Homeಮುಖಪುಟಅಂಬೇಡ್ಕರ್‌ಗೆ ಅವಮಾನ | ಅಮಿತ್ ಶಾ ವಿರುದ್ಧ ಟಿಎಂಸಿಯಿಂದ ಹಕ್ಕುಚ್ಯುತಿ ನೋಟಿಸ್

ಅಂಬೇಡ್ಕರ್‌ಗೆ ಅವಮಾನ | ಅಮಿತ್ ಶಾ ವಿರುದ್ಧ ಟಿಎಂಸಿಯಿಂದ ಹಕ್ಕುಚ್ಯುತಿ ನೋಟಿಸ್

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ವಿರುದ್ಧ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ವಿರುದ್ಧ ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ನಾಯಕ ಡೆರೆಕ್ ಒ’ಬ್ರೇನ್ ಬುಧವಾರ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜ್ಯಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳ ನಿಯಮ 187 ರ ಅಡಿಯಲ್ಲಿ ನೋಟಿಸ್ ಸಲ್ಲಿಸಲಾಗಿದೆ ಎಂದು ವರದಿಯಾಗಿದೆ. ಅಂಬೇಡ್ಕರ್‌ಗೆ ಅವಮಾನ

ಸಂವಿಧಾನದ 75 ವರ್ಷಗಳ ಕುರಿತ ಚರ್ಚೆಗೆ ಉತ್ತರಿಸುತ್ತಾ ಗೃಹ ಸಚಿವರು ಮಂಗಳವಾರ ಮೇಲ್ಮನೆಯಲ್ಲಿ ನೀಡಿದ ಹೇಳಿಕೆಯನ್ನೂ ನೋಟಿಸ್ ಉಲ್ಲೇಖಿಸಿದೆ. ಲೋಕಸಭೆ ಮತ್ತು ರಾಜ್ಯಸಭೆಗಳೆರಡೂ ಕಾಂಗ್ರೆಸ್ ಮತ್ತು ಇತರ ಕೆಲವು ವಿರೋಧ ಪಕ್ಷಗಳಿಂದ ಅಂಬೇಡ್ಕರ್ ಅವರನ್ನು ಅವಮಾನಿಸಿದ ಆರೋಪದ ಮೇಲೆ ಪ್ರತಿಭಟನೆಗೆ ಸಾಕ್ಷಿಯಾದವು. ಇದರ ಪರಿಣಾಮವಾಗಿ ಉಭಯ ಸದನಗಳನ್ನು ಮುಂದೂಡಲಾಯಿತು. ಅಂಬೇಡ್ಕರ್‌ಗೆ ಅವಮಾನ

ಅಂಬೇಡ್ಕರ್ ಹೆಸರನ್ನು ಪದೇ ಪದೇ ಹೇಳಿಕೊಳ್ಳುತ್ತಿರುವ ಕಾಂಗ್ರೆಸ್ ಅನ್ನು ಟೀಕಿಸಿದ್ದ ಅಮಿತ್ ಶಾ, ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ, ಏಳು ಜನ್ಮಗಳಲ್ಲೂ ಸ್ವರ್ಗದಲ್ಲಿ ಸ್ಥಾನ ಪಡೆಯಬಹುದಿತ್ತು ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅಭಿ ಏಕ್ ಫ್ಯಾಶನ್ ಹೋ ಗಯಾ ಹೈ – ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್. ಇತ್ನಾ ನಾಮ್ ಅಗರ್ ಭಗವಾನ್ ಕಾ ಲೇತೆ ತೋ ಸಾತ್ ಜನ್ಮೋನ್ ತಕ್ ಸ್ವರ್ಗ್ ಮಿಲ್ ಜಾತಾ” (ಈ ಒಂದು ಫ್ಯಾಶನ್ ಆಗಿ ಹೋಗಿದೆ. ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್… ಇಷ್ಟು ಬಾರಿ ಭಗವಂತನ ಹೆಸರನ್ನು ಹೇಳಿದ್ದರೆ, ಏಳು ಜನ್ಮಕ್ಕೂ ಸ್ವರ್ಗ ಸಿಗುತ್ತಿತ್ತು) ಎಂದು ಅಮಿತ್ ಶಾ ರಾಜ್ಯ ಸಭೆಯಲ್ಲಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಈ ವೇಳೆ ಅವರು “ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ” ಎಂಬ ಎರಡು ದಿನಗಳ ಚರ್ಚೆಯ ಮುಕ್ತಾಯದಲ್ಲಿ ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಈ ನಡುವೆ ಅಮಿತ್ ಶಾ ಅವರ ಹೇಳಿಕೆಯನ್ನು ಟಿಎಂಪಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ವಿರೋಧ ವ್ಯಕ್ತಪಡಿಸಿದ್ದು, ಬಿ.ಆರ್. ಅಂಬೇಡ್ಕರ್ ಕುರಿತು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಬಿಜೆಪಿಯ ಜಾತಿವಾದಿ ಮತ್ತು ದಲಿತ ವಿರೋಧಿ ಮನಸ್ಥಿತಿಯ ಪ್ರದರ್ಶನವಾಗಿದೆ ಎಂದು ಬುಧವಾರ ಹೇಳಿದ್ದಾರೆ. ಅಮಿತ್ ಶಾ ಅವರ ಹೇಳಿಕೆಗಳು ಅವಹೇಳನಕಾರಿ ಎಂದು ಕರೆದಿರುವ ಅವರು, ”ಅವರು ಹೇಳಿಕೆಯು ಮಾರ್ಗದರ್ಶನ ಮತ್ತು ಸ್ಫೂರ್ತಿಗಾಗಿ ಅಂಬೇಡ್ಕರ್‌ರನ್ನು ಎದುರು ನೋಡುವ ಲಕ್ಷಾಂತರ ಜನರಿಗೆ ಮಾಡಿದ ಅವಮಾನವಾಗಿದೆ” ಎಂದು ಹೇಳಿದ್ದಾರೆ.

