Homeಅಂತರಾಷ್ಟ್ರೀಯಮೊಬೈಲ್ ಕ್ಯಾಮರ ಬಳಸಿ ಬಳಕೆದಾರರ ಖಾಸಗಿ ಮಾಹಿತಿ ಪಡೆದ ಇನ್ಸ್ಟಾಗ್ರಾಮ್- ಆರೋಪ; ದೂರು ದಾಖಲು

ಮೊಬೈಲ್ ಕ್ಯಾಮರ ಬಳಸಿ ಬಳಕೆದಾರರ ಖಾಸಗಿ ಮಾಹಿತಿ ಪಡೆದ ಇನ್ಸ್ಟಾಗ್ರಾಮ್- ಆರೋಪ; ದೂರು ದಾಖಲು

ಕಳೆದ ತಿಂಗಳು ಫೇಸ್‌ಬುಕ್ ತನ್ನ 100 ಮಿಲಿಯನ್‌ಗಿಂತಲೂ ಹೆಚ್ಚು ಇನ್‌ಸ್ಟಾಗ್ರಾಮ್ ಬಳಕೆದಾರರ ಬಯೋಮೆಟ್ರಿಕ್ ಡೇಟಾವನ್ನು ಅಕ್ರಮವಾಗಿ ಪಡೆಯಲು ಮಾಡಲು ಮುಖ-ಗುರುತಿಸುವಿಕೆ(facial-recognition) ತಂತ್ರಜ್ಞಾನವನ್ನು ಬಳಸಿದೆ ಎಂದು ಆರೋಪಿಸಲಾಗಿತ್ತು.

- Advertisement -
- Advertisement -

ಲೋಕಸಭಾ ಚುನಾವಣೆ ವೇಳೆ ಬಿಜೆಪಿಯನ್ನು ಬೆಂಬಲಿಸಿತ್ತು ಎಂದು ಕಳೆದ ತಿಂಗಳಷ್ಟೇ ಭಾರಿ ವಿವಾದಕ್ಕೊಳಗಾಗಿದ್ದ ಫೇಸ್‌ಬುಕ್ ಇದೀಗ ಮತ್ತೊಂದು ಸಮಸ್ಯೆಯನ್ನು ಮೈಗೆಳೆದು ಕೊಂಡಿದೆ. ಫೇಸ್‌ಬುಕ್‌ನ ಸಹ ಅಪ್ಲಿಕೇಶನ್‌ ಆದ ಇನ್ಸ್ಟಾಗ್ರಾಮ್ ತನ್ನ ಬಳಕೆದಾರರ ಮೊಬೈಲ್ ಫೋನಿನ ಕ್ಯಾಮರಾಗಳನ್ನು ಅನಧಿಕೃತವಾಗಿ ಬಳಸಿ ಬೇಹುಗಾರಿಕೆ ನಡೆಸುತ್ತಿದೆ ಎಂದು ಫೇಸ್‌ಬುಕ್‌ ಕಂಪೆನಿ ಮೇಲೆ ಮೊಕದ್ದಮೆ ಹೂಡಲಾಗಿದೆ.

ಫೋಟೋ ಹಂಚಿಕೆ ಅಪ್ಲಿಕೇಶನ್ ಆದ ಇನ್ಸ್ಟಾಗ್ರಾಮ್, ಐಫೋನ್ ಕ್ಯಾಮೆರಾಗಳನ್ನು ಆಪ್‌ ಬಳಸದ ಸಮಯದಲ್ಲೂ ಸಹ ತೆರೆಯುತ್ತಿದೆ ಎಂದು ಜುಲೈನಲ್ಲಿ ಮಾಧ್ಯಮಗಳು ವರದಿ ಮಾಡಿದ್ದವು. ಇದರಿಂದಾಗಿ ವಿವಾದ ಹುಟ್ಟಿಕೊಂಡಿತ್ತು. ಆದರೆ ಫೇಸ್‌ಬುಕ್ ಈ ವರದಿಗಳನ್ನು ನಿರಾಕರಿಸಿ, ಅಪ್ಲಿಕೇಷನ್‌ನಲ್ಲಿ ದೋಷಗಳಿವೆ, ಅದನ್ನು ಸರಿಪಡಿಸುತ್ತಿದ್ದೇವೆ ಎಂದು ಹೇಳಿತ್ತು.

