Homeಕರ್ನಾಟಕರಂಗಾಯಣದಲ್ಲಿ ಪ್ರದರ್ಶನಗೊಂಡ ನಾಟಕದಲ್ಲಿ ಸಿದ್ದರಾಮಯ್ಯನವರ ಅವಹೇಳನ: ದೂರು ದಾಖಲು

ರಂಗಾಯಣದಲ್ಲಿ ಪ್ರದರ್ಶನಗೊಂಡ ನಾಟಕದಲ್ಲಿ ಸಿದ್ದರಾಮಯ್ಯನವರ ಅವಹೇಳನ: ದೂರು ದಾಖಲು

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರನ್ನೂ ಉದ್ದೇಶಪೂರ್ವಕವಾಗಿ ನಾಟಕದಲ್ಲಿ ಗೇಲಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಕೋಮುದ್ವೇಷ, ಟಿಪ್ಪು ಮೇಲಿನ ಅಸಹನೆಯ ಮೂಲಕ ಸುದ್ದಿಯಲ್ಲಿರುವ ಮೈಸೂರು ರಂಗಾಯಣ ಮತ್ತೆ ವಿವಾದದ ಕೇಂದ್ರ ಬಿಂದುವಾಗಿದೆ. ಮಾಜಿ ಮುಖ್ಯಮಂತ್ರಿ, ಅಹಿಂದ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಕುರಿತು ಅವಹೇಳನಕಾರಿಯಾಗಿ ನಾಟಕವನ್ನು ತಿರುಚಿ ಪ್ರದರ್ಶಿಸಿದ ಆರೋಪಕ್ಕೆ ಗುರಿಯಾಗಿದ್ದು, ಈ ಕುರಿತು ದೂರು ದಾಖಲಿಸಲಾಗಿದೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರರ ‘ಸಾಂಬಶಿವ ಪ್ರಹಸನ’ ನಾಟಕವನ್ನು ಕಾರ್ತಿಕ್ ಉಪಮನ್ಯು ನಿರ್ದೇಶನದಲ್ಲಿ ‘ನಾಗರತ್ನಮ್ಮ’ ರಂಗ ಕಾರ್ಯಾಗಾರದ ಶಿಬಿರಾರ್ಥಿಗಳು ಶನಿವಾರ ಪ್ರದರ್ಶಿಸುತ್ತಿದ್ದರು. ಈ ನಾಟಕದಲ್ಲಿ ಕೆಲವು ಅಂಶಗಳನ್ನು ತಿರುಚಿ ಸಿದ್ದರಾಮಯ್ಯನವರನ್ನು ಹೀಯಾಳಿಸಲಾಗಿದೆ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರನ್ನೂ ಗೇಲಿ ಮಾಡಲಾಗಿದೆ ಎಂದು ಇಲ್ಲಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಂಗಾಯಣದ ರಂಗ ಕಾರ್ಯಾಗಾರದ ಶಿಬಿರಾರ್ಥಿಗಳ ವಿರುದ್ಧ ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷರಾದ ಬಿ.ಸುಬ್ರಹ್ಮಣ್ಯ ಅವರು ದೂರು ನೀಡಿದ್ದಾರೆ. ಉದ್ದೇಶಪೂರ್ವಕವಾಗಿ ನಾಟಕದೊಳಗೆ ತುರುಕಿರುವ ಅಂಶಗಳನ್ನು ಪ್ರೇಕ್ಷಕರು ಪ್ರಶ್ನಿಸುವ ಘಟನೆಯೂ ನಡೆದಿದೆ.

ಸುಬ್ರಹ್ಮಣ್ಯ ಅವರ ದೂರಿನಲ್ಲಿ ಏನಿದೆ?

