Homeಮುಖಪುಟನ್ಯಾಯಮೂರ್ತಿ ಮುರಳೀಧರ್‌ಗೆ ಅವಮಾನ ಮಾಡಿದ್ದು ನ್ಯಾಯಾಂಗ ನಿಂದನೆಯಲ್ಲವೇ?

ನ್ಯಾಯಮೂರ್ತಿ ಮುರಳೀಧರ್‌ಗೆ ಅವಮಾನ ಮಾಡಿದ್ದು ನ್ಯಾಯಾಂಗ ನಿಂದನೆಯಲ್ಲವೇ?

- Advertisement -
- Advertisement -

ಖ್ಯಾತ ನ್ಯಾಯಮೂರ್ತಿಗಳಾದ ಮುರಳೀಧರ್‌ರವರನ್ನು ಬಿಜೆಪಿ ಬೆಂಬಲಿಗರಾದ ಗುರುಸ್ವಾಮಿ ಮತ್ತು ವಿವೇಕ್ ಅಗ್ನಿಹೋತ್ರಿಯವರು ದೇಶದ್ರೋಹಿಗಳ ಪರ ಇರುವವರು ಎಂದೆಲ್ಲಾ ಕರೆದು ಅವಮಾನ ಮಾಡಿದ್ದರು. ಆದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಏಕೆ ಪರಿಗಣಿಸಿಲ್ಲ ಎಂದು ಚಿಂತಕ ಶಿವಸುಂದರ್ ಪ್ರಶ್ನಿಸಿದ್ದಾರೆ.

ದೆಹಲಿ ಚುನಾವಣೆಯ ಸಂದರ್ಭದಲ್ಲಿ ಮತ್ತು ದೆಹಲಿ ಕೋಮುಗಲಭೆಗಳಲ್ಲಿ ಹಲವು ಬಿಜೆಪಿ ಮುಖಂಡರು ಬಹಿರಂಗವಾಗಿ ಕೋಮು ಪ್ರಚೋದಿತ ಹೇಳಿಕೆ ನೀಡಿದ್ದರು. ಆ ನಂತರ ಬಿಜೆಪಿಯ ನಾಯಕರ ಮೇಲೆ FIR ಹಾಕಲು ಕೂಡ ದೆಹಲಿ ಪೋಲೀಸರು ನಿರಾಕರಿಸಿದ್ದರು. ಆಗ ದೆಹಲಿ ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಕೂಡಲೇ ಅವರ ಮೇಲೆ FIR ದಾಖಲಿಸಬೇಕೆಂದು ಆದೇಶಿಸಿದ್ದು ನ್ಯಾಯಮೂರ್ತಿ ಮುರಳೀಧರ್. ಆ ಅಪರಾಧಕ್ಕಾಗಿ ಮೋದಿ ಸರ್ಕಾರದ “ಸಲಹೆ ಮೇರೆಗೆ” ಅವರನ್ನು ರಾತ್ರೋರಾತ್ರಿ ಪಂಜಾಬ್-ಹರ್ಯಾಣ ಹೈಕೋರ್ಟಿಗೆ ವರ್ಗಾವಣೆ ಮಾಡಲಾಯಿತು ಎಂದು ಶಿವಸುಂದರ್ ತಿಳಿಸಿದ್ದಾರೆ.

ನ್ಯಾಯಮೂರ್ತಿ ಮುರಳೀಧರ್ ಕಾಂಗ್ರೆಸ್ ಒಲವಿದ್ದವರೇನಲ್ಲ. ಸಿಖ್ ಹತ್ಯಾಕಾಂಡದಲ್ಲಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಗೆ ಕಠಿಣ ಶಿಕ್ಷೆಯನ್ನು ವಿಧಿಸಿದ್ದು ಕೂಡ ಇದೇ ನ್ಯಾಯಮೂರ್ತಿಗಳೇ… ತೃತೀಯ ಲಿಂಗಿಗಳ ಹಕ್ಕುಗಳನ್ನು ಎತ್ತಿಹಿಡಿದವರು ಹಾಗು ಮುಖ್ಯ ನ್ಯಾಯಮೂರ್ತಿಗಳ ಕಚೇರಿಯು RTI ಅಡಿ ತರಬೇಕೆಂದು ಆದೇಶಿಸಿದವರು, ಪಂಜಾಬ್ ಹೈಕೋರ್ಟಿನಲ್ಲಿ ವಕೀಲರು ತಮ್ಮನ್ನು “ಮೈ ಲಾರ್ಡ್” ಎಂದು ಸಂಬೋಧಿಸಬಾರದೆಂದು ವಿನಂತಿ ಮಾಡಿ ನ್ಯಾಯಾಂಗದಲ್ಲಿ ಮುಂದುವರೆದಿದ್ದ ವಸಾಹತುಶಾಹಿ ಪರಂಪರೆಯನ್ನು ನಿಲ್ಲಿಸಿದವರು….ಇದೇ ನ್ಯಾಯಮೂರ್ತಿಗಳೇ ಎಂದು ಶಿವಸುಂದರ್ ತಿಳಿಸಿದ್ದಾರೆ.

ಇಂಥಾ ನ್ಯಾಯನಿಷ್ಠುರ ನ್ಯಾಯಮೂರ್ತಿಯ ಮೇಲೆ- ಸಂಘಪರಿವಾರದ ಥಿಂಕ್ ಟ್ಯಾಂಕ್‌ನ ಸದಸ್ಯ ಹಾಗು “ತುಘಲಕ್ ” ಪತ್ರಿಕೆ ಸಂಪಾದಕ ಹಾಗು ಮೋದಿ ಸರ್ಕಾರ ಬಂದಮೇಲೆ RBI ನ ನಿರ್ದೇಶಕನಾಗಿಯೂ ನೇಮಕವಾಗಿರುವ- ಗುರುಸ್ವಾಮಿಯವರು ನ್ಯಾಯಮೂರ್ತಿ ಮುರಳೀಧರ ಅವರು “ದೇಶದ್ರೋಹಿ ಶಕ್ತಿಗಳ ಪರವಾಗಿರುವವರು” ಎಂಬರ್ಥದ ಟ್ವೀಟ್ ಮಾಡಿದ್ದರು.

