Homeಮುಖಪುಟಬಿಜೆಪಿ ನೇಮಿಸಿದ ಕುಲಪತಿ ಅಮರ್ಥ್ಯ ಸೇನ್‌ರನ್ನು ಗುರಿಯಾಗಿಸಿಕೊಂಡಿದ್ದಾರೆ - ಗಾಯಕ ಕಬೀರ್ ಸುಮನ್

ಬಿಜೆಪಿ ನೇಮಿಸಿದ ಕುಲಪತಿ ಅಮರ್ಥ್ಯ ಸೇನ್‌ರನ್ನು ಗುರಿಯಾಗಿಸಿಕೊಂಡಿದ್ದಾರೆ – ಗಾಯಕ ಕಬೀರ್ ಸುಮನ್

ಬಂಗಾಳಿಗರಿಗೆ ಬಿಜೆಪಿ ಮಾಡಿದ ಅವಮಾನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ನೋಬೆಲ್ ಪುರಸ್ಕೃತ ಅಮರ್ಥ್ಯ ಸೇನ್ ಅವರಿಗೆ ಮಾಡಿದ ಅವಮಾನ ಎಲ್ಲ ಬಂಗಾಳಿಗಳಿಗೆ ಮಾಡಿದ ಅವಮಾನ- ಹೋರಾಟಗಾರರು

- Advertisement -
- Advertisement -

“ಪಶ್ಚಿಮ ಬಂಗಾಳದ ವಿಶ್ವಭಾರತಿ ವಿವಿ ಆವರಣದಲ್ಲಿ ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್ ಅಕ್ರಮ ಜಮೀನು ಹೊಂದಿದ್ದಾರೆ” ಎಂದು ಆಡಳಿತ ಮಂಡಳಿ ಸರ್ಕಾರಕ್ಕೆ ಪತ್ರ ಬರೆದಿತ್ತು. ಇದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು, “ಬಂಗಾಳಿಗರಿಗೆ ಮಾಡಿದ ಅವಮಾನವನ್ನು ಸಹಿಸಲು ಸಾಧ್ಯವಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ವಿವಾದಕ್ಕೆ ಸಂಬಂಧಿಸಿದಂತೆ ಅಮರ್ಥ್ಯ ಸೇನ್ ಅವರನ್ನು ಬೆಂಬಲಿಸಿ ಹಾಗೂ ಕೇಂದ್ರೀಯ ವಿವಿ ಧೋರಣೆಯನ್ನು ಖಂಡಿಸಿ ಭಾನುವಾರ ವಿವಿಧ ಕ್ಷೇತ್ರಗಳ ಗಣ್ಯರು ಪ್ರತಿಭಟನೆ ನಡೆಸಿ, “ಕೇಂದ್ರೀಯ ವಿವಿಯ ಕ್ರಮ ಸರ್ವಾಧಿಕಾರಿ ಮತ್ತು ನಿರಂಕುಶ ಪ್ರಭುತ್ವ”ದ ಕ್ರಮ ಎಂದು ಟೀಕಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಕವಿಗಳಾದ ಜೋಯ್ ಗೋಸ್ವಾಮಿ ಮತ್ತು ಸುಬೋಧ್ ಸರ್ಕಾರ್, ಗಾಯಕ ಕಬೀರ್ ಸುಮನ್, ಚಿತ್ರ ಕಲಾವಿದರಾದ ಜೋಗನ್ ಚೌಧರಿ ಮತ್ತು ಸುವ ಪ್ರಸನ್ನ, ರಂಗಕಲಾವಿದರಾದ ಬ್ರಾತ್ಯ ಬಸು ಮತ್ತು ಇತರರು ಲಲಿತಕಲಾ ಅಕಾಡೆಮಿ ಆವರಣದಲ್ಲಿ ಸೇರಿ ಈ ವಿಷಯಕ್ಕೆ ಸಂಬಂಧಿಸಿದಂತೆ ದನಿ ಎತ್ತಿದರು.

“ಬಂಗಾಳಿಗರಿಗೆ ಬಿಜೆಪಿ ಮಾಡಿದ ಅವಮಾನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಅಮರ್ಥ್ಯ ಸೇನ್ ಅವರಿಗೆ ಮಾಡಿದ ಅವಮಾನ ಎಲ್ಲ ಬಂಗಾಳಿಗಳಿಗೆ ಮಾಡಿದ ಅವಮಾನ” ಎಂಬ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

ವಿಶ್ವಭಾರತಿ ಇತ್ತೀಚೆಗೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಪತ್ರ ಬರೆದು ಸಂಸ್ಥೆಯ ಭೂಮಿಯನ್ನು ಅಮರ್ಥ್ಯ ಸೇನ್ ಸೇರಿದಂತೆ ಹಲವು ಮಂದಿ ಖಾಸಗಿಯವರಿಗೆ ದಾಖಲೆ ಪತ್ರ ಮಾಡಿಕೊಡಲಾಗಿದೆ ಎಂದು ಆಪಾದಿಸಿತ್ತು.

ಇದನ್ನೂ ಓದಿ: ಖರ್ಗೆ ಮುಖ್ಯಮಂತ್ರಿ ಆಗುವುದನ್ನು ತಡೆದವರ ಹೆಸರು ಹೇಳಲಿ: ದೇವೇಗೌಡರಿಗೆ ಸಿದ್ದು ತಿರುಗೇಟು

ಆದರೆ, “ಆವರಣದಲ್ಲಿ ತಮ್ಮ ಸ್ವಾಧೀನದಲ್ಲಿರುವ ಜಮೀನನ್ನು ಧೀರ್ಘಾವಧಿ ಲೀಸ್ ಮೇಲೆ ನೀಡಲಾಗಿದೆ. ಈ ಲೀಸ್ ಅವಧಿ ಮುಕ್ತಾಯದ ಹಂತದಲ್ಲಿದೆ” ಎಂದು ಅಮರ್ಥ್ಯ ಸೇನ್ ಸ್ಪಷ್ಟನೆ ನೀಡಿದ್ದರು.

“ಅಮರ್ಥ್ಯ ಸೇನ್ ಅವರಂಥ ವ್ಯಕ್ತಿಗಳ ಬಗ್ಗೆ ವಿಶ್ವಭಾರತಿಯ ನಡೆ ಸರ್ವಾಧಿಕಾರಿ ಧೋರಣೆ ಮತ್ತು ನಿರಂಕುಶ ಪ್ರಭುತ್ವವನ್ನು ಸೂಚಿಸುತ್ತದೆ. ನಾವೆಲ್ಲರೂ ಸೇನ್ ಅವರ ಬೆಂಬಲಕ್ಕೆ ನಿಲ್ಲುತ್ತೇವೆ” ಎಂದು ಗೋಸ್ವಾಮಿ ಹೇಳಿದರು.

“ಬಿಜೆಪಿ ನೇಮಕ ಮಾಡಿದ ಕುಲಪತಿಯವರು ಅಮರ್ಥ್ಯ ಸೇನ್ ಅವರನ್ನು ಗುರಿ ಮಾಡಿಕೊಂಡಿದ್ದಾರೆ” ಎಂದು ಗಾಯಕ ಕಬೀರ್ ಸುಮನ್ ಆರೋಪಿಸಿದರು.


ಇದನ್ನೂ ಓದಿ: ‘ಗೋ ಕೊರೊನಾ ಗೋ’ ಖ್ಯಾತಿಯ ಕೇಂದ್ರ ಸಚಿವರ ಹೊಸ ಘೋಷಣೆ – ‘ನೋ ಕೊರೊನಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...