Homeಮುಖಪುಟನ್ಯಾಯಮೂರ್ತಿ ಮುರಳೀಧರ್‌ಗೆ ಅವಮಾನ ಮಾಡಿದ್ದು ನ್ಯಾಯಾಂಗ ನಿಂದನೆಯಲ್ಲವೇ?

ನ್ಯಾಯಮೂರ್ತಿ ಮುರಳೀಧರ್‌ಗೆ ಅವಮಾನ ಮಾಡಿದ್ದು ನ್ಯಾಯಾಂಗ ನಿಂದನೆಯಲ್ಲವೇ?

- Advertisement -
- Advertisement -

ಖ್ಯಾತ ನ್ಯಾಯಮೂರ್ತಿಗಳಾದ ಮುರಳೀಧರ್‌ರವರನ್ನು ಬಿಜೆಪಿ ಬೆಂಬಲಿಗರಾದ ಗುರುಸ್ವಾಮಿ ಮತ್ತು ವಿವೇಕ್ ಅಗ್ನಿಹೋತ್ರಿಯವರು ದೇಶದ್ರೋಹಿಗಳ ಪರ ಇರುವವರು ಎಂದೆಲ್ಲಾ ಕರೆದು ಅವಮಾನ ಮಾಡಿದ್ದರು. ಆದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಏಕೆ ಪರಿಗಣಿಸಿಲ್ಲ ಎಂದು ಚಿಂತಕ ಶಿವಸುಂದರ್ ಪ್ರಶ್ನಿಸಿದ್ದಾರೆ.

ದೆಹಲಿ ಚುನಾವಣೆಯ ಸಂದರ್ಭದಲ್ಲಿ ಮತ್ತು ದೆಹಲಿ ಕೋಮುಗಲಭೆಗಳಲ್ಲಿ ಹಲವು ಬಿಜೆಪಿ ಮುಖಂಡರು ಬಹಿರಂಗವಾಗಿ ಕೋಮು ಪ್ರಚೋದಿತ ಹೇಳಿಕೆ ನೀಡಿದ್ದರು. ಆ ನಂತರ ಬಿಜೆಪಿಯ ನಾಯಕರ ಮೇಲೆ FIR ಹಾಕಲು ಕೂಡ ದೆಹಲಿ ಪೋಲೀಸರು ನಿರಾಕರಿಸಿದ್ದರು. ಆಗ ದೆಹಲಿ ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಕೂಡಲೇ ಅವರ ಮೇಲೆ FIR ದಾಖಲಿಸಬೇಕೆಂದು ಆದೇಶಿಸಿದ್ದು ನ್ಯಾಯಮೂರ್ತಿ ಮುರಳೀಧರ್. ಆ ಅಪರಾಧಕ್ಕಾಗಿ ಮೋದಿ ಸರ್ಕಾರದ “ಸಲಹೆ ಮೇರೆಗೆ” ಅವರನ್ನು ರಾತ್ರೋರಾತ್ರಿ ಪಂಜಾಬ್-ಹರ್ಯಾಣ ಹೈಕೋರ್ಟಿಗೆ ವರ್ಗಾವಣೆ ಮಾಡಲಾಯಿತು ಎಂದು ಶಿವಸುಂದರ್ ತಿಳಿಸಿದ್ದಾರೆ.

ನ್ಯಾಯಮೂರ್ತಿ ಮುರಳೀಧರ್ ಕಾಂಗ್ರೆಸ್ ಒಲವಿದ್ದವರೇನಲ್ಲ. ಸಿಖ್ ಹತ್ಯಾಕಾಂಡದಲ್ಲಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಗೆ ಕಠಿಣ ಶಿಕ್ಷೆಯನ್ನು ವಿಧಿಸಿದ್ದು ಕೂಡ ಇದೇ ನ್ಯಾಯಮೂರ್ತಿಗಳೇ… ತೃತೀಯ ಲಿಂಗಿಗಳ ಹಕ್ಕುಗಳನ್ನು ಎತ್ತಿಹಿಡಿದವರು ಹಾಗು ಮುಖ್ಯ ನ್ಯಾಯಮೂರ್ತಿಗಳ ಕಚೇರಿಯು RTI ಅಡಿ ತರಬೇಕೆಂದು ಆದೇಶಿಸಿದವರು, ಪಂಜಾಬ್ ಹೈಕೋರ್ಟಿನಲ್ಲಿ ವಕೀಲರು ತಮ್ಮನ್ನು “ಮೈ ಲಾರ್ಡ್” ಎಂದು ಸಂಬೋಧಿಸಬಾರದೆಂದು ವಿನಂತಿ ಮಾಡಿ ನ್ಯಾಯಾಂಗದಲ್ಲಿ ಮುಂದುವರೆದಿದ್ದ ವಸಾಹತುಶಾಹಿ ಪರಂಪರೆಯನ್ನು ನಿಲ್ಲಿಸಿದವರು….ಇದೇ ನ್ಯಾಯಮೂರ್ತಿಗಳೇ ಎಂದು ಶಿವಸುಂದರ್ ತಿಳಿಸಿದ್ದಾರೆ.

