Homeಕರ್ನಾಟಕಅಂಬೇಡ್ಕರ್‌ಗೆ ಅವಮಾನ| ಅಮಿತ್‌ ಶಾ ಪ್ರತಿಕೃತಿ ದಹಿಸಿ ಡಿಎಸ್‌ಎಸ್‌ ಪ್ರತಿಭಟನೆ

ಅಂಬೇಡ್ಕರ್‌ಗೆ ಅವಮಾನ| ಅಮಿತ್‌ ಶಾ ಪ್ರತಿಕೃತಿ ದಹಿಸಿ ಡಿಎಸ್‌ಎಸ್‌ ಪ್ರತಿಭಟನೆ

- Advertisement -
- Advertisement -

ವಿಶ್ವರತ್ನ, ಸಂವಿಧಾನ ಪಿತಾಮಹ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ರಾಜ್ಯಸಭೆ ಭಾಷಣದಲ್ಲಿ ಅಪಮಾನಿಸಿರುವ ಅಮಿತ್ ಶಾ ಅವರನ್ನು ಕೂಡಲೇ ಮಂತ್ರಿಗಿರಿಗಿಯಿಂದ ಕೆಳಗಿಳಿಸಬೇಕು ಹಾಗೂ ಅವರನ್ನ ಈ ದೇಶದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಹೇಳನಕಾರಿ ಪದ ಬಳಸಿರುವ ಸಿಟಿ ರವಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿತು.

ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಅಮಿತ್ ಶಾ ವಿರುದ್ಧ ಆಕ್ರೋಶ ಹೊರಹಾಕಿದ ದಸಂಸ ಕಾರ್ಯಕರ್ತರು, ‘ಅಮಿತ್ ಶಾ ಕೇಡಿ – ಹಾಕ್ರಿ ಅವನಿಗೆ ಬೇಡಿ’ ಎಂಬಿತ್ಯಾದಿ ಘೋಷಣೆ ಕೂಗಿದರು. ಚಪ್ಪಲಿ ಬಿಡುವ ಜಾಗದಲ್ಲಿ ಅಮಿತ್ ಶಾ ಮತ್ತು ಸಿಟಿ ರವಿ ಫೋಟೋಗಳನ್ನು ಇಟ್ಟು ಪ್ರತಿರೋಧ ತೋರಿದರು. ಅಮಿತ್ ಶಾ ಅವರ ಪ್ರತಿಕೃತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಗೃಹ ಸಚಿವ ಸ್ಥಾನದಿಂದ ಅಮಿತಾ ಶಾ ಅವರನ್ನ ಕೂಡಲೇ ವಜಾಗೊಳಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿ ಬೆಂಗಳೂರು ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, “ಬುದ್ಧ, ಬಸವ, ಅಂಬೇಡ್ಕರ್ ಕಟ್ಟಿಕೊಟ್ಟ ಸಮಾನತೆಯ ಹೋರಾಟವನ್ನು ಮುಂದುವರೆಸಬೇಕಾದರೆ ನಾವು ಹೆಚ್ಚಿನ ಬೌದ್ಧಿಕ ಶಕ್ತಿ ಬೆಳೆಸಿಕೊಳ್ಳಬೇಕು. ನಮ್ಮಲ್ಲಿ ವೈಚಾರಿಕ ಕ್ರಾಂತಿ ಬರದೇ ಇದ್ದರೆ ಹೋರಾಟ ಅಸಾಧ್ಯ. ನಾವು ಅಂಬೇಡ್ಕರ್ ಪೂಜೆ ಮಾಡಿದರೆ ಪ್ರಯೋಜನವಿಲ್ಲ. ಇತ್ತೀಚಿನ ದಿನಗಳಲ್ಲಿ ಹಬ್ಬ-ಜಾತ್ರೆಗಳಲ್ಲಿ ಅಂಬೇಡ್ಕರ್ ಮುಂದೆ ಡಿಜೆ ಹಾಕಿ ಕುಣಿಯುತ್ತಾರೆ; ಈ ಕುಡಿತ ಮತ್ತು ಕಣಿತ ನಮ್ಮಲ್ಲಿ ಸಾಮಾನ್ಯವಾದರೆ, ಸಮಾನತೆ ಹೋರಾಟ ಸಾಧ್ಯವಿಲ್ಲ” ಎಂದು ಎಚ್ಚರಿಕೆ ನೀಡಿದರು.

