Homeಮುಖಪುಟನ್ಯಾಯಮೂರ್ತಿ ಮುರಳೀಧರ್‌ಗೆ ಅವಮಾನ ಮಾಡಿದ್ದು ನ್ಯಾಯಾಂಗ ನಿಂದನೆಯಲ್ಲವೇ?

ನ್ಯಾಯಮೂರ್ತಿ ಮುರಳೀಧರ್‌ಗೆ ಅವಮಾನ ಮಾಡಿದ್ದು ನ್ಯಾಯಾಂಗ ನಿಂದನೆಯಲ್ಲವೇ?

- Advertisement -
- Advertisement -

ಖ್ಯಾತ ನ್ಯಾಯಮೂರ್ತಿಗಳಾದ ಮುರಳೀಧರ್‌ರವರನ್ನು ಬಿಜೆಪಿ ಬೆಂಬಲಿಗರಾದ ಗುರುಸ್ವಾಮಿ ಮತ್ತು ವಿವೇಕ್ ಅಗ್ನಿಹೋತ್ರಿಯವರು ದೇಶದ್ರೋಹಿಗಳ ಪರ ಇರುವವರು ಎಂದೆಲ್ಲಾ ಕರೆದು ಅವಮಾನ ಮಾಡಿದ್ದರು. ಆದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಏಕೆ ಪರಿಗಣಿಸಿಲ್ಲ ಎಂದು ಚಿಂತಕ ಶಿವಸುಂದರ್ ಪ್ರಶ್ನಿಸಿದ್ದಾರೆ.

ದೆಹಲಿ ಚುನಾವಣೆಯ ಸಂದರ್ಭದಲ್ಲಿ ಮತ್ತು ದೆಹಲಿ ಕೋಮುಗಲಭೆಗಳಲ್ಲಿ ಹಲವು ಬಿಜೆಪಿ ಮುಖಂಡರು ಬಹಿರಂಗವಾಗಿ ಕೋಮು ಪ್ರಚೋದಿತ ಹೇಳಿಕೆ ನೀಡಿದ್ದರು. ಆ ನಂತರ ಬಿಜೆಪಿಯ ನಾಯಕರ ಮೇಲೆ FIR ಹಾಕಲು ಕೂಡ ದೆಹಲಿ ಪೋಲೀಸರು ನಿರಾಕರಿಸಿದ್ದರು. ಆಗ ದೆಹಲಿ ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಕೂಡಲೇ ಅವರ ಮೇಲೆ FIR ದಾಖಲಿಸಬೇಕೆಂದು ಆದೇಶಿಸಿದ್ದು ನ್ಯಾಯಮೂರ್ತಿ ಮುರಳೀಧರ್. ಆ ಅಪರಾಧಕ್ಕಾಗಿ ಮೋದಿ ಸರ್ಕಾರದ “ಸಲಹೆ ಮೇರೆಗೆ” ಅವರನ್ನು ರಾತ್ರೋರಾತ್ರಿ ಪಂಜಾಬ್-ಹರ್ಯಾಣ ಹೈಕೋರ್ಟಿಗೆ ವರ್ಗಾವಣೆ ಮಾಡಲಾಯಿತು ಎಂದು ಶಿವಸುಂದರ್ ತಿಳಿಸಿದ್ದಾರೆ.

ನ್ಯಾಯಮೂರ್ತಿ ಮುರಳೀಧರ್ ಕಾಂಗ್ರೆಸ್ ಒಲವಿದ್ದವರೇನಲ್ಲ. ಸಿಖ್ ಹತ್ಯಾಕಾಂಡದಲ್ಲಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಗೆ ಕಠಿಣ ಶಿಕ್ಷೆಯನ್ನು ವಿಧಿಸಿದ್ದು ಕೂಡ ಇದೇ ನ್ಯಾಯಮೂರ್ತಿಗಳೇ… ತೃತೀಯ ಲಿಂಗಿಗಳ ಹಕ್ಕುಗಳನ್ನು ಎತ್ತಿಹಿಡಿದವರು ಹಾಗು ಮುಖ್ಯ ನ್ಯಾಯಮೂರ್ತಿಗಳ ಕಚೇರಿಯು RTI ಅಡಿ ತರಬೇಕೆಂದು ಆದೇಶಿಸಿದವರು, ಪಂಜಾಬ್ ಹೈಕೋರ್ಟಿನಲ್ಲಿ ವಕೀಲರು ತಮ್ಮನ್ನು “ಮೈ ಲಾರ್ಡ್” ಎಂದು ಸಂಬೋಧಿಸಬಾರದೆಂದು ವಿನಂತಿ ಮಾಡಿ ನ್ಯಾಯಾಂಗದಲ್ಲಿ ಮುಂದುವರೆದಿದ್ದ ವಸಾಹತುಶಾಹಿ ಪರಂಪರೆಯನ್ನು ನಿಲ್ಲಿಸಿದವರು….ಇದೇ ನ್ಯಾಯಮೂರ್ತಿಗಳೇ ಎಂದು ಶಿವಸುಂದರ್ ತಿಳಿಸಿದ್ದಾರೆ.

ಇಂಥಾ ನ್ಯಾಯನಿಷ್ಠುರ ನ್ಯಾಯಮೂರ್ತಿಯ ಮೇಲೆ- ಸಂಘಪರಿವಾರದ ಥಿಂಕ್ ಟ್ಯಾಂಕ್‌ನ ಸದಸ್ಯ ಹಾಗು “ತುಘಲಕ್ ” ಪತ್ರಿಕೆ ಸಂಪಾದಕ ಹಾಗು ಮೋದಿ ಸರ್ಕಾರ ಬಂದಮೇಲೆ RBI ನ ನಿರ್ದೇಶಕನಾಗಿಯೂ ನೇಮಕವಾಗಿರುವ- ಗುರುಸ್ವಾಮಿಯವರು ನ್ಯಾಯಮೂರ್ತಿ ಮುರಳೀಧರ ಅವರು “ದೇಶದ್ರೋಹಿ ಶಕ್ತಿಗಳ ಪರವಾಗಿರುವವರು” ಎಂಬರ್ಥದ ಟ್ವೀಟ್ ಮಾಡಿದ್ದರು.

