Homeಮುಖಪುಟತೆರಿಗೆ ವಿನಾಯಿತಿ ನೀಡುವುದರ ಬದಲು ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿ: ಕಾಶ್ಮೀರ್ ಫೈಲ್ಸ್ ನಿರ್ದೇಶಕನಿಗೆ ಕೇಜ್ರಿವಾಲ್ ಸವಾಲು

ತೆರಿಗೆ ವಿನಾಯಿತಿ ನೀಡುವುದರ ಬದಲು ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿ: ಕಾಶ್ಮೀರ್ ಫೈಲ್ಸ್ ನಿರ್ದೇಶಕನಿಗೆ ಕೇಜ್ರಿವಾಲ್ ಸವಾಲು

ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೆಲವರು ಕೋಟಿ ಕೋಟಿ ದುಡ್ಡು ಮಾಡುತ್ತಿರುವಾಗ ನೀವು ಸಿನಿಮಾ ಪೋಸ್ಟರ್ ಅಂಟಿಸುತ್ತಿದ್ದೀರಿ.. - ಬಿಜೆಪಿ ಶಾಸಕರಿಗೆ ಕೇಜ್ರಿವಾಲ್ ಕಿವಿಮಾತು

- Advertisement -
- Advertisement -

ದೆಹಲಿಯಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕೆಂಬ ಬಿಜೆಪಿ ಮುಖಂಡರ ಬೇಡಿಕೆಗೆ ಪ್ರತಿಕ್ರಿಯಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, “ನಿಮಗೆ ನಿಜಕ್ಕೂ ಇಡೀ ದೇಶದ ಜನ ಈ ಸಿನಿಮಾ ನೋಡಬೇಕೆಂದಿದ್ದರೆ ತೆರಿಗೆ ವಿನಾಯಿತಿ ಕೇಳುವುದರ ಬದಲು, ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿ” ಎಂದು ಸವಾಲು ಹಾಕಿದ್ದಾರೆ.

ದೆಹಲಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, “ಬಿಜೆಪಿ ನಾಯಕರು, ಶಾಸಕರು ಮತ್ತು ಸಂಸದರು ದೇಶದ ಗಲ್ಲಿ ಗಲ್ಲಿಗಳಲ್ಲಿ ಕಾಶ್ಮೀರ್ ಫೈಲ್ಸ್ ಸಿನಿಮಾ ಪೋಸ್ಟರ್ ಅಂಟಿಸುತ್ತಿದ್ದಾರೆ. ಜನ ನಿಮ್ಮನ್ನು ಆಯ್ಕೆ ಮಾಡಿರುವುದು ಪೋಸ್ಟರ್ ಅಂಟಿಸುವುದಕ್ಕಾಗಿಯೇ? ಇದೇನಾ ನಿಮ್ಮ ರಾಜಕೀಯ? ನೀವು ಮನೆಗೆ ಹೋದಾಗ ನಿಮ್ಮ ಮಕ್ಕಳು ಏನು ಕೆಲಸ ಮಾಡುತ್ತಿದ್ದೀರಿ ಎಂದು ಕೇಳಿದರೆ ಪೋಸ್ಟರ್ ಅಂಟಿಸುತ್ತೇವೆ ಎಂದು ಉತ್ತರಿಸುತ್ತೀರಾ” ಎಂದು ಕೇಜ್ರಿವಾಲ್ ವ್ಯಂಗ್ಯವಾಡಿದ್ದಾರೆ.

“ಕಾಶ್ಮೀರ್ ಫೈಲ್ಸ್‌ ಗೆ ತೆರಿಗೆ ವಿನಾಯಿತಿ ಕೇಳುತ್ತೀರಿ? ಜನ ಅದನ್ನು ನೋಡಬೇಕು ಅಂತ ನಿಮಗೆ ಇದ್ದರೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಹೇಳಿ ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿಸಿ. ಆಗ ಅದು ಪೂರ್ತಿ ಉಚಿತವಾಗಿ ಒಂದೇ ದಿನದಲ್ಲಿ ಇಡೀ ದೇಶದ ಜನ ನೋಡಬಹುದಲ್ಲವೇ, ಆಗ ತೆರಿಗೆ ವಿನಾಯಿತಿಯ ಪ್ರಶ್ನೆಗೆ ಉದ್ಭವಿಸುವುದಿಲ್ಲವಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಹರಿಯಾಣದ ಬಿಜೆಪಿ ಶಾಸಕ ಪಾರ್ಕ್ ಒಂದರಲ್ಲಿ ಉಚಿತವಾಗಿ ಕಾಶ್ಮೀರಿ ಫೈಲ್ಸ್ ಸ್ಕ್ರೀನಿಂಗ್ ಆಯೋಜಿಸಿದ್ದರು. ಅದನ್ನು ಖಂಡಿಸಿ ಹರಿಯಾಣದ ಮುಖ್ಯಮಂತ್ರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ವಿವೇಕ್ ಅಗ್ನಿಹೋತ್ರಿ, ಟಿಕೆಟ್ ಪಡೆದು ಸಿನಿಮಾ ನೋಡಲು ಹೇಳಿ, ಉಚಿತವಾಗಿ ಬೇಡ ಎಂದು ಒತ್ತಾಯಿಸಿದ್ದಾರೆ. ಸಹೋದರರೆ ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೆಲವರು ಕೋಟಿ ಕೋಟಿ ಹಣ ಮಾಡುತ್ತಿದ್ದಾರೆ. ಆದರೆ ನಿಮಗೆ ಅದರ ಪೋಸ್ಟರ್ ಹಚ್ಚುವ ಕೆಲಸ ನೀಡುತ್ತಿದ್ದಾರೆ” ಎಂದು ಬಿಜೆಪಿ ಶಾಸಕರನ್ನು ಉದ್ದೇಶಿಸಿ ಕೇಜ್ರಿವಾಲ್ ಮಾತನಾಡಿದ್ದಾರೆ.

ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಅವರು ಕೋಟಿ ಕೋಟಿ ದುಡ್ಡು ಮಾಡುತ್ತಿದ್ದಾಗ ನೀವು ಪೋಸ್ಟರ್ ಅಂಟಿಸುತ್ತಿದ್ದೀರಿ. ದಯವಿಟ್ಟು ಕಣ್ಣು ತೆರೆದು ನೋಡಿ ಅರ್ಥಮಾಡಿಕೊಳ್ಳಿ ಎಂದು ಬಿಜೆಪಿ ಶಾಸಕರಲ್ಲಿ ಮನವಿ ಮಾಡಿದ್ದಾರೆ.

8 ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ ನಂತರವೂ ಮಾನ್ಯ ನರೇಂದ್ರ ಮೋದಿಯವರು ಕಾಶ್ಮೀರಿ ಪಂಡಿತರಿಗಾಗಿ ಏನಾದರೂ ಮಾಡಿ ಎಂದು ವಿವೇಕ್ ಅಗ್ನಿಹೋತ್ರಿ ಕಾಲಿಗೆ ಬಿದ್ದು ಬೇಡಿಕೊಳ್ಳುತ್ತಾರೆ ಎಂದರೆ ಅವರು 8 ವರ್ಷ ಏನೂ ಕೆಲಸ ಮಾಡಿಲ್ಲವೆಂಬುದು ಸ್ಪಷ್ಟವಾಗಿದೆ. ಹಾಗಾಗಿ ತಮ್ಮನ್ನು ಉಳಿಸಿ ಎಂದು ಅಗ್ನಿಹೋತ್ರಿ ಕಾಲಿಗೆ ಬೀಳಬೇಕಾದ ಪರಿಸ್ಥಿತಿ ಬಂದಿದೆ ಎಂದು ಕೇಜ್ರಿವಾಲ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಎರಡು ನಿಮಿಷದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಶ್ಮೀರಿ ಪಂಡಿತರಿಗಾಗಿ ಏನನ್ನು ಮಾಡದ ಕೇಂದ್ರ ಸರ್ಕಾರ ಈ ಸಿನಿಮಾದ ಬೆನ್ನಿಗೆ ನಿಂತಿದೆ ಎಂದು ಟೀಕಿಸಿದ್ದಾರೆ. ಅಲ್ಲದೇ ಈ ಸಿನಿಮಾದ ಉದ್ದೇಶ ಕಾಶ್ಮೀರಿ ಪಂಡಿತರಿಗೆ ಸಹಾಯ ಮಾಡುವುದಲ್ಲ ಬದಲಿಗೆ ಅವರ ಹೆಸರಿನಲ್ಲಿ ದುಡ್ಡು ಮಾಡುವುದಾಗಿ ಎಂಬ ಟೀಕೆಗಳು ಕೇಳಿಬಂದಿವೆ.

ಅರವಿಂದ್ ಕೇಜ್ರಿವಾಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ ಬಿ.ಎಲ್ ಸಂತೋಷ್, “ಈ ಹಿಂದೆ ಅರವಿಂದ್ ಕೇಜ್ರಿವಾಲ್ ನಿಲ್ ಬಟ್ಟೆ ಸನ್ನತಾ ಮತ್ತು ಸಾಂಡ್ ಕಿ ಆಂಖ್ ಎಂಬ ಸಿನಿಮಾಗಳಿಗೆ ದೆಹಲಿಯಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದರು. ಈಗ ಕಾಶ್ಮೀರಿ ಫೈಲ್ಸ್ ಗೆ ತೆರಿಗೆ ವಿನಾಯಿತಿ ನೀಡುವುದಿಲ್ಲ, ಯೂಟ್ಯೂಬ್‌ಗೆ ಹಾಕಿ ಅನ್ನುತ್ತಿದ್ದಾರೆ. ನಾಚಿಕೆಯಾಗಬೇಕು ನಿಮಗೆ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...