Homeಮುಖಪುಟಹಣದುಬ್ಬರ, ಉದ್ಯೋಗಗಳ ಬಗ್ಗೆ ಮಾತನಾಡುವ ಬದಲು ಬಿಜೆಪಿ ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ: ಪ್ರಿಯಾಂಕಾ ಗಾಂಧಿ

ಹಣದುಬ್ಬರ, ಉದ್ಯೋಗಗಳ ಬಗ್ಗೆ ಮಾತನಾಡುವ ಬದಲು ಬಿಜೆಪಿ ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ: ಪ್ರಿಯಾಂಕಾ ಗಾಂಧಿ

- Advertisement -
- Advertisement -

‘ಆಡಳಿತಾರೂಢ ಬಿಜೆಪಿ ಹಣದುಬ್ಬರವನ್ನು ಹೇಗೆ ನಿಯಂತ್ರಿಸುತ್ತದೆ ಅಥವಾ ಜನರಿಗೆ ಉದ್ಯೋಗವನ್ನು ನೀಡುತ್ತದೆ ಎಂಬುದರ ಕುರಿತು ಮಾತನಾಡುವ ಬದಲು ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ’ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಆರೋಪಿಸಿದ್ದಾರೆ.

ಅಮೇಥಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಅವರನ್ನು ಬೆಂಬಲಿಸಿ ‘ನುಕ್ಕಡ್ ಸಭೆ’ಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, “ಕಳೆದ 70 ವರ್ಷಗಳಲ್ಲಿ ಮಾಡದ ಕೆಲಸವನ್ನು ತಮ್ಮ ಸರ್ಕಾರ 10 ವರ್ಷಗಳಲ್ಲಿ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟಿವಿಯಲ್ಲಿ ಹೇಳಿಕೊಳ್ಳುತ್ತಾರೆ. ನೆಲದ ಮಟ್ಟದಲ್ಲಿ ಪರಿಸ್ಥಿತಿ ವಿಭಿನ್ನವಾಗಿದೆ” ಎಂದು ತಿರುಗೇಟು ಕೊಟ್ಟಿದ್ದಾರೆ.

ಅಮೇಥಿ ಹಾಲಿ ಸಂಸದೆ ಸ್ಮೃತಿ ಇರಾನಿ ವಿರುದ್ಧ ಗಾಂಧಿ ಕುಟುಂಬದ ಆಪ್ತ ಕಿಶೋರಿ ಲಾಲ್ ಶರ್ಮಾ ಕಣಕ್ಕಿಳಿದಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯಿಂದ ಗಾಂಧಿ ಕುಟುಂಬದ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟಿದ್ದ ಸ್ಥಾನವನ್ನು ಬಿಜೆಪಿ ನಾಯಕಿ ಕಸಿದುಕೊಂಡಿದ್ದರು.

ಇರಾನಿ ಅವರನ್ನು ಗುರಿಯಾಗಿಸಿ ಮಾತನಾಡಿದ ಪ್ರಿಯಾಂಕಾ, ರಾಹುಲ್ ಗಾಂಧಿಯನ್ನು ಸೋಲಿಸುವುದು ಅವರ ಏಕೈಕ ಉದ್ದೇಶವಾಗಿತ್ತು ಎಂದರು.

ನಿಮ್ಮ ಸಂಸದರು ಮತ್ತು ಬಿಜೆಪಿಯವರು ಚುನಾವಣಾ ಸಮಯದಲ್ಲಿ ಬರುತ್ತಾರೆ. ಆದರೆ, ಹಣದುಬ್ಬರವನ್ನು ಹೇಗೆ ನಿಯಂತ್ರಿಸುತ್ತಾರೆ.. ಕೃಷಿಯನ್ನು ಸುಧಾರಿಸುತ್ತಾರೆ ಅಥವಾ ನಿಮ್ಮ ಮಕ್ಕಳಿಗೆ ಉದ್ಯೋಗ ಕೊಡುತ್ತಾರೆ ಎಂದು ಮಾತನಾಡುವುದಿಲ್ಲ. ಅವರು ನಿಮ್ಮ ಮನೆಗೆ ಬಂದು ದೇವರ ಹೆಸರಿನಲ್ಲಿ ನಮಗೆ ಮತ ಚಲಾಯಿಸಿ ಎಂದು ಹೇಳುತ್ತಾರೆ. ಅವರು 10 ವರ್ಷಗಳಲ್ಲಿ ಮಾಡಿದ ಕೆಲಸದ ಹೆಸರಿನಲ್ಲಿ ಏಕೆ ಮತ ಕೇಳಲಿಲ್ಲ? ನಾವೂ ಸಹ ಧಾರ್ಮಿಕ ವ್ಯಕ್ತಿಗಳು, ನಮಗೆಲ್ಲರಿಗೂ ದೇವರು ಮತ್ತು ಧರ್ಮ ಬಹಳ ಪ್ರಿಯ. ಆದರೆ, ಧರ್ಮವನ್ನು ರಾಜಕೀಯಕ್ಕೆ ಬಳಸುವುದು ತಪ್ಪು” ಎಂದು ಅವರು ಹೇಳಿದರು.

ಅಮೇಥಿಯೊಂದಿಗೆ ತಮ್ಮ ಕುಟುಂಬದ ಒಡನಾಟವನ್ನು ಸ್ಮರಿಸಿದ ಅವರು, “ಇಲ್ಲಿನ ರಾಜಕೀಯದ ಸಂಪ್ರದಾಯವು ಜನರಿಗೆ ಸೇವೆ ಸಲ್ಲಿಸುವುದು ನಾಯಕನ ಧರ್ಮವಾಗಿದೆ ಮತ್ತು ಅದನ್ನು ಅವರ ಕುಟುಂಬದ ಎಲ್ಲಾ ಸದಸ್ಯರು ಅನುಸರಿಸುತ್ತಾರೆ” ಎಂದು ಹೇಳಿದರು.

ಇದನ್ನೂ ಓದಿ; ‘ಆರೋಪಗಳನ್ನು ಹೊರಿಸಲು ಸಾಕಷ್ಟು ವಸ್ತುಗಳಿವೆ..’; ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಕೇಸ್ ದಾಖಲಿಸುವಂತೆ ಸೂಚಿಸಿದ ದೆಹಲಿ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...