Homeಮುಖಪುಟಬಿಜೆಪಿ ನೇಮಿಸಿದ ಕುಲಪತಿ ಅಮರ್ಥ್ಯ ಸೇನ್‌ರನ್ನು ಗುರಿಯಾಗಿಸಿಕೊಂಡಿದ್ದಾರೆ - ಗಾಯಕ ಕಬೀರ್ ಸುಮನ್

ಬಿಜೆಪಿ ನೇಮಿಸಿದ ಕುಲಪತಿ ಅಮರ್ಥ್ಯ ಸೇನ್‌ರನ್ನು ಗುರಿಯಾಗಿಸಿಕೊಂಡಿದ್ದಾರೆ – ಗಾಯಕ ಕಬೀರ್ ಸುಮನ್

ಬಂಗಾಳಿಗರಿಗೆ ಬಿಜೆಪಿ ಮಾಡಿದ ಅವಮಾನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ನೋಬೆಲ್ ಪುರಸ್ಕೃತ ಅಮರ್ಥ್ಯ ಸೇನ್ ಅವರಿಗೆ ಮಾಡಿದ ಅವಮಾನ ಎಲ್ಲ ಬಂಗಾಳಿಗಳಿಗೆ ಮಾಡಿದ ಅವಮಾನ- ಹೋರಾಟಗಾರರು

- Advertisement -
- Advertisement -

“ಪಶ್ಚಿಮ ಬಂಗಾಳದ ವಿಶ್ವಭಾರತಿ ವಿವಿ ಆವರಣದಲ್ಲಿ ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್ ಅಕ್ರಮ ಜಮೀನು ಹೊಂದಿದ್ದಾರೆ” ಎಂದು ಆಡಳಿತ ಮಂಡಳಿ ಸರ್ಕಾರಕ್ಕೆ ಪತ್ರ ಬರೆದಿತ್ತು. ಇದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು, “ಬಂಗಾಳಿಗರಿಗೆ ಮಾಡಿದ ಅವಮಾನವನ್ನು ಸಹಿಸಲು ಸಾಧ್ಯವಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ವಿವಾದಕ್ಕೆ ಸಂಬಂಧಿಸಿದಂತೆ ಅಮರ್ಥ್ಯ ಸೇನ್ ಅವರನ್ನು ಬೆಂಬಲಿಸಿ ಹಾಗೂ ಕೇಂದ್ರೀಯ ವಿವಿ ಧೋರಣೆಯನ್ನು ಖಂಡಿಸಿ ಭಾನುವಾರ ವಿವಿಧ ಕ್ಷೇತ್ರಗಳ ಗಣ್ಯರು ಪ್ರತಿಭಟನೆ ನಡೆಸಿ, “ಕೇಂದ್ರೀಯ ವಿವಿಯ ಕ್ರಮ ಸರ್ವಾಧಿಕಾರಿ ಮತ್ತು ನಿರಂಕುಶ ಪ್ರಭುತ್ವ”ದ ಕ್ರಮ ಎಂದು ಟೀಕಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಕವಿಗಳಾದ ಜೋಯ್ ಗೋಸ್ವಾಮಿ ಮತ್ತು ಸುಬೋಧ್ ಸರ್ಕಾರ್, ಗಾಯಕ ಕಬೀರ್ ಸುಮನ್, ಚಿತ್ರ ಕಲಾವಿದರಾದ ಜೋಗನ್ ಚೌಧರಿ ಮತ್ತು ಸುವ ಪ್ರಸನ್ನ, ರಂಗಕಲಾವಿದರಾದ ಬ್ರಾತ್ಯ ಬಸು ಮತ್ತು ಇತರರು ಲಲಿತಕಲಾ ಅಕಾಡೆಮಿ ಆವರಣದಲ್ಲಿ ಸೇರಿ ಈ ವಿಷಯಕ್ಕೆ ಸಂಬಂಧಿಸಿದಂತೆ ದನಿ ಎತ್ತಿದರು.

