Homeಮುಖಪುಟನ್ಯಾಯಮೂರ್ತಿ ಮುರಳೀಧರ್‌ಗೆ ಅವಮಾನ ಮಾಡಿದ್ದು ನ್ಯಾಯಾಂಗ ನಿಂದನೆಯಲ್ಲವೇ?

ನ್ಯಾಯಮೂರ್ತಿ ಮುರಳೀಧರ್‌ಗೆ ಅವಮಾನ ಮಾಡಿದ್ದು ನ್ಯಾಯಾಂಗ ನಿಂದನೆಯಲ್ಲವೇ?

- Advertisement -
- Advertisement -

ಖ್ಯಾತ ನ್ಯಾಯಮೂರ್ತಿಗಳಾದ ಮುರಳೀಧರ್‌ರವರನ್ನು ಬಿಜೆಪಿ ಬೆಂಬಲಿಗರಾದ ಗುರುಸ್ವಾಮಿ ಮತ್ತು ವಿವೇಕ್ ಅಗ್ನಿಹೋತ್ರಿಯವರು ದೇಶದ್ರೋಹಿಗಳ ಪರ ಇರುವವರು ಎಂದೆಲ್ಲಾ ಕರೆದು ಅವಮಾನ ಮಾಡಿದ್ದರು. ಆದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಏಕೆ ಪರಿಗಣಿಸಿಲ್ಲ ಎಂದು ಚಿಂತಕ ಶಿವಸುಂದರ್ ಪ್ರಶ್ನಿಸಿದ್ದಾರೆ.

ದೆಹಲಿ ಚುನಾವಣೆಯ ಸಂದರ್ಭದಲ್ಲಿ ಮತ್ತು ದೆಹಲಿ ಕೋಮುಗಲಭೆಗಳಲ್ಲಿ ಹಲವು ಬಿಜೆಪಿ ಮುಖಂಡರು ಬಹಿರಂಗವಾಗಿ ಕೋಮು ಪ್ರಚೋದಿತ ಹೇಳಿಕೆ ನೀಡಿದ್ದರು. ಆ ನಂತರ ಬಿಜೆಪಿಯ ನಾಯಕರ ಮೇಲೆ FIR ಹಾಕಲು ಕೂಡ ದೆಹಲಿ ಪೋಲೀಸರು ನಿರಾಕರಿಸಿದ್ದರು. ಆಗ ದೆಹಲಿ ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಕೂಡಲೇ ಅವರ ಮೇಲೆ FIR ದಾಖಲಿಸಬೇಕೆಂದು ಆದೇಶಿಸಿದ್ದು ನ್ಯಾಯಮೂರ್ತಿ ಮುರಳೀಧರ್. ಆ ಅಪರಾಧಕ್ಕಾಗಿ ಮೋದಿ ಸರ್ಕಾರದ “ಸಲಹೆ ಮೇರೆಗೆ” ಅವರನ್ನು ರಾತ್ರೋರಾತ್ರಿ ಪಂಜಾಬ್-ಹರ್ಯಾಣ ಹೈಕೋರ್ಟಿಗೆ ವರ್ಗಾವಣೆ ಮಾಡಲಾಯಿತು ಎಂದು ಶಿವಸುಂದರ್ ತಿಳಿಸಿದ್ದಾರೆ.

ನ್ಯಾಯಮೂರ್ತಿ ಮುರಳೀಧರ್ ಕಾಂಗ್ರೆಸ್ ಒಲವಿದ್ದವರೇನಲ್ಲ. ಸಿಖ್ ಹತ್ಯಾಕಾಂಡದಲ್ಲಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಗೆ ಕಠಿಣ ಶಿಕ್ಷೆಯನ್ನು ವಿಧಿಸಿದ್ದು ಕೂಡ ಇದೇ ನ್ಯಾಯಮೂರ್ತಿಗಳೇ… ತೃತೀಯ ಲಿಂಗಿಗಳ ಹಕ್ಕುಗಳನ್ನು ಎತ್ತಿಹಿಡಿದವರು ಹಾಗು ಮುಖ್ಯ ನ್ಯಾಯಮೂರ್ತಿಗಳ ಕಚೇರಿಯು RTI ಅಡಿ ತರಬೇಕೆಂದು ಆದೇಶಿಸಿದವರು, ಪಂಜಾಬ್ ಹೈಕೋರ್ಟಿನಲ್ಲಿ ವಕೀಲರು ತಮ್ಮನ್ನು “ಮೈ ಲಾರ್ಡ್” ಎಂದು ಸಂಬೋಧಿಸಬಾರದೆಂದು ವಿನಂತಿ ಮಾಡಿ ನ್ಯಾಯಾಂಗದಲ್ಲಿ ಮುಂದುವರೆದಿದ್ದ ವಸಾಹತುಶಾಹಿ ಪರಂಪರೆಯನ್ನು ನಿಲ್ಲಿಸಿದವರು….ಇದೇ ನ್ಯಾಯಮೂರ್ತಿಗಳೇ ಎಂದು ಶಿವಸುಂದರ್ ತಿಳಿಸಿದ್ದಾರೆ.

ಇಂಥಾ ನ್ಯಾಯನಿಷ್ಠುರ ನ್ಯಾಯಮೂರ್ತಿಯ ಮೇಲೆ- ಸಂಘಪರಿವಾರದ ಥಿಂಕ್ ಟ್ಯಾಂಕ್‌ನ ಸದಸ್ಯ ಹಾಗು “ತುಘಲಕ್ ” ಪತ್ರಿಕೆ ಸಂಪಾದಕ ಹಾಗು ಮೋದಿ ಸರ್ಕಾರ ಬಂದಮೇಲೆ RBI ನ ನಿರ್ದೇಶಕನಾಗಿಯೂ ನೇಮಕವಾಗಿರುವ- ಗುರುಸ್ವಾಮಿಯವರು ನ್ಯಾಯಮೂರ್ತಿ ಮುರಳೀಧರ ಅವರು “ದೇಶದ್ರೋಹಿ ಶಕ್ತಿಗಳ ಪರವಾಗಿರುವವರು” ಎಂಬರ್ಥದ ಟ್ವೀಟ್ ಮಾಡಿದ್ದರು.