“ರಂಗಾಯಣದ ಭೂಮಿಗೀತ ರಂಗಮಂದಿರದಲ್ಲಿ ಡಿ.31ರ ಸಂಜೆ 6.30ಕ್ಕೆ ‘ಸಾಂಬಶಿವನ ಪ್ರಹಸನ’ ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ. ಚಂದ್ರಶೇಖರ ಕಂಬಾರರು ರಚಿಸಿರುವ, ಕಾರ್ತಿಕ್ ಉಪಮನ್ಯು ಎಸ್. ನಿರ್ದೇಶನದಲ್ಲಿ ಮೂಡಿಬಂದ ಈ ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ತಮ್ಮ ಆಡಳಿತಾವಧಿಯಲ್ಲಿ ರಾಜ್ಯದ ಜನತೆಗೆ ನೀಡಿದ ಹಲವು ಭಾಗ್ಯಗಳನ್ನು ವ್ಯಂಗ್ಯ ಮಾಡಿ, ಕಾಲ್ಪನಿಕವಾಗಿ ರಾಜನ ಪಾತ್ರವನ್ನು ಸೃಷ್ಟಿಸಿ ಆತನನ್ನು ಸಿದ್ರಾಮಯ್ಯನವರಿಗೆ ಹೋಲಿಸಿ ಅವಹೇಳನ ಮಾಡಲಾಗಿದೆ” ಎಂದು ಬಿ.ಸುಬ್ರಹ್ಮಣ್ಯ ಅವರು ತಿಳಿಸಿದ್ದಾರೆ.

“‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಶಾದಿ ಭಾಗ್ಯ’ಗಳನ್ನು ಕೊಟ್ಟು ಜನರನ್ನು ಅವರು ಸೋಂಬೇರಿಗಳನ್ನಾಗಿ ಮಾಡಿದರು. ಅದೇ ರೀತಿ ‘ಕಳ್ಳತನ ಭಾಗ್ಯ’ವನ್ನು ನೀಡಬೇಕಾಗಿತ್ತು ಎನ್ನುವ ಸಂಭಾಷಣೆಯನ್ನು ರಂಗದ ಮೇಲೆ ಪ್ರಸ್ತುತಪಡಿಸಲಾಗಿತ್ತು. ಕಾರ್ಯಕ್ರಮಗಳಲ್ಲಿ ನಿದ್ರೆ ಹೊಡೆಯುವುದು, ಗೊರಕೆ ಹೊಡೆದು ಅವರಿಂದ ರಾಜ್ಯವೇ ಹಾಳಾಗಿದೆ. ನಿಮಗೆ ಈ ಭಾರಿ ಬಾದಾಮಿಯೂ ಕೂಡ ಸಿಗುವುದಿಲ್ಲ ಎಂದು ಸೇವಕನ ಪಾತ್ರಧಾರಿಯಿಂದ ನಾಟಕದಲ್ಲಿ ಹೇಳಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷರಾದ ಬಿ.ಸುಬ್ರಹ್ಮಣ್ಯ

“ಇದು ನೇರವಾಗಿ ಸಿದ್ದರಾಮಯ್ಯನವರಿಗೆ ಹೋಲಿಕೆ ಮಾಡಲಾಗಿದೆ. ಹಾಗೂ ಕೇಡಿ ಆಂಕಲ್ ಎಂದು ಮಂತ್ರಿಯ ಪಾತ್ರವನ್ನು ಸೃಷ್ಟಿಸಿ ಅದರಲ್ಲಿ ಕಳ್ಳತನ ಮಾಡಿ ಕೊಳ್ಳೆ ಹೊಡೆಯುತ್ತಿದ್ದಾನೆ ಎಂದು ಹೇಳಿಸಲಾಗಿದೆ. ಇದೂ ಕೂಡ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ನೇ ಹೋಲುವಂತೆ ಪಾತ್ರ ಸೃಷ್ಟಿಸಲಾಗಿದೆ ಎಂದು ನಾಟಕ ವೀಕ್ಷಿಸಲು ಹೋಗಿದ್ದ ಪ್ರೇಕ್ಷಕರು ನನ್ನ ಗಮನಕ್ಕೆ ತಂದರು. ಅಷ್ಟೊತ್ತಿಗಾಗಲೇ ಸಾಮಾಜಿಕ ಜಾಲತಾಣ ಮತ್ತು ಸುದ್ದಿಮಾಧ್ಯಮಗಳಲ್ಲಿಯೂ ಈ ವಿಚಾರ ಪ್ರಸಾರವಾಗಿತ್ತು” ಎಂದು ಮಾಹಿತಿ ನೀಡಿದ್ದಾರೆ.

