Homeಮುಖಪುಟನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

- Advertisement -
- Advertisement -

ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ ‘ನಿಂದನೆಯು ಸಾರ್ವಜನಿಕವಾಗಿರಬೇಕು’ ಎಂಬುವುದನ್ನು ಒತ್ತಿ ಹೇಳಿದೆ.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಎಸ್.ವಿ.ಎನ್. ಭಟ್ಟಿ ಅವರು ಇದ್ದ ವಿಭಾಗೀಯ ಪೀಠವು, ಈ ಕಾಯ್ದೆಯಡಿಯಲ್ಲಿ ಮಾಡುವ ಯಾವುದೇ ಆರೋಪವು, ಅಪರಾಧಿಕ ಅಂಶಗಳನ್ನು ಹೊಂದಿದೆಯೇ ಎಂಬುದನ್ನು ತೀರ್ಮಾನಿಸುವಾಗ ‘ಸಾರ್ವಜನಿಕರಿಗೆ ಕಾಣಿಸುವ ಯಾವುದೇ ಸ್ಥಳದಲ್ಲಿ’ ಎಂದು ಕಾಯ್ದೆಯಲ್ಲಿ ಹೇಳಿರುವ ಮಾತು ಬಹಳ ಮುಖ್ಯವಾದ ಪಾತ್ರವಹಿಸುತ್ತದೆ ಎಂದು  ಹೇಳಿದೆ.

‘ಸಾರ್ವಜನಿಕರಿಗೆ ಕಾಣಿಸುವಂತಹ ಸ್ಥಳದಲ್ಲಿ’ ಎಂಬ ವಿವರಣೆಯ ಅನ್ವಯ, ದೂರುದಾರರ ಹೊರತಾಗಿ ಇತರ ವ್ಯಕ್ತಿಗಳಿಗೆ ಕಾಣಿಸುವಂತೆ ಆ ಕೃತ್ಯ ನಡೆದಿರಬೇಕು ಎಂದು ಪೀಠವು ತೀರ್ಪಿನಲ್ಲಿ ಹೇಳಿದೆ.

ಈ ಕಾಯ್ದೆಯ ಅಡಿಯಲ್ಲಿ ತಮ್ಮ ವಿರುದ್ಧ ಎಫ್‌ಐಆರ್‌ ದಾಖಲಿಸಲು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಪ್ರೀತಿ ಅಗರ್ವಾಲ್ ಮತ್ತು ಇತರರು ಸಲ್ಲಿಸಿದ್ದ ಮೇಲ್ಮನವಿಯನ್ನು ಮಾನ್ಯ ಮಾಡಿರುವ ಪೀಠವು ಈ ವಿವರಣೆ ನೀಡಿದೆ.

ಅಂತರಾಷ್ಟ್ರೀಯ ಕುದುರೆ ಸವಾರಿ ಚಾಂಪಿಯನ್‌ನ ದೂರಿನ ಮೇರೆಗೆ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧಗಳಿಗೆ ಎಫ್‌ಐಆರ್ ದಾಖಲಿಸುವ ಆದೇಶದ ವಿರುದ್ಧ ಪ್ರೀತಿ ಅಗರ್‌ವಾಲಾ ಮತ್ತು ಪೋಷಕರು ಮತ್ತು ಒಲಿಂಪಿಕ್ ರೈಡಿಂಗ್ ಮತ್ತು ಇಕ್ವೆಸ್ಟ್ರಿಯನ್ ಅಕಾಡೆಮಿಯ(ಒಆರ್‌ಇಎ) ತರಬೇತಿ ಅಥ್ಲೀಟ್‌ಗಳು ಮಾಡಿದ ಮನವಿಯನ್ನು ನ್ಯಾಯಾಲಯವು ಅಂಗೀಕರಿಸಿದೆ.

ಮೇಲ್ಮನವಿದಾರರ ಪರ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಅವರು ವಾದ ಮಂಡಿಸಿದ್ದಾರೆ. ವಾಟ್ಸ್ಆ್ಯಪ್‌ ಮೂಲಕ ನಡೆದಿರುವ ಮಾತುಕತೆಗಳು ಕಾಯ್ದೆಯ ಅಡಿಯಲ್ಲಿ ಅಪರಾಧಿಕ ಅಂಶಗಳನ್ನು ಹೊಂದಿರುವುದು ಮೇಲ್ನೋಟಕ್ಕೆ ಕಾಣುವುದಿಲ್ಲ ಎಂದು ಹೇಳಿದ್ದರು. 1989ರ ಕಾಯಿದೆಯ ಸೆಕ್ಷನ್ 3 (1) (ಆರ್) ಅಡಿಯಲ್ಲಿ ಅಪರಾಧವನ್ನು ರೂಪಿಸುವ ಯಾವುದೇ ಅಂಶಗಳನ್ನು ವಾಟ್ಸಾಪ್ ಸಂಭಾಷಣೆಯು ಹೊಂದಿಲ್ಲ ಎಂದು ಹೇಳಲಾಗಿದೆ.

ವಕೀಲ ಕಪಿಲ್ ನಾಥ್ ಮೋದಿ ಅವರು ದೂರಿನಲ್ಲಿ ಕಾಗ್ನಿಸಬಲ್ ಅಪರಾಧಗಳನ್ನು ಬಹಿರಂಗಪಡಿಸಿದ್ದಾರೆ ಮತ್ತು ದೂರುದಾರರು ತಿಂಗಳುಗಳು ಮತ್ತು ವರ್ಷಗಳ ಕಾಲ ಜಾತಿ ನಿಂದನೆಗಳನ್ನು ಮೌನವಾಗಿ ಅನುಭವಿಸಿದ್ದಾರೆ ಮತ್ತು ಕೇವಲ ವಿಳಂಬವು ಯಾವುದೇ ಪ್ರತಿಕೂಲ ತೀರ್ಮಾನಕ್ಕೆ ಕಾರಣವಾಗುವುದಿಲ್ಲ ಎಂದು ವಾದಿಸಿದ್ದರು.

CrPCಯ ಸೆಕ್ಷನ್ 156(3) ಅಡಿಯಲ್ಲಿ ಸಲ್ಲಿಸಲಾದ ಅರ್ಜಿಯಲ್ಲಿ ಎಫ್‌ಐಆರ್ ಮತ್ತು  ತನಿಖೆ ನಡೆಸುವ ಬಗ್ಗೆ ಭಿನ್ನ ಅಭಿಪ್ರಾಯಗಳಿಲ್ಲ. ಅರ್ಜಿಯಲ್ಲಿನ ನಿರ್ದಿಷ್ಟ ಆರೋಪಗಳು ಅಸ್ಪಷ್ಟವಾಗಿದ್ದರೆ ಅದು ಎಫ್‌ಐಆರ್ ಮತ್ತು ತನಿಖೆಯ ನೋಂದಣಿಗೆ ಆದೇಶಕ್ಕೆ ಕಾರಣವಾಗುವುದಿಲ್ಲ ಎಂದು ಪೀಠವು ಹೇಳಿದೆ.

ಇದನ್ನು ಓದಿ: ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...