Homeಮುಖಪುಟರಾಷ್ಟ್ರಪತಿ ಮುರ್ಮು ಕುರಿತು ಅವಹೇಳನ: ಟಿಎಂಸಿ ನಾಯಕ ಕ್ಷಮೆಯಾಚನೆ

ರಾಷ್ಟ್ರಪತಿ ಮುರ್ಮು ಕುರಿತು ಅವಹೇಳನ: ಟಿಎಂಸಿ ನಾಯಕ ಕ್ಷಮೆಯಾಚನೆ

ಮುರ್ಮು ಅವರ ಬಗ್ಗೆ ಆಕ್ಷೇಪಾರ್ಹವಾಗಿ ಬರೆದಿದ್ದ ವಿಶ್ವೇಶ್ವರ ಭಟ್ ಪ್ರಕರಣ ಚರ್ಚೆಯಲ್ಲಿರುವ ಹೊತ್ತಿನಲ್ಲಿ ಇಂತಹದ್ದೇ ಮತ್ತೊಂದು ಘಟನೆ ನಡೆದಿದೆ.

- Advertisement -
- Advertisement -

ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಅಖಿಲ್ ಗಿರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬೆನ್ನಲ್ಲೇ ಗಿರಿಯವರು ಶನಿವಾರ ಕ್ಷಮೆಯಾಚಿಸಿದ್ದಾರೆ.

ಪಶ್ಚಿಮ ಬಂಗಾಳದ ಕ್ಯಾಬಿನೆಟ್‌ನಲ್ಲಿ ಸಚಿವರಾಗಿದ್ದ ಗಿರಿ ಅವರು ಪಶ್ಚಿಮ ಬಂಗಾಳದ ನಂದಿಗ್ರಾಮ್‌ನಲ್ಲಿ ನಡೆದ ಸಭೆಯೊಂದರಲ್ಲಿ ನೀಡಿದ ಹೇಳಿಕೆ ವಿವಾದಕ್ಕೆ ಗುರಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಯಾರನ್ನೂ ಅವರ ನೋಟದಿಂದ ನಿರ್ಣಯಿಸುವುದಿಲ್ಲ, ನಾವು ರಾಷ್ಟ್ರಪತಿ ಕಚೇರಿಯನ್ನು ಗೌರವಿಸುತ್ತೇವೆ. ಆದರೆ ನಮ್ಮ ರಾಷ್ಟ್ರಪತಿಗಳು ಹೇಗೆ ಕಾಣುತ್ತಾರೆ?” ಎಂದು ಗಿರಿಯವರು ಪ್ರಶ್ನಿಸುತ್ತಿರುವುದು ವಿಡಿಯೊದಲ್ಲಿ ದಾಖಲಾಗಿತ್ತು.

“ಸಂವಿಧಾನ ಮತ್ತು ರಾಷ್ಟ್ರಪತಿ ಹುದ್ದೆಯನ್ನು ಗೌರವಿಸುತ್ತೇನೆ” ಎಂದಿರುವ ಗಿರಿ, ಶನಿವಾರ ಕ್ಷಮೆಯಾಚನೆ ಮಾಡಿದ್ದಾರೆ.

“ಕಳೆದ ಕೆಲವು ತಿಂಗಳುಗಳಿಂದ, ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ನನ್ನ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಅದು ನನಗೆ ಕೋಪವನ್ನುಂಟುಮಾಡಿದೆ” ಎಂದು ಗಿರಿ ತಮ್ಮ ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ನಂದಿಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾನು ಕೋಪದಲ್ಲಿ ಮಾತನಾಡಿರುವೆ. ‌ಆದರೆ ಭಾರತದ ರಾಷ್ಟ್ರಪತಿಗಳ ಬಗ್ಗೆ ನನಗೆ ಅಪಾರವಾದ ಗೌರವವಿದೆ. ನನ್ನ ಕಾಮೆಂಟ್‌ಗಳಿಗಾಗಿ ನಾನು ಕ್ಷಮೆಯಾಚಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯ ಹಲವಾರು ನಾಯಕರು ಗಿರಿ ಹೇಳಿಕೆಯನ್ನು, ತೃಣಮೂಲ ಕಾಂಗ್ರೆಸ್ ಅನ್ನು ಟೀಕಿಸಿದ್ದಾರೆ. ಮಮತಾ “ಬ್ಯಾನರ್ಜಿ ನೇತೃತ್ವದ ತೃಣಮೂಲ ಸರ್ಕಾರವು ಬುಡಕಟ್ಟು ವಿರೋಧಿಯಾಗಿದೆ” ಎಂದು ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ ಆರೋಪಿಸಿದ್ದಾರೆ.

“ಸಿಎಂ ಮಮತಾ ಬ್ಯಾನರ್ಜಿ ಯಾವಾಗಲೂ ಬುಡಕಟ್ಟು ವಿರೋಧಿಯಾಗಿದ್ದಾರೆ” ಎಂದು ಮಜುಂದಾರ್ ಟ್ವೀಟ್ ಮಾಡಿದ್ದಾರೆ.

