Homeಕರ್ನಾಟಕಕಾಶ್ಮೀರ್‌‌ ಫೈಲ್ ಸಿನಿಮಾ ಬದಲು, ಗುಜರಾತ್ ಹತ್ಯಾಕಾಂಡದ ಕುರಿತ ‘ಪರ್ಜಾನಿಯ’ ಸಿನಿಮಾ ನೋಡಲು ಅವಕಾಶ ಮಾಡಿಕೊಡಿ:...

ಕಾಶ್ಮೀರ್‌‌ ಫೈಲ್ ಸಿನಿಮಾ ಬದಲು, ಗುಜರಾತ್ ಹತ್ಯಾಕಾಂಡದ ಕುರಿತ ‘ಪರ್ಜಾನಿಯ’ ಸಿನಿಮಾ ನೋಡಲು ಅವಕಾಶ ಮಾಡಿಕೊಡಿ: ಬಿ. ಕೆ. ಹರಿಪ್ರಸಾದ್

- Advertisement -
- Advertisement -

ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಯವರು ‘ದಿ ಕಾಶ್ಮೀರ್‌‌ ಫೈಲ್‌‌’ ಸಿನಿಮಾ ವೀಕ್ಷಣೆಗೆ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪರಿಷತ್‌ನ ವಿಪಕ್ಷ ನಾಯಕ ಬಿ.ಕೆ. ಹರೀಶ್‌, ಗುಜರಾತ್ ಹತ್ಯಾಕಾಂಡದ ಕುರಿತ ‘ಫರ್ಜಾನಿಯ’ ಮತ್ತು ವಾರಣಾಸಿ ದಲಿತ ಮಹಿಳೆಯ ಅತ್ಯಾಚಾರದ ಕುರಿತು ‘ವಾಟರ್’ ಎಂಬ ಎರಡು ಸಿನಿಮಾಗಳು ಇವೆ ಅವನ್ನೂ ತೋರಿಸಿ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಲು ಸರ್ಕಾರವೇ ಉತ್ಸಾಹ ತೋರಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದ್ದು, ವಿಧಾನಸಭೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಚಿತ್ರವನ್ನು ವೀಕ್ಷಿಸಲು ಸಚಿವರು ಹಾಗೂ ಶಾಸಕರಿಗೆ ವ್ಯವಸ್ಥೆ ಮಾಡಿರುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್ ತೀರ್ಪು ವಿರೋಧಿಸಿ ಪ್ರತಿಭಟನೆ ಆರಂಭಿಸಿದ ಚೆನ್ನೈನ ವಿದ್ಯಾರ್ಥಿಗಳು

ಇದೀಗ ವಿಧಾನ ಪರಿಷತ್​ನಲ್ಲಿ ಇದೇ ಘೋಷಣೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಮಾಡಿದ್ದು, ಪ್ರತಿಪಕ್ಷಗಳಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಈ ಪ್ರಕಟಣೆಯನ್ನು ವಾಪಾಸು ಪಡೆಯುವಂತೆ ಕಾಂಗ್ರೆಸ್ ಸದಸ್ಯರು ಒತ್ತಾಯಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಗುಜರಾತ್ ಹತ್ಯಾಕಾಂಡದ ಕುರಿತು ‘ಫರ್ಜಾನಿಯಾ’ ಮತ್ತು ವಾರಣಾಸಿ ದಲಿತ ಮಹಿಳೆಯ ಅತ್ಯಾಚಾರದ ಕುರಿತು ‘ವಾಟರ್’ ಎಂಬ ಎರಡು ಸಿನಿಮಾಗಳು ಇವೆ ಇವೆ ಅವನ್ನೂ ತೋರಿಸಿ ಎಂದು ಹೇಳಿದ್ದಾರೆ.

