Homeಮುಖಪುಟಬಿಜೆಪಿ ನೇಮಿಸಿದ ಕುಲಪತಿ ಅಮರ್ಥ್ಯ ಸೇನ್‌ರನ್ನು ಗುರಿಯಾಗಿಸಿಕೊಂಡಿದ್ದಾರೆ - ಗಾಯಕ ಕಬೀರ್ ಸುಮನ್

ಬಿಜೆಪಿ ನೇಮಿಸಿದ ಕುಲಪತಿ ಅಮರ್ಥ್ಯ ಸೇನ್‌ರನ್ನು ಗುರಿಯಾಗಿಸಿಕೊಂಡಿದ್ದಾರೆ – ಗಾಯಕ ಕಬೀರ್ ಸುಮನ್

ಬಂಗಾಳಿಗರಿಗೆ ಬಿಜೆಪಿ ಮಾಡಿದ ಅವಮಾನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ನೋಬೆಲ್ ಪುರಸ್ಕೃತ ಅಮರ್ಥ್ಯ ಸೇನ್ ಅವರಿಗೆ ಮಾಡಿದ ಅವಮಾನ ಎಲ್ಲ ಬಂಗಾಳಿಗಳಿಗೆ ಮಾಡಿದ ಅವಮಾನ- ಹೋರಾಟಗಾರರು

- Advertisement -
- Advertisement -

“ಪಶ್ಚಿಮ ಬಂಗಾಳದ ವಿಶ್ವಭಾರತಿ ವಿವಿ ಆವರಣದಲ್ಲಿ ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್ ಅಕ್ರಮ ಜಮೀನು ಹೊಂದಿದ್ದಾರೆ” ಎಂದು ಆಡಳಿತ ಮಂಡಳಿ ಸರ್ಕಾರಕ್ಕೆ ಪತ್ರ ಬರೆದಿತ್ತು. ಇದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು, “ಬಂಗಾಳಿಗರಿಗೆ ಮಾಡಿದ ಅವಮಾನವನ್ನು ಸಹಿಸಲು ಸಾಧ್ಯವಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ವಿವಾದಕ್ಕೆ ಸಂಬಂಧಿಸಿದಂತೆ ಅಮರ್ಥ್ಯ ಸೇನ್ ಅವರನ್ನು ಬೆಂಬಲಿಸಿ ಹಾಗೂ ಕೇಂದ್ರೀಯ ವಿವಿ ಧೋರಣೆಯನ್ನು ಖಂಡಿಸಿ ಭಾನುವಾರ ವಿವಿಧ ಕ್ಷೇತ್ರಗಳ ಗಣ್ಯರು ಪ್ರತಿಭಟನೆ ನಡೆಸಿ, “ಕೇಂದ್ರೀಯ ವಿವಿಯ ಕ್ರಮ ಸರ್ವಾಧಿಕಾರಿ ಮತ್ತು ನಿರಂಕುಶ ಪ್ರಭುತ್ವ”ದ ಕ್ರಮ ಎಂದು ಟೀಕಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಕವಿಗಳಾದ ಜೋಯ್ ಗೋಸ್ವಾಮಿ ಮತ್ತು ಸುಬೋಧ್ ಸರ್ಕಾರ್, ಗಾಯಕ ಕಬೀರ್ ಸುಮನ್, ಚಿತ್ರ ಕಲಾವಿದರಾದ ಜೋಗನ್ ಚೌಧರಿ ಮತ್ತು ಸುವ ಪ್ರಸನ್ನ, ರಂಗಕಲಾವಿದರಾದ ಬ್ರಾತ್ಯ ಬಸು ಮತ್ತು ಇತರರು ಲಲಿತಕಲಾ ಅಕಾಡೆಮಿ ಆವರಣದಲ್ಲಿ ಸೇರಿ ಈ ವಿಷಯಕ್ಕೆ ಸಂಬಂಧಿಸಿದಂತೆ ದನಿ ಎತ್ತಿದರು.

“ಬಂಗಾಳಿಗರಿಗೆ ಬಿಜೆಪಿ ಮಾಡಿದ ಅವಮಾನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಅಮರ್ಥ್ಯ ಸೇನ್ ಅವರಿಗೆ ಮಾಡಿದ ಅವಮಾನ ಎಲ್ಲ ಬಂಗಾಳಿಗಳಿಗೆ ಮಾಡಿದ ಅವಮಾನ” ಎಂಬ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

ವಿಶ್ವಭಾರತಿ ಇತ್ತೀಚೆಗೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಪತ್ರ ಬರೆದು ಸಂಸ್ಥೆಯ ಭೂಮಿಯನ್ನು ಅಮರ್ಥ್ಯ ಸೇನ್ ಸೇರಿದಂತೆ ಹಲವು ಮಂದಿ ಖಾಸಗಿಯವರಿಗೆ ದಾಖಲೆ ಪತ್ರ ಮಾಡಿಕೊಡಲಾಗಿದೆ ಎಂದು ಆಪಾದಿಸಿತ್ತು.

ಇದನ್ನೂ ಓದಿ: ಖರ್ಗೆ ಮುಖ್ಯಮಂತ್ರಿ ಆಗುವುದನ್ನು ತಡೆದವರ ಹೆಸರು ಹೇಳಲಿ: ದೇವೇಗೌಡರಿಗೆ ಸಿದ್ದು ತಿರುಗೇಟು

ಆದರೆ, “ಆವರಣದಲ್ಲಿ ತಮ್ಮ ಸ್ವಾಧೀನದಲ್ಲಿರುವ ಜಮೀನನ್ನು ಧೀರ್ಘಾವಧಿ ಲೀಸ್ ಮೇಲೆ ನೀಡಲಾಗಿದೆ. ಈ ಲೀಸ್ ಅವಧಿ ಮುಕ್ತಾಯದ ಹಂತದಲ್ಲಿದೆ” ಎಂದು ಅಮರ್ಥ್ಯ ಸೇನ್ ಸ್ಪಷ್ಟನೆ ನೀಡಿದ್ದರು.

“ಅಮರ್ಥ್ಯ ಸೇನ್ ಅವರಂಥ ವ್ಯಕ್ತಿಗಳ ಬಗ್ಗೆ ವಿಶ್ವಭಾರತಿಯ ನಡೆ ಸರ್ವಾಧಿಕಾರಿ ಧೋರಣೆ ಮತ್ತು ನಿರಂಕುಶ ಪ್ರಭುತ್ವವನ್ನು ಸೂಚಿಸುತ್ತದೆ. ನಾವೆಲ್ಲರೂ ಸೇನ್ ಅವರ ಬೆಂಬಲಕ್ಕೆ ನಿಲ್ಲುತ್ತೇವೆ” ಎಂದು ಗೋಸ್ವಾಮಿ ಹೇಳಿದರು.

“ಬಿಜೆಪಿ ನೇಮಕ ಮಾಡಿದ ಕುಲಪತಿಯವರು ಅಮರ್ಥ್ಯ ಸೇನ್ ಅವರನ್ನು ಗುರಿ ಮಾಡಿಕೊಂಡಿದ್ದಾರೆ” ಎಂದು ಗಾಯಕ ಕಬೀರ್ ಸುಮನ್ ಆರೋಪಿಸಿದರು.


ಇದನ್ನೂ ಓದಿ: ‘ಗೋ ಕೊರೊನಾ ಗೋ’ ಖ್ಯಾತಿಯ ಕೇಂದ್ರ ಸಚಿವರ ಹೊಸ ಘೋಷಣೆ – ‘ನೋ ಕೊರೊನಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...