ಏತನ್ಮಧ್ಯೆ, ಬಿಜೆಪಿ ಸಂಸದರಾದ ಸೌಮಿತ್ರಾ ಖಾನ್ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದು, ಗಿರಿಯವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ರಾಷ್ಟ್ರಪತಿಯವರ ಕುರಿತ ಗಿರಿಯವರ ಹೇಳಿಕೆಯು ದೇಶದ ನಾಗರಿಕರಿಗೆ ಮತ್ತು ಅದರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅವಮಾನವಾಗಿದೆ ಎಂದು ಸೌಮಿತ್ರಾ ಪತ್ರದಲ್ಲಿ ಬರೆದಿದ್ದಾರೆ.

“ಆದ್ದರಿಂದ ಈ ಹೇಯ ಕೃತ್ಯಕ್ಕಾಗಿ ಅಖಿಲ್ ಗಿರಿಯನ್ನು ತಕ್ಷಣವೇ ಬಂಧಿಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನಿಮ್ಮನ್ನು ವಿನಂತಿಸಲಾಗಿದೆ” ಎಂದು ಬಿಜೆಪಿ ಸಂಸದರು ಹೇಳಿದ್ದಾರೆ. “ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಏಕೆಂದರೆ ಸಮಾಜವು ಈ ರೀತಿಯ ಮನಸ್ಥಿತಿಯನ್ನು ಬಯಸುವುದಿಲ್ಲ” ಎಂದಿದ್ದಾರೆ.

ಕರ್ನಾಟಕದಲ್ಲಿಯೂ ಇದೇ ರೀತಿಯ ಪ್ರಕರಣ ಇತ್ತೀಚೆಗೆ ವರದಿಯಾಗಿತ್ತು. ರಾಷ್ಟ್ರಪತಿ ಮುರ್ಮು ಅವರ ಬಗ್ಗೆ ‘ವಿಶ್ವವಾಣಿ’ ಪತ್ರಿಕೆಯ ಸಂಪಾದಕ ಬರೆದಿದ್ದ ಸಾಲು ಟೀಕೆಗೆ ಗುರಿಯಾಗಿತ್ತು. ವರ್ಣವನ್ನು ಹೀಯಾಳಿಸಿ ಅಪಮಾನಿಸಿದ್ದ ಕರ್ನಾಟಕದ ಪ್ರಕರಣ ಚರ್ಚೆಯಲ್ಲಿರುವ ಹೊತ್ತಿನಲ್ಲಿಯೇ ಪಶ್ಚಿಮ ಬಂಗಾಳದಲ್ಲಿಯೂ ಇಂಥದ್ದೇ ಪ್ರಕರಣ ವರದಿಯಾಗಿದೆ.

ಇದನ್ನೂ ಓದಿರಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಸಂಸ್ಕಾರಿ ಬ್ರಾಹ್ಮಣರು ಎಂದಿದ್ದ ಶಾಸಕನಿಗೆ ಮತ್ತೆ ಟಿಕೆಟ್ ನೀಡಿದ ಬಿಜೆಪಿ

ತಮ್ಮ ಅಂಕಣ ಬರಹದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಬಣ್ಣವನ್ನು ಅವಮಾನಕರ ರೀತಿಯಲ್ಲಿ ಚಿತ್ರಿಸಿ ಜನಾಂಗೀಯ ನಿಂದನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವೇಶ್ವರ ಭಟ್, ರಾಷ್ಟ್ರೀಯ ಮಹಿಳಾ ಆಯೋಗದ ಎದುರು ಇತ್ತೀಚೆಗೆ ಹಾಜರಿದ್ದರು.

ಅವಹೇಳನಕಾರಿಯಾಗಿ ಬರೆದಿರುವುದನ್ನು ರಾಷ್ಟ್ರೀಯ ಮಹಿಳಾ ಆಯೋಗವು (NCW) ಗುರುತಿಸಿತ್ತು. ಈ ಕುರಿತು ಅಕ್ಟೋಬರ್ 26ರಂದು ವಿಚಾರಣೆಗೆ ಹಾಜರಾಗುವಂತೆ ಪತ್ರಕರ್ತ ವಿಶ್ವೇಶ್ವರ ಭಟ್‌ರವರಿಗೆ ನೋಟಿಸ್ ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಆಯೋಗದ ಮುಂದೆ ಹಾಜರಾದ ವಿಶ್ವೇಶ್ವರ ಭಟ್, “ಭಾರತದ ರಾಷ್ಟ್ರಪತಿಯವರನ್ನು ಅವಮಾನಿಸುವ ಯಾವುದೇ ದುರುದ್ದೇಶ ತನಗೆ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿ ಕ್ಷೆಮೆ ಯಾಚಿಸಿದ್ದಾರೆ, ಲಿಖಿತವಾಗಿಯೂ ಕ್ಷಮೆ ಕೇಳಿದ್ದಾರೆ” ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾರವರ ಹೇಳಿಕೆ ಉಲ್ಲೇಖಿಸಿ ‘ಪ್ರಜಾವಾಣಿ’ ವರದಿ ಮಾಡಿತ್ತು. ಆದರೆ ಕ್ಷಮೆಯಾಚಿಸಿಲ್ಲ ಎಂದು ವಿಶ್ವೇಶ್ವರ್‌ ಭಟ್ ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...