Homeಮುಖಪುಟನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

- Advertisement -
- Advertisement -

ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ ‘ನಿಂದನೆಯು ಸಾರ್ವಜನಿಕವಾಗಿರಬೇಕು’ ಎಂಬುವುದನ್ನು ಒತ್ತಿ ಹೇಳಿದೆ.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಎಸ್.ವಿ.ಎನ್. ಭಟ್ಟಿ ಅವರು ಇದ್ದ ವಿಭಾಗೀಯ ಪೀಠವು, ಈ ಕಾಯ್ದೆಯಡಿಯಲ್ಲಿ ಮಾಡುವ ಯಾವುದೇ ಆರೋಪವು, ಅಪರಾಧಿಕ ಅಂಶಗಳನ್ನು ಹೊಂದಿದೆಯೇ ಎಂಬುದನ್ನು ತೀರ್ಮಾನಿಸುವಾಗ ‘ಸಾರ್ವಜನಿಕರಿಗೆ ಕಾಣಿಸುವ ಯಾವುದೇ ಸ್ಥಳದಲ್ಲಿ’ ಎಂದು ಕಾಯ್ದೆಯಲ್ಲಿ ಹೇಳಿರುವ ಮಾತು ಬಹಳ ಮುಖ್ಯವಾದ ಪಾತ್ರವಹಿಸುತ್ತದೆ ಎಂದು  ಹೇಳಿದೆ.

‘ಸಾರ್ವಜನಿಕರಿಗೆ ಕಾಣಿಸುವಂತಹ ಸ್ಥಳದಲ್ಲಿ’ ಎಂಬ ವಿವರಣೆಯ ಅನ್ವಯ, ದೂರುದಾರರ ಹೊರತಾಗಿ ಇತರ ವ್ಯಕ್ತಿಗಳಿಗೆ ಕಾಣಿಸುವಂತೆ ಆ ಕೃತ್ಯ ನಡೆದಿರಬೇಕು ಎಂದು ಪೀಠವು ತೀರ್ಪಿನಲ್ಲಿ ಹೇಳಿದೆ.

ಈ ಕಾಯ್ದೆಯ ಅಡಿಯಲ್ಲಿ ತಮ್ಮ ವಿರುದ್ಧ ಎಫ್‌ಐಆರ್‌ ದಾಖಲಿಸಲು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಪ್ರೀತಿ ಅಗರ್ವಾಲ್ ಮತ್ತು ಇತರರು ಸಲ್ಲಿಸಿದ್ದ ಮೇಲ್ಮನವಿಯನ್ನು ಮಾನ್ಯ ಮಾಡಿರುವ ಪೀಠವು ಈ ವಿವರಣೆ ನೀಡಿದೆ.

ಅಂತರಾಷ್ಟ್ರೀಯ ಕುದುರೆ ಸವಾರಿ ಚಾಂಪಿಯನ್‌ನ ದೂರಿನ ಮೇರೆಗೆ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧಗಳಿಗೆ ಎಫ್‌ಐಆರ್ ದಾಖಲಿಸುವ ಆದೇಶದ ವಿರುದ್ಧ ಪ್ರೀತಿ ಅಗರ್‌ವಾಲಾ ಮತ್ತು ಪೋಷಕರು ಮತ್ತು ಒಲಿಂಪಿಕ್ ರೈಡಿಂಗ್ ಮತ್ತು ಇಕ್ವೆಸ್ಟ್ರಿಯನ್ ಅಕಾಡೆಮಿಯ(ಒಆರ್‌ಇಎ) ತರಬೇತಿ ಅಥ್ಲೀಟ್‌ಗಳು ಮಾಡಿದ ಮನವಿಯನ್ನು ನ್ಯಾಯಾಲಯವು ಅಂಗೀಕರಿಸಿದೆ.

ಮೇಲ್ಮನವಿದಾರರ ಪರ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಅವರು ವಾದ ಮಂಡಿಸಿದ್ದಾರೆ. ವಾಟ್ಸ್ಆ್ಯಪ್‌ ಮೂಲಕ ನಡೆದಿರುವ ಮಾತುಕತೆಗಳು ಕಾಯ್ದೆಯ ಅಡಿಯಲ್ಲಿ ಅಪರಾಧಿಕ ಅಂಶಗಳನ್ನು ಹೊಂದಿರುವುದು ಮೇಲ್ನೋಟಕ್ಕೆ ಕಾಣುವುದಿಲ್ಲ ಎಂದು ಹೇಳಿದ್ದರು. 1989ರ ಕಾಯಿದೆಯ ಸೆಕ್ಷನ್ 3 (1) (ಆರ್) ಅಡಿಯಲ್ಲಿ ಅಪರಾಧವನ್ನು ರೂಪಿಸುವ ಯಾವುದೇ ಅಂಶಗಳನ್ನು ವಾಟ್ಸಾಪ್ ಸಂಭಾಷಣೆಯು ಹೊಂದಿಲ್ಲ ಎಂದು ಹೇಳಲಾಗಿದೆ.

ವಕೀಲ ಕಪಿಲ್ ನಾಥ್ ಮೋದಿ ಅವರು ದೂರಿನಲ್ಲಿ ಕಾಗ್ನಿಸಬಲ್ ಅಪರಾಧಗಳನ್ನು ಬಹಿರಂಗಪಡಿಸಿದ್ದಾರೆ ಮತ್ತು ದೂರುದಾರರು ತಿಂಗಳುಗಳು ಮತ್ತು ವರ್ಷಗಳ ಕಾಲ ಜಾತಿ ನಿಂದನೆಗಳನ್ನು ಮೌನವಾಗಿ ಅನುಭವಿಸಿದ್ದಾರೆ ಮತ್ತು ಕೇವಲ ವಿಳಂಬವು ಯಾವುದೇ ಪ್ರತಿಕೂಲ ತೀರ್ಮಾನಕ್ಕೆ ಕಾರಣವಾಗುವುದಿಲ್ಲ ಎಂದು ವಾದಿಸಿದ್ದರು.

CrPCಯ ಸೆಕ್ಷನ್ 156(3) ಅಡಿಯಲ್ಲಿ ಸಲ್ಲಿಸಲಾದ ಅರ್ಜಿಯಲ್ಲಿ ಎಫ್‌ಐಆರ್ ಮತ್ತು  ತನಿಖೆ ನಡೆಸುವ ಬಗ್ಗೆ ಭಿನ್ನ ಅಭಿಪ್ರಾಯಗಳಿಲ್ಲ. ಅರ್ಜಿಯಲ್ಲಿನ ನಿರ್ದಿಷ್ಟ ಆರೋಪಗಳು ಅಸ್ಪಷ್ಟವಾಗಿದ್ದರೆ ಅದು ಎಫ್‌ಐಆರ್ ಮತ್ತು ತನಿಖೆಯ ನೋಂದಣಿಗೆ ಆದೇಶಕ್ಕೆ ಕಾರಣವಾಗುವುದಿಲ್ಲ ಎಂದು ಪೀಠವು ಹೇಳಿದೆ.

ಇದನ್ನು ಓದಿ: ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...