂದು ಆರೋಪಿಸಲಾಗಿತ್ತು. ಆದರೆ ಫೇಸ್‌ಬುಕ್ ಇದನ್ನು ನಿರಾಕರಿಸಿ ಇನ್‌ಸ್ಟಾಗ್ರಾಮ್ ಮುಖ ಗುರುತಿಸುವಿಕೆ ತಂತ್ರಜ್ಞಾನವನ್ನು ಬಳಸುವುದಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...