Homeಮುಖಪುಟನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

- Advertisement -
- Advertisement -

ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ ‘ನಿಂದನೆಯು ಸಾರ್ವಜನಿಕವಾಗಿರಬೇಕು’ ಎಂಬುವುದನ್ನು ಒತ್ತಿ ಹೇಳಿದೆ.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಎಸ್.ವಿ.ಎನ್. ಭಟ್ಟಿ ಅವರು ಇದ್ದ ವಿಭಾಗೀಯ ಪೀಠವು, ಈ ಕಾಯ್ದೆಯಡಿಯಲ್ಲಿ ಮಾಡುವ ಯಾವುದೇ ಆರೋಪವು, ಅಪರಾಧಿಕ ಅಂಶಗಳನ್ನು ಹೊಂದಿದೆಯೇ ಎಂಬುದನ್ನು ತೀರ್ಮಾನಿಸುವಾಗ ‘ಸಾರ್ವಜನಿಕರಿಗೆ ಕಾಣಿಸುವ ಯಾವುದೇ ಸ್ಥಳದಲ್ಲಿ’ ಎಂದು ಕಾಯ್ದೆಯಲ್ಲಿ ಹೇಳಿರುವ ಮಾತು ಬಹಳ ಮುಖ್ಯವಾದ ಪಾತ್ರವಹಿಸುತ್ತದೆ ಎಂದು  ಹೇಳಿದೆ.

‘ಸಾರ್ವಜನಿಕರಿಗೆ ಕಾಣಿಸುವಂತಹ ಸ್ಥಳದಲ್ಲಿ’ ಎಂಬ ವಿವರಣೆಯ ಅನ್ವಯ, ದೂರುದಾರರ ಹೊರತಾಗಿ ಇತರ ವ್ಯಕ್ತಿಗಳಿಗೆ ಕಾಣಿಸುವಂತೆ ಆ ಕೃತ್ಯ ನಡೆದಿರಬೇಕು ಎಂದು ಪೀಠವು ತೀರ್ಪಿನಲ್ಲಿ ಹೇಳಿದೆ.

ಈ ಕಾಯ್ದೆಯ ಅಡಿಯಲ್ಲಿ ತಮ್ಮ ವಿರುದ್ಧ ಎಫ್‌ಐಆರ್‌ ದಾಖಲಿಸಲು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಪ್ರೀತಿ ಅಗರ್ವಾಲ್ ಮತ್ತು ಇತರರು ಸಲ್ಲಿಸಿದ್ದ ಮೇಲ್ಮನವಿಯನ್ನು ಮಾನ್ಯ ಮಾಡಿರುವ ಪೀಠವು ಈ ವಿವರಣೆ ನೀಡಿದೆ.

ಅಂತರಾಷ್ಟ್ರೀಯ ಕುದುರೆ ಸವಾರಿ ಚಾಂಪಿಯನ್‌ನ ದೂರಿನ ಮೇರೆಗೆ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧಗಳಿಗೆ ಎಫ್‌ಐಆರ್ ದಾಖಲಿಸುವ ಆದೇಶದ ವಿರುದ್ಧ ಪ್ರೀತಿ ಅಗರ್‌ವಾಲಾ ಮತ್ತು ಪೋಷಕರು ಮತ್ತು ಒಲಿಂಪಿಕ್ ರೈಡಿಂಗ್ ಮತ್ತು ಇಕ್ವೆಸ್ಟ್ರಿಯನ್ ಅಕಾಡೆಮಿಯ(ಒಆರ್‌ಇಎ) ತರಬೇತಿ ಅಥ್ಲೀಟ್‌ಗಳು ಮಾಡಿದ ಮನವಿಯನ್ನು ನ್ಯಾಯಾಲಯವು ಅಂಗೀಕರಿಸಿದೆ.

ಮೇಲ್ಮನವಿದಾರರ ಪರ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಅವರು ವಾದ ಮಂಡಿಸಿದ್ದಾರೆ. ವಾಟ್ಸ್ಆ್ಯಪ್‌ ಮೂಲಕ ನಡೆದಿರುವ ಮಾತುಕತೆಗಳು ಕಾಯ್ದೆಯ ಅಡಿಯಲ್ಲಿ ಅಪರಾಧಿಕ ಅಂಶಗಳನ್ನು ಹೊಂದಿರುವುದು ಮೇಲ್ನೋಟಕ್ಕೆ ಕಾಣುವುದಿಲ್ಲ ಎಂದು ಹೇಳಿದ್ದರು. 1989ರ ಕಾಯಿದೆಯ ಸೆಕ್ಷನ್ 3 (1) (ಆರ್) ಅಡಿಯಲ್ಲಿ ಅಪರಾಧವನ್ನು ರೂಪಿಸುವ ಯಾವುದೇ ಅಂಶಗಳನ್ನು ವಾಟ್ಸಾಪ್ ಸಂಭಾಷಣೆಯು ಹೊಂದಿಲ್ಲ ಎಂದು ಹೇಳಲಾಗಿದೆ.

ವಕೀಲ ಕಪಿಲ್ ನಾಥ್ ಮೋದಿ ಅವರು ದೂರಿನಲ್ಲಿ ಕಾಗ್ನಿಸಬಲ್ ಅಪರಾಧಗಳನ್ನು ಬಹಿರಂಗಪಡಿಸಿದ್ದಾರೆ ಮತ್ತು ದೂರುದಾರರು ತಿಂಗಳುಗಳು ಮತ್ತು ವರ್ಷಗಳ ಕಾಲ ಜಾತಿ ನಿಂದನೆಗಳನ್ನು ಮೌನವಾಗಿ ಅನುಭವಿಸಿದ್ದಾರೆ ಮತ್ತು ಕೇವಲ ವಿಳಂಬವು ಯಾವುದೇ ಪ್ರತಿಕೂಲ ತೀರ್ಮಾನಕ್ಕೆ ಕಾರಣವಾಗುವುದಿಲ್ಲ ಎಂದು ವಾದಿಸಿದ್ದರು.

CrPCಯ ಸೆಕ್ಷನ್ 156(3) ಅಡಿಯಲ್ಲಿ ಸಲ್ಲಿಸಲಾದ ಅರ್ಜಿಯಲ್ಲಿ ಎಫ್‌ಐಆರ್ ಮತ್ತು  ತನಿಖೆ ನಡೆಸುವ ಬಗ್ಗೆ ಭಿನ್ನ ಅಭಿಪ್ರಾಯಗಳಿಲ್ಲ. ಅರ್ಜಿಯಲ್ಲಿನ ನಿರ್ದಿಷ್ಟ ಆರೋಪಗಳು ಅಸ್ಪಷ್ಟವಾಗಿದ್ದರೆ ಅದು ಎಫ್‌ಐಆರ್ ಮತ್ತು ತನಿಖೆಯ ನೋಂದಣಿಗೆ ಆದೇಶಕ್ಕೆ ಕಾರಣವಾಗುವುದಿಲ್ಲ ಎಂದು ಪೀಠವು ಹೇಳಿದೆ.

ಇದನ್ನು ಓದಿ: ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...