Homeಕರ್ನಾಟಕಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆ ಪ್ರಮಾಣ ಹೆಚ್ಚಿಸಲು ಸೂಚನೆ : ಸಿಎಂ ಸಿದ್ದರಾಮಯ್ಯ

ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆ ಪ್ರಮಾಣ ಹೆಚ್ಚಿಸಲು ಸೂಚನೆ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ.10ಕ್ಕೂ ಮೀರುವಂತೆ ನೋಡಿಕೊಳ್ಳಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು (ಜ.28) ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆ ನಡೆಸಲಾಗಿದೆ. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ. 10 ರಷ್ಟಿದ್ದುದು, ಪ್ರಸ್ತುತ ಶೇ. 7ಕ್ಕೆ ಇಳಿದಿದೆ. ಶಿಕ್ಷೆಯ ಪ್ರಮಾಣವನ್ನು ಶೇ. 10ಕ್ಕೆ ಹೆಚ್ಚಿಸುವಂತೆ ಸೂಚಿಸಲಾಗಿದೆ ಎಂದರು.

ಈ ಬಗ್ಗೆ ಸರ್ಕಾರಿ ಪ್ರಾಸಿಕ್ಯೂಟರ್‌ಗಳು ಹಾಗೂ ಪೊಲೀಸ್ ಇಲಾಖೆಯವರು ಪರಿಶೀಲನಾ ಸಭೆ ನಡೆಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಮೂರು ತಿಂಗಳಿಗೊಮ್ಮೆ ತಪ್ಪದೇ ಪ್ರಗತಿ ಪರಿಶೀಲನಾ ಸಭೆ ನಡೆಸಲು, ಈ ಬಗ್ಗೆ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದರು.

ಬ್ಯಾಕ್ ಲಾಗ್ ಹಾಗೂ ಮುಂಬಡ್ತಿ

ಬ್ಯಾಕ್ ಲಾಗ್ ಹಾಗೂ ಬಡ್ತಿ ವಿಚಾರದಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸಭೆಯಲ್ಲಿ ಸಮಿತಿ ಸದಸ್ಯರು ಚರ್ಚಿಸಿದ್ದು, ಬ್ಯಾಕ್ ಲಾಗ್ ಹಾಗೂ ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪರಿಶೀಲನಾ ಸಭೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ ಎಂದರು.

ಇಡಿ ನೋಟಿಸ್‌ಗೆ ಹೈಕೋರ್ಟ್ ತಡೆಯಾಜ್ಞೆ

ಇಡಿ ನೋಟಿಸ್ ಜಾರಿ ಮಾಡಿದ್ದು, ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತನಿಖೆ ನಡೆಯುತ್ತಿದ್ದು, ಸಿಬಿಐಗೆ ಪ್ರಕರಣವನ್ನು ವಹಿಸುವ ಬಗ್ಗೆ ಚರ್ಚೆ ನಡೆಯುತ್ತಿದ್ದು ವಾದ ನಡೆಯುವ ಹಂತದಲ್ಲಿದೆ. ಈ ಹಂತದಲ್ಲಿ ಆತುರ ಮಾಡುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ ಎಂದು ಹೇಳಿದರು.

ಮುಡಾ ಪ್ರಕರಣ ರಾಜಕೀಯ ಪ್ರೇರಿತ

ಇಡಿ ನೋಟಿಸ್ ರಾಜಕೀಯ ಪ್ರೇರಿತವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ” ಎಂದರು.

ನ್ಯಾಯ ದೊರೆಯುವ ಭರವಸೆ

ಪ್ರಕರಣವನ್ನು ಸಿಬಿಐಗೆ ವಹಿಸಬಹುದೆಂಬ ಆತಂಕವಿದೆಯೇ? ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, “ನನಗೇಕೆ ಆತಂಕವಾಗಬೇಕು. ನ್ಯಾಯ ಸಿಗುತ್ತದೆ ಎಂಬ ಭರವಸೆ ನಮಗಿದೆ” ಎಂದರು. ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟಲು ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ನಾವು ಬಸವಣ್ಣನವರ ಅನುಯಾಯಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆಯವರು ಕುಂಭ ಮೇಳದಲ್ಲಿ ಮಿಂದೆದ್ದರೆ ಬಡತನ ಹೋಗುವುದಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, “ಗಂಗೆಯಲ್ಲಿ ಸ್ನಾನ ಮಾಡಿದರೆ ಪಾಪ ಪರಿಹಾರವಾಗುತ್ತದೆ ಎಂಬ ನಂಬಿಕೆ ಇದೆ. ನಾವು ಬಸವಣ್ಣನವರ ಅನುಯಾಯಿಗಳು, ‘ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ’ ಎಂಬ ಬಸವಣ್ಣನವರ ಮಾತಿನಲ್ಲಿ ನಮಗೆ ನಂಬಿಕೆ ಇದೆ ಎಂದರು.

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ : ಅಧಿಕಾರಿಗಳ ವಿರುದ್ಧ ಗರಂ ಆದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...