Homeಮುಖಪುಟನ್ಯಾಯಮೂರ್ತಿ ಮುರಳೀಧರ್‌ಗೆ ಅವಮಾನ ಮಾಡಿದ್ದು ನ್ಯಾಯಾಂಗ ನಿಂದನೆಯಲ್ಲವೇ?

ನ್ಯಾಯಮೂರ್ತಿ ಮುರಳೀಧರ್‌ಗೆ ಅವಮಾನ ಮಾಡಿದ್ದು ನ್ಯಾಯಾಂಗ ನಿಂದನೆಯಲ್ಲವೇ?

- Advertisement -
- Advertisement -

ಖ್ಯಾತ ನ್ಯಾಯಮೂರ್ತಿಗಳಾದ ಮುರಳೀಧರ್‌ರವರನ್ನು ಬಿಜೆಪಿ ಬೆಂಬಲಿಗರಾದ ಗುರುಸ್ವಾಮಿ ಮತ್ತು ವಿವೇಕ್ ಅಗ್ನಿಹೋತ್ರಿಯವರು ದೇಶದ್ರೋಹಿಗಳ ಪರ ಇರುವವರು ಎಂದೆಲ್ಲಾ ಕರೆದು ಅವಮಾನ ಮಾಡಿದ್ದರು. ಆದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಏಕೆ ಪರಿಗಣಿಸಿಲ್ಲ ಎಂದು ಚಿಂತಕ ಶಿವಸುಂದರ್ ಪ್ರಶ್ನಿಸಿದ್ದಾರೆ.

ದೆಹಲಿ ಚುನಾವಣೆಯ ಸಂದರ್ಭದಲ್ಲಿ ಮತ್ತು ದೆಹಲಿ ಕೋಮುಗಲಭೆಗಳಲ್ಲಿ ಹಲವು ಬಿಜೆಪಿ ಮುಖಂಡರು ಬಹಿರಂಗವಾಗಿ ಕೋಮು ಪ್ರಚೋದಿತ ಹೇಳಿಕೆ ನೀಡಿದ್ದರು. ಆ ನಂತರ ಬಿಜೆಪಿಯ ನಾಯಕರ ಮೇಲೆ FIR ಹಾಕಲು ಕೂಡ ದೆಹಲಿ ಪೋಲೀಸರು ನಿರಾಕರಿಸಿದ್ದರು. ಆಗ ದೆಹಲಿ ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಕೂಡಲೇ ಅವರ ಮೇಲೆ FIR ದಾಖಲಿಸಬೇಕೆಂದು ಆದೇಶಿಸಿದ್ದು ನ್ಯಾಯಮೂರ್ತಿ ಮುರಳೀಧರ್. ಆ ಅಪರಾಧಕ್ಕಾಗಿ ಮೋದಿ ಸರ್ಕಾರದ “ಸಲಹೆ ಮೇರೆಗೆ” ಅವರನ್ನು ರಾತ್ರೋರಾತ್ರಿ ಪಂಜಾಬ್-ಹರ್ಯಾಣ ಹೈಕೋರ್ಟಿಗೆ ವರ್ಗಾವಣೆ ಮಾಡಲಾಯಿತು ಎಂದು ಶಿವಸುಂದರ್ ತಿಳಿಸಿದ್ದಾರೆ.

ನ್ಯಾಯಮೂರ್ತಿ ಮುರಳೀಧರ್ ಕಾಂಗ್ರೆಸ್ ಒಲವಿದ್ದವರೇನಲ್ಲ. ಸಿಖ್ ಹತ್ಯಾಕಾಂಡದಲ್ಲಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಗೆ ಕಠಿಣ ಶಿಕ್ಷೆಯನ್ನು ವಿಧಿಸಿದ್ದು ಕೂಡ ಇದೇ ನ್ಯಾಯಮೂರ್ತಿಗಳೇ… ತೃತೀಯ ಲಿಂಗಿಗಳ ಹಕ್ಕುಗಳನ್ನು ಎತ್ತಿಹಿಡಿದವರು ಹಾಗು ಮುಖ್ಯ ನ್ಯಾಯಮೂರ್ತಿಗಳ ಕಚೇರಿಯು RTI ಅಡಿ ತರಬೇಕೆಂದು ಆದೇಶಿಸಿದವರು, ಪಂಜಾಬ್ ಹೈಕೋರ್ಟಿನಲ್ಲಿ ವಕೀಲರು ತಮ್ಮನ್ನು “ಮೈ ಲಾರ್ಡ್” ಎಂದು ಸಂಬೋಧಿಸಬಾರದೆಂದು ವಿನಂತಿ ಮಾಡಿ ನ್ಯಾಯಾಂಗದಲ್ಲಿ ಮುಂದುವರೆದಿದ್ದ ವಸಾಹತುಶಾಹಿ ಪರಂಪರೆಯನ್ನು ನಿಲ್ಲಿಸಿದವರು….ಇದೇ ನ್ಯಾಯಮೂರ್ತಿಗಳೇ ಎಂದು ಶಿವಸುಂದರ್ ತಿಳಿಸಿದ್ದಾರೆ.

ಇಂಥಾ ನ್ಯಾಯನಿಷ್ಠುರ ನ್ಯಾಯಮೂರ್ತಿಯ ಮೇಲೆ- ಸಂಘಪರಿವಾರದ ಥಿಂಕ್ ಟ್ಯಾಂಕ್‌ನ ಸದಸ್ಯ ಹಾಗು “ತುಘಲಕ್ ” ಪತ್ರಿಕೆ ಸಂಪಾದಕ ಹಾಗು ಮೋದಿ ಸರ್ಕಾರ ಬಂದಮೇಲೆ RBI ನ ನಿರ್ದೇಶಕನಾಗಿಯೂ ನೇಮಕವಾಗಿರುವ- ಗುರುಸ್ವಾಮಿಯವರು ನ್ಯಾಯಮೂರ್ತಿ ಮುರಳೀಧರ ಅವರು “ದೇಶದ್ರೋಹಿ ಶಕ್ತಿಗಳ ಪರವಾಗಿರುವವರು” ಎಂಬರ್ಥದ ಟ್ವೀಟ್ ಮಾಡಿದ್ದರು.

