Homeಮುಖಪುಟನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

- Advertisement -
- Advertisement -

ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ ‘ನಿಂದನೆಯು ಸಾರ್ವಜನಿಕವಾಗಿರಬೇಕು’ ಎಂಬುವುದನ್ನು ಒತ್ತಿ ಹೇಳಿದೆ.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಎಸ್.ವಿ.ಎನ್. ಭಟ್ಟಿ ಅವರು ಇದ್ದ ವಿಭಾಗೀಯ ಪೀಠವು, ಈ ಕಾಯ್ದೆಯಡಿಯಲ್ಲಿ ಮಾಡುವ ಯಾವುದೇ ಆರೋಪವು, ಅಪರಾಧಿಕ ಅಂಶಗಳನ್ನು ಹೊಂದಿದೆಯೇ ಎಂಬುದನ್ನು ತೀರ್ಮಾನಿಸುವಾಗ ‘ಸಾರ್ವಜನಿಕರಿಗೆ ಕಾಣಿಸುವ ಯಾವುದೇ ಸ್ಥಳದಲ್ಲಿ’ ಎಂದು ಕಾಯ್ದೆಯಲ್ಲಿ ಹೇಳಿರುವ ಮಾತು ಬಹಳ ಮುಖ್ಯವಾದ ಪಾತ್ರವಹಿಸುತ್ತದೆ ಎಂದು  ಹೇಳಿದೆ.

‘ಸಾರ್ವಜನಿಕರಿಗೆ ಕಾಣಿಸುವಂತಹ ಸ್ಥಳದಲ್ಲಿ’ ಎಂಬ ವಿವರಣೆಯ ಅನ್ವಯ, ದೂರುದಾರರ ಹೊರತಾಗಿ ಇತರ ವ್ಯಕ್ತಿಗಳಿಗೆ ಕಾಣಿಸುವಂತೆ ಆ ಕೃತ್ಯ ನಡೆದಿರಬೇಕು ಎಂದು ಪೀಠವು ತೀರ್ಪಿನಲ್ಲಿ ಹೇಳಿದೆ.

ಈ ಕಾಯ್ದೆಯ ಅಡಿಯಲ್ಲಿ ತಮ್ಮ ವಿರುದ್ಧ ಎಫ್‌ಐಆರ್‌ ದಾಖಲಿಸಲು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಪ್ರೀತಿ ಅಗರ್ವಾಲ್ ಮತ್ತು ಇತರರು ಸಲ್ಲಿಸಿದ್ದ ಮೇಲ್ಮನವಿಯನ್ನು ಮಾನ್ಯ ಮಾಡಿರುವ ಪೀಠವು ಈ ವಿವರಣೆ ನೀಡಿದೆ.

ಅಂತರಾಷ್ಟ್ರೀಯ ಕುದುರೆ ಸವಾರಿ ಚಾಂಪಿಯನ್‌ನ ದೂರಿನ ಮೇರೆಗೆ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧಗಳಿಗೆ ಎಫ್‌ಐಆರ್ ದಾಖಲಿಸುವ ಆದೇಶದ ವಿರುದ್ಧ ಪ್ರೀತಿ ಅಗರ್‌ವಾಲಾ ಮತ್ತು ಪೋಷಕರು ಮತ್ತು ಒಲಿಂಪಿಕ್ ರೈಡಿಂಗ್ ಮತ್ತು ಇಕ್ವೆಸ್ಟ್ರಿಯನ್ ಅಕಾಡೆಮಿಯ(ಒಆರ್‌ಇಎ) ತರಬೇತಿ ಅಥ್ಲೀಟ್‌ಗಳು ಮಾಡಿದ ಮನವಿಯನ್ನು ನ್ಯಾಯಾಲಯವು ಅಂಗೀಕರಿಸಿದೆ.

ಮೇಲ್ಮನವಿದಾರರ ಪರ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಅವರು ವಾದ ಮಂಡಿಸಿದ್ದಾರೆ. ವಾಟ್ಸ್ಆ್ಯಪ್‌ ಮೂಲಕ ನಡೆದಿರುವ ಮಾತುಕತೆಗಳು ಕಾಯ್ದೆಯ ಅಡಿಯಲ್ಲಿ ಅಪರಾಧಿಕ ಅಂಶಗಳನ್ನು ಹೊಂದಿರುವುದು ಮೇಲ್ನೋಟಕ್ಕೆ ಕಾಣುವುದಿಲ್ಲ ಎಂದು ಹೇಳಿದ್ದರು. 1989ರ ಕಾಯಿದೆಯ ಸೆಕ್ಷನ್ 3 (1) (ಆರ್) ಅಡಿಯಲ್ಲಿ ಅಪರಾಧವನ್ನು ರೂಪಿಸುವ ಯಾವುದೇ ಅಂಶಗಳನ್ನು ವಾಟ್ಸಾಪ್ ಸಂಭಾಷಣೆಯು ಹೊಂದಿಲ್ಲ ಎಂದು ಹೇಳಲಾಗಿದೆ.

ವಕೀಲ ಕಪಿಲ್ ನಾಥ್ ಮೋದಿ ಅವರು ದೂರಿನಲ್ಲಿ ಕಾಗ್ನಿಸಬಲ್ ಅಪರಾಧಗಳನ್ನು ಬಹಿರಂಗಪಡಿಸಿದ್ದಾರೆ ಮತ್ತು ದೂರುದಾರರು ತಿಂಗಳುಗಳು ಮತ್ತು ವರ್ಷಗಳ ಕಾಲ ಜಾತಿ ನಿಂದನೆಗಳನ್ನು ಮೌನವಾಗಿ ಅನುಭವಿಸಿದ್ದಾರೆ ಮತ್ತು ಕೇವಲ ವಿಳಂಬವು ಯಾವುದೇ ಪ್ರತಿಕೂಲ ತೀರ್ಮಾನಕ್ಕೆ ಕಾರಣವಾಗುವುದಿಲ್ಲ ಎಂದು ವಾದಿಸಿದ್ದರು.

CrPCಯ ಸೆಕ್ಷನ್ 156(3) ಅಡಿಯಲ್ಲಿ ಸಲ್ಲಿಸಲಾದ ಅರ್ಜಿಯಲ್ಲಿ ಎಫ್‌ಐಆರ್ ಮತ್ತು  ತನಿಖೆ ನಡೆಸುವ ಬಗ್ಗೆ ಭಿನ್ನ ಅಭಿಪ್ರಾಯಗಳಿಲ್ಲ. ಅರ್ಜಿಯಲ್ಲಿನ ನಿರ್ದಿಷ್ಟ ಆರೋಪಗಳು ಅಸ್ಪಷ್ಟವಾಗಿದ್ದರೆ ಅದು ಎಫ್‌ಐಆರ್ ಮತ್ತು ತನಿಖೆಯ ನೋಂದಣಿಗೆ ಆದೇಶಕ್ಕೆ ಕಾರಣವಾಗುವುದಿಲ್ಲ ಎಂದು ಪೀಠವು ಹೇಳಿದೆ.

ಇದನ್ನು ಓದಿ: ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...