Homeಮುಖಪುಟಬಿಜೆಪಿ ನೇಮಿಸಿದ ಕುಲಪತಿ ಅಮರ್ಥ್ಯ ಸೇನ್‌ರನ್ನು ಗುರಿಯಾಗಿಸಿಕೊಂಡಿದ್ದಾರೆ - ಗಾಯಕ ಕಬೀರ್ ಸುಮನ್

ಬಿಜೆಪಿ ನೇಮಿಸಿದ ಕುಲಪತಿ ಅಮರ್ಥ್ಯ ಸೇನ್‌ರನ್ನು ಗುರಿಯಾಗಿಸಿಕೊಂಡಿದ್ದಾರೆ – ಗಾಯಕ ಕಬೀರ್ ಸುಮನ್

ಬಂಗಾಳಿಗರಿಗೆ ಬಿಜೆಪಿ ಮಾಡಿದ ಅವಮಾನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ನೋಬೆಲ್ ಪುರಸ್ಕೃತ ಅಮರ್ಥ್ಯ ಸೇನ್ ಅವರಿಗೆ ಮಾಡಿದ ಅವಮಾನ ಎಲ್ಲ ಬಂಗಾಳಿಗಳಿಗೆ ಮಾಡಿದ ಅವಮಾನ- ಹೋರಾಟಗಾರರು

- Advertisement -
- Advertisement -

“ಪಶ್ಚಿಮ ಬಂಗಾಳದ ವಿಶ್ವಭಾರತಿ ವಿವಿ ಆವರಣದಲ್ಲಿ ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್ ಅಕ್ರಮ ಜಮೀನು ಹೊಂದಿದ್ದಾರೆ” ಎಂದು ಆಡಳಿತ ಮಂಡಳಿ ಸರ್ಕಾರಕ್ಕೆ ಪತ್ರ ಬರೆದಿತ್ತು. ಇದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು, “ಬಂಗಾಳಿಗರಿಗೆ ಮಾಡಿದ ಅವಮಾನವನ್ನು ಸಹಿಸಲು ಸಾಧ್ಯವಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ವಿವಾದಕ್ಕೆ ಸಂಬಂಧಿಸಿದಂತೆ ಅಮರ್ಥ್ಯ ಸೇನ್ ಅವರನ್ನು ಬೆಂಬಲಿಸಿ ಹಾಗೂ ಕೇಂದ್ರೀಯ ವಿವಿ ಧೋರಣೆಯನ್ನು ಖಂಡಿಸಿ ಭಾನುವಾರ ವಿವಿಧ ಕ್ಷೇತ್ರಗಳ ಗಣ್ಯರು ಪ್ರತಿಭಟನೆ ನಡೆಸಿ, “ಕೇಂದ್ರೀಯ ವಿವಿಯ ಕ್ರಮ ಸರ್ವಾಧಿಕಾರಿ ಮತ್ತು ನಿರಂಕುಶ ಪ್ರಭುತ್ವ”ದ ಕ್ರಮ ಎಂದು ಟೀಕಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಕವಿಗಳಾದ ಜೋಯ್ ಗೋಸ್ವಾಮಿ ಮತ್ತು ಸುಬೋಧ್ ಸರ್ಕಾರ್, ಗಾಯಕ ಕಬೀರ್ ಸುಮನ್, ಚಿತ್ರ ಕಲಾವಿದರಾದ ಜೋಗನ್ ಚೌಧರಿ ಮತ್ತು ಸುವ ಪ್ರಸನ್ನ, ರಂಗಕಲಾವಿದರಾದ ಬ್ರಾತ್ಯ ಬಸು ಮತ್ತು ಇತರರು ಲಲಿತಕಲಾ ಅಕಾಡೆಮಿ ಆವರಣದಲ್ಲಿ ಸೇರಿ ಈ ವಿಷಯಕ್ಕೆ ಸಂಬಂಧಿಸಿದಂತೆ ದನಿ ಎತ್ತಿದರು.

“ಬಂಗಾಳಿಗರಿಗೆ ಬಿಜೆಪಿ ಮಾಡಿದ ಅವಮಾನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಅಮರ್ಥ್ಯ ಸೇನ್ ಅವರಿಗೆ ಮಾಡಿದ ಅವಮಾನ ಎಲ್ಲ ಬಂಗಾಳಿಗಳಿಗೆ ಮಾಡಿದ ಅವಮಾನ” ಎಂಬ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

ವಿಶ್ವಭಾರತಿ ಇತ್ತೀಚೆಗೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಪತ್ರ ಬರೆದು ಸಂಸ್ಥೆಯ ಭೂಮಿಯನ್ನು ಅಮರ್ಥ್ಯ ಸೇನ್ ಸೇರಿದಂತೆ ಹಲವು ಮಂದಿ ಖಾಸಗಿಯವರಿಗೆ ದಾಖಲೆ ಪತ್ರ ಮಾಡಿಕೊಡಲಾಗಿದೆ ಎಂದು ಆಪಾದಿಸಿತ್ತು.

ಇದನ್ನೂ ಓದಿ: ಖರ್ಗೆ ಮುಖ್ಯಮಂತ್ರಿ ಆಗುವುದನ್ನು ತಡೆದವರ ಹೆಸರು ಹೇಳಲಿ: ದೇವೇಗೌಡರಿಗೆ ಸಿದ್ದು ತಿರುಗೇಟು

ಆದರೆ, “ಆವರಣದಲ್ಲಿ ತಮ್ಮ ಸ್ವಾಧೀನದಲ್ಲಿರುವ ಜಮೀನನ್ನು ಧೀರ್ಘಾವಧಿ ಲೀಸ್ ಮೇಲೆ ನೀಡಲಾಗಿದೆ. ಈ ಲೀಸ್ ಅವಧಿ ಮುಕ್ತಾಯದ ಹಂತದಲ್ಲಿದೆ” ಎಂದು ಅಮರ್ಥ್ಯ ಸೇನ್ ಸ್ಪಷ್ಟನೆ ನೀಡಿದ್ದರು.

“ಅಮರ್ಥ್ಯ ಸೇನ್ ಅವರಂಥ ವ್ಯಕ್ತಿಗಳ ಬಗ್ಗೆ ವಿಶ್ವಭಾರತಿಯ ನಡೆ ಸರ್ವಾಧಿಕಾರಿ ಧೋರಣೆ ಮತ್ತು ನಿರಂಕುಶ ಪ್ರಭುತ್ವವನ್ನು ಸೂಚಿಸುತ್ತದೆ. ನಾವೆಲ್ಲರೂ ಸೇನ್ ಅವರ ಬೆಂಬಲಕ್ಕೆ ನಿಲ್ಲುತ್ತೇವೆ” ಎಂದು ಗೋಸ್ವಾಮಿ ಹೇಳಿದರು.

“ಬಿಜೆಪಿ ನೇಮಕ ಮಾಡಿದ ಕುಲಪತಿಯವರು ಅಮರ್ಥ್ಯ ಸೇನ್ ಅವರನ್ನು ಗುರಿ ಮಾಡಿಕೊಂಡಿದ್ದಾರೆ” ಎಂದು ಗಾಯಕ ಕಬೀರ್ ಸುಮನ್ ಆರೋಪಿಸಿದರು.


ಇದನ್ನೂ ಓದಿ: ‘ಗೋ ಕೊರೊನಾ ಗೋ’ ಖ್ಯಾತಿಯ ಕೇಂದ್ರ ಸಚಿವರ ಹೊಸ ಘೋಷಣೆ – ‘ನೋ ಕೊರೊನಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...