Homeಕರ್ನಾಟಕಅಂಬೇಡ್ಕರ್‌ಗೆ ಅವಮಾನ| ಅಮಿತ್‌ ಶಾ ಪ್ರತಿಕೃತಿ ದಹಿಸಿ ಡಿಎಸ್‌ಎಸ್‌ ಪ್ರತಿಭಟನೆ

ಅಂಬೇಡ್ಕರ್‌ಗೆ ಅವಮಾನ| ಅಮಿತ್‌ ಶಾ ಪ್ರತಿಕೃತಿ ದಹಿಸಿ ಡಿಎಸ್‌ಎಸ್‌ ಪ್ರತಿಭಟನೆ

- Advertisement -
- Advertisement -

ವಿಶ್ವರತ್ನ, ಸಂವಿಧಾನ ಪಿತಾಮಹ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ರಾಜ್ಯಸಭೆ ಭಾಷಣದಲ್ಲಿ ಅಪಮಾನಿಸಿರುವ ಅಮಿತ್ ಶಾ ಅವರನ್ನು ಕೂಡಲೇ ಮಂತ್ರಿಗಿರಿಗಿಯಿಂದ ಕೆಳಗಿಳಿಸಬೇಕು ಹಾಗೂ ಅವರನ್ನ ಈ ದೇಶದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಹೇಳನಕಾರಿ ಪದ ಬಳಸಿರುವ ಸಿಟಿ ರವಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿತು.

ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಅಮಿತ್ ಶಾ ವಿರುದ್ಧ ಆಕ್ರೋಶ ಹೊರಹಾಕಿದ ದಸಂಸ ಕಾರ್ಯಕರ್ತರು, ‘ಅಮಿತ್ ಶಾ ಕೇಡಿ – ಹಾಕ್ರಿ ಅವನಿಗೆ ಬೇಡಿ’ ಎಂಬಿತ್ಯಾದಿ ಘೋಷಣೆ ಕೂಗಿದರು. ಚಪ್ಪಲಿ ಬಿಡುವ ಜಾಗದಲ್ಲಿ ಅಮಿತ್ ಶಾ ಮತ್ತು ಸಿಟಿ ರವಿ ಫೋಟೋಗಳನ್ನು ಇಟ್ಟು ಪ್ರತಿರೋಧ ತೋರಿದರು. ಅಮಿತ್ ಶಾ ಅವರ ಪ್ರತಿಕೃತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಗೃಹ ಸಚಿವ ಸ್ಥಾನದಿಂದ ಅಮಿತಾ ಶಾ ಅವರನ್ನ ಕೂಡಲೇ ವಜಾಗೊಳಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿ ಬೆಂಗಳೂರು ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, “ಬುದ್ಧ, ಬಸವ, ಅಂಬೇಡ್ಕರ್ ಕಟ್ಟಿಕೊಟ್ಟ ಸಮಾನತೆಯ ಹೋರಾಟವನ್ನು ಮುಂದುವರೆಸಬೇಕಾದರೆ ನಾವು ಹೆಚ್ಚಿನ ಬೌದ್ಧಿಕ ಶಕ್ತಿ ಬೆಳೆಸಿಕೊಳ್ಳಬೇಕು. ನಮ್ಮಲ್ಲಿ ವೈಚಾರಿಕ ಕ್ರಾಂತಿ ಬರದೇ ಇದ್ದರೆ ಹೋರಾಟ ಅಸಾಧ್ಯ. ನಾವು ಅಂಬೇಡ್ಕರ್ ಪೂಜೆ ಮಾಡಿದರೆ ಪ್ರಯೋಜನವಿಲ್ಲ. ಇತ್ತೀಚಿನ ದಿನಗಳಲ್ಲಿ ಹಬ್ಬ-ಜಾತ್ರೆಗಳಲ್ಲಿ ಅಂಬೇಡ್ಕರ್ ಮುಂದೆ ಡಿಜೆ ಹಾಕಿ ಕುಣಿಯುತ್ತಾರೆ; ಈ ಕುಡಿತ ಮತ್ತು ಕಣಿತ ನಮ್ಮಲ್ಲಿ ಸಾಮಾನ್ಯವಾದರೆ, ಸಮಾನತೆ ಹೋರಾಟ ಸಾಧ್ಯವಿಲ್ಲ” ಎಂದು ಎಚ್ಚರಿಕೆ ನೀಡಿದರು.