“ಆ ನಂತರ ನಾನು ಸ್ಥಳಕ್ಕೆ ಹೋಗಿ ಸತ್ಯಾಸತ್ಯತೆ ಬಗ್ಗೆ ರಂಗಾಯಣ ಉಪನಿರ್ದೇಶಕರಾದ ನಿರ್ಮಲ ಮಠಪತಿ ಅವರನ್ನು ಪ್ರಶ್ನಿಸಿದೆ. ಅವರು ಅದಕ್ಕೆ, ‘ಈ ವಿಚಾರ ನನ್ನ ಗಮನಕ್ಕೂ ಬಂದಿದೆ. ಈ ನಾಟಕ ನಿರ್ದೇಶಕರು ವಿಷಾದ ವ್ಯಕ್ತಪಡಿಸಿದ್ದಾರೆ’ ಎಂದು ಜವಾಬು ನೀಡಿದರು. ಹಿಂದುಳಿದ ನಾಯಕರೂ ಹಾಗೂ ನಾಡಿನ ಅಭಿವೃದ್ಧಿಯ ಹರಿಕಾರರು ಆದ ಸಿದ್ದರಾಮಯ್ಯ ಅವರನ್ನು ಹೀಯಾಳಿಸಿರುವುದು ನಮ್ಮ ಸಮಾಜಕ್ಕೆ ನೋವು ತಂದಿದೆ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ನು ಕೇಡಿ ಆಂಕಲ್ ಎಂದು ಸಂಬೋಧಿಸಿರುವುದು ಅದು ಕೂಡ ಬೇಸರದ ಸಂಗತಿಯಾಗಿದೆ” ಎಂದಿದ್ದಾರೆ.

“ಜಾತಿ ಜಾತಿಗಳ ನಡುವೆ ಮತ್ತು ಧರ್ಮಗಳ ನಡುವೆ ದ್ವೇಷ ಹುಟ್ಟುವಂತೆ ಮಾಡಿ ಸಮಾಜದಲ್ಲಿನ ಅಶಾಂತಿ ಸೃಷ್ಟಿಸಿ ಗಲಾಟೆ ಉಂಟು ಮಾಡುವ ರೀತಿಯಲ್ಲಿ ಪ್ರದರ್ಶನ ಮಾಡಿ ಸಮಾಜದಲ್ಲಿ ಗಲಾಟೆ ಮತ್ತು ಅಶಾಂತಿ ಉಂಟು ಮಾಡುವಂತೆ ನಡೆದುಕೊಂಡಿರುವುದು ಮೇಲ್ನೋಟಕ್ಕೆ ಸಾಬೀತಾಗಿರುತ್ತದೆ. ಇಷ್ಟೆಲ್ಲಾ ಪ್ರಮಾದ ಉಂಟು ಮಾಡಿರುವ ಇಡೀ ನಾಟಕ ತಂಡದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಮ್ಮಲ್ಲಿ ಮನವಿ ಮಾಡುತ್ತೇನೆ” ಎಂದಿದ್ದಾರೆ.

“ನನ್ನ ಗಮನಕ್ಕೆ ಬಂದಂತಹ ವಿಷಯಗಳನ್ನು ತಿಳಿಸಿದ್ದೇನೆ. ಆನಂತರ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಚಾರಿತ್ರ್ಯವಧೆಗೆ ಸಂಬಂಧಿಸಿದಂತೆ ಇನ್ನಿತರ ರೀತಿಗಳಲ್ಲಿ ನಡೆದುಕೊಂಡಿರುವ ಬಗ್ಗೆ ಮತ್ತಷ್ಟು ವಿಚಾರಗಳನ್ನು ನಾಟಕದಲ್ಲಿ ನಿರೂಪಿಸಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಕೃತಿ ವಿಮರ್ಶೆ: ಆರ್‌ಎಸ್‌ಎಸ್‌ ಜಾತಿ ರಾಜಕೀಯ ಕನಸುಗಳ ಸಾಕಾರಕ್ಕೆ ಟಿಪ್ಪು ಹೆಸರಲ್ಲಿ ನಕಲಿ ಇತಿಹಾಸ ಸೃಷ್ಟಿ!

‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಸುಬ್ರಹ್ಮಣ್ಯ ಅವರು, “ಮೂರು ದಶಕಗಳಲ್ಲಿ ಯಾವತ್ತೂ ರಂಗಾಯಣ ಈ ಪರಿಯ ವಿವಾದಗಳಿಗೆ ಗುರಿಯಾಗಿರಲಿಲ್ಲ. ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ದ್ವೇಷ ಹುಟ್ಟಿಹಾಕುವ ಕೆಲಸವನ್ನು ಈಗ ಮಾಡುತ್ತಿದೆ. ಯಾವುದೇ ಮುಖ್ಯಮಂತ್ರಿಯವರು ಇದ್ದಾಗಲೂ ಕೆಟ್ಟ ನಿರ್ದೇಶಕರನ್ನು ರಂಗಾಯಣಕ್ಕೆ ನೇಮಿಸಿರಲಿಲ್ಲ. ಆದರೆ ಅಡ್ಡಂಡ ಕಾರ್ಯಪ್ಪನವರು ಬಂದ ಮೇಲೆ ರಂಗಾಯಣ ವಿವಾದದ ಕೇಂದ್ರಬಿಂದುವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಕಂಬಾರರ ನಾಟಕದಲ್ಲಿ ಎಲ್ಲಿಯೂ ಈ ಸಾಲುಗಳು ಇಲ್ಲ. ಉದ್ದೇಶಪೂರ್ವಕವಾಗಿ ಸೇರಿಸಿ ಅವಹೇಳನ ಮಾಡಲಾಗಿದೆ. ಎಲ್ಲ ಒತ್ತಡಗಳನ್ನು ಬದಿಗೆ ಸರಿಸಿ ಪೊಲೀಸರು ಎಫ್‌ಐಆರ್‌ ದಾಖಲಿಸಲೇಬೇಕು. ಇಲ್ಲವಾದರೆ ಕೋರ್ಟ್ ಮೆಟ್ಟಿಲೇರುತ್ತೇನೆ” ಎಂದು ಎಚ್ಚರಿಸಿದ್ದಾರೆ.

ನಾಟಕದ ವೇಳೆಯೇ ಪ್ರತಿಭಟನೆ

ನಾಟಕ ಪ್ರದರ್ಶನವಾಗುತ್ತಿದ್ದ ಸಂದರ್ಭದಲ್ಲಿಯೇ ಪ್ರೇಕ್ಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಮೋಹನ್‌ ಎನ್ನುವವರು ಪ್ರದರ್ಶನದ ವೇಳೆಯೇ ಎದ್ದು ನಿಂತು, “ಭಾಗ್ಯಗಳನ್ನು ನೀಡಿ ಸೋಮಾರಿ ಮಾಡುತ್ತಿದ್ದೀರಿ, ಬರೀ ನಿದ್ದೆ ಮಾಡುತ್ತಿದ್ದೀರಿ ಎಂದೆಲ್ಲ ಹೇಳಿಸುವ ಮೂಲಕ ಸಿದ್ದರಾಮಯ್ಯ ಅವರನ್ನು ವ್ಯಂಗ್ಯ ಮಾಡುತ್ತಿದ್ದೀರಿ. ಮೂಲ ನಾಟಕದಲ್ಲಿ ಹೀಗಿದೆಯೇ? ದುರುದ್ದೇಶಪೂರ್ವಕವಾಗಿ ನಾಟಕ ರೂಪಿಸಿದ್ದೀರಿ” ಎಂದು ವೇದಿಕೆಗೇರಿ ಕಿಡಿಕಾರಿದ್ದರು. “ಐವತ್ತು ರೂಪಾಯಿ ಕೊಟ್ಟು ಬಂದಿರುವ ಕಲಾಭಿಮಾನಿ ನಾನು. ನನ್ನ ಪ್ರಶ್ನೆಗೆ ಉತ್ತರಿಸಬೇಕು” ಎಂದು ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅವರು ಸುಮ್ಮನೆ ವೇದಿಕೆ ಹತ್ತಿ ವಾದ‌ಮಾಡಿ ಬಂದಿದ್ದಾರೆ…. ಸಿದ್ದರಾಮಯ್ಯನವರನ್ನ ಅವಹೇಳನ‌ಮಾಡಿದವರನ್ನ ಕೆರ ತೆಗೆದುಕೊಂಡು ಹೊಡಿಬೇಕಾಗಿತ್ತು..

  2. Le nimage amdekar bandu savidanada arivu eddaru ennu indirect gi manusanskrti yruvadau bidta illa
    Neevu 3% navaru rss ,bajaragadal ,sreeramsene namm anna yenu kittigenakagalla
    Ee bari pakka congress gellatte modi basli amitsha badli
    E desha secular not a hindu country
    Non sense,ninna kathe mugitu

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...