Homeಕರ್ನಾಟಕರಂಗಾಯಣದಲ್ಲಿ ಪ್ರದರ್ಶನಗೊಂಡ ನಾಟಕದಲ್ಲಿ ಸಿದ್ದರಾಮಯ್ಯನವರ ಅವಹೇಳನ: ದೂರು ದಾಖಲು

ರಂಗಾಯಣದಲ್ಲಿ ಪ್ರದರ್ಶನಗೊಂಡ ನಾಟಕದಲ್ಲಿ ಸಿದ್ದರಾಮಯ್ಯನವರ ಅವಹೇಳನ: ದೂರು ದಾಖಲು

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರನ್ನೂ ಉದ್ದೇಶಪೂರ್ವಕವಾಗಿ ನಾಟಕದಲ್ಲಿ ಗೇಲಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಕೋಮುದ್ವೇಷ, ಟಿಪ್ಪು ಮೇಲಿನ ಅಸಹನೆಯ ಮೂಲಕ ಸುದ್ದಿಯಲ್ಲಿರುವ ಮೈಸೂರು ರಂಗಾಯಣ ಮತ್ತೆ ವಿವಾದದ ಕೇಂದ್ರ ಬಿಂದುವಾಗಿದೆ. ಮಾಜಿ ಮುಖ್ಯಮಂತ್ರಿ, ಅಹಿಂದ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಕುರಿತು ಅವಹೇಳನಕಾರಿಯಾಗಿ ನಾಟಕವನ್ನು ತಿರುಚಿ ಪ್ರದರ್ಶಿಸಿದ ಆರೋಪಕ್ಕೆ ಗುರಿಯಾಗಿದ್ದು, ಈ ಕುರಿತು ದೂರು ದಾಖಲಿಸಲಾಗಿದೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರರ ‘ಸಾಂಬಶಿವ ಪ್ರಹಸನ’ ನಾಟಕವನ್ನು ಕಾರ್ತಿಕ್ ಉಪಮನ್ಯು ನಿರ್ದೇಶನದಲ್ಲಿ ‘ನಾಗರತ್ನಮ್ಮ’ ರಂಗ ಕಾರ್ಯಾಗಾರದ ಶಿಬಿರಾರ್ಥಿಗಳು ಶನಿವಾರ ಪ್ರದರ್ಶಿಸುತ್ತಿದ್ದರು. ಈ ನಾಟಕದಲ್ಲಿ ಕೆಲವು ಅಂಶಗಳನ್ನು ತಿರುಚಿ ಸಿದ್ದರಾಮಯ್ಯನವರನ್ನು ಹೀಯಾಳಿಸಲಾಗಿದೆ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರನ್ನೂ ಗೇಲಿ ಮಾಡಲಾಗಿದೆ ಎಂದು ಇಲ್ಲಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಂಗಾಯಣದ ರಂಗ ಕಾರ್ಯಾಗಾರದ ಶಿಬಿರಾರ್ಥಿಗಳ ವಿರುದ್ಧ ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷರಾದ ಬಿ.ಸುಬ್ರಹ್ಮಣ್ಯ ಅವರು ದೂರು ನೀಡಿದ್ದಾರೆ. ಉದ್ದೇಶಪೂರ್ವಕವಾಗಿ ನಾಟಕದೊಳಗೆ ತುರುಕಿರುವ ಅಂಶಗಳನ್ನು ಪ್ರೇಕ್ಷಕರು ಪ್ರಶ್ನಿಸುವ ಘಟನೆಯೂ ನಡೆದಿದೆ.

ಸುಬ್ರಹ್ಮಣ್ಯ ಅವರ ದೂರಿನಲ್ಲಿ ಏನಿದೆ?