“ಬಿಜೆಪಿ-ಆರ್‌ಎಸ್‌ಎಸ್ ಸಾಮಾನತೆಯ ವಿರೋಧಿಗಳು. ಅವರಿಗೆ ಸಮಾನತೆ ಕಂಡರೆ ಆಗುವುದಿಲ್ಲ. ಆದ್ದರಿಂದ, ಅಂಬೇಡ್ಕರ್ ಅವರ ಹೋರಾಟವನ್ನು ನಾವು ಅರ್ಥ ಮಾಡಿಕೊಳ್ಳಬೇಕು” ಎಂದರು.

ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಅಮಿತ್ ಶಾನಂತಹ ಅಯೋಗ್ಯರು ಹೀಗೆ ಮಾತನಾಡುವ ಮೂಲಕ ಆಗಾಗ ತಮ್ಮ ವಿಕೃತಿ ಪ್ರದರ್ಶಿಸುತ್ತಾರೆ. ಹೊಸ ಪಾರ್ಲಿಮೆಂಟ್ ಉದ್ಘಾಟನೆಗೆ ಪ್ರಧಾನಿ ಸೆಂಗೋಲ್ ಹಿಡಿದು ಬಂದರು. ಕಂಚಿ ಸ್ವಾಮಿ ಅದನ್ನು ರಾಜದಂಡ ಎಂದು ಹೇಳಿದ್ದಾರೆ. ಆದರೆ, ಅದು ಪುರೋಹಿತರ ಶ್ರೇಷ್ಠ ದಂಡ. ಅದನ್ನು ತಂದು ಪಾರ್ಲಿಮೆಂಟ್‌ನಲ್ಲಿ ಇಟ್ಟಿದ್ದಾರೆ. ಸಂವಿಧಾನದ ಜಾಗದಲ್ಲಿ ಸೆಂಗೋಲ್ ಇದೆ, ಇದರ ಅರ್ಥ ಏನು? ನಮ್ಮ ಹಿರಿಯರ ಪ್ರತಿಭಟನೆ, ತ್ಯಾಗ ಏನಾಯಿತು” ಎಂದು ಆಕ್ರೋಶ ಹೊರಹಾಕಿದರು.

“ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕೊಳಕು ಮನಸ್ಥಿತಿಯವರು. ವಿಪಕ್ಷಗಳ ಸದಸ್ಯರು ಮಾತನಾಡುವಾಗ ಮುಖ ಕಿವುಚಿದಂತೆ ಇರುತ್ತೆ; ಬಿಜೆಪಿಯವರು ಮಾತನಾಡುವಾಗ ನಗುತ್ತಾನೆ. ಬಿಜೆಪಿಯವರು ಬರೀ ದ್ವೇಷ ಮಾತನಾಡುತ್ತಾರೆ, ಸುಳ್ಳು ಹೆಳುತ್ತಲೇ ಅದನ್ನು ಜನರ ಮನಸ್ಸಿನಲ್ಲೂ ತುಂಬುವಲ್ಲಿ ಯಶಸ್ವಿಯಾಗಿದ್ದಾರೆ” ಎಂದರು.

“ನಾವು ಎಲ್ಲಿ ಇರುತ್ತೇವೆಯೋ ಅಲ್ಲೆಲ್ಲಾ ಅಂಬೇಡ್ಕರ್, ಬುದ್ದ, ಪೆರಿಯಾರ್, ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ ಅವರನ್ನು ಅರ್ಥ ಮಾಡಿಕೊಳ್ಳಬೇಕು. ಏಕೆಂದರೆ, ಮುಂದೆ ಸಂಘರ್ಷ ಇನ್ನೂ ತೀವ್ರವಾಗುತ್ತದೆ. ಅವರು (ಬಿಜೆಪಿ-ಸಂಘಪರಿವಾರ) ಆಗಾಗ ನಮಗೆ ಟೆಸ್ಟ್‌ ಡೋಸ್‌ಗಳನ್ನು ಕೊಟ್ಟು ಪರೀಕ್ಷಿಸುತ್ತಿದ್ದಾರೆ. ಅದನ್ನು ಎದುರಿಸಲು ನಾವು ಸಿದ್ಧರಾಗಬೇಕು” ಎಂದರು.

