Homeಕರ್ನಾಟಕಕಾಶ್ಮೀರ್‌‌ ಫೈಲ್ ಸಿನಿಮಾ ಬದಲು, ಗುಜರಾತ್ ಹತ್ಯಾಕಾಂಡದ ಕುರಿತ ‘ಪರ್ಜಾನಿಯ’ ಸಿನಿಮಾ ನೋಡಲು ಅವಕಾಶ ಮಾಡಿಕೊಡಿ:...

ಕಾಶ್ಮೀರ್‌‌ ಫೈಲ್ ಸಿನಿಮಾ ಬದಲು, ಗುಜರಾತ್ ಹತ್ಯಾಕಾಂಡದ ಕುರಿತ ‘ಪರ್ಜಾನಿಯ’ ಸಿನಿಮಾ ನೋಡಲು ಅವಕಾಶ ಮಾಡಿಕೊಡಿ: ಬಿ. ಕೆ. ಹರಿಪ್ರಸಾದ್

- Advertisement -
- Advertisement -

ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಯವರು ‘ದಿ ಕಾಶ್ಮೀರ್‌‌ ಫೈಲ್‌‌’ ಸಿನಿಮಾ ವೀಕ್ಷಣೆಗೆ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪರಿಷತ್‌ನ ವಿಪಕ್ಷ ನಾಯಕ ಬಿ.ಕೆ. ಹರೀಶ್‌, ಗುಜರಾತ್ ಹತ್ಯಾಕಾಂಡದ ಕುರಿತ ‘ಫರ್ಜಾನಿಯ’ ಮತ್ತು ವಾರಣಾಸಿ ದಲಿತ ಮಹಿಳೆಯ ಅತ್ಯಾಚಾರದ ಕುರಿತು ‘ವಾಟರ್’ ಎಂಬ ಎರಡು ಸಿನಿಮಾಗಳು ಇವೆ ಅವನ್ನೂ ತೋರಿಸಿ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಲು ಸರ್ಕಾರವೇ ಉತ್ಸಾಹ ತೋರಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದ್ದು, ವಿಧಾನಸಭೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಚಿತ್ರವನ್ನು ವೀಕ್ಷಿಸಲು ಸಚಿವರು ಹಾಗೂ ಶಾಸಕರಿಗೆ ವ್ಯವಸ್ಥೆ ಮಾಡಿರುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್ ತೀರ್ಪು ವಿರೋಧಿಸಿ ಪ್ರತಿಭಟನೆ ಆರಂಭಿಸಿದ ಚೆನ್ನೈನ ವಿದ್ಯಾರ್ಥಿಗಳು

ಇದೀಗ ವಿಧಾನ ಪರಿಷತ್​ನಲ್ಲಿ ಇದೇ ಘೋಷಣೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಮಾಡಿದ್ದು, ಪ್ರತಿಪಕ್ಷಗಳಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಈ ಪ್ರಕಟಣೆಯನ್ನು ವಾಪಾಸು ಪಡೆಯುವಂತೆ ಕಾಂಗ್ರೆಸ್ ಸದಸ್ಯರು ಒತ್ತಾಯಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಗುಜರಾತ್ ಹತ್ಯಾಕಾಂಡದ ಕುರಿತು ‘ಫರ್ಜಾನಿಯಾ’ ಮತ್ತು ವಾರಣಾಸಿ ದಲಿತ ಮಹಿಳೆಯ ಅತ್ಯಾಚಾರದ ಕುರಿತು ‘ವಾಟರ್’ ಎಂಬ ಎರಡು ಸಿನಿಮಾಗಳು ಇವೆ ಇವೆ ಅವನ್ನೂ ತೋರಿಸಿ ಎಂದು ಹೇಳಿದ್ದಾರೆ.