“ರಂಗಾಯಣದ ಭೂಮಿಗೀತ ರಂಗಮಂದಿರದಲ್ಲಿ ಡಿ.31ರ ಸಂಜೆ 6.30ಕ್ಕೆ ‘ಸಾಂಬಶಿವನ ಪ್ರಹಸನ’ ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ. ಚಂದ್ರಶೇಖರ ಕಂಬಾರರು ರಚಿಸಿರುವ, ಕಾರ್ತಿಕ್ ಉಪಮನ್ಯು ಎಸ್. ನಿರ್ದೇಶನದಲ್ಲಿ ಮೂಡಿಬಂದ ಈ ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ತಮ್ಮ ಆಡಳಿತಾವಧಿಯಲ್ಲಿ ರಾಜ್ಯದ ಜನತೆಗೆ ನೀಡಿದ ಹಲವು ಭಾಗ್ಯಗಳನ್ನು ವ್ಯಂಗ್ಯ ಮಾಡಿ, ಕಾಲ್ಪನಿಕವಾಗಿ ರಾಜನ ಪಾತ್ರವನ್ನು ಸೃಷ್ಟಿಸಿ ಆತನನ್ನು ಸಿದ್ರಾಮಯ್ಯನವರಿಗೆ ಹೋಲಿಸಿ ಅವಹೇಳನ ಮಾಡಲಾಗಿದೆ” ಎಂದು ಬಿ.ಸುಬ್ರಹ್ಮಣ್ಯ ಅವರು ತಿಳಿಸಿದ್ದಾರೆ.

“‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಶಾದಿ ಭಾಗ್ಯ’ಗಳನ್ನು ಕೊಟ್ಟು ಜನರನ್ನು ಅವರು ಸೋಂಬೇರಿಗಳನ್ನಾಗಿ ಮಾಡಿದರು. ಅದೇ ರೀತಿ ‘ಕಳ್ಳತನ ಭಾಗ್ಯ’ವನ್ನು ನೀಡಬೇಕಾಗಿತ್ತು ಎನ್ನುವ ಸಂಭಾಷಣೆಯನ್ನು ರಂಗದ ಮೇಲೆ ಪ್ರಸ್ತುತಪಡಿಸಲಾಗಿತ್ತು. ಕಾರ್ಯಕ್ರಮಗಳಲ್ಲಿ ನಿದ್ರೆ ಹೊಡೆಯುವುದು, ಗೊರಕೆ ಹೊಡೆದು ಅವರಿಂದ ರಾಜ್ಯವೇ ಹಾಳಾಗಿದೆ. ನಿಮಗೆ ಈ ಭಾರಿ ಬಾದಾಮಿಯೂ ಕೂಡ ಸಿಗುವುದಿಲ್ಲ ಎಂದು ಸೇವಕನ ಪಾತ್ರಧಾರಿಯಿಂದ ನಾಟಕದಲ್ಲಿ ಹೇಳಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷರಾದ ಬಿ.ಸುಬ್ರಹ್ಮಣ್ಯ

“ಇದು ನೇರವಾಗಿ ಸಿದ್ದರಾಮಯ್ಯನವರಿಗೆ ಹೋಲಿಕೆ ಮಾಡಲಾಗಿದೆ. ಹಾಗೂ ಕೇಡಿ ಆಂಕಲ್ ಎಂದು ಮಂತ್ರಿಯ ಪಾತ್ರವನ್ನು ಸೃಷ್ಟಿಸಿ ಅದರಲ್ಲಿ ಕಳ್ಳತನ ಮಾಡಿ ಕೊಳ್ಳೆ ಹೊಡೆಯುತ್ತಿದ್ದಾನೆ ಎಂದು ಹೇಳಿಸಲಾಗಿದೆ. ಇದೂ ಕೂಡ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ನೇ ಹೋಲುವಂತೆ ಪಾತ್ರ ಸೃಷ್ಟಿಸಲಾಗಿದೆ ಎಂದು ನಾಟಕ ವೀಕ್ಷಿಸಲು ಹೋಗಿದ್ದ ಪ್ರೇಕ್ಷಕರು ನನ್ನ ಗಮನಕ್ಕೆ ತಂದರು. ಅಷ್ಟೊತ್ತಿಗಾಗಲೇ ಸಾಮಾಜಿಕ ಜಾಲತಾಣ ಮತ್ತು ಸುದ್ದಿಮಾಧ್ಯಮಗಳಲ್ಲಿಯೂ ಈ ವಿಚಾರ ಪ್ರಸಾರವಾಗಿತ್ತು” ಎಂದು ಮಾಹಿತಿ ನೀಡಿದ್ದಾರೆ.