“ಬಂಗಾಳಿಗರಿಗೆ ಬಿಜೆಪಿ ಮಾಡಿದ ಅವಮಾನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಅಮರ್ಥ್ಯ ಸೇನ್ ಅವರಿಗೆ ಮಾಡಿದ ಅವಮಾನ ಎಲ್ಲ ಬಂಗಾಳಿಗಳಿಗೆ ಮಾಡಿದ ಅವಮಾನ” ಎಂಬ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

ವಿಶ್ವಭಾರತಿ ಇತ್ತೀಚೆಗೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಪತ್ರ ಬರೆದು ಸಂಸ್ಥೆಯ ಭೂಮಿಯನ್ನು ಅಮರ್ಥ್ಯ ಸೇನ್ ಸೇರಿದಂತೆ ಹಲವು ಮಂದಿ ಖಾಸಗಿಯವರಿಗೆ ದಾಖಲೆ ಪತ್ರ ಮಾಡಿಕೊಡಲಾಗಿದೆ ಎಂದು ಆಪಾದಿಸಿತ್ತು.

ಇದನ್ನೂ ಓದಿ: ಖರ್ಗೆ ಮುಖ್ಯಮಂತ್ರಿ ಆಗುವುದನ್ನು ತಡೆದವರ ಹೆಸರು ಹೇಳಲಿ: ದೇವೇಗೌಡರಿಗೆ ಸಿದ್ದು ತಿರುಗೇಟು

ಆದರೆ, “ಆವರಣದಲ್ಲಿ ತಮ್ಮ ಸ್ವಾಧೀನದಲ್ಲಿರುವ ಜಮೀನನ್ನು ಧೀರ್ಘಾವಧಿ ಲೀಸ್ ಮೇಲೆ ನೀಡಲಾಗಿದೆ. ಈ ಲೀಸ್ ಅವಧಿ ಮುಕ್ತಾಯದ ಹಂತದಲ್ಲಿದೆ” ಎಂದು ಅಮರ್ಥ್ಯ ಸೇನ್ ಸ್ಪಷ್ಟನೆ ನೀಡಿದ್ದರು.

“ಅಮರ್ಥ್ಯ ಸೇನ್ ಅವರಂಥ ವ್ಯಕ್ತಿಗಳ ಬಗ್ಗೆ ವಿಶ್ವಭಾರತಿಯ ನಡೆ ಸರ್ವಾಧಿಕಾರಿ ಧೋರಣೆ ಮತ್ತು ನಿರಂಕುಶ ಪ್ರಭುತ್ವವನ್ನು ಸೂಚಿಸುತ್ತದೆ. ನಾವೆಲ್ಲರೂ ಸೇನ್ ಅವರ ಬೆಂಬಲಕ್ಕೆ ನಿಲ್ಲುತ್ತೇವೆ” ಎಂದು ಗೋಸ್ವಾಮಿ ಹೇಳಿದರು.

“ಬಿಜೆಪಿ ನೇಮಕ ಮಾಡಿದ ಕುಲಪತಿಯವರು ಅಮರ್ಥ್ಯ ಸೇನ್ ಅವರನ್ನು ಗುರಿ ಮಾಡಿಕೊಂಡಿದ್ದಾರೆ” ಎಂದು ಗಾಯಕ ಕಬೀರ್ ಸುಮನ್ ಆರೋಪಿಸಿದರು.


ಇದನ್ನೂ ಓದಿ: ‘ಗೋ ಕೊರೊನಾ ಗೋ’ ಖ್ಯಾತಿಯ ಕೇಂದ್ರ ಸಚಿವರ ಹೊಸ ಘೋಷಣೆ – ‘ನೋ ಕೊರೊನಾ…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ’;...

0
ಎಎಪಿ ಎನ್‌ಜಿಒ ಅಲ್ಲ, ಅದು ರಾಷ್ಟ್ರೀಯ ಪಕ್ಷ, ಕೇಜ್ರಿವಾಲ್ ಅವರು ಚುನಾವಣಾ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಪಂಜಾಬ್‌ ಸಿಎಂ ಭಗವಂತ್ ಸಿಂಗ್ ಮಾನ್...