Homeಮುಖಪುಟರಾಷ್ಟ್ರಪತಿ ಮುರ್ಮು ಕುರಿತು ಅವಹೇಳನ: ಟಿಎಂಸಿ ನಾಯಕ ಕ್ಷಮೆಯಾಚನೆ

ರಾಷ್ಟ್ರಪತಿ ಮುರ್ಮು ಕುರಿತು ಅವಹೇಳನ: ಟಿಎಂಸಿ ನಾಯಕ ಕ್ಷಮೆಯಾಚನೆ

ಮುರ್ಮು ಅವರ ಬಗ್ಗೆ ಆಕ್ಷೇಪಾರ್ಹವಾಗಿ ಬರೆದಿದ್ದ ವಿಶ್ವೇಶ್ವರ ಭಟ್ ಪ್ರಕರಣ ಚರ್ಚೆಯಲ್ಲಿರುವ ಹೊತ್ತಿನಲ್ಲಿ ಇಂತಹದ್ದೇ ಮತ್ತೊಂದು ಘಟನೆ ನಡೆದಿದೆ.

- Advertisement -
- Advertisement -

ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಅಖಿಲ್ ಗಿರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬೆನ್ನಲ್ಲೇ ಗಿರಿಯವರು ಶನಿವಾರ ಕ್ಷಮೆಯಾಚಿಸಿದ್ದಾರೆ.

ಪಶ್ಚಿಮ ಬಂಗಾಳದ ಕ್ಯಾಬಿನೆಟ್‌ನಲ್ಲಿ ಸಚಿವರಾಗಿದ್ದ ಗಿರಿ ಅವರು ಪಶ್ಚಿಮ ಬಂಗಾಳದ ನಂದಿಗ್ರಾಮ್‌ನಲ್ಲಿ ನಡೆದ ಸಭೆಯೊಂದರಲ್ಲಿ ನೀಡಿದ ಹೇಳಿಕೆ ವಿವಾದಕ್ಕೆ ಗುರಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಯಾರನ್ನೂ ಅವರ ನೋಟದಿಂದ ನಿರ್ಣಯಿಸುವುದಿಲ್ಲ, ನಾವು ರಾಷ್ಟ್ರಪತಿ ಕಚೇರಿಯನ್ನು ಗೌರವಿಸುತ್ತೇವೆ. ಆದರೆ ನಮ್ಮ ರಾಷ್ಟ್ರಪತಿಗಳು ಹೇಗೆ ಕಾಣುತ್ತಾರೆ?” ಎಂದು ಗಿರಿಯವರು ಪ್ರಶ್ನಿಸುತ್ತಿರುವುದು ವಿಡಿಯೊದಲ್ಲಿ ದಾಖಲಾಗಿತ್ತು.

“ಸಂವಿಧಾನ ಮತ್ತು ರಾಷ್ಟ್ರಪತಿ ಹುದ್ದೆಯನ್ನು ಗೌರವಿಸುತ್ತೇನೆ” ಎಂದಿರುವ ಗಿರಿ, ಶನಿವಾರ ಕ್ಷಮೆಯಾಚನೆ ಮಾಡಿದ್ದಾರೆ.

“ಕಳೆದ ಕೆಲವು ತಿಂಗಳುಗಳಿಂದ, ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ನನ್ನ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಅದು ನನಗೆ ಕೋಪವನ್ನುಂಟುಮಾಡಿದೆ” ಎಂದು ಗಿರಿ ತಮ್ಮ ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ನಂದಿಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾನು ಕೋಪದಲ್ಲಿ ಮಾತನಾಡಿರುವೆ. ‌ಆದರೆ ಭಾರತದ ರಾಷ್ಟ್ರಪತಿಗಳ ಬಗ್ಗೆ ನನಗೆ ಅಪಾರವಾದ ಗೌರವವಿದೆ. ನನ್ನ ಕಾಮೆಂಟ್‌ಗಳಿಗಾಗಿ ನಾನು ಕ್ಷಮೆಯಾಚಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯ ಹಲವಾರು ನಾಯಕರು ಗಿರಿ ಹೇಳಿಕೆಯನ್ನು, ತೃಣಮೂಲ ಕಾಂಗ್ರೆಸ್ ಅನ್ನು ಟೀಕಿಸಿದ್ದಾರೆ. ಮಮತಾ “ಬ್ಯಾನರ್ಜಿ ನೇತೃತ್ವದ ತೃಣಮೂಲ ಸರ್ಕಾರವು ಬುಡಕಟ್ಟು ವಿರೋಧಿಯಾಗಿದೆ” ಎಂದು ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ ಆರೋಪಿಸಿದ್ದಾರೆ.

“ಸಿಎಂ ಮಮತಾ ಬ್ಯಾನರ್ಜಿ ಯಾವಾಗಲೂ ಬುಡಕಟ್ಟು ವಿರೋಧಿಯಾಗಿದ್ದಾರೆ” ಎಂದು ಮಜುಂದಾರ್ ಟ್ವೀಟ್ ಮಾಡಿದ್ದಾರೆ.