ಗುರುಸ್ವಾಮಿ ಮಾತ್ರವಲ್ಲದೆ , “ಅರ್ಬನ್ ಸಂಘಿ” ಹಾಗೂ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಯಂತವರು ನೇರವಾಗಿ ನ್ಯಾಯಮೂರ್ತಿ ಅವರ ಮುರಳೀಧರ್ ಅವರ ಚಾರಿತ್ರ್ಯ ಹನನ ಮಾಡಲು ತೊಡಗಿದ್ದರು. ಆದರೆ ಸುಪ್ರೀಂ ಕೋರ್ಟ್ ಆಗಲಿ, ದೆಹಲಿ ಹೈಕೋರ್ಟು ಆಗಲಿ, ಪ್ರಶಾಂತ್ ಭೂಷಣ್ ಪ್ರಕರಣದಲ್ಲಿ ಮಾಡಿದಂತೆ ಗುರುಸ್ವಾಮಿಯ ವಿರುದ್ಧ ಸ್ವಯಂ ಪ್ರೇರಿತ ದೂರನ್ನೇನೂ ದಾಖಲಿಸಿಕೊಳ್ಳಲಿಲ್ಲ ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಬದಲಿಗೆ ರಾಜಶೇಖರ ರಾವ್ ಎಂಬ ವಕೀಲರು ಹೈಕೋರ್ಟಿನಲ್ಲಿ ಈ ಬಗ್ಗೆ ದೂರು ದಾಖಲಿಸಿದ ನಂತರ ಗುರುಸ್ವಾಮಿಯವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಲಾಯಿತು. ಗುರುಸ್ವಾಮಿಯವರು ಆ ನೋಟೀಸನ್ನು ಹಾಗೂ “ನ್ಯಾಯಾಂಗ ನಿಂದನೆ” ಯನ್ನು ಶಿಕ್ಷಿಸುವ ಕ್ರಮವನ್ನು ಕೂಡ ಕೂಡ ಗೇಲಿ ಮಾಡುತ್ತಾ ಮತ್ತೊಂದು ಟ್ವೀಟ್ ಮಾಡಿದರು. ಇಷ್ಟಾದರೂ, ಒಂದು ವರ್ಷಗಳ ಕಾಲ ದೆಹಲಿ ಹೈಕೋರ್ಟು ಯಾವ ಕ್ರಮವನ್ನು ಕೈಗೊಳ್ಳಲಿಲ್ಲ ಎಂದು ಶಿವಸುಂದರ್ ತಿಳಿಸಿದ್ದಾರೆ.

ಒಂದು ವರ್ಷದ ನಂತರ ಗುರುಸ್ವಾಮಿಯವರು ತನ್ನ ಟ್ವೀಟಿನ ಬಗ್ಗೆ ಯಾವ ಪಶ್ಚಾತ್ತಾಪವನ್ನು ವ್ಯಕ್ತಪಡಿಸಡಿದ್ದರೂ… ಕೇವಲ ಟ್ವೀಟನ್ನು ವಾಪಸ್ ತೆಗೆದುಕೊಳ್ಳಬೇಕೆಂಬ ಏಕೈಕ ಷರತ್ತಿನ ಮೇಲೆ ಅವರ ಮೇಲಿನ ನ್ಯಾಯಾಂಗ ನಿಂದನೆಯ ಕೇಸನ್ನು ಹೈಕೋರ್ಟ್ ರದ್ದುಮಾಡಿತು! ಇನ್ನು ವಿವೇಕ್ ಅಗ್ನಿಹೋತ್ರಿ ಇನ್ನಿತರರ ಮೇಲೆ ತಾನೇ ಕೊಟ್ಟ ನೋಟೀಸು ಏನಾಯಿತೆಂದು ವಿಚಾರಿಸಲು ಸಹ ನ್ಯಾಯಾಲಯ ಇನ್ನೂ ಮನಸ್ಸು ಮಾಡಿಲ್ಲ ಎಂದು ಶಿವಸುಂದರ್ ತಿಳಿಸಿದ್ದಾರೆ.

ಏಕೆಂದರೆ ಗುರುಮೂರ್ತಿ ಹಾಗು ವಿವೇಕ್ ಅಗ್ನಿಹೋತ್ರಿ ಸಂಘಪರಿವಾರದ ಕಣ್ಮಣಿಗಳು… ಆದರೆ, ಪ್ರಶಾಂತ್ ಭೂಷಣ್ ಮೋದಿ ಸರ್ಕಾರಕ್ಕೆ ಹಾಗು ಸಂಘಪರಿವಾರಕ್ಕೆ ಮಗ್ಗಲ ಮುಳ್ಳು.. ಆದ್ದರಿಂದ ಒಂದು ಕಣ್ಣಿಗೆ ಸುಪ್ರೀಂ ಬೆಣ್ಣೆ …ಒಂದು ಕಣ್ಣಿಗೆ ಸುಪ್ರೀಂ ಸುಣ್ಣ .. ಇದು ಸರಿಯೇ, ಯುವರ್ ಆನರ್? ಜಸ್ಟ್ ಆಸ್ಕಿಂಗ್ ಎಂದು ಶಿವಸುಂದರ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ; ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....