“ಆ ನಂತರ ನಾನು ಸ್ಥಳಕ್ಕೆ ಹೋಗಿ ಸತ್ಯಾಸತ್ಯತೆ ಬಗ್ಗೆ ರಂಗಾಯಣ ಉಪನಿರ್ದೇಶಕರಾದ ನಿರ್ಮಲ ಮಠಪತಿ ಅವರನ್ನು ಪ್ರಶ್ನಿಸಿದೆ. ಅವರು ಅದಕ್ಕೆ, ‘ಈ ವಿಚಾರ ನನ್ನ ಗಮನಕ್ಕೂ ಬಂದಿದೆ. ಈ ನಾಟಕ ನಿರ್ದೇಶಕರು ವಿಷಾದ ವ್ಯಕ್ತಪಡಿಸಿದ್ದಾರೆ’ ಎಂದು ಜವಾಬು ನೀಡಿದರು. ಹಿಂದುಳಿದ ನಾಯಕರೂ ಹಾಗೂ ನಾಡಿನ ಅಭಿವೃದ್ಧಿಯ ಹರಿಕಾರರು ಆದ ಸಿದ್ದರಾಮಯ್ಯ ಅವರನ್ನು ಹೀಯಾಳಿಸಿರುವುದು ನಮ್ಮ ಸಮಾಜಕ್ಕೆ ನೋವು ತಂದಿದೆ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ನು ಕೇಡಿ ಆಂಕಲ್ ಎಂದು ಸಂಬೋಧಿಸಿರುವುದು ಅದು ಕೂಡ ಬೇಸರದ ಸಂಗತಿಯಾಗಿದೆ” ಎಂದಿದ್ದಾರೆ.

“ಜಾತಿ ಜಾತಿಗಳ ನಡುವೆ ಮತ್ತು ಧರ್ಮಗಳ ನಡುವೆ ದ್ವೇಷ ಹುಟ್ಟುವಂತೆ ಮಾಡಿ ಸಮಾಜದಲ್ಲಿನ ಅಶಾಂತಿ ಸೃಷ್ಟಿಸಿ ಗಲಾಟೆ ಉಂಟು ಮಾಡುವ ರೀತಿಯಲ್ಲಿ ಪ್ರದರ್ಶನ ಮಾಡಿ ಸಮಾಜದಲ್ಲಿ ಗಲಾಟೆ ಮತ್ತು ಅಶಾಂತಿ ಉಂಟು ಮಾಡುವಂತೆ ನಡೆದುಕೊಂಡಿರುವುದು ಮೇಲ್ನೋಟಕ್ಕೆ ಸಾಬೀತಾಗಿರುತ್ತದೆ. ಇಷ್ಟೆಲ್ಲಾ ಪ್ರಮಾದ ಉಂಟು ಮಾಡಿರುವ ಇಡೀ ನಾಟಕ ತಂಡದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಮ್ಮಲ್ಲಿ ಮನವಿ ಮಾಡುತ್ತೇನೆ” ಎಂದಿದ್ದಾರೆ.

“ನನ್ನ ಗಮನಕ್ಕೆ ಬಂದಂತಹ ವಿಷಯಗಳನ್ನು ತಿಳಿಸಿದ್ದೇನೆ. ಆನಂತರ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಚಾರಿತ್ರ್ಯವಧೆಗೆ ಸಂಬಂಧಿಸಿದಂತೆ ಇನ್ನಿತರ ರೀತಿಗಳಲ್ಲಿ ನಡೆದುಕೊಂಡಿರುವ ಬಗ್ಗೆ ಮತ್ತಷ್ಟು ವಿಚಾರಗಳನ್ನು ನಾಟಕದಲ್ಲಿ ನಿರೂಪಿಸಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಕೃತಿ ವಿಮರ್ಶೆ: ಆರ್‌ಎಸ್‌ಎಸ್‌ ಜಾತಿ ರಾಜಕೀಯ ಕನಸುಗಳ ಸಾಕಾರಕ್ಕೆ ಟಿಪ್ಪು ಹೆಸರಲ್ಲಿ ನಕಲಿ ಇತಿಹಾಸ ಸೃಷ್ಟಿ!

‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಸುಬ್ರಹ್ಮಣ್ಯ ಅವರು, “ಮೂರು ದಶಕಗಳಲ್ಲಿ ಯಾವತ್ತೂ ರಂಗಾಯಣ ಈ ಪರಿಯ ವಿವಾದಗಳಿಗೆ ಗುರಿಯಾಗಿರಲಿಲ್ಲ. ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ದ್ವೇಷ ಹುಟ್ಟಿಹಾಕುವ ಕೆಲಸವನ್ನು ಈಗ ಮಾಡುತ್ತಿದೆ. ಯಾವುದೇ ಮುಖ್ಯಮಂತ್ರಿಯವರು ಇದ್ದಾಗಲೂ ಕೆಟ್ಟ ನಿರ್ದೇಶಕರನ್ನು ರಂಗಾಯಣಕ್ಕೆ ನೇಮಿಸಿರಲಿಲ್ಲ. ಆದರೆ ಅಡ್ಡಂಡ ಕಾರ್ಯಪ್ಪನವರು ಬಂದ ಮೇಲೆ ರಂಗಾಯಣ ವಿವಾದದ ಕೇಂದ್ರಬಿಂದುವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಕಂಬಾರರ ನಾಟಕದಲ್ಲಿ ಎಲ್ಲಿಯೂ ಈ ಸಾಲುಗಳು ಇಲ್ಲ. ಉದ್ದೇಶಪೂರ್ವಕವಾಗಿ ಸೇರಿಸಿ ಅವಹೇಳನ ಮಾಡಲಾಗಿದೆ. ಎಲ್ಲ ಒತ್ತಡಗಳನ್ನು ಬದಿಗೆ ಸರಿಸಿ ಪೊಲೀಸರು ಎಫ್‌ಐಆರ್‌ ದಾಖಲಿಸಲೇಬೇಕು. ಇಲ್ಲವಾದರೆ ಕೋರ್ಟ್ ಮೆಟ್ಟಿಲೇರುತ್ತೇನೆ” ಎಂದು ಎಚ್ಚರಿಸಿದ್ದಾರೆ.

ನಾಟಕದ ವೇಳೆಯೇ ಪ್ರತಿಭಟನೆ

ನಾಟಕ ಪ್ರದರ್ಶನವಾಗುತ್ತಿದ್ದ ಸಂದರ್ಭದಲ್ಲಿಯೇ ಪ್ರೇಕ್ಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಮೋಹನ್‌ ಎನ್ನುವವರು ಪ್ರದರ್ಶನದ ವೇಳೆಯೇ ಎದ್ದು ನಿಂತು, “ಭಾಗ್ಯಗಳನ್ನು ನೀಡಿ ಸೋಮಾರಿ ಮಾಡುತ್ತಿದ್ದೀರಿ, ಬರೀ ನಿದ್ದೆ ಮಾಡುತ್ತಿದ್ದೀರಿ ಎಂದೆಲ್ಲ ಹೇಳಿಸುವ ಮೂಲಕ ಸಿದ್ದರಾಮಯ್ಯ ಅವರನ್ನು ವ್ಯಂಗ್ಯ ಮಾಡುತ್ತಿದ್ದೀರಿ. ಮೂಲ ನಾಟಕದಲ್ಲಿ ಹೀಗಿದೆಯೇ? ದುರುದ್ದೇಶಪೂರ್ವಕವಾಗಿ ನಾಟಕ ರೂಪಿಸಿದ್ದೀರಿ” ಎಂದು ವೇದಿಕೆಗೇರಿ ಕಿಡಿಕಾರಿದ್ದರು. “ಐವತ್ತು ರೂಪಾಯಿ ಕೊಟ್ಟು ಬಂದಿರುವ ಕಲಾಭಿಮಾನಿ ನಾನು. ನನ್ನ ಪ್ರಶ್ನೆಗೆ ಉತ್ತರಿಸಬೇಕು” ಎಂದು ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅವರು ಸುಮ್ಮನೆ ವೇದಿಕೆ ಹತ್ತಿ ವಾದ‌ಮಾಡಿ ಬಂದಿದ್ದಾರೆ…. ಸಿದ್ದರಾಮಯ್ಯನವರನ್ನ ಅವಹೇಳನ‌ಮಾಡಿದವರನ್ನ ಕೆರ ತೆಗೆದುಕೊಂಡು ಹೊಡಿಬೇಕಾಗಿತ್ತು..

  2. Le nimage amdekar bandu savidanada arivu eddaru ennu indirect gi manusanskrti yruvadau bidta illa
    Neevu 3% navaru rss ,bajaragadal ,sreeramsene namm anna yenu kittigenakagalla
    Ee bari pakka congress gellatte modi basli amitsha badli
    E desha secular not a hindu country
    Non sense,ninna kathe mugitu

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...