ಇಂಥಾ ನ್ಯಾಯನಿಷ್ಠುರ ನ್ಯಾಯಮೂರ್ತಿಯ ಮೇಲೆ- ಸಂಘಪರಿವಾರದ ಥಿಂಕ್ ಟ್ಯಾಂಕ್‌ನ ಸದಸ್ಯ ಹಾಗು “ತುಘಲಕ್ ” ಪತ್ರಿಕೆ ಸಂಪಾದಕ ಹಾಗು ಮೋದಿ ಸರ್ಕಾರ ಬಂದಮೇಲೆ RBI ನ ನಿರ್ದೇಶಕನಾಗಿಯೂ ನೇಮಕವಾಗಿರುವ- ಗುರುಸ್ವಾಮಿಯವರು ನ್ಯಾಯಮೂರ್ತಿ ಮುರಳೀಧರ ಅವರು “ದೇಶದ್ರೋಹಿ ಶಕ್ತಿಗಳ ಪರವಾಗಿರುವವರು” ಎಂಬರ್ಥದ ಟ್ವೀಟ್ ಮಾಡಿದ್ದರು.

ಗುರುಸ್ವಾಮಿ ಮಾತ್ರವಲ್ಲದೆ , “ಅರ್ಬನ್ ಸಂಘಿ” ಹಾಗೂ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಯಂತವರು ನೇರವಾಗಿ ನ್ಯಾಯಮೂರ್ತಿ ಅವರ ಮುರಳೀಧರ್ ಅವರ ಚಾರಿತ್ರ್ಯ ಹನನ ಮಾಡಲು ತೊಡಗಿದ್ದರು. ಆದರೆ ಸುಪ್ರೀಂ ಕೋರ್ಟ್ ಆಗಲಿ, ದೆಹಲಿ ಹೈಕೋರ್ಟು ಆಗಲಿ, ಪ್ರಶಾಂತ್ ಭೂಷಣ್ ಪ್ರಕರಣದಲ್ಲಿ ಮಾಡಿದಂತೆ ಗುರುಸ್ವಾಮಿಯ ವಿರುದ್ಧ ಸ್ವಯಂ ಪ್ರೇರಿತ ದೂರನ್ನೇನೂ ದಾಖಲಿಸಿಕೊಳ್ಳಲಿಲ್ಲ ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಬದಲಿಗೆ ರಾಜಶೇಖರ ರಾವ್ ಎಂಬ ವಕೀಲರು ಹೈಕೋರ್ಟಿನಲ್ಲಿ ಈ ಬಗ್ಗೆ ದೂರು ದಾಖಲಿಸಿದ ನಂತರ ಗುರುಸ್ವಾಮಿಯವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಲಾಯಿತು. ಗುರುಸ್ವಾಮಿಯವರು ಆ ನೋಟೀಸನ್ನು ಹಾಗೂ “ನ್ಯಾಯಾಂಗ ನಿಂದನೆ” ಯನ್ನು ಶಿಕ್ಷಿಸುವ ಕ್ರಮವನ್ನು ಕೂಡ ಕೂಡ ಗೇಲಿ ಮಾಡುತ್ತಾ ಮತ್ತೊಂದು ಟ್ವೀಟ್ ಮಾಡಿದರು. ಇಷ್ಟಾದರೂ, ಒಂದು ವರ್ಷಗಳ ಕಾಲ ದೆಹಲಿ ಹೈಕೋರ್ಟು ಯಾವ ಕ್ರಮವನ್ನು ಕೈಗೊಳ್ಳಲಿಲ್ಲ ಎಂದು ಶಿವಸುಂದರ್ ತಿಳಿಸಿದ್ದಾರೆ.

ಒಂದು ವರ್ಷದ ನಂತರ ಗುರುಸ್ವಾಮಿಯವರು ತನ್ನ ಟ್ವೀಟಿನ ಬಗ್ಗೆ ಯಾವ ಪಶ್ಚಾತ್ತಾಪವನ್ನು ವ್ಯಕ್ತಪಡಿಸಡಿದ್ದರೂ… ಕೇವಲ ಟ್ವೀಟನ್ನು ವಾಪಸ್ ತೆಗೆದುಕೊಳ್ಳಬೇಕೆಂಬ ಏಕೈಕ ಷರತ್ತಿನ ಮೇಲೆ ಅವರ ಮೇಲಿನ ನ್ಯಾಯಾಂಗ ನಿಂದನೆಯ ಕೇಸನ್ನು ಹೈಕೋರ್ಟ್ ರದ್ದುಮಾಡಿತು! ಇನ್ನು ವಿವೇಕ್ ಅಗ್ನಿಹೋತ್ರಿ ಇನ್ನಿತರರ ಮೇಲೆ ತಾನೇ ಕೊಟ್ಟ ನೋಟೀಸು ಏನಾಯಿತೆಂದು ವಿಚಾರಿಸಲು ಸಹ ನ್ಯಾಯಾಲಯ ಇನ್ನೂ ಮನಸ್ಸು ಮಾಡಿಲ್ಲ ಎಂದು ಶಿವಸುಂದರ್ ತಿಳಿಸಿದ್ದಾರೆ.

ಏಕೆಂದರೆ ಗುರುಮೂರ್ತಿ ಹಾಗು ವಿವೇಕ್ ಅಗ್ನಿಹೋತ್ರಿ ಸಂಘಪರಿವಾರದ ಕಣ್ಮಣಿಗಳು… ಆದರೆ, ಪ್ರಶಾಂತ್ ಭೂಷಣ್ ಮೋದಿ ಸರ್ಕಾರಕ್ಕೆ ಹಾಗು ಸಂಘಪರಿವಾರಕ್ಕೆ