Homeಮುಖಪುಟರಾಷ್ಟ್ರಪತಿ ಮುರ್ಮು ಕುರಿತು ಅವಹೇಳನ: ಟಿಎಂಸಿ ನಾಯಕ ಕ್ಷಮೆಯಾಚನೆ

ರಾಷ್ಟ್ರಪತಿ ಮುರ್ಮು ಕುರಿತು ಅವಹೇಳನ: ಟಿಎಂಸಿ ನಾಯಕ ಕ್ಷಮೆಯಾಚನೆ

ಮುರ್ಮು ಅವರ ಬಗ್ಗೆ ಆಕ್ಷೇಪಾರ್ಹವಾಗಿ ಬರೆದಿದ್ದ ವಿಶ್ವೇಶ್ವರ ಭಟ್ ಪ್ರಕರಣ ಚರ್ಚೆಯಲ್ಲಿರುವ ಹೊತ್ತಿನಲ್ಲಿ ಇಂತಹದ್ದೇ ಮತ್ತೊಂದು ಘಟನೆ ನಡೆದಿದೆ.

- Advertisement -
- Advertisement -

ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಅಖಿಲ್ ಗಿರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬೆನ್ನಲ್ಲೇ ಗಿರಿಯವರು ಶನಿವಾರ ಕ್ಷಮೆಯಾಚಿಸಿದ್ದಾರೆ.

ಪಶ್ಚಿಮ ಬಂಗಾಳದ ಕ್ಯಾಬಿನೆಟ್‌ನಲ್ಲಿ ಸಚಿವರಾಗಿದ್ದ ಗಿರಿ ಅವರು ಪಶ್ಚಿಮ ಬಂಗಾಳದ ನಂದಿಗ್ರಾಮ್‌ನಲ್ಲಿ ನಡೆದ ಸಭೆಯೊಂದರಲ್ಲಿ ನೀಡಿದ ಹೇಳಿಕೆ ವಿವಾದಕ್ಕೆ ಗುರಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಯಾರನ್ನೂ ಅವರ ನೋಟದಿಂದ ನಿರ್ಣಯಿಸುವುದಿಲ್ಲ, ನಾವು ರಾಷ್ಟ್ರಪತಿ ಕಚೇರಿಯನ್ನು ಗೌರವಿಸುತ್ತೇವೆ. ಆದರೆ ನಮ್ಮ ರಾಷ್ಟ್ರಪತಿಗಳು ಹೇಗೆ ಕಾಣುತ್ತಾರೆ?” ಎಂದು ಗಿರಿಯವರು ಪ್ರಶ್ನಿಸುತ್ತಿರುವುದು ವಿಡಿಯೊದಲ್ಲಿ ದಾಖಲಾಗಿತ್ತು.

“ಸಂವಿಧಾನ ಮತ್ತು ರಾಷ್ಟ್ರಪತಿ ಹುದ್ದೆಯನ್ನು ಗೌರವಿಸುತ್ತೇನೆ” ಎಂದಿರುವ ಗಿರಿ, ಶನಿವಾರ ಕ್ಷಮೆಯಾಚನೆ ಮಾಡಿದ್ದಾರೆ.

“ಕಳೆದ ಕೆಲವು ತಿಂಗಳುಗಳಿಂದ, ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ನನ್ನ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಅದು ನನಗೆ ಕೋಪವನ್ನುಂಟುಮಾಡಿದೆ” ಎಂದು ಗಿರಿ ತಮ್ಮ ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ನಂದಿಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾನು ಕೋಪದಲ್ಲಿ ಮಾತನಾಡಿರುವೆ. ‌ಆದರೆ ಭಾರತದ ರಾಷ್ಟ್ರಪತಿಗಳ ಬಗ್ಗೆ ನನಗೆ ಅಪಾರವಾದ ಗೌರವವಿದೆ. ನನ್ನ ಕಾಮೆಂಟ್‌ಗಳಿಗಾಗಿ ನಾನು ಕ್ಷಮೆಯಾಚಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯ ಹಲವಾರು ನಾಯಕರು ಗಿರಿ ಹೇಳಿಕೆಯನ್ನು, ತೃಣಮೂಲ ಕಾಂಗ್ರೆಸ್ ಅನ್ನು ಟೀಕಿಸಿದ್ದಾರೆ. ಮಮತಾ “ಬ್ಯಾನರ್ಜಿ ನೇತೃತ್ವದ ತೃಣಮೂಲ ಸರ್ಕಾರವು ಬುಡಕಟ್ಟು ವಿರೋಧಿಯಾಗಿದೆ” ಎಂದು ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ ಆರೋಪಿಸಿದ್ದಾರೆ.

“ಸಿಎಂ ಮಮತಾ ಬ್ಯಾನರ್ಜಿ ಯಾವಾಗಲೂ ಬುಡಕಟ್ಟು ವಿರೋಧಿಯಾಗಿದ್ದಾರೆ” ಎಂದು ಮಜುಂದಾರ್ ಟ್ವೀಟ್ ಮಾಡಿದ್ದಾರೆ.

