Homeಕರ್ನಾಟಕಅಂಬೇಡ್ಕರ್‌ ಕುರಿತು ಅವಹೇಳನ: ಜೈನ್‌ ವಿವಿಯಲ್ಲಿ 6 ವಿದ್ಯಾರ್ಥಿಗಳು ಸಸ್ಪೆಂಡ್

ಅಂಬೇಡ್ಕರ್‌ ಕುರಿತು ಅವಹೇಳನ: ಜೈನ್‌ ವಿವಿಯಲ್ಲಿ 6 ವಿದ್ಯಾರ್ಥಿಗಳು ಸಸ್ಪೆಂಡ್

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ದಲಿತರ ಕುರಿತು ಅವಹೇಳನಕಾರಿಯಾಗಿ ಸ್ಕಿಟ್ ಪ್ರದರ್ಶನ ಮಾಡಿದ ಬೆಂಗಳೂರಿನ ಜೈನ್ ಯೂನಿವರ್ಸಿಟಿ ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನ ಆರು ವಿದ್ಯಾರ್ಥಿಗಳನ್ನು ಸಂಸ್ಥೆ ಅಮಾನತು ಮಾಡಿದೆ.

ಘಟನೆಯ ಕುರಿತು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಆರು ವಿದ್ಯಾರ್ಥಿಗಳನ್ನು ವಿವಿ ಅಮಾನತು ಮಾಡಿದೆ. ಈ ವಿಷಯದ ಕುರಿತು ತನಿಖೆ ಮಾಡಲು ಯುಜಿಸಿ ಮಾರ್ಗಸೂಚಿಗಳ ಪ್ರಕಾರ ವಿಶ್ವವಿದ್ಯಾಲಯವು ತಜ್ಞರನ್ನು ಒಳಗೊಂಡ ಶಿಸ್ತು ಸಮಿತಿಯನ್ನು ರಚಿಸಿದೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಮತ್ತೊಂದೆಡೆ ವಿವಿಯ ವಿರುದ್ಧ ಬೆಂಗಳೂರು ನಗರದ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫೆ.20ರವರೆಗೆ ಕಾಲೇಜು ಆಯೋಜಿಸಿದ್ದ ಯುವಜನೋತ್ಸವದ ಅಂಗವಾಗಿ ವಿದ್ಯಾರ್ಥಿಗಳು ಪ್ರದರ್ಶನ ನೀಡುತ್ತಿದ್ದರು. ಘಟನೆ ಗುರುವಾರ ಬೆಳಕಿಗೆ ಬಂದಿದೆ.

ದಿ ಡೆಲ್ರಾಯ್ಸ್ ಬಾಯ್ಸ್ ತಂಡ ಪ್ರದರ್ಶಿಸಿದ ಸ್ಕಿಟ್ ನಲ್ಲಿ, ಜಾತಿವಾದಿ ಸಂಭಾಷಣೆಗಳಿದ್ದವು, ಭಾರತೀಯ ಸಂವಿಧಾನದ ಶಿಲ್ಪಿ ಮತ್ತು ರಾಷ್ಟ್ರನಾಯಕ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಗುರಿಯಾಗಿಸಿಕೊಂಡು ಅವಹೇಳನ ಮಾಡಿ ಅಸ್ಪೃಶ್ಯತೆ ಪದವನ್ನು ಬಳಸಲಾಗಿತ್ತು. ಮ್ಯಾಡ್ ಆಡ್ಸ್ ಎಂಬ ಕಾರ್ಯಕ್ರಮದಲ್ಲಿ ಹಾಸ್ಯಮಯ ರೀತಿಯಲ್ಲಿ ಕಾಲ್ಪನಿಕ ಉತ್ಪನ್ನಗಳನ್ನು ಜಾಹೀರಾತು ಮಾಡುವ ಕುರಿತು ಸ್ಕಿಟ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಈ ಬಗ್ಗೆ ದಲಿತ ಸಂಘಟನೆಗಳ ಸದಸ್ಯರು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಮತ್ತು ಸ್ಕಿಟ್ ಮಾಡಿರುವ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯೂ ದೂರು ನೀಡಿರುವ ಮಾಹಿತಿ ಲಭ್ಯವಾಗಿದೆ. ಎಫ್‌ಐಆರ್‌ ದಾಖಲಾಗಿರುವ ಕುರಿತು ಸಿದ್ದಾಪುರ ಪೊಲೀಸರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

(ಎಫ್‌ಐಆರ್‌ ಕುರಿತು ಹೆಚ್ಚಿನ ಮಾಹಿತಿ ಸಿಕ್ಕಲ್ಲಿ ಸುದ್ದಿ ಅಪ್‌ಡೇಟ್ ಮಾಡಲಾಗುವುದು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಬುರ್ಖಾ ಧರಿಸಿ ಧುರಂಧರ್ ಹಾಡಿಗೆ ನೃತ್ಯ; ಹುಡುಗರ ಪುಂಡಾಟಕ್ಕೆ ಆಕ್ರೋಶ

ಧುರಂಧರ್ ಚಿತ್ರದ ಹಾಡಿಗೆ ಬುರ್ಖಾ ಧರಿಸಿ ನೃತ್ಯ ಮಾಡಿದ ಯುವಕರು ಇಸ್ಲಾಮಿಕ್ ಉಡುಗೆಯನ್ನು ಬಹಿರಂಗವಾಗಿ ಅಪಹಾಸ್ಯ ಮಾಡಿದ್ದಾರೆ ಎಂಬ ಕಾರಣಕ್ಕೆ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಶಾಲಾ ಕಾರ್ಯಕ್ರಮವೊಂದರಲ್ಲಿ ಈ...

ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಝಿಯಾ ಅಂತ್ಯಕ್ರಿಯೆ : ಭಾರತದಿಂದ ಸಚಿವ ಜೈಶಂಕರ್ ಭಾಗಿ

ಮಂಗಳವಾರ (ಡಿ.30) ನಿಧನರಾದ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ಅವರ ಅಂತ್ಯಕ್ರಿಯೆ ಬುಧವಾರ (ಡಿ.31) ಢಾಕಾದಲ್ಲಿ ನಡೆಯಿತು. ಭಾರತದಿಂದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್ ಪಾಲ್ಗೊಂಡು ಪ್ರಧಾನಿ ಮೋದಿ...

ಇಂದೋರ್| ಕಲುಷಿತ ನೀರು ಸೇವಿಸಿ ಏಳು ಜನರು ಸಾವು; ದೃಢಪಡಿಸಿದ ಮೇಯರ್

ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ಅತಿಸಾರ ಮತ್ತು ವಾಂತಿಯಿಂದ ಇದುವರೆಗೆ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಮೇಯರ್ ಪುಷ್ಯಮಿತ್ರ ಭಾರ್ಗವ ಬುಧವಾರ ದೃಢಪಡಿಸಿದರು. "ಭಾಗೀರಥಪುರ ಪ್ರದೇಶದಲ್ಲಿ ಅತಿಸಾರದಿಂದ ಮೂರು ಸಾವುಗಳು...

ಉತ್ತರ ಪ್ರದೇಶ| ಅಮೇಥಿಯಲ್ಲಿ 15 ವರ್ಷದ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಆರೋಪಿ ಬಂಧನ

ಅಮೇಥಿಯಲ್ಲಿ 15 ವರ್ಷದ ದಲಿತ ಬಾಲಕಿಯ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ವಶಕ್ಕೆ ಪಡೆದು...

ಚಲಿಸುತ್ತಿದ್ದ ವ್ಯಾನ್‌ನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ರಸ್ತೆಗೆ ಎಸೆದ ಪ್ರಕರಣ : ಇಬ್ಬರ ಬಂಧನ

ಚಲಿಸುತ್ತಿದ್ದ ವ್ಯಾನ್‌ನಲ್ಲಿ 25 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ನಂತರ ಆಕೆಯನ್ನು ರಸ್ತೆಗೆ ಎಸೆದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಫರೀದಾಬಾದ್‌ನಲ್ಲಿ ನಡೆದಿದ್ದು, ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು...

ವಶಪಡಿಸಿಕೊಂಡ 200 ಕೆ.ಜಿ ಗಾಂಜಾ ಇಲಿಗಳು ತಿಂದಿವೆ ಎಂದ ಪೊಲೀಸರು : ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ಮೂರು ವರ್ಷಗಳ ಹಿಂದೆ ಜಾರ್ಖಂಡ್ ಪೊಲೀಸರು ವಾಹನವೊಂದನ್ನು ತಡೆದು, ಅದರಿಂದ ಭಾರೀ ಪ್ರಮಾಣದ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡಿದ್ದರು. 2024ರಲ್ಲಿ ಈ ಪ್ರಕರಣದ ವಿಚಾರಣೆ ನಡೆಯುವಾಗ, ವಶಪಡಿಸಿಕೊಂಡ ಗಾಂಜಾವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿತ್ತು....

ಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ ಸಾಧ್ಯತೆ

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ದೇಶದ ವಿವಿಧ ನಗರಗಳಲ್ಲಿ ಮುಷ್ಕರ ನಡೆಸಿರುವ ಗಿಗ್‌ ಕಾರ್ಮಿಕರು, ಹೊಸ ವರ್ಷದ ಸಂಜೆಯಾದ ಇಂದು (ಡಿ.31) ಮತ್ತೊಮ್ಮೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ನ್ಯಾಯಯುತ ಮತ್ತು...

ಉತ್ತರಾಖಂಡ: ಜಲವಿದ್ಯುತ್ ಯೋಜನೆಯ ಸುರಂಗದೊಳಗೆ ಎರಡು ಲೋಕೋ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ

ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯ ವಿಷ್ಣುಗಢ-ಪಿಪಲ್ಕೋಟಿ ಜಲ ವಿದ್ಯುತ್ ಯೋಜನೆಯ ಸುರಂಗದ ಪಿಪಲ್ಕೋಟಿ ಸುರಂಗದೊಳಗೆ ಮಂಗಳವಾರ ಸಂಜೆ ಕಾರ್ಮಿಕರು ಮತ್ತು ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಲೋಕೋ ರೈಲು, ಸರಕು ರೈಲಿಗೆ ಡಿಕ್ಕಿ ಹೊಡೆದು ಸುಮಾರು...

ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಲು ಆಗ್ರಹ

ನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆಯ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಅನುಷ್ಠಾನ ತಡೆ ಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳವಾರ (ಡಿ.30)...

ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ವಿರೋಧಿಸಿ ಪ್ರತಿಭಟನೆ; ಧಾರವಾಡ ಕೃಷಿ ವಿವಿ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ರದ್ದು

ಧಾರವಾಡದ ಕೃಷಿ ವಿಶ್ವ ವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮಕ್ಕೆ ಹಿಂದುತ್ವ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ದಲಿತ ಸಂಘಟನೆ ಹಾಗೂ ಕೃಷಿ ವಿವಿ ಬೋರ್ಡ್ ಸದಸ್ಯರು ವಿವಿ...