“ಬಿಜೆಪಿ-ಆರ್‌ಎಸ್‌ಎಸ್ ಸಾಮಾನತೆಯ ವಿರೋಧಿಗಳು. ಅವರಿಗೆ ಸಮಾನತೆ ಕಂಡರೆ ಆಗುವುದಿಲ್ಲ. ಆದ್ದರಿಂದ, ಅಂಬೇಡ್ಕರ್ ಅವರ ಹೋರಾಟವನ್ನು ನಾವು ಅರ್ಥ ಮಾಡಿಕೊಳ್ಳಬೇಕು” ಎಂದರು.

ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಅಮಿತ್ ಶಾನಂತಹ ಅಯೋಗ್ಯರು ಹೀಗೆ ಮಾತನಾಡುವ ಮೂಲಕ ಆಗಾಗ ತಮ್ಮ ವಿಕೃತಿ ಪ್ರದರ್ಶಿಸುತ್ತಾರೆ. ಹೊಸ ಪಾರ್ಲಿಮೆಂಟ್ ಉದ್ಘಾಟನೆಗೆ ಪ್ರಧಾನಿ ಸೆಂಗೋಲ್ ಹಿಡಿದು ಬಂದರು. ಕಂಚಿ ಸ್ವಾಮಿ ಅದನ್ನು ರಾಜದಂಡ ಎಂದು ಹೇಳಿದ್ದಾರೆ. ಆದರೆ, ಅದು ಪುರೋಹಿತರ ಶ್ರೇಷ್ಠ ದಂಡ. ಅದನ್ನು ತಂದು ಪಾರ್ಲಿಮೆಂಟ್‌ನಲ್ಲಿ ಇಟ್ಟಿದ್ದಾರೆ. ಸಂವಿಧಾನದ ಜಾಗದಲ್ಲಿ ಸೆಂಗೋಲ್ ಇದೆ, ಇದರ ಅರ್ಥ ಏನು? ನಮ್ಮ ಹಿರಿಯರ ಪ್ರತಿಭಟನೆ, ತ್ಯಾಗ ಏನಾಯಿತು” ಎಂದು ಆಕ್ರೋಶ ಹೊರಹಾಕಿದರು.

“ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕೊಳಕು ಮನಸ್ಥಿತಿಯವರು. ವಿಪಕ್ಷಗಳ ಸದಸ್ಯರು ಮಾತನಾಡುವಾಗ ಮುಖ ಕಿವುಚಿದಂತೆ ಇರುತ್ತೆ; ಬಿಜೆಪಿಯವರು ಮಾತನಾಡುವಾಗ ನಗುತ್ತಾನೆ. ಬಿಜೆಪಿಯವರು ಬರೀ ದ್ವೇಷ ಮಾತನಾಡುತ್ತಾರೆ, ಸುಳ್ಳು ಹೆಳುತ್ತಲೇ ಅದನ್ನು ಜನರ ಮನಸ್ಸಿನಲ್ಲೂ ತುಂಬುವಲ್ಲಿ ಯಶಸ್ವಿಯಾಗಿದ್ದಾರೆ” ಎಂದರು.

“ನಾವು ಎಲ್ಲಿ ಇರುತ್ತೇವೆಯೋ ಅಲ್ಲೆಲ್ಲಾ ಅಂಬೇಡ್ಕರ್, ಬುದ್ದ, ಪೆರಿಯಾರ್, ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ ಅವರನ್ನು ಅರ್ಥ ಮಾಡಿಕೊಳ್ಳಬೇಕು. ಏಕೆಂದರೆ, ಮುಂದೆ ಸಂಘರ್ಷ ಇನ್ನೂ ತೀವ್ರವಾಗುತ್ತದೆ. ಅವರು (ಬಿಜೆಪಿ-ಸಂಘಪರಿವಾರ) ಆಗಾಗ ನಮಗೆ ಟೆಸ್ಟ್‌ ಡೋಸ್‌ಗಳನ್ನು ಕೊಟ್ಟು ಪರೀಕ್ಷಿಸುತ್ತಿದ್ದಾರೆ. ಅದನ್ನು ಎದುರಿಸಲು ನಾವು ಸಿದ್ಧರಾಗಬೇಕು” ಎಂದರು.