ಏತನ್ಮಧ್ಯೆ, ಬಿಜೆಪಿ ಸಂಸದರಾದ ಸೌಮಿತ್ರಾ ಖಾನ್ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದು, ಗಿರಿಯವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ರಾಷ್ಟ್ರಪತಿಯವರ ಕುರಿತ ಗಿರಿಯವರ ಹೇಳಿಕೆಯು ದೇಶದ ನಾಗರಿಕರಿಗೆ ಮತ್ತು ಅದರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅವಮಾನವಾಗಿದೆ ಎಂದು ಸೌಮಿತ್ರಾ ಪತ್ರದಲ್ಲಿ ಬರೆದಿದ್ದಾರೆ.

“ಆದ್ದರಿಂದ ಈ ಹೇಯ ಕೃತ್ಯಕ್ಕಾಗಿ ಅಖಿಲ್ ಗಿರಿಯನ್ನು ತಕ್ಷಣವೇ ಬಂಧಿಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನಿಮ್ಮನ್ನು ವಿನಂತಿಸಲಾಗಿದೆ” ಎಂದು ಬಿಜೆಪಿ ಸಂಸದರು ಹೇಳಿದ್ದಾರೆ. “ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಏಕೆಂದರೆ ಸಮಾಜವು ಈ ರೀತಿಯ ಮನಸ್ಥಿತಿಯನ್ನು ಬಯಸುವುದಿಲ್ಲ” ಎಂದಿದ್ದಾರೆ.

ಕರ್ನಾಟಕದಲ್ಲಿಯೂ ಇದೇ ರೀತಿಯ ಪ್ರಕರಣ ಇತ್ತೀಚೆಗೆ ವರದಿಯಾಗಿತ್ತು. ರಾಷ್ಟ್ರಪತಿ ಮುರ್ಮು ಅವರ ಬಗ್ಗೆ ‘ವಿಶ್ವವಾಣಿ’ ಪತ್ರಿಕೆಯ ಸಂಪಾದಕ ಬರೆದಿದ್ದ ಸಾಲು ಟೀಕೆಗೆ ಗುರಿಯಾಗಿತ್ತು. ವರ್ಣವನ್ನು ಹೀಯಾಳಿಸಿ ಅಪಮಾನಿಸಿದ್ದ ಕರ್ನಾಟಕದ ಪ್ರಕರಣ ಚರ್ಚೆಯಲ್ಲಿರುವ ಹೊತ್ತಿನಲ್ಲಿಯೇ ಪಶ್ಚಿಮ ಬಂಗಾಳದಲ್ಲಿಯೂ ಇಂಥದ್ದೇ ಪ್ರಕರಣ ವರದಿಯಾಗಿದೆ.

ಇದನ್ನೂ ಓದಿರಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಸಂಸ್ಕಾರಿ ಬ್ರಾಹ್ಮಣರು ಎಂದಿದ್ದ ಶಾಸಕನಿಗೆ ಮತ್ತೆ ಟಿಕೆಟ್ ನೀಡಿದ ಬಿಜೆಪಿ

ತಮ್ಮ ಅಂಕಣ ಬರಹದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಬಣ್ಣವನ್ನು ಅವಮಾನಕರ ರೀತಿಯಲ್ಲಿ ಚಿತ್ರಿಸಿ ಜನಾಂಗೀಯ ನಿಂದನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವೇಶ್ವರ ಭಟ್, ರಾಷ್ಟ್ರೀಯ ಮಹಿಳಾ ಆಯೋಗದ ಎದುರು ಇತ್ತೀಚೆಗೆ ಹಾಜರಿದ್ದರು.

ಅವಹೇಳನಕಾರಿಯಾಗಿ ಬರೆದಿರುವುದನ್ನು ರಾಷ್ಟ್ರೀಯ ಮಹಿಳಾ ಆಯೋಗವು (NCW) ಗುರುತಿಸಿತ್ತು. ಈ ಕುರಿತು ಅಕ್ಟೋಬರ್ 26ರಂದು ವಿಚಾರಣೆಗೆ ಹಾಜರಾಗುವಂತೆ ಪತ್ರಕರ್ತ ವಿಶ್ವೇಶ್ವರ ಭಟ್‌ರವರಿಗೆ ನೋಟಿಸ್ ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಆಯೋಗದ ಮುಂದೆ ಹಾಜರಾದ ವಿಶ್ವೇಶ್ವರ ಭಟ್, “ಭಾರತದ ರಾಷ್ಟ್ರಪತಿಯವರನ್ನು ಅವಮಾನಿಸುವ ಯಾವುದೇ ದುರುದ್ದೇಶ ತನಗೆ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿ ಕ್ಷೆಮೆ ಯಾಚಿಸಿದ್ದಾರೆ, ಲಿಖಿತವಾಗಿಯೂ ಕ್ಷಮೆ ಕೇಳಿದ್ದಾರೆ” ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾರವರ ಹೇಳಿಕೆ ಉಲ್ಲೇಖಿಸಿ ‘ಪ್ರಜಾವಾಣಿ’ ವರದಿ ಮಾಡಿತ್ತು. ಆದರೆ ಕ್ಷಮೆಯಾಚಿಸಿಲ್ಲ ಎಂದು ವಿಶ್ವೇಶ್ವರ್‌ ಭಟ್ ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...