Homeಮುಖಪುಟಬಿಜೆಪಿ ನೇಮಿಸಿದ ಕುಲಪತಿ ಅಮರ್ಥ್ಯ ಸೇನ್‌ರನ್ನು ಗುರಿಯಾಗಿಸಿಕೊಂಡಿದ್ದಾರೆ - ಗಾಯಕ ಕಬೀರ್ ಸುಮನ್

ಬಿಜೆಪಿ ನೇಮಿಸಿದ ಕುಲಪತಿ ಅಮರ್ಥ್ಯ ಸೇನ್‌ರನ್ನು ಗುರಿಯಾಗಿಸಿಕೊಂಡಿದ್ದಾರೆ – ಗಾಯಕ ಕಬೀರ್ ಸುಮನ್

ಬಂಗಾಳಿಗರಿಗೆ ಬಿಜೆಪಿ ಮಾಡಿದ ಅವಮಾನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ನೋಬೆಲ್ ಪುರಸ್ಕೃತ ಅಮರ್ಥ್ಯ ಸೇನ್ ಅವರಿಗೆ ಮಾಡಿದ ಅವಮಾನ ಎಲ್ಲ ಬಂಗಾಳಿಗಳಿಗೆ ಮಾಡಿದ ಅವಮಾನ- ಹೋರಾಟಗಾರರು

- Advertisement -
- Advertisement -

“ಪಶ್ಚಿಮ ಬಂಗಾಳದ ವಿಶ್ವಭಾರತಿ ವಿವಿ ಆವರಣದಲ್ಲಿ ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್ ಅಕ್ರಮ ಜಮೀನು ಹೊಂದಿದ್ದಾರೆ” ಎಂದು ಆಡಳಿತ ಮಂಡಳಿ ಸರ್ಕಾರಕ್ಕೆ ಪತ್ರ ಬರೆದಿತ್ತು. ಇದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು, “ಬಂಗಾಳಿಗರಿಗೆ ಮಾಡಿದ ಅವಮಾನವನ್ನು ಸಹಿಸಲು ಸಾಧ್ಯವಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ವಿವಾದಕ್ಕೆ ಸಂಬಂಧಿಸಿದಂತೆ ಅಮರ್ಥ್ಯ ಸೇನ್ ಅವರನ್ನು ಬೆಂಬಲಿಸಿ ಹಾಗೂ ಕೇಂದ್ರೀಯ ವಿವಿ ಧೋರಣೆಯನ್ನು ಖಂಡಿಸಿ ಭಾನುವಾರ ವಿವಿಧ ಕ್ಷೇತ್ರಗಳ ಗಣ್ಯರು ಪ್ರತಿಭಟನೆ ನಡೆಸಿ, “ಕೇಂದ್ರೀಯ ವಿವಿಯ ಕ್ರಮ ಸರ್ವಾಧಿಕಾರಿ ಮತ್ತು ನಿರಂಕುಶ ಪ್ರಭುತ್ವ”ದ ಕ್ರಮ ಎಂದು ಟೀಕಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಕವಿಗಳಾದ ಜೋಯ್ ಗೋಸ್ವಾಮಿ ಮತ್ತು ಸುಬೋಧ್ ಸರ್ಕಾರ್, ಗಾಯಕ ಕಬೀರ್ ಸುಮನ್, ಚಿತ್ರ ಕಲಾವಿದರಾದ ಜೋಗನ್ ಚೌಧರಿ ಮತ್ತು ಸುವ ಪ್ರಸನ್ನ, ರಂಗಕಲಾವಿದರಾದ ಬ್ರಾತ್ಯ ಬಸು ಮತ್ತು ಇತರರು ಲಲಿತಕಲಾ ಅಕಾಡೆಮಿ ಆವರಣದಲ್ಲಿ ಸೇರಿ ಈ ವಿಷಯಕ್ಕೆ ಸಂಬಂಧಿಸಿದಂತೆ ದನಿ ಎತ್ತಿದರು.

“ಬಂಗಾಳಿಗರಿಗೆ ಬಿಜೆಪಿ ಮಾಡಿದ ಅವಮಾನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಅಮರ್ಥ್ಯ ಸೇನ್ ಅವರಿಗೆ ಮಾಡಿದ ಅವಮಾನ ಎಲ್ಲ ಬಂಗಾಳಿಗಳಿಗೆ ಮಾಡಿದ ಅವಮಾನ” ಎಂಬ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

ವಿಶ್ವಭಾರತಿ ಇತ್ತೀಚೆಗೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಪತ್ರ ಬರೆದು ಸಂಸ್ಥೆಯ ಭೂಮಿಯನ್ನು ಅಮರ್ಥ್ಯ ಸೇನ್ ಸೇರಿದಂತೆ ಹಲವು ಮಂದಿ ಖಾಸಗಿಯವರಿಗೆ ದಾಖಲೆ ಪತ್ರ ಮಾಡಿಕೊಡಲಾಗಿದೆ ಎಂದು ಆಪಾದಿಸಿತ್ತು.

ಇದನ್ನೂ ಓದಿ: ಖರ್ಗೆ ಮುಖ್ಯಮಂತ್ರಿ ಆಗುವುದನ್ನು ತಡೆದವರ ಹೆಸರು ಹೇಳಲಿ: ದೇವೇಗೌಡರಿಗೆ ಸಿದ್ದು ತಿರುಗೇಟು

ಆದರೆ, “ಆವರಣದಲ್ಲಿ ತಮ್ಮ ಸ್ವಾಧೀನದಲ್ಲಿರುವ ಜಮೀನನ್ನು ಧೀರ್ಘಾವಧಿ ಲೀಸ್ ಮೇಲೆ ನೀಡಲಾಗಿದೆ. ಈ ಲೀಸ್ ಅವಧಿ ಮುಕ್ತಾಯದ ಹಂತದಲ್ಲಿದೆ” ಎಂದು ಅಮರ್ಥ್ಯ ಸೇನ್ ಸ್ಪಷ್ಟನೆ ನೀಡಿದ್ದರು.

“ಅಮರ್ಥ್ಯ ಸೇನ್ ಅವರಂಥ ವ್ಯಕ್ತಿಗಳ ಬಗ್ಗೆ ವಿಶ್ವಭಾರತಿಯ ನಡೆ ಸರ್ವಾಧಿಕಾರಿ ಧೋರಣೆ ಮತ್ತು ನಿರಂಕುಶ ಪ್ರಭುತ್ವವನ್ನು ಸೂಚಿಸುತ್ತದೆ. ನಾವೆಲ್ಲರೂ ಸೇನ್ ಅವರ ಬೆಂಬಲಕ್ಕೆ ನಿಲ್ಲುತ್ತೇವೆ” ಎಂದು ಗೋಸ್ವಾಮಿ ಹೇಳಿದರು.

“ಬಿಜೆಪಿ ನೇಮಕ ಮಾಡಿದ ಕುಲಪತಿಯವರು ಅಮರ್ಥ್ಯ ಸೇನ್ ಅವರನ್ನು ಗುರಿ ಮಾಡಿಕೊಂಡಿದ್ದಾರೆ” ಎಂದು ಗಾಯಕ ಕಬೀರ್ ಸುಮನ್ ಆರೋಪಿಸಿದರು.


ಇದನ್ನೂ ಓದಿ: ‘ಗೋ ಕೊರೊನಾ ಗೋ’ ಖ್ಯಾತಿಯ ಕೇಂದ್ರ ಸಚಿವರ ಹೊಸ ಘೋಷಣೆ – ‘ನೋ ಕೊರೊನಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...