“ಸುಳ್ಳು ಹೇಳುವ ಸಂಘಪರಿವಾರ ಮತ್ತು ಬಿಜೆಪಿ ಬಗ್ಗೆ ನಾವು ಹೆಚ್ಚೆಚ್ಚು ಎಚ್ಚರವಾಗಿರಬೇಕು. ನಮ್ಮಲ್ಲೂ ಕೆಲವರು ಬಿಜೆಪಿ ಜೊತೆ ಸೇರಿಕೊಂಡು ಅಧಿಕಾರಕ್ಕಾಗಿ ಗುಲಾಮಗಿರಿ ಮಾಡುತ್ತಿದ್ದಾರೆ. ‘ಚಪ್ಪಲಿ ಹೊಲೆಯುತ್ತಿದ್ದವರು ಪಾರ್ಲಿಮೆಂಟಿಗೆ ಬಂದು ನಮ್ಮ ಪಕ್ಕದಲ್ಲಿ ಕೂರತುತ್ತಿದ್ದಾರೆ’ ಎಂದು ನಾಯಕಿಯೊಬ್ಬರು ಹೇಳಿದ್ದಾರೆ. ಆದರೂ, ನಮ್ಮವರು ಅವರ ಪಕ್ಕದಲ್ಲೇ ಹೋಗಿ ಕೂರುತ್ತಿದ್ದಾರೆ” ಎಂದು ಅಸಮಾಧಾನ ಹೊರಹಾಕಿದರು.

“ಈಗ ಅವರು ಬರೀ ಮಸೀದಿಗಳನ್ನು ಹುಡುಕಿ ಹೊಡೆಯುತ್ತಿದ್ದಾರೆ. ನಮ್ಮ ಪ್ರಧಾನಿ ನೀರಿನ ಒಳಗೆ ಹೋಗಿ ನವಿಲುಗರಿ ಹಿಡಿದು ಕುಳಿತಿದ್ದರು. ಇಂತವರು ನಮ್ಮ ಜನನಾಯಕರು; ತಲೆಯಲ್ಲಿ ಮೆದುಳು ಇಲ್ಲವರು ನಮ್ಮ ಜನನಾಯಕರಾಗಿದ್ದಾರೆ” ಎಂದು ಲೇವಡಿ ಮಾಡಿದರು.

ದಸಂಸ ಮುಖಂಡರಾದ ಚಂದ್ರಿಕಾ ಮಾತನಾಡಿ, “ಹಿಂದುಳಿದ ವರ್ಗದವರಿಗೆ ಯಾವ ನ್ಯಾಯ ಕೊಡುತ್ತಿದ್ದಾರೆ ಸಂವಿಧಾನ ಜಾರಿಗೆ ತಂದವರಿಗೆ ಈಗ ಬೆಲೆ ಕೊಡುತ್ತಿಲ್ಲಾ.. ಇನ್ನು ನಮ್ಮ ಹೆಣ್ಣು ಮಕ್ಕಳಿಗೂ ಬೆಲೆ ಇಲ್ಲ. ಕೆಂದ್ರದ ಗೃಹ ಮಂತ್ರಿಯಾಗಿ ಈ ರೀತಿ ಮಾತನಾಡುವುದು ಎಷ್ಟು ಸರಿ. ನಾವು ಅವರಿಗೆ ಮತ ಹಾಕಿರುವುದು ನಮ್ಮನ್ನ ನಾವೇ ಪ್ರಶ್ನೆ ಮಾಡಿಕೊಳ್ಳಬೇಕಿದೆ. ಮಾನಗೆಟ್ಟ ಅಮಿತ್ ಶಾಗೆ ಮಾನಮರ್ಯಾದೆ ಇದ್ದರೆ ಈ ಕೂಡಲೇ ರಾಜಿನಾಮೆ ನೀಡಬೇಕು” ಎಂದು ಹೇಳಿದರು.

