Homeಮುಖಪುಟಹಣದುಬ್ಬರ, ಉದ್ಯೋಗಗಳ ಬಗ್ಗೆ ಮಾತನಾಡುವ ಬದಲು ಬಿಜೆಪಿ ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ: ಪ್ರಿಯಾಂಕಾ ಗಾಂಧಿ

ಹಣದುಬ್ಬರ, ಉದ್ಯೋಗಗಳ ಬಗ್ಗೆ ಮಾತನಾಡುವ ಬದಲು ಬಿಜೆಪಿ ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ: ಪ್ರಿಯಾಂಕಾ ಗಾಂಧಿ

- Advertisement -
- Advertisement -

‘ಆಡಳಿತಾರೂಢ ಬಿಜೆಪಿ ಹಣದುಬ್ಬರವನ್ನು ಹೇಗೆ ನಿಯಂತ್ರಿಸುತ್ತದೆ ಅಥವಾ ಜನರಿಗೆ ಉದ್ಯೋಗವನ್ನು ನೀಡುತ್ತದೆ ಎಂಬುದರ ಕುರಿತು ಮಾತನಾಡುವ ಬದಲು ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ’ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಆರೋಪಿಸಿದ್ದಾರೆ.

ಅಮೇಥಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಅವರನ್ನು ಬೆಂಬಲಿಸಿ ‘ನುಕ್ಕಡ್ ಸಭೆ’ಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, “ಕಳೆದ 70 ವರ್ಷಗಳಲ್ಲಿ ಮಾಡದ ಕೆಲಸವನ್ನು ತಮ್ಮ ಸರ್ಕಾರ 10 ವರ್ಷಗಳಲ್ಲಿ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟಿವಿಯಲ್ಲಿ ಹೇಳಿಕೊಳ್ಳುತ್ತಾರೆ. ನೆಲದ ಮಟ್ಟದಲ್ಲಿ ಪರಿಸ್ಥಿತಿ ವಿಭಿನ್ನವಾಗಿದೆ” ಎಂದು ತಿರುಗೇಟು ಕೊಟ್ಟಿದ್ದಾರೆ.

ಅಮೇಥಿ ಹಾಲಿ ಸಂಸದೆ ಸ್ಮೃತಿ ಇರಾನಿ ವಿರುದ್ಧ ಗಾಂಧಿ ಕುಟುಂಬದ ಆಪ್ತ ಕಿಶೋರಿ ಲಾಲ್ ಶರ್ಮಾ ಕಣಕ್ಕಿಳಿದಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯಿಂದ ಗಾಂಧಿ ಕುಟುಂಬದ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟಿದ್ದ ಸ್ಥಾನವನ್ನು ಬಿಜೆಪಿ ನಾಯಕಿ ಕಸಿದುಕೊಂಡಿದ್ದರು.

ಇರಾನಿ ಅವರನ್ನು ಗುರಿಯಾಗಿಸಿ ಮಾತನಾಡಿದ ಪ್ರಿಯಾಂಕಾ, ರಾಹುಲ್ ಗಾಂಧಿಯನ್ನು ಸೋಲಿಸುವುದು ಅವರ ಏಕೈಕ ಉದ್ದೇಶವಾಗಿತ್ತು ಎಂದರು.

ನಿಮ್ಮ ಸಂಸದರು ಮತ್ತು ಬಿಜೆಪಿಯವರು ಚುನಾವಣಾ ಸಮಯದಲ್ಲಿ ಬರುತ್ತಾರೆ. ಆದರೆ, ಹಣದುಬ್ಬರವನ್ನು ಹೇಗೆ ನಿಯಂತ್ರಿಸುತ್ತಾರೆ.. ಕೃಷಿಯನ್ನು ಸುಧಾರಿಸುತ್ತಾರೆ ಅಥವಾ ನಿಮ್ಮ ಮಕ್ಕಳಿಗೆ ಉದ್ಯೋಗ ಕೊಡುತ್ತಾರೆ ಎಂದು ಮಾತನಾಡುವುದಿಲ್ಲ. ಅವರು ನಿಮ್ಮ ಮನೆಗೆ ಬಂದು ದೇವರ ಹೆಸರಿನಲ್ಲಿ ನಮಗೆ ಮತ ಚಲಾಯಿಸಿ ಎಂದು ಹೇಳುತ್ತಾರೆ. ಅವರು 10 ವರ್ಷಗಳಲ್ಲಿ ಮಾಡಿದ ಕೆಲಸದ ಹೆಸರಿನಲ್ಲಿ ಏಕೆ ಮತ ಕೇಳಲಿಲ್ಲ? ನಾವೂ ಸಹ ಧಾರ್ಮಿಕ ವ್ಯಕ್ತಿಗಳು, ನಮಗೆಲ್ಲರಿಗೂ ದೇವರು ಮತ್ತು ಧರ್ಮ ಬಹಳ ಪ್ರಿಯ. ಆದರೆ, ಧರ್ಮವನ್ನು ರಾಜಕೀಯಕ್ಕೆ ಬಳಸುವುದು ತಪ್ಪು” ಎಂದು ಅವರು ಹೇಳಿದರು.

ಅಮೇಥಿಯೊಂದಿಗೆ ತಮ್ಮ ಕುಟುಂಬದ ಒಡನಾಟವನ್ನು ಸ್ಮರಿಸಿದ ಅವರು, “ಇಲ್ಲಿನ ರಾಜಕೀಯದ ಸಂಪ್ರದಾಯವು ಜನರಿಗೆ ಸೇವೆ ಸಲ್ಲಿಸುವುದು ನಾಯಕನ ಧರ್ಮವಾಗಿದೆ ಮತ್ತು ಅದನ್ನು ಅವರ ಕುಟುಂಬದ ಎಲ್ಲಾ ಸದಸ್ಯರು ಅನುಸರಿಸುತ್ತಾರೆ” ಎಂದು ಹೇಳಿದರು.

ಇದನ್ನೂ ಓದಿ; ‘ಆರೋಪಗಳನ್ನು ಹೊರಿಸಲು ಸಾಕಷ್ಟು ವಸ್ತುಗಳಿವೆ..’; ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಕೇಸ್ ದಾಖಲಿಸುವಂತೆ ಸೂಚಿಸಿದ ದೆಹಲಿ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...