“ಸುಳ್ಳು ಹೇಳುವ ಸಂಘಪರಿವಾರ ಮತ್ತು ಬಿಜೆಪಿ ಬಗ್ಗೆ ನಾವು ಹೆಚ್ಚೆಚ್ಚು ಎಚ್ಚರವಾಗಿರಬೇಕು. ನಮ್ಮಲ್ಲೂ ಕೆಲವರು ಬಿಜೆಪಿ ಜೊತೆ ಸೇರಿಕೊಂಡು ಅಧಿಕಾರಕ್ಕಾಗಿ ಗುಲಾಮಗಿರಿ ಮಾಡುತ್ತಿದ್ದಾರೆ. ‘ಚಪ್ಪಲಿ ಹೊಲೆಯುತ್ತಿದ್ದವರು ಪಾರ್ಲಿಮೆಂಟಿಗೆ ಬಂದು ನಮ್ಮ ಪಕ್ಕದಲ್ಲಿ ಕೂರತುತ್ತಿದ್ದಾರೆ’ ಎಂದು ನಾಯಕಿಯೊಬ್ಬರು ಹೇಳಿದ್ದಾರೆ. ಆದರೂ, ನಮ್ಮವರು ಅವರ ಪಕ್ಕದಲ್ಲೇ ಹೋಗಿ ಕೂರುತ್ತಿದ್ದಾರೆ” ಎಂದು ಅಸಮಾಧಾನ ಹೊರಹಾಕಿದರು.

“ಈಗ ಅವರು ಬರೀ ಮಸೀದಿಗಳನ್ನು ಹುಡುಕಿ ಹೊಡೆಯುತ್ತಿದ್ದಾರೆ. ನಮ್ಮ ಪ್ರಧಾನಿ ನೀರಿನ ಒಳಗೆ ಹೋಗಿ ನವಿಲುಗರಿ ಹಿಡಿದು ಕುಳಿತಿದ್ದರು. ಇಂತವರು ನಮ್ಮ ಜನನಾಯಕರು; ತಲೆಯಲ್ಲಿ ಮೆದುಳು ಇಲ್ಲವರು ನಮ್ಮ ಜನನಾಯಕರಾಗಿದ್ದಾರೆ” ಎಂದು ಲೇವಡಿ ಮಾಡಿದರು.

ದಸಂಸ ಮುಖಂಡರಾದ ಚಂದ್ರಿಕಾ ಮಾತನಾಡಿ, “ಹಿಂದುಳಿದ ವರ್ಗದವರಿಗೆ ಯಾವ ನ್ಯಾಯ ಕೊಡುತ್ತಿದ್ದಾರೆ ಸಂವಿಧಾನ ಜಾರಿಗೆ ತಂದವರಿಗೆ ಈಗ ಬೆಲೆ ಕೊಡುತ್ತಿಲ್ಲಾ.. ಇನ್ನು ನಮ್ಮ ಹೆಣ್ಣು ಮಕ್ಕಳಿಗೂ ಬೆಲೆ ಇಲ್ಲ. ಕೆಂದ್ರದ ಗೃಹ ಮಂತ್ರಿಯಾಗಿ ಈ ರೀತಿ ಮಾತನಾಡುವುದು ಎಷ್ಟು ಸರಿ. ನಾವು ಅವರಿಗೆ ಮತ ಹಾಕಿರುವುದು ನಮ್ಮನ್ನ ನಾವೇ ಪ್ರಶ್ನೆ ಮಾಡಿಕೊಳ್ಳಬೇಕಿದೆ. ಮಾನಗೆಟ್ಟ ಅಮಿತ್ ಶಾಗೆ ಮಾನಮರ್ಯಾದೆ ಇದ್ದರೆ ಈ ಕೂಡಲೇ ರಾಜಿನಾಮೆ ನೀಡಬೇಕು” ಎಂದು ಹೇಳಿದರು.