‘‘ನಾವು ಯಾವ ಸಿನಿಮಾ ನೋಡಬೇಕು ಎಂದು ಸದನದಲ್ಲಿ ಹೇಳುವ ಹಾಗಿಲ್ಲ. ಕೆಲವರು ಸದನದಲ್ಲಿ ಅಶ್ಲೀಲ ಚಿತ್ರ ನೋಡಿದ್ದಾರೆ. ನಾವೂ ಹಾಗಾದ್ರೆ ಅದನ್ನು ನೋಡಬೇಕಾ? ಸರ್ಕಾರ ಪಿಚ್ಚರ್ ತೋರಿಸೋದಕ್ಕೆ ಇದೆಯಾ? ಸಭಾಪತಿ ನಿಷ್ಪಕ್ಷಪಾತಿ ಆಗಿರಬೇಕು. ಪೀಠದಿಂದ ಯಾಕೆ ಇದನ್ನು ಹೇಳಿಸ್ತೀರಾ?’’ ಎಂದು ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಜೆಟ್ ಚರ್ಚೆ ಬಿಟ್ಟು ಸಿನಿಮಾ ಯಾಕೆ ನೋಡಬೇಕು ಎಂದು ಪ್ರಶ್ನಿಸಿದ ಅವರು ಸದನದಲ್ಲಿ ಮಾಡಿದ ಘೋಷಣೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರಿ ಪತ್ರಕರ್ತ ಫಹಾದ್ ಶಾ ಬಿಡುಗಡೆಗೆ ಪತ್ರಿಕಾ ಸಂಸ್ಥೆಗಳ ಒತ್ತಾಯ

ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ‘‘ಸರ್ಕಾರ ಯಾಕೆ ಬಲವಂತವಾಗಿ ಸಿನಿಮಾ ತೋರಿಸುವುದಕ್ಕೆ ಹೊರಟಿದೆ? ಬಜೆಟ್ ಚರ್ಚೆ ಬಿಟ್ಟು ಸಿನಿಮಾ ಯಾಕೆ ನೋಡಬೇಕು?” ಎಂದು ಪ್ರಶ್ನಿಸಿದ್ದಾರೆ.

ನಂತರ ಸಿನಿಮಾ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ಗದ್ದಲ ಏರ್ಪಟ್ಟಿದೆ. ಕಾಂಗ್ರೆಸ್‌ ಸದಸ್ಯರು ಘೋಷಣೆ ವಾಪಸ್ ಪಡೆಯಬೇಕು ಎಂದು ಪಟ್ಟು ಹಿಡಿದು, ಪರಿಷತ್ ಬಾವಿಗಿಳಿದು ಧರಣಿ ನಡೆಸಿದ್ದಾರೆ. ಇದರಂದಾಗಿ ಹತ್ತು ನಿಮಿಷಗಳ ಕಾಲ ಅಧಿವೇಶ ಮುಂದೂಡಲಾಯಿತು.

ನಂತರ ಮತ್ತೆ ಅಧಿವೇಶನ ಪ್ರಾರಂಭವಾದ ತಕ್ಷಣ ಹರಿಪ್ರಸಾದ್ ಅವರು ಕಾಶ್ಮೀರದ ಪಂಡಿತರ ಕೊಲೆಗಳಿಗೆ ಸಂಬಂಧಿಸಿದ ಶ್ರೀನಗರ ಪೊಲೀಸ್ ಇಲಾಖೆ ನೀಡಿದ ಆರ್‌ಟಿಐ ಮಾಹಿತಿಯ ಪ್ರತಿಯನ್ನು ಓದಿ, “1990ರ ನಂತರ ಕಾಶ್ಮೀರಿ ಪಂಡಿತರ ಕೊಲೆಗಳ ಸಂಖ್ಯೆ 89. ಅದೇ ಅವಧಿಯಲ್ಲಿ ದಲಿತರು ಹಾಗೂ ಬೇರೆ ಸಮುದಾಯಕ್ಕೆ ಸೇರಿದ ಒಟ್ಟು 1635 ಜನರನ್ನ ಕೊಲೆ ಮಾಡಲಾಗಿದೆ. ಇದು ಆರ್‌ಟಿಐನಲ್ಲಿ ಬಹಿರಂಗವಾಗಿದೆ. ಸದನಕ್ಕೆ ಈ ಪ್ರತಿ ನೀಡಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: `ಕಾಶ್ಮೀರ್‌ ಫೈಲ್ಸ್‌‌’ ಎಂದು ಕೂಗುತ್ತಿರುವವರಿಗೆ ‘ದಲಿತ್‌ ಫೈಲ್ಸ್‌‌’ ಕಾಣುವುದಿಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾತಿ ಬಿಡಿ, ಧರ್ಮ ಉಳಿಸಿ. ಧರ್ಮದ ಹಂಗೇ ಬೇಡ ಎಂದಿದ್ದರೆ, ಗೌರಿಯವರು ತಮ್ಮ ಹೆಸರನ್ನು ಬದಲಾಯಿಸಿಕೊಳ್ಳಬಹುದಾಗಿತ್ತಲ್ವಾ?

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...