ಗುರುಸ್ವಾಮಿ ಮಾತ್ರವಲ್ಲದೆ , “ಅರ್ಬನ್ ಸಂಘಿ” ಹಾಗೂ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಯಂತವರು ನೇರವಾಗಿ ನ್ಯಾಯಮೂರ್ತಿ ಅವರ ಮುರಳೀಧರ್ ಅವರ ಚಾರಿತ್ರ್ಯ ಹನನ ಮಾಡಲು ತೊಡಗಿದ್ದರು. ಆದರೆ ಸುಪ್ರೀಂ ಕೋರ್ಟ್ ಆಗಲಿ, ದೆಹಲಿ ಹೈಕೋರ್ಟು ಆಗಲಿ, ಪ್ರಶಾಂತ್ ಭೂಷಣ್ ಪ್ರಕರಣದಲ್ಲಿ ಮಾಡಿದಂತೆ ಗುರುಸ್ವಾಮಿಯ ವಿರುದ್ಧ ಸ್ವಯಂ ಪ್ರೇರಿತ ದೂರನ್ನೇನೂ ದಾಖಲಿಸಿಕೊಳ್ಳಲಿಲ್ಲ ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಬದಲಿಗೆ ರಾಜಶೇಖರ ರಾವ್ ಎಂಬ ವಕೀಲರು ಹೈಕೋರ್ಟಿನಲ್ಲಿ ಈ ಬಗ್ಗೆ ದೂರು ದಾಖಲಿಸಿದ ನಂತರ ಗುರುಸ್ವಾಮಿಯವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಲಾಯಿತು. ಗುರುಸ್ವಾಮಿಯವರು ಆ ನೋಟೀಸನ್ನು ಹಾಗೂ “ನ್ಯಾಯಾಂಗ ನಿಂದನೆ” ಯನ್ನು ಶಿಕ್ಷಿಸುವ ಕ್ರಮವನ್ನು ಕೂಡ ಕೂಡ ಗೇಲಿ ಮಾಡುತ್ತಾ ಮತ್ತೊಂದು ಟ್ವೀಟ್ ಮಾಡಿದರು. ಇಷ್ಟಾದರೂ, ಒಂದು ವರ್ಷಗಳ ಕಾಲ ದೆಹಲಿ ಹೈಕೋರ್ಟು ಯಾವ ಕ್ರಮವನ್ನು ಕೈಗೊಳ್ಳಲಿಲ್ಲ ಎಂದು ಶಿವಸುಂದರ್ ತಿಳಿಸಿದ್ದಾರೆ.

ಒಂದು ವರ್ಷದ ನಂತರ ಗುರುಸ್ವಾಮಿಯವರು ತನ್ನ ಟ್ವೀಟಿನ ಬಗ್ಗೆ ಯಾವ ಪಶ್ಚಾತ್ತಾಪವನ್ನು ವ್ಯಕ್ತಪಡಿಸಡಿದ್ದರೂ… ಕೇವಲ ಟ್ವೀಟನ್ನು ವಾಪಸ್ ತೆಗೆದುಕೊಳ್ಳಬೇಕೆಂಬ ಏಕೈಕ ಷರತ್ತಿನ ಮೇಲೆ ಅವರ ಮೇಲಿನ ನ್ಯಾಯಾಂಗ ನಿಂದನೆಯ ಕೇಸನ್ನು ಹೈಕೋರ್ಟ್ ರದ್ದುಮಾಡಿತು! ಇನ್ನು ವಿವೇಕ್ ಅಗ್ನಿಹೋತ್ರಿ ಇನ್ನಿತರರ ಮೇಲೆ ತಾನೇ ಕೊಟ್ಟ ನೋಟೀಸು ಏನಾಯಿತೆಂದು ವಿಚಾರಿಸಲು ಸಹ ನ್ಯಾಯಾಲಯ ಇನ್ನೂ ಮನಸ್ಸು ಮಾಡಿಲ್ಲ ಎಂದು ಶಿವಸುಂದರ್ ತಿಳಿಸಿದ್ದಾರೆ.

ಏಕೆಂದರೆ ಗುರುಮೂರ್ತಿ ಹಾಗು ವಿವೇಕ್ ಅಗ್ನಿಹೋತ್ರಿ ಸಂಘಪರಿವಾರದ ಕಣ್ಮಣಿಗಳು… ಆದರೆ, ಪ್ರಶಾಂತ್ ಭೂಷಣ್ ಮೋದಿ ಸರ್ಕಾರಕ್ಕೆ ಹಾಗು ಸಂಘಪರಿವಾರಕ್ಕೆ ಮಗ್ಗಲ ಮುಳ್ಳು.. ಆದ್ದರಿಂದ ಒಂದು ಕಣ್ಣಿಗೆ ಸುಪ್ರೀಂ ಬೆಣ್ಣೆ …ಒಂದು ಕಣ್ಣಿಗೆ ಸುಪ್ರೀಂ ಸುಣ್ಣ .. ಇದು ಸರಿಯೇ, ಯುವರ್ ಆನರ್? ಜಸ್ಟ್ ಆಸ್ಕಿಂಗ್ ಎಂದು ಶಿವಸುಂದರ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ; ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...