Homeಮುಖಪುಟತೆರಿಗೆ ವಿನಾಯಿತಿ ನೀಡುವುದರ ಬದಲು ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿ: ಕಾಶ್ಮೀರ್ ಫೈಲ್ಸ್ ನಿರ್ದೇಶಕನಿಗೆ ಕೇಜ್ರಿವಾಲ್ ಸವಾಲು

ತೆರಿಗೆ ವಿನಾಯಿತಿ ನೀಡುವುದರ ಬದಲು ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿ: ಕಾಶ್ಮೀರ್ ಫೈಲ್ಸ್ ನಿರ್ದೇಶಕನಿಗೆ ಕೇಜ್ರಿವಾಲ್ ಸವಾಲು

ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೆಲವರು ಕೋಟಿ ಕೋಟಿ ದುಡ್ಡು ಮಾಡುತ್ತಿರುವಾಗ ನೀವು ಸಿನಿಮಾ ಪೋಸ್ಟರ್ ಅಂಟಿಸುತ್ತಿದ್ದೀರಿ.. - ಬಿಜೆಪಿ ಶಾಸಕರಿಗೆ ಕೇಜ್ರಿವಾಲ್ ಕಿವಿಮಾತು

- Advertisement -
- Advertisement -

ದೆಹಲಿಯಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕೆಂಬ ಬಿಜೆಪಿ ಮುಖಂಡರ ಬೇಡಿಕೆಗೆ ಪ್ರತಿಕ್ರಿಯಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, “ನಿಮಗೆ ನಿಜಕ್ಕೂ ಇಡೀ ದೇಶದ ಜನ ಈ ಸಿನಿಮಾ ನೋಡಬೇಕೆಂದಿದ್ದರೆ ತೆರಿಗೆ ವಿನಾಯಿತಿ ಕೇಳುವುದರ ಬದಲು, ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿ” ಎಂದು ಸವಾಲು ಹಾಕಿದ್ದಾರೆ.

ದೆಹಲಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, “ಬಿಜೆಪಿ ನಾಯಕರು, ಶಾಸಕರು ಮತ್ತು ಸಂಸದರು ದೇಶದ ಗಲ್ಲಿ ಗಲ್ಲಿಗಳಲ್ಲಿ ಕಾಶ್ಮೀರ್ ಫೈಲ್ಸ್ ಸಿನಿಮಾ ಪೋಸ್ಟರ್ ಅಂಟಿಸುತ್ತಿದ್ದಾರೆ. ಜನ ನಿಮ್ಮನ್ನು ಆಯ್ಕೆ ಮಾಡಿರುವುದು ಪೋಸ್ಟರ್ ಅಂಟಿಸುವುದಕ್ಕಾಗಿಯೇ? ಇದೇನಾ ನಿಮ್ಮ ರಾಜಕೀಯ? ನೀವು ಮನೆಗೆ ಹೋದಾಗ ನಿಮ್ಮ ಮಕ್ಕಳು ಏನು ಕೆಲಸ ಮಾಡುತ್ತಿದ್ದೀರಿ ಎಂದು ಕೇಳಿದರೆ ಪೋಸ್ಟರ್ ಅಂಟಿಸುತ್ತೇವೆ ಎಂದು ಉತ್ತರಿಸುತ್ತೀರಾ” ಎಂದು ಕೇಜ್ರಿವಾಲ್ ವ್ಯಂಗ್ಯವಾಡಿದ್ದಾರೆ.

“ಕಾಶ್ಮೀರ್ ಫೈಲ್ಸ್‌ ಗೆ ತೆರಿಗೆ ವಿನಾಯಿತಿ ಕೇಳುತ್ತೀರಿ? ಜನ ಅದನ್ನು ನೋಡಬೇಕು ಅಂತ ನಿಮಗೆ ಇದ್ದರೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಹೇಳಿ ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿಸಿ. ಆಗ ಅದು ಪೂರ್ತಿ ಉಚಿತವಾಗಿ ಒಂದೇ ದಿನದಲ್ಲಿ ಇಡೀ ದೇಶದ ಜನ ನೋಡಬಹುದಲ್ಲವೇ, ಆಗ ತೆರಿಗೆ ವಿನಾಯಿತಿಯ ಪ್ರಶ್ನೆಗೆ ಉದ್ಭವಿಸುವುದಿಲ್ಲವಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಹರಿಯಾಣದ ಬಿಜೆಪಿ ಶಾಸಕ ಪಾರ್ಕ್ ಒಂದರಲ್ಲಿ ಉಚಿತವಾಗಿ ಕಾಶ್ಮೀರಿ ಫೈಲ್ಸ್ ಸ್ಕ್ರೀನಿಂಗ್ ಆಯೋಜಿಸಿದ್ದರು. ಅದನ್ನು ಖಂಡಿಸಿ ಹರಿಯಾಣದ ಮುಖ್ಯಮಂತ್ರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ವಿವೇಕ್ ಅಗ್ನಿಹೋತ್ರಿ, ಟಿಕೆಟ್ ಪಡೆದು ಸಿನಿಮಾ ನೋಡಲು ಹೇಳಿ, ಉಚಿತವಾಗಿ ಬೇಡ ಎಂದು ಒತ್ತಾಯಿಸಿದ್ದಾರೆ. ಸಹೋದರರೆ ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೆಲವರು ಕೋಟಿ ಕೋಟಿ ಹಣ ಮಾಡುತ್ತಿದ್ದಾರೆ. ಆದರೆ ನಿಮಗೆ ಅದರ ಪೋಸ್ಟರ್ ಹಚ್ಚುವ ಕೆಲಸ ನೀಡುತ್ತಿದ್ದಾರೆ” ಎಂದು ಬಿಜೆಪಿ ಶಾಸಕರನ್ನು ಉದ್ದೇಶಿಸಿ ಕೇಜ್ರಿವಾಲ್ ಮಾತನಾಡಿದ್ದಾರೆ.

ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಅವರು ಕೋಟಿ ಕೋಟಿ ದುಡ್ಡು ಮಾಡುತ್ತಿದ್ದಾಗ ನೀವು ಪೋಸ್ಟರ್ ಅಂಟಿಸುತ್ತಿದ್ದೀರಿ. ದಯವಿಟ್ಟು ಕಣ್ಣು ತೆರೆದು ನೋಡಿ ಅರ್ಥಮಾಡಿಕೊಳ್ಳಿ ಎಂದು ಬಿಜೆಪಿ ಶಾಸಕರಲ್ಲಿ ಮನವಿ ಮಾಡಿದ್ದಾರೆ.

8 ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ ನಂತರವೂ ಮಾನ್ಯ ನರೇಂದ್ರ ಮೋದಿಯವರು ಕಾಶ್ಮೀರಿ ಪಂಡಿತರಿಗಾಗಿ ಏನಾದರೂ ಮಾಡಿ ಎಂದು ವಿವೇಕ್ ಅಗ್ನಿಹೋತ್ರಿ ಕಾಲಿಗೆ ಬಿದ್ದು ಬೇಡಿಕೊಳ್ಳುತ್ತಾರೆ ಎಂದರೆ ಅವರು 8 ವರ್ಷ ಏನೂ ಕೆಲಸ ಮಾಡಿಲ್ಲವೆಂಬುದು ಸ್ಪಷ್ಟವಾಗಿದೆ. ಹಾಗಾಗಿ ತಮ್ಮನ್ನು ಉಳಿಸಿ ಎಂದು ಅಗ್ನಿಹೋತ್ರಿ ಕಾಲಿಗೆ ಬೀಳಬೇಕಾದ ಪರಿಸ್ಥಿತಿ ಬಂದಿದೆ ಎಂದು ಕೇಜ್ರಿವಾಲ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಎರಡು ನಿಮಿಷದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಶ್ಮೀರಿ ಪಂಡಿತರಿಗಾಗಿ ಏನನ್ನು ಮಾಡದ ಕೇಂದ್ರ ಸರ್ಕಾರ ಈ ಸಿನಿಮಾದ ಬೆನ್ನಿಗೆ ನಿಂತಿದೆ ಎಂದು ಟೀಕಿಸಿದ್ದಾರೆ. ಅಲ್ಲದೇ ಈ ಸಿನಿಮಾದ ಉದ್ದೇಶ ಕಾಶ್ಮೀರಿ ಪಂಡಿತರಿಗೆ ಸಹಾಯ ಮಾಡುವುದಲ್ಲ ಬದಲಿಗೆ ಅವರ ಹೆಸರಿನಲ್ಲಿ ದುಡ್ಡು ಮಾಡುವುದಾಗಿ ಎಂಬ ಟೀಕೆಗಳು ಕೇಳಿಬಂದಿವೆ.

ಅರವಿಂದ್ ಕೇಜ್ರಿವಾಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ ಬಿ.ಎಲ್ ಸಂತೋಷ್, “ಈ ಹಿಂದೆ ಅರವಿಂದ್ ಕೇಜ್ರಿವಾಲ್ ನಿಲ್ ಬಟ್ಟೆ ಸನ್ನತಾ ಮತ್ತು ಸಾಂಡ್ ಕಿ ಆಂಖ್ ಎಂಬ ಸಿನಿಮಾಗಳಿಗೆ ದೆಹಲಿಯಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದರು. ಈಗ ಕಾಶ್ಮೀರಿ ಫೈಲ್ಸ್ ಗೆ ತೆರಿಗೆ ವಿನಾಯಿತಿ ನೀಡುವುದಿಲ್ಲ, ಯೂಟ್ಯೂಬ್‌ಗೆ ಹಾಕಿ ಅನ್ನುತ್ತಿದ್ದಾರೆ. ನಾಚಿಕೆಯಾಗಬೇಕು ನಿಮಗೆ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...