“ಮುಖವಾಡ ಕಳಚಿದೆ! ಸಂಸತ್ತು ಸಂವಿಧಾನದ 75 ವೈಭವದ ವರ್ಷಗಳನ್ನು ಪ್ರತಿಬಿಂಬಿಸುತ್ತಿದೆ, ಗೃಹ ಸಚಿವ ಅಮಿತ್ ಶಾ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಈ ಸಂದರ್ಭವನ್ನು ಕಳಂಕಗೊಳಿಸಲು ನೋಡಿದ್ದಾರೆ. ಅದೂ ಕೂಡಾ ಪ್ರಜಾಪ್ರಭುತ್ವದ ದೇವಾಲಯದಲ್ಲಿ…” ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಇದು ಬಿಜೆಪಿಯ ಜಾತಿವಾದಿ ಮತ್ತು ದಲಿತ ವಿರೋಧಿ ಮನಸ್ಥಿತಿಯ ಪ್ರದರ್ಶನವಾಗಿದೆ. 240 ಸ್ಥಾನಗಳಿಗೆ ಇಳಿದಾಗಲೂ ಅವರು ಈ ರೀತಿ ವರ್ತಿಸಿದರೆ, ಒಂದು ವೇಳೆ ಅವರು 400 ಸ್ಥಾನಗಳು ಪಡೆದಿದ್ದರೆ ಅವರು ಉಂಟುಮಾಡುತ್ತಿದ್ದ ಹಾನಿಯನ್ನು ಊಹಿಸಿ. ಅವರು ಡಾ. ಅಂಬೇಡ್ಕರ್ ಅವರ ಕೊಡುಗೆಗಳ ಇತಿಹಾಸವನ್ನು ಸಂಪೂರ್ಣವಾಗಿ ಅಳಿಸಿ ಪುನಃ ಬರೆಯುತ್ತಿದ್ದರು” ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿಯ ಮೇಲೆ ದಾಳಿ ಮಾಡಿದ ಮಮತಾ ಅವರು, ದ್ವೇಷ ಮತ್ತು ಧರ್ಮಾಂಧತೆಯನ್ನು ಆಂತರಿಕಗೊಳಿಸಿದ ಪಕ್ಷದಿಂದ ಇನ್ನೇನು ನಿರೀಕ್ಷಿಸಬಹುದಿತ್ತು ಎಂದು ಹೇಳಿದ್ದಾರೆ. “ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗಳು ಮಾರ್ಗದರ್ಶನ ಮತ್ತು ಸ್ಫೂರ್ತಿಗಾಗಿ ಬಾಬಾಸಾಹೇಬರನ್ನು ಎದುರು ನೋಡುವ ಲಕ್ಷಾಂತರ ಜನರಿಗೆ ಮಾಡಿರುವ ಅವಮಾನವಾಗಿದೆ.” ಎಂದು ಅವರು ಹೇಳಿದ್ದಾರೆ.

“ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಪಿತಾಮಹ, ಈ ಅತಿರೇಕದ ಹೇಳಿಕೆಯು ಅವರ ಮೇಲಿನ ನೇರ ದಾಳಿ ಮಾತ್ರವಲ್ಲ, ಸಂವಿಧಾನದ ಕರಡು ಸಮಿತಿಯ ಎಲ್ಲಾ ಸದಸ್ಯರ ಮೇಲಿ ದಾಳಿಯಾಗಿದೆ. ಇದು ಎಲ್ಲಾ ಜಾತಿ, ಮತ, ಜನಾಂಗಗಳ ಸದಸ್ಯರೊಂದಿಗೆ ವಿವಿಧತೆಯಲ್ಲಿ ಭಾರತದ ಏಕತೆಯನ್ನು ಸಂಕೇತಿಸುತ್ತದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಅವರ ಪೋಸ್ಟ್ ಅನ್ನು ಹಂಚಿಕೊಂಡಿರುವ ಟಿಎಂಸಿ, ಅಮಿತ್ ಶಾ ಅವರ ಹೇಳಿಕೆ ನಾಲಿಗೆ ಸ್ಲಿಪ್ ಆಗಿ ಹೇಳಿದ್ದಲ್ಲ, ಬದಲಾಗಿ ಉದ್ದೇಶಪೂರ್ವಕವಾಗಿ ಹೇಳಿದ ಮಾತಾಗಿದೆ ಎಂದು ಹೇಳಿದೆ. ಸಂಸತ್ತಿನಲ್ಲಿ ಅಮಿತ್ ಶಾ ಅವರು ಬೇಷರತ್ ಕ್ಷಮೆಯಾಚಿಸಬೇಕು ಎಂದು ಟಿಎಂಸಿ ಒತ್ತಾಯಿಸಿದೆ.

ಇದನ್ನೂ ಓದಿ: ಬಡತನದಿಂದ ಬಳಲುತ್ತಿರುವವರಿಗೆ ಮಾತ್ರ ಮೀಸಲಾತಿ ನೀಡಬೇಕೇ ಎಂದು ಆಲೋಚಿಸಬೇಕು: ಎಚ್‌.ಡಿ. ದೇವೇಗೌಡ

ಬಡತನದಿಂದ ಬಳಲುತ್ತಿರುವವರಿಗೆ ಮಾತ್ರ ಮೀಸಲಾತಿ ನೀಡಬೇಕೇ ಎಂದು ಆಲೋಚಿಸಬೇಕು: ಎಚ್‌.ಡಿ. ದೇವೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...