ದಸಂಸ ಮಹಿಳಾ ಘಟಕದ ರಾಜ್ಯ ಪ್ರಧಾನ ಸಂಚಾಲಕಿ ನಿರ್ಮಲಾ ಮಾತನಾಡಿ, “ನಮ್ಮ ಸಂವಿಧಾನ ಕತೃ ಅಂಬೇಡ್ಕರ್ ಅವರಿಗೆ ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಈ ಕೂಡಲೇ ಮಂತ್ರಿಗಿಯಿಂದ ವಜಾಗೊಳಿಸಬೇಕು. ದೇಶದ ಉನ್ನತ ಸ್ಥಾನದಲ್ಲಿರುವ ಅಮಿತ್ ಶಾ ಅಂಬೇಡ್ಕರ್ ಅವರ ಸಂಸತ್ ಕಲಾಪದ ಸಮಯದಲ್ಲಿ ಈ ರೀತಿ ಮಾತಾಡಿರುವುದು ನಿಜಕ್ಕೂ ಖಂಡನೀಯ. ಅಮಿತ್ ಶಾಗೆ ತಲೆಲಿ ಕೂದಲು ಇಲ್ಲ ಅಂತ ಗೊತ್ತಿತ್ತು. ಆದರೆ, ಆತನ ತಲೆಯಲ್ಲಿ ಮೆದುಳು ಕೂಡ ಇಲ್ಲ. ಬುದ್ದಿ ಇಲ್ಲದ ಅಮಿತ್ ಶಾ” ಎಂದರು.

“ಅಂಬೇಡ್ಕರ್ ಅನ್ನೋದು ಒಂದು ಪ್ಯಾಶನ್ ಅಂತ ಮುಟ್ಟಾಳ ಅಮಿತ್ ಶಾ ಹೇಳುತ್ತಾನೆ. ಆತನಿಗೆ ಏನು ಗೋತ್ತು. ಅಮಿತ್ ಶಾಗೆ ನಿಜಕ್ಕೂ ಮಾನ ಮರ್ಯಾದೆ ಇದ್ದರೆ, ದಲಿತರ ಮಲ ಮೂತ್ರದಿಂದ ತನ್ನ ನಾಲಿಗೆಯನ್ನ ಶುದ್ದ ಮಾಡಿಕೊಳ್ಳಲಿ. ಗೋ ಮೂತ್ರದಿಂದ ಅವರ ನಾಲಿಗೆ ಶುಚಿ ಹೋಗುವುದಿಲ್ಲ. ಕಲಾಪದಲ್ಲಿ ಒಂದು ಹೆಣ್ಣಿನ ಬಗ್ಗೆ (ಸಿಟಿ ರವಿ ಪ್ರಕರಣ) ನೀಚವಾಗಿ ಮಾತಾಡುತ್ತಾರೆ. ಇಡೀ ಪ್ರಪಂಚ ಈ ವಿಚಾರವಾಗಿ ರೊಚ್ಚಿಗೇಳಬೇಕು. ಇನ್ನೊಂದು ಬಾರಿ ಸಂವಿಧಾನದ ಬಗ್ಗೆ, ಅಂಬೇಡ್ಕರ್ ಅವರ ಬಗ್ಗೆ ಮಾತಾಡಿದ್ರೆ ಅವರಿಗೆ ಚಪ್ಪಲಿ ಹಾರ ಹಾಕುತ್ತೇವೆ. ಅಮಿತ್ ಶಾ ಅವರನ್ನ ಮಂತ್ರಿಗಿರಿಯಿಂದ ವಜಾ ಮಾಡೋದು ಅಷ್ಟೇ ಅಲ್ಲ; ಅವರನ್ನ ಗಲ್ಲಿಗೇರಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ; ‘ದ್ರಾವಿಡ ಚಳವಳಿ ಪಿತಾಮಹ ಪೆರಿಯಾರ್ ಮತ್ತು ವೈಕಂ ಸತ್ಯಾಗ್ರಹ..’; ಅಸ್ಪೃಶ್ಯತೆ ವಿರುದ್ಧದ ಅವಿಸ್ಮರಣೀಯ ಹೋರಾಟಕ್ಕೆ ನೂರು ವರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...