Homeಮುಖಪುಟತೆರಿಗೆ ವಿನಾಯಿತಿ ನೀಡುವುದರ ಬದಲು ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿ: ಕಾಶ್ಮೀರ್ ಫೈಲ್ಸ್ ನಿರ್ದೇಶಕನಿಗೆ ಕೇಜ್ರಿವಾಲ್ ಸವಾಲು

ತೆರಿಗೆ ವಿನಾಯಿತಿ ನೀಡುವುದರ ಬದಲು ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿ: ಕಾಶ್ಮೀರ್ ಫೈಲ್ಸ್ ನಿರ್ದೇಶಕನಿಗೆ ಕೇಜ್ರಿವಾಲ್ ಸವಾಲು

ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೆಲವರು ಕೋಟಿ ಕೋಟಿ ದುಡ್ಡು ಮಾಡುತ್ತಿರುವಾಗ ನೀವು ಸಿನಿಮಾ ಪೋಸ್ಟರ್ ಅಂಟಿಸುತ್ತಿದ್ದೀರಿ.. - ಬಿಜೆಪಿ ಶಾಸಕರಿಗೆ ಕೇಜ್ರಿವಾಲ್ ಕಿವಿಮಾತು

- Advertisement -
- Advertisement -

ದೆಹಲಿಯಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕೆಂಬ ಬಿಜೆಪಿ ಮುಖಂಡರ ಬೇಡಿಕೆಗೆ ಪ್ರತಿಕ್ರಿಯಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, “ನಿಮಗೆ ನಿಜಕ್ಕೂ ಇಡೀ ದೇಶದ ಜನ ಈ ಸಿನಿಮಾ ನೋಡಬೇಕೆಂದಿದ್ದರೆ ತೆರಿಗೆ ವಿನಾಯಿತಿ ಕೇಳುವುದರ ಬದಲು, ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿ” ಎಂದು ಸವಾಲು ಹಾಕಿದ್ದಾರೆ.

ದೆಹಲಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, “ಬಿಜೆಪಿ ನಾಯಕರು, ಶಾಸಕರು ಮತ್ತು ಸಂಸದರು ದೇಶದ ಗಲ್ಲಿ ಗಲ್ಲಿಗಳಲ್ಲಿ ಕಾಶ್ಮೀರ್ ಫೈಲ್ಸ್ ಸಿನಿಮಾ ಪೋಸ್ಟರ್ ಅಂಟಿಸುತ್ತಿದ್ದಾರೆ. ಜನ ನಿಮ್ಮನ್ನು ಆಯ್ಕೆ ಮಾಡಿರುವುದು ಪೋಸ್ಟರ್ ಅಂಟಿಸುವುದಕ್ಕಾಗಿಯೇ? ಇದೇನಾ ನಿಮ್ಮ ರಾಜಕೀಯ? ನೀವು ಮನೆಗೆ ಹೋದಾಗ ನಿಮ್ಮ ಮಕ್ಕಳು ಏನು ಕೆಲಸ ಮಾಡುತ್ತಿದ್ದೀರಿ ಎಂದು ಕೇಳಿದರೆ ಪೋಸ್ಟರ್ ಅಂಟಿಸುತ್ತೇವೆ ಎಂದು ಉತ್ತರಿಸುತ್ತೀರಾ” ಎಂದು ಕೇಜ್ರಿವಾಲ್ ವ್ಯಂಗ್ಯವಾಡಿದ್ದಾರೆ.

“ಕಾಶ್ಮೀರ್ ಫೈಲ್ಸ್‌ ಗೆ ತೆರಿಗೆ ವಿನಾಯಿತಿ ಕೇಳುತ್ತೀರಿ? ಜನ ಅದನ್ನು ನೋಡಬೇಕು ಅಂತ ನಿಮಗೆ ಇದ್ದರೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಹೇಳಿ ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿಸಿ. ಆಗ ಅದು ಪೂರ್ತಿ ಉಚಿತವಾಗಿ ಒಂದೇ ದಿನದಲ್ಲಿ ಇಡೀ ದೇಶದ ಜನ ನೋಡಬಹುದಲ್ಲವೇ, ಆಗ ತೆರಿಗೆ ವಿನಾಯಿತಿಯ ಪ್ರಶ್ನೆಗೆ ಉದ್ಭವಿಸುವುದಿಲ್ಲವಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಹರಿಯಾಣದ ಬಿಜೆಪಿ ಶಾಸಕ ಪಾರ್ಕ್ ಒಂದರಲ್ಲಿ ಉಚಿತವಾಗಿ ಕಾಶ್ಮೀರಿ ಫೈಲ್ಸ್ ಸ್ಕ್ರೀನಿಂಗ್ ಆಯೋಜಿಸಿದ್ದರು. ಅದನ್ನು ಖಂಡಿಸಿ ಹರಿಯಾಣದ ಮುಖ್ಯಮಂತ್ರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ವಿವೇಕ್ ಅಗ್ನಿಹೋತ್ರಿ, ಟಿಕೆಟ್ ಪಡೆದು ಸಿನಿಮಾ ನೋಡಲು ಹೇಳಿ, ಉಚಿತವಾಗಿ ಬೇಡ ಎಂದು ಒತ್ತಾಯಿಸಿದ್ದಾರೆ. ಸಹೋದರರೆ ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೆಲವರು ಕೋಟಿ ಕೋಟಿ ಹಣ ಮಾಡುತ್ತಿದ್ದಾರೆ. ಆದರೆ ನಿಮಗೆ ಅದರ ಪೋಸ್ಟರ್ ಹಚ್ಚುವ ಕೆಲಸ ನೀಡುತ್ತಿದ್ದಾರೆ” ಎಂದು ಬಿಜೆಪಿ ಶಾಸಕರನ್ನು ಉದ್ದೇಶಿಸಿ ಕೇಜ್ರಿವಾಲ್ ಮಾತನಾಡಿದ್ದಾರೆ.

ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಅವರು ಕೋಟಿ ಕೋಟಿ ದುಡ್ಡು ಮಾಡುತ್ತಿದ್ದಾಗ ನೀವು ಪೋಸ್ಟರ್ ಅಂಟಿಸುತ್ತಿದ್ದೀರಿ. ದಯವಿಟ್ಟು ಕಣ್ಣು ತೆರೆದು ನೋಡಿ ಅರ್ಥಮಾಡಿಕೊಳ್ಳಿ ಎಂದು ಬಿಜೆಪಿ ಶಾಸಕರಲ್ಲಿ ಮನವಿ ಮಾಡಿದ್ದಾರೆ.

8 ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ ನಂತರವೂ ಮಾನ್ಯ ನರೇಂದ್ರ ಮೋದಿಯವರು ಕಾಶ್ಮೀರಿ ಪಂಡಿತರಿಗಾಗಿ ಏನಾದರೂ ಮಾಡಿ ಎಂದು ವಿವೇಕ್ ಅಗ್ನಿಹೋತ್ರಿ ಕಾಲಿಗೆ ಬಿದ್ದು ಬೇಡಿಕೊಳ್ಳುತ್ತಾರೆ ಎಂದರೆ ಅವರು 8 ವರ್ಷ ಏನೂ ಕೆಲಸ ಮಾಡಿಲ್ಲವೆಂಬುದು ಸ್ಪಷ್ಟವಾಗಿದೆ. ಹಾಗಾಗಿ ತಮ್ಮನ್ನು ಉಳಿಸಿ ಎಂದು ಅಗ್ನಿಹೋತ್ರಿ ಕಾಲಿಗೆ ಬೀಳಬೇಕಾದ ಪರಿಸ್ಥಿತಿ ಬಂದಿದೆ ಎಂದು ಕೇಜ್ರಿವಾಲ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಎರಡು ನಿಮಿಷದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಶ್ಮೀರಿ ಪಂಡಿತರಿಗಾಗಿ ಏನನ್ನು ಮಾಡದ ಕೇಂದ್ರ ಸರ್ಕಾರ ಈ ಸಿನಿಮಾದ ಬೆನ್ನಿಗೆ ನಿಂತಿದೆ ಎಂದು ಟೀಕಿಸಿದ್ದಾರೆ. ಅಲ್ಲದೇ ಈ ಸಿನಿಮಾದ ಉದ್ದೇಶ ಕಾಶ್ಮೀರಿ ಪಂಡಿತರಿಗೆ ಸಹಾಯ ಮಾಡುವುದಲ್ಲ ಬದಲಿಗೆ ಅವರ ಹೆಸರಿನಲ್ಲಿ ದುಡ್ಡು ಮಾಡುವುದಾಗಿ ಎಂಬ ಟೀಕೆಗಳು ಕೇಳಿಬಂದಿವೆ.

ಅರವಿಂದ್ ಕೇಜ್ರಿವಾಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ ಬಿ.ಎಲ್ ಸಂತೋಷ್, “ಈ ಹಿಂದೆ ಅರವಿಂದ್ ಕೇಜ್ರಿವಾಲ್ ನಿಲ್ ಬಟ್ಟೆ ಸನ್ನತಾ ಮತ್ತು ಸಾಂಡ್ ಕಿ ಆಂಖ್ ಎಂಬ ಸಿನಿಮಾಗಳಿಗೆ ದೆಹಲಿಯಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದರು. ಈಗ ಕಾಶ್ಮೀರಿ ಫೈಲ್ಸ್ ಗೆ ತೆರಿಗೆ ವಿನಾಯಿತಿ ನೀಡುವುದಿಲ್ಲ, ಯೂಟ್ಯೂಬ್‌ಗೆ ಹಾಕಿ ಅನ್ನುತ್ತಿದ್ದಾರೆ. ನಾಚಿಕೆಯಾಗಬೇಕು ನಿಮಗೆ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...