Homeಮುಖಪುಟತೆರಿಗೆ ವಿನಾಯಿತಿ ನೀಡುವುದರ ಬದಲು ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿ: ಕಾಶ್ಮೀರ್ ಫೈಲ್ಸ್ ನಿರ್ದೇಶಕನಿಗೆ ಕೇಜ್ರಿವಾಲ್ ಸವಾಲು

ತೆರಿಗೆ ವಿನಾಯಿತಿ ನೀಡುವುದರ ಬದಲು ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿ: ಕಾಶ್ಮೀರ್ ಫೈಲ್ಸ್ ನಿರ್ದೇಶಕನಿಗೆ ಕೇಜ್ರಿವಾಲ್ ಸವಾಲು

ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೆಲವರು ಕೋಟಿ ಕೋಟಿ ದುಡ್ಡು ಮಾಡುತ್ತಿರುವಾಗ ನೀವು ಸಿನಿಮಾ ಪೋಸ್ಟರ್ ಅಂಟಿಸುತ್ತಿದ್ದೀರಿ.. - ಬಿಜೆಪಿ ಶಾಸಕರಿಗೆ ಕೇಜ್ರಿವಾಲ್ ಕಿವಿಮಾತು

- Advertisement -
- Advertisement -

ದೆಹಲಿಯಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕೆಂಬ ಬಿಜೆಪಿ ಮುಖಂಡರ ಬೇಡಿಕೆಗೆ ಪ್ರತಿಕ್ರಿಯಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, “ನಿಮಗೆ ನಿಜಕ್ಕೂ ಇಡೀ ದೇಶದ ಜನ ಈ ಸಿನಿಮಾ ನೋಡಬೇಕೆಂದಿದ್ದರೆ ತೆರಿಗೆ ವಿನಾಯಿತಿ ಕೇಳುವುದರ ಬದಲು, ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿ” ಎಂದು ಸವಾಲು ಹಾಕಿದ್ದಾರೆ.

ದೆಹಲಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, “ಬಿಜೆಪಿ ನಾಯಕರು, ಶಾಸಕರು ಮತ್ತು ಸಂಸದರು ದೇಶದ ಗಲ್ಲಿ ಗಲ್ಲಿಗಳಲ್ಲಿ ಕಾಶ್ಮೀರ್ ಫೈಲ್ಸ್ ಸಿನಿಮಾ ಪೋಸ್ಟರ್ ಅಂಟಿಸುತ್ತಿದ್ದಾರೆ. ಜನ ನಿಮ್ಮನ್ನು ಆಯ್ಕೆ ಮಾಡಿರುವುದು ಪೋಸ್ಟರ್ ಅಂಟಿಸುವುದಕ್ಕಾಗಿಯೇ? ಇದೇನಾ ನಿಮ್ಮ ರಾಜಕೀಯ? ನೀವು ಮನೆಗೆ ಹೋದಾಗ ನಿಮ್ಮ ಮಕ್ಕಳು ಏನು ಕೆಲಸ ಮಾಡುತ್ತಿದ್ದೀರಿ ಎಂದು ಕೇಳಿದರೆ ಪೋಸ್ಟರ್ ಅಂಟಿಸುತ್ತೇವೆ ಎಂದು ಉತ್ತರಿಸುತ್ತೀರಾ” ಎಂದು ಕೇಜ್ರಿವಾಲ್ ವ್ಯಂಗ್ಯವಾಡಿದ್ದಾರೆ.

“ಕಾಶ್ಮೀರ್ ಫೈಲ್ಸ್‌ ಗೆ ತೆರಿಗೆ ವಿನಾಯಿತಿ ಕೇಳುತ್ತೀರಿ? ಜನ ಅದನ್ನು ನೋಡಬೇಕು ಅಂತ ನಿಮಗೆ ಇದ್ದರೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಹೇಳಿ ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿಸಿ. ಆಗ ಅದು ಪೂರ್ತಿ ಉಚಿತವಾಗಿ ಒಂದೇ ದಿನದಲ್ಲಿ ಇಡೀ ದೇಶದ ಜನ ನೋಡಬಹುದಲ್ಲವೇ, ಆಗ ತೆರಿಗೆ ವಿನಾಯಿತಿಯ ಪ್ರಶ್ನೆಗೆ ಉದ್ಭವಿಸುವುದಿಲ್ಲವಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಹರಿಯಾಣದ ಬಿಜೆಪಿ ಶಾಸಕ ಪಾರ್ಕ್ ಒಂದರಲ್ಲಿ ಉಚಿತವಾಗಿ ಕಾಶ್ಮೀರಿ ಫೈಲ್ಸ್ ಸ್ಕ್ರೀನಿಂಗ್ ಆಯೋಜಿಸಿದ್ದರು. ಅದನ್ನು ಖಂಡಿಸಿ ಹರಿಯಾಣದ ಮುಖ್ಯಮಂತ್ರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ವಿವೇಕ್ ಅಗ್ನಿಹೋತ್ರಿ, ಟಿಕೆಟ್ ಪಡೆದು ಸಿನಿಮಾ ನೋಡಲು ಹೇಳಿ, ಉಚಿತವಾಗಿ ಬೇಡ ಎಂದು ಒತ್ತಾಯಿಸಿದ್ದಾರೆ. ಸಹೋದರರೆ ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೆಲವರು ಕೋಟಿ ಕೋಟಿ ಹಣ ಮಾಡುತ್ತಿದ್ದಾರೆ. ಆದರೆ ನಿಮಗೆ ಅದರ ಪೋಸ್ಟರ್ ಹಚ್ಚುವ ಕೆಲಸ ನೀಡುತ್ತಿದ್ದಾರೆ” ಎಂದು ಬಿಜೆಪಿ ಶಾಸಕರನ್ನು ಉದ್ದೇಶಿಸಿ ಕೇಜ್ರಿವಾಲ್ ಮಾತನಾಡಿದ್ದಾರೆ.

ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಅವರು ಕೋಟಿ ಕೋಟಿ ದುಡ್ಡು ಮಾಡುತ್ತಿದ್ದಾಗ ನೀವು ಪೋಸ್ಟರ್ ಅಂಟಿಸುತ್ತಿದ್ದೀರಿ. ದಯವಿಟ್ಟು ಕಣ್ಣು ತೆರೆದು ನೋಡಿ ಅರ್ಥಮಾಡಿಕೊಳ್ಳಿ ಎಂದು ಬಿಜೆಪಿ ಶಾಸಕರಲ್ಲಿ ಮನವಿ ಮಾಡಿದ್ದಾರೆ.

8 ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ ನಂತರವೂ ಮಾನ್ಯ ನರೇಂದ್ರ ಮೋದಿಯವರು ಕಾಶ್ಮೀರಿ ಪಂಡಿತರಿಗಾಗಿ ಏನಾದರೂ ಮಾಡಿ ಎಂದು ವಿವೇಕ್ ಅಗ್ನಿಹೋತ್ರಿ ಕಾಲಿಗೆ ಬಿದ್ದು ಬೇಡಿಕೊಳ್ಳುತ್ತಾರೆ ಎಂದರೆ ಅವರು 8 ವರ್ಷ ಏನೂ ಕೆಲಸ ಮಾಡಿಲ್ಲವೆಂಬುದು ಸ್ಪಷ್ಟವಾಗಿದೆ. ಹಾಗಾಗಿ ತಮ್ಮನ್ನು ಉಳಿಸಿ ಎಂದು ಅಗ್ನಿಹೋತ್ರಿ ಕಾಲಿಗೆ ಬೀಳಬೇಕಾದ ಪರಿಸ್ಥಿತಿ ಬಂದಿದೆ ಎಂದು ಕೇಜ್ರಿವಾಲ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಎರಡು ನಿಮಿಷದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಶ್ಮೀರಿ ಪಂಡಿತರಿಗಾಗಿ ಏನನ್ನು ಮಾಡದ ಕೇಂದ್ರ ಸರ್ಕಾರ ಈ ಸಿನಿಮಾದ ಬೆನ್ನಿಗೆ ನಿಂತಿದೆ ಎಂದು ಟೀಕಿಸಿದ್ದಾರೆ. ಅಲ್ಲದೇ ಈ ಸಿನಿಮಾದ ಉದ್ದೇಶ ಕಾಶ್ಮೀರಿ ಪಂಡಿತರಿಗೆ ಸಹಾಯ ಮಾಡುವುದಲ್ಲ ಬದಲಿಗೆ ಅವರ ಹೆಸರಿನಲ್ಲಿ ದುಡ್ಡು ಮಾಡುವುದಾಗಿ ಎಂಬ ಟೀಕೆಗಳು ಕೇಳಿಬಂದಿವೆ.

ಅರವಿಂದ್ ಕೇಜ್ರಿವಾಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ ಬಿ.ಎಲ್ ಸಂತೋಷ್, “ಈ ಹಿಂದೆ ಅರವಿಂದ್ ಕೇಜ್ರಿವಾಲ್ ನಿಲ್ ಬಟ್ಟೆ ಸನ್ನತಾ ಮತ್ತು ಸಾಂಡ್ ಕಿ ಆಂಖ್ ಎಂಬ ಸಿನಿಮಾಗಳಿಗೆ ದೆಹಲಿಯಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದರು. ಈಗ ಕಾಶ್ಮೀರಿ ಫೈಲ್ಸ್ ಗೆ ತೆರಿಗೆ ವಿನಾಯಿತಿ ನೀಡುವುದಿಲ್ಲ, ಯೂಟ್ಯೂಬ್‌ಗೆ ಹಾಕಿ ಅನ್ನುತ್ತಿದ್ದಾರೆ. ನಾಚಿಕೆಯಾಗಬೇಕು ನಿಮಗೆ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...