‘‘ನಾವು ಯಾವ ಸಿನಿಮಾ ನೋಡಬೇಕು ಎಂದು ಸದನದಲ್ಲಿ ಹೇಳುವ ಹಾಗಿಲ್ಲ. ಕೆಲವರು ಸದನದಲ್ಲಿ ಅಶ್ಲೀಲ ಚಿತ್ರ ನೋಡಿದ್ದಾರೆ. ನಾವೂ ಹಾಗಾದ್ರೆ ಅದನ್ನು ನೋಡಬೇಕಾ? ಸರ್ಕಾರ ಪಿಚ್ಚರ್ ತೋರಿಸೋದಕ್ಕೆ ಇದೆಯಾ? ಸಭಾಪತಿ ನಿಷ್ಪಕ್ಷಪಾತಿ ಆಗಿರಬೇಕು. ಪೀಠದಿಂದ ಯಾಕೆ ಇದನ್ನು ಹೇಳಿಸ್ತೀರಾ?’’ ಎಂದು ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಜೆಟ್ ಚರ್ಚೆ ಬಿಟ್ಟು ಸಿನಿಮಾ ಯಾಕೆ ನೋಡಬೇಕು ಎಂದು ಪ್ರಶ್ನಿಸಿದ ಅವರು ಸದನದಲ್ಲಿ ಮಾಡಿದ ಘೋಷಣೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರಿ ಪತ್ರಕರ್ತ ಫಹಾದ್ ಶಾ ಬಿಡುಗಡೆಗೆ ಪತ್ರಿಕಾ ಸಂಸ್ಥೆಗಳ ಒತ್ತಾಯ

ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ‘‘ಸರ್ಕಾರ ಯಾಕೆ ಬಲವಂತವಾಗಿ ಸಿನಿಮಾ ತೋರಿಸುವುದಕ್ಕೆ ಹೊರಟಿದೆ? ಬಜೆಟ್ ಚರ್ಚೆ ಬಿಟ್ಟು ಸಿನಿಮಾ ಯಾಕೆ ನೋಡಬೇಕು?” ಎಂದು ಪ್ರಶ್ನಿಸಿದ್ದಾರೆ.

ನಂತರ ಸಿನಿಮಾ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ಗದ್ದಲ ಏರ್ಪಟ್ಟಿದೆ. ಕಾಂಗ್ರೆಸ್‌ ಸದಸ್ಯರು ಘೋಷಣೆ ವಾಪಸ್ ಪಡೆಯಬೇಕು ಎಂದು ಪಟ್ಟು ಹಿಡಿದು, ಪರಿಷತ್ ಬಾವಿಗಿಳಿದು ಧರಣಿ ನಡೆಸಿದ್ದಾರೆ. ಇದರಂದಾಗಿ ಹತ್ತು ನಿಮಿಷಗಳ ಕಾಲ ಅಧಿವೇಶ ಮುಂದೂಡಲಾಯಿತು.

ನಂತರ ಮತ್ತೆ ಅಧಿವೇಶನ ಪ್ರಾರಂಭವಾದ ತಕ್ಷಣ ಹರಿಪ್ರಸಾದ್ ಅವರು ಕಾಶ್ಮೀರದ ಪಂಡಿತರ ಕೊಲೆಗಳಿಗೆ ಸಂಬಂಧಿಸಿದ ಶ್ರೀನಗರ ಪೊಲೀಸ್ ಇಲಾಖೆ ನೀಡಿದ ಆರ್‌ಟಿಐ ಮಾಹಿತಿಯ ಪ್ರತಿಯನ್ನು ಓದಿ, “1990ರ ನಂತರ ಕಾಶ್ಮೀರಿ ಪಂಡಿತರ ಕೊಲೆಗಳ ಸಂಖ್ಯೆ 89. ಅದೇ ಅವಧಿಯಲ್ಲಿ ದಲಿತರು ಹಾಗೂ ಬೇರೆ ಸಮುದಾಯಕ್ಕೆ ಸೇರಿದ ಒಟ್ಟು 1635 ಜನರನ್ನ ಕೊಲೆ ಮಾಡಲಾಗಿದೆ. ಇದು ಆರ್‌ಟಿಐನಲ್ಲಿ ಬಹಿರಂಗವಾಗಿದೆ. ಸದನಕ್ಕೆ ಈ ಪ್ರತಿ ನೀಡಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: `ಕಾಶ್ಮೀರ್‌ ಫೈಲ್ಸ್‌‌’ ಎಂದು ಕೂಗುತ್ತಿರುವವರಿಗೆ ‘ದಲಿತ್‌ ಫೈಲ್ಸ್‌‌’ ಕಾಣುವುದಿಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾತಿ ಬಿಡಿ, ಧರ್ಮ ಉಳಿಸಿ. ಧರ್ಮದ ಹಂಗೇ ಬೇಡ ಎಂದಿದ್ದರೆ, ಗೌರಿಯವರು ತಮ್ಮ ಹೆಸರನ್ನು ಬದಲಾಯಿಸಿಕೊಳ್ಳಬಹುದಾಗಿತ್ತಲ್ವಾ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...