ದಸಂಸ ಮಹಿಳಾ ಘಟಕದ ರಾಜ್ಯ ಪ್ರಧಾನ ಸಂಚಾಲಕಿ ನಿರ್ಮಲಾ ಮಾತನಾಡಿ, “ನಮ್ಮ ಸಂವಿಧಾನ ಕತೃ ಅಂಬೇಡ್ಕರ್ ಅವರಿಗೆ ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಈ ಕೂಡಲೇ ಮಂತ್ರಿಗಿಯಿಂದ ವಜಾಗೊಳಿಸಬೇಕು. ದೇಶದ ಉನ್ನತ ಸ್ಥಾನದಲ್ಲಿರುವ ಅಮಿತ್ ಶಾ ಅಂಬೇಡ್ಕರ್ ಅವರ ಸಂಸತ್ ಕಲಾಪದ ಸಮಯದಲ್ಲಿ ಈ ರೀತಿ ಮಾತಾಡಿರುವುದು ನಿಜಕ್ಕೂ ಖಂಡನೀಯ. ಅಮಿತ್ ಶಾಗೆ ತಲೆಲಿ ಕೂದಲು ಇಲ್ಲ ಅಂತ ಗೊತ್ತಿತ್ತು. ಆದರೆ, ಆತನ ತಲೆಯಲ್ಲಿ ಮೆದುಳು ಕೂಡ ಇಲ್ಲ. ಬುದ್ದಿ ಇಲ್ಲದ ಅಮಿತ್ ಶಾ” ಎಂದರು.

“ಅಂಬೇಡ್ಕರ್ ಅನ್ನೋದು ಒಂದು ಪ್ಯಾಶನ್ ಅಂತ ಮುಟ್ಟಾಳ ಅಮಿತ್ ಶಾ ಹೇಳುತ್ತಾನೆ. ಆತನಿಗೆ ಏನು ಗೋತ್ತು. ಅಮಿತ್ ಶಾಗೆ ನಿಜಕ್ಕೂ ಮಾನ ಮರ್ಯಾದೆ ಇದ್ದರೆ, ದಲಿತರ ಮಲ ಮೂತ್ರದಿಂದ ತನ್ನ ನಾಲಿಗೆಯನ್ನ ಶುದ್ದ ಮಾಡಿಕೊಳ್ಳಲಿ. ಗೋ ಮೂತ್ರದಿಂದ ಅವರ ನಾಲಿಗೆ ಶುಚಿ ಹೋಗುವುದಿಲ್ಲ. ಕಲಾಪದಲ್ಲಿ ಒಂದು ಹೆಣ್ಣಿನ ಬಗ್ಗೆ (ಸಿಟಿ ರವಿ ಪ್ರಕರಣ) ನೀಚವಾಗಿ ಮಾತಾಡುತ್ತಾರೆ. ಇಡೀ ಪ್ರಪಂಚ ಈ ವಿಚಾರವಾಗಿ ರೊಚ್ಚಿಗೇಳಬೇಕು. ಇನ್ನೊಂದು ಬಾರಿ ಸಂವಿಧಾನದ ಬಗ್ಗೆ, ಅಂಬೇಡ್ಕರ್ ಅವರ ಬಗ್ಗೆ ಮಾತಾಡಿದ್ರೆ ಅವರಿಗೆ ಚಪ್ಪಲಿ ಹಾರ ಹಾಕುತ್ತೇವೆ. ಅಮಿತ್ ಶಾ ಅವರನ್ನ ಮಂತ್ರಿಗಿರಿಯಿಂದ ವಜಾ ಮಾಡೋದು ಅಷ್ಟೇ ಅಲ್ಲ; ಅವರನ್ನ ಗಲ್ಲಿಗೇರಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ; ‘ದ್ರಾವಿಡ ಚಳವಳಿ ಪಿತಾಮಹ ಪೆರಿಯಾರ್ ಮತ್ತು ವೈಕಂ ಸತ್ಯಾಗ್ರಹ..’; ಅಸ್ಪೃಶ್ಯತೆ ವಿರುದ್ಧದ ಅವಿಸ್ಮರಣೀಯ ಹೋರಾಟಕ್ಕೆ ನೂರು ವರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...