ಗುರುಸ್ವಾಮಿ ಮಾತ್ರವಲ್ಲದೆ , “ಅರ್ಬನ್ ಸಂಘಿ” ಹಾಗೂ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಯಂತವರು ನೇರವಾಗಿ ನ್ಯಾಯಮೂರ್ತಿ ಅವರ ಮುರಳೀಧರ್ ಅವರ ಚಾರಿತ್ರ್ಯ ಹನನ ಮಾಡಲು ತೊಡಗಿದ್ದರು. ಆದರೆ ಸುಪ್ರೀಂ ಕೋರ್ಟ್ ಆಗಲಿ, ದೆಹಲಿ ಹೈಕೋರ್ಟು ಆಗಲಿ, ಪ್ರಶಾಂತ್ ಭೂಷಣ್ ಪ್ರಕರಣದಲ್ಲಿ ಮಾಡಿದಂತೆ ಗುರುಸ್ವಾಮಿಯ ವಿರುದ್ಧ ಸ್ವಯಂ ಪ್ರೇರಿತ ದೂರನ್ನೇನೂ ದಾಖಲಿಸಿಕೊಳ್ಳಲಿಲ್ಲ ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಬದಲಿಗೆ ರಾಜಶೇಖರ ರಾವ್ ಎಂಬ ವಕೀಲರು ಹೈಕೋರ್ಟಿನಲ್ಲಿ ಈ ಬಗ್ಗೆ ದೂರು ದಾಖಲಿಸಿದ ನಂತರ ಗುರುಸ್ವಾಮಿಯವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಲಾಯಿತು. ಗುರುಸ್ವಾಮಿಯವರು ಆ ನೋಟೀಸನ್ನು ಹಾಗೂ “ನ್ಯಾಯಾಂಗ ನಿಂದನೆ” ಯನ್ನು ಶಿಕ್ಷಿಸುವ ಕ್ರಮವನ್ನು ಕೂಡ ಕೂಡ ಗೇಲಿ ಮಾಡುತ್ತಾ ಮತ್ತೊಂದು ಟ್ವೀಟ್ ಮಾಡಿದರು. ಇಷ್ಟಾದರೂ, ಒಂದು ವರ್ಷಗಳ ಕಾಲ ದೆಹಲಿ ಹೈಕೋರ್ಟು ಯಾವ ಕ್ರಮವನ್ನು ಕೈಗೊಳ್ಳಲಿಲ್ಲ ಎಂದು ಶಿವಸುಂದರ್ ತಿಳಿಸಿದ್ದಾರೆ.

ಒಂದು ವರ್ಷದ ನಂತರ ಗುರುಸ್ವಾಮಿಯವರು ತನ್ನ ಟ್ವೀಟಿನ ಬಗ್ಗೆ ಯಾವ ಪಶ್ಚಾತ್ತಾಪವನ್ನು ವ್ಯಕ್ತಪಡಿಸಡಿದ್ದರೂ… ಕೇವಲ ಟ್ವೀಟನ್ನು ವಾಪಸ್ ತೆಗೆದುಕೊಳ್ಳಬೇಕೆಂಬ ಏಕೈಕ ಷರತ್ತಿನ ಮೇಲೆ ಅವರ ಮೇಲಿನ ನ್ಯಾಯಾಂಗ ನಿಂದನೆಯ ಕೇಸನ್ನು ಹೈಕೋರ್ಟ್ ರದ್ದುಮಾಡಿತು! ಇನ್ನು ವಿವೇಕ್ ಅಗ್ನಿಹೋತ್ರಿ ಇನ್ನಿತರರ ಮೇಲೆ ತಾನೇ ಕೊಟ್ಟ ನೋಟೀಸು ಏನಾಯಿತೆಂದು ವಿಚಾರಿಸಲು ಸಹ ನ್ಯಾಯಾಲಯ ಇನ್ನೂ ಮನಸ್ಸು ಮಾಡಿಲ್ಲ ಎಂದು ಶಿವಸುಂದರ್ ತಿಳಿಸಿದ್ದಾರೆ.

ಏಕೆಂದರೆ ಗುರುಮೂರ್ತಿ ಹಾಗು ವಿವೇಕ್ ಅಗ್ನಿಹೋತ್ರಿ ಸಂಘಪರಿವಾರದ ಕಣ್ಮಣಿಗಳು… ಆದರೆ, ಪ್ರಶಾಂತ್ ಭೂಷಣ್ ಮೋದಿ ಸರ್ಕಾರಕ್ಕೆ ಹಾಗು ಸಂಘಪರಿವಾರಕ್ಕೆ ಮಗ್ಗಲ ಮುಳ್ಳು.. ಆದ್ದರಿಂದ ಒಂದು ಕಣ್ಣಿಗೆ ಸುಪ್ರೀಂ ಬೆಣ್ಣೆ …ಒಂದು ಕಣ್ಣಿಗೆ ಸುಪ್ರೀಂ ಸುಣ್ಣ .. ಇದು ಸರಿಯೇ, ಯುವರ್ ಆನರ್? ಜಸ್ಟ್ ಆಸ್ಕಿಂಗ್ ಎಂದು ಶಿವಸುಂದರ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ; ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...