ಗುರುಸ್ವಾಮಿ ಮಾತ್ರವಲ್ಲದೆ , “ಅರ್ಬನ್ ಸಂಘಿ” ಹಾಗೂ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಯಂತವರು ನೇರವಾಗಿ ನ್ಯಾಯಮೂರ್ತಿ ಅವರ ಮುರಳೀಧರ್ ಅವರ ಚಾರಿತ್ರ್ಯ ಹನನ ಮಾಡಲು ತೊಡಗಿದ್ದರು. ಆದರೆ ಸುಪ್ರೀಂ ಕೋರ್ಟ್ ಆಗಲಿ, ದೆಹಲಿ ಹೈಕೋರ್ಟು ಆಗಲಿ, ಪ್ರಶಾಂತ್ ಭೂಷಣ್ ಪ್ರಕರಣದಲ್ಲಿ ಮಾಡಿದಂತೆ ಗುರುಸ್ವಾಮಿಯ ವಿರುದ್ಧ ಸ್ವಯಂ ಪ್ರೇರಿತ ದೂರನ್ನೇನೂ ದಾಖಲಿಸಿಕೊಳ್ಳಲಿಲ್ಲ ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಬದಲಿಗೆ ರಾಜಶೇಖರ ರಾವ್ ಎಂಬ ವಕೀಲರು ಹೈಕೋರ್ಟಿನಲ್ಲಿ ಈ ಬಗ್ಗೆ ದೂರು ದಾಖಲಿಸಿದ ನಂತರ ಗುರುಸ್ವಾಮಿಯವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಲಾಯಿತು. ಗುರುಸ್ವಾಮಿಯವರು ಆ ನೋಟೀಸನ್ನು ಹಾಗೂ “ನ್ಯಾಯಾಂಗ ನಿಂದನೆ” ಯನ್ನು ಶಿಕ್ಷಿಸುವ ಕ್ರಮವನ್ನು ಕೂಡ ಕೂಡ ಗೇಲಿ ಮಾಡುತ್ತಾ ಮತ್ತೊಂದು ಟ್ವೀಟ್ ಮಾಡಿದರು. ಇಷ್ಟಾದರೂ, ಒಂದು ವರ್ಷಗಳ ಕಾಲ ದೆಹಲಿ ಹೈಕೋರ್ಟು ಯಾವ ಕ್ರಮವನ್ನು ಕೈಗೊಳ್ಳಲಿಲ್ಲ ಎಂದು ಶಿವಸುಂದರ್ ತಿಳಿಸಿದ್ದಾರೆ.

ಒಂದು ವರ್ಷದ ನಂತರ ಗುರುಸ್ವಾಮಿಯವರು ತನ್ನ ಟ್ವೀಟಿನ ಬಗ್ಗೆ ಯಾವ ಪಶ್ಚಾತ್ತಾಪವನ್ನು ವ್ಯಕ್ತಪಡಿಸಡಿದ್ದರೂ… ಕೇವಲ ಟ್ವೀಟನ್ನು ವಾಪಸ್ ತೆಗೆದುಕೊಳ್ಳಬೇಕೆಂಬ ಏಕೈಕ ಷರತ್ತಿನ ಮೇಲೆ ಅವರ ಮೇಲಿನ ನ್ಯಾಯಾಂಗ ನಿಂದನೆಯ ಕೇಸನ್ನು ಹೈಕೋರ್ಟ್ ರದ್ದುಮಾಡಿತು! ಇನ್ನು ವಿವೇಕ್ ಅಗ್ನಿಹೋತ್ರಿ ಇನ್ನಿತರರ ಮೇಲೆ ತಾನೇ ಕೊಟ್ಟ ನೋಟೀಸು ಏನಾಯಿತೆಂದು ವಿಚಾರಿಸಲು ಸಹ ನ್ಯಾಯಾಲಯ ಇನ್ನೂ ಮನಸ್ಸು ಮಾಡಿಲ್ಲ ಎಂದು ಶಿವಸುಂದರ್ ತಿಳಿಸಿದ್ದಾರೆ.

ಏಕೆಂದರೆ ಗುರುಮೂರ್ತಿ ಹಾಗು ವಿವೇಕ್ ಅಗ್ನಿಹೋತ್ರಿ ಸಂಘಪರಿವಾರದ ಕಣ್ಮಣಿಗಳು… ಆದರೆ, ಪ್ರಶಾಂತ್ ಭೂಷಣ್ ಮೋದಿ ಸರ್ಕಾರಕ್ಕೆ ಹಾಗು ಸಂಘಪರಿವಾರಕ್ಕೆ ಮಗ್ಗಲ ಮುಳ್ಳು.. ಆದ್ದರಿಂದ ಒಂದು ಕಣ್ಣಿಗೆ ಸುಪ್ರೀಂ ಬೆಣ್ಣೆ …ಒಂದು ಕಣ್ಣಿಗೆ ಸುಪ್ರೀಂ ಸುಣ್ಣ .. ಇದು ಸರಿಯೇ, ಯುವರ್ ಆನರ್? ಜಸ್ಟ್ ಆಸ್ಕಿಂಗ್ ಎಂದು ಶಿವಸುಂದರ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ; ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...