ಇದನ್ನೂ ಓದಿ: ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!

ಇದೀಗ ನ್ಯೂಜೆರ್ಸಿಯ ಬ್ರಿಟಾನಿ ಕಾಂಡಿಟಿ ಎಂಬ ಇನ್ಸ್ಟಾಗ್ರಾಮ್ ಬಳಕೆದಾರ ಸ್ಯಾನ್ ಫ್ರಾನ್ಸಿಸ್ಕೋದ ಫೆಡರಲ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಅಪ್ಲಿಕೇಶನ್‌ ಕ್ಯಾಮೆರಾ ಬಳಕೆ ಮಾಡಿರುವುದು ಉದ್ದೇಶಪೂರ್ವಕವಾಗಿಯೆ ಆಗಿದೆ. ಬಳಕೆದಾರರ ಲಾಭದಾಯಕ ಮತ್ತು ಅಮೂಲ್ಯವಾದ ಡೇಟಾವನ್ನು ಸಂಗ್ರಹಿಸುವ ಉದ್ದೇಶದಿಂದ ಇದನ್ನು ಮಾಡಲಾಗಿದೆ ಎಂದು ಅವರು ಆರೋಪಿದ್ದಾರೆ.

ಫೇಸ್‌ಬುಕ್, ನಾನುಗೌರಿ, kannada news
PC: Reuters

“ತಮ್ಮ ಸ್ವಂತ ಮನೆಗಳ ಗೌಪ್ಯತೆ ಸೇರಿದಂತೆ ತಮ್ಮ ಬಳಕೆದಾರರ ಮೇಲೆ ಅತ್ಯಂತ ಖಾಸಗಿ ಮತ್ತು ನಿಕಟವಾದ ವೈಯಕ್ತಿಕ ಡೇಟಾವನ್ನು ಪಡೆದು ಅದನ್ನು ಮಾರ್ಕೆಟ್ ರಿಸರ್ಚ್‌ಗೆ ಬಳಕೆ ಮಾಡುವ ಸಾಧ್ಯತೆಯಿದೆ” ಎಂದು ಅವರು ಹೇಳಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯಿಸಲು ಫೇಸ್‌ಬುಕ್ ನಿರಾಕರಿಸಿದೆ.

ಕಳೆದ ತಿಂಗಳು ಸಲ್ಲಿಸಿದ ಮೊಕದ್ದಮೆಯೊಂದರಲ್ಲಿ, ಫೇಸ್‌ಬುಕ್ ತನ್ನ 100 ಮಿಲಿಯನ್‌ಗಿಂತಲೂ ಹೆಚ್ಚು ಇನ್‌ಸ್ಟಾಗ್ರಾಮ್ ಬಳಕೆದಾರರ ಬಯೋಮೆಟ್ರಿಕ್ ಡೇಟಾವನ್ನು ಅಕ್ರಮವಾಗಿ ಪಡೆಯಲು ಮಾಡಲು ಮುಖ-ಗುರುತಿಸುವಿಕೆ(facial-recognition) ತಂತ್ರಜ್ಞಾನವನ್ನು ಬಳಸಿದೆ ಎಂದು ಆರೋಪಿಸಲಾಗಿತ್ತು. ಆದರೆ ಫೇಸ್‌ಬುಕ್ ಇದನ್ನು ನಿರಾಕರಿಸಿ ಇನ್‌ಸ್ಟಾಗ್ರಾಮ್ ಮುಖ ಗುರುತಿಸುವಿಕೆ ತಂತ್ರಜ್ಞಾನವನ್ನು ಬಳಸುವುದಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...