ಏತನ್ಮಧ್ಯೆ, ಬಿಜೆಪಿ ಸಂಸದರಾದ ಸೌಮಿತ್ರಾ ಖಾನ್ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದು, ಗಿರಿಯವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ರಾಷ್ಟ್ರಪತಿಯವರ ಕುರಿತ ಗಿರಿಯವರ ಹೇಳಿಕೆಯು ದೇಶದ ನಾಗರಿಕರಿಗೆ ಮತ್ತು ಅದರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅವಮಾನವಾಗಿದೆ ಎಂದು ಸೌಮಿತ್ರಾ ಪತ್ರದಲ್ಲಿ ಬರೆದಿದ್ದಾರೆ.

“ಆದ್ದರಿಂದ ಈ ಹೇಯ ಕೃತ್ಯಕ್ಕಾಗಿ ಅಖಿಲ್ ಗಿರಿಯನ್ನು ತಕ್ಷಣವೇ ಬಂಧಿಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನಿಮ್ಮನ್ನು ವಿನಂತಿಸಲಾಗಿದೆ” ಎಂದು ಬಿಜೆಪಿ ಸಂಸದರು ಹೇಳಿದ್ದಾರೆ. “ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಏಕೆಂದರೆ ಸಮಾಜವು ಈ ರೀತಿಯ ಮನಸ್ಥಿತಿಯನ್ನು ಬಯಸುವುದಿಲ್ಲ” ಎಂದಿದ್ದಾರೆ.

ಕರ್ನಾಟಕದಲ್ಲಿಯೂ ಇದೇ ರೀತಿಯ ಪ್ರಕರಣ ಇತ್ತೀಚೆಗೆ ವರದಿಯಾಗಿತ್ತು. ರಾಷ್ಟ್ರಪತಿ ಮುರ್ಮು ಅವರ ಬಗ್ಗೆ ‘ವಿಶ್ವವಾಣಿ’ ಪತ್ರಿಕೆಯ ಸಂಪಾದಕ ಬರೆದಿದ್ದ ಸಾಲು ಟೀಕೆಗೆ ಗುರಿಯಾಗಿತ್ತು. ವರ್ಣವನ್ನು ಹೀಯಾಳಿಸಿ ಅಪಮಾನಿಸಿದ್ದ ಕರ್ನಾಟಕದ ಪ್ರಕರಣ ಚರ್ಚೆಯಲ್ಲಿರುವ ಹೊತ್ತಿನಲ್ಲಿಯೇ ಪಶ್ಚಿಮ ಬಂಗಾಳದಲ್ಲಿಯೂ ಇಂಥದ್ದೇ ಪ್ರಕರಣ ವರದಿಯಾಗಿದೆ.

ಇದನ್ನೂ ಓದಿರಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಸಂಸ್ಕಾರಿ ಬ್ರಾಹ್ಮಣರು ಎಂದಿದ್ದ ಶಾಸಕನಿಗೆ ಮತ್ತೆ ಟಿಕೆಟ್ ನೀಡಿದ ಬಿಜೆಪಿ

ತಮ್ಮ ಅಂಕಣ ಬರಹದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಬಣ್ಣವನ್ನು ಅವಮಾನಕರ ರೀತಿಯಲ್ಲಿ ಚಿತ್ರಿಸಿ ಜನಾಂಗೀಯ ನಿಂದನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವೇಶ್ವರ ಭಟ್, ರಾಷ್ಟ್ರೀಯ ಮಹಿಳಾ ಆಯೋಗದ ಎದುರು ಇತ್ತೀಚೆಗೆ ಹಾಜರಿದ್ದರು.

ಅವಹೇಳನಕಾರಿಯಾಗಿ ಬರೆದಿರುವುದನ್ನು ರಾಷ್ಟ್ರೀಯ ಮಹಿಳಾ ಆಯೋಗವು (NCW) ಗುರುತಿಸಿತ್ತು. ಈ ಕುರಿತು ಅಕ್ಟೋಬರ್ 26ರಂದು ವಿಚಾರಣೆಗೆ ಹಾಜರಾಗುವಂತೆ ಪತ್ರಕರ್ತ ವಿಶ್ವೇಶ್ವರ ಭಟ್‌ರವರಿಗೆ ನೋಟಿಸ್ ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಆಯೋಗದ ಮುಂದೆ ಹಾಜರಾದ ವಿಶ್ವೇಶ್ವರ ಭಟ್, “ಭಾರತದ ರಾಷ್ಟ್ರಪತಿಯವರನ್ನು ಅವಮಾನಿಸುವ ಯಾವುದೇ ದುರುದ್ದೇಶ ತನಗೆ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿ ಕ್ಷೆಮೆ ಯಾಚಿಸಿದ್ದಾರೆ, ಲಿಖಿತವಾಗಿಯೂ ಕ್ಷಮೆ ಕೇಳಿದ್ದಾರೆ” ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾರವರ ಹೇಳಿಕೆ ಉಲ್ಲೇಖಿಸಿ ‘ಪ್ರಜಾವಾಣಿ’ ವರದಿ ಮಾಡಿತ್ತು. ಆದರೆ ಕ್ಷಮೆಯಾಚಿಸಿಲ್ಲ ಎಂದು ವಿಶ್ವೇಶ್ವರ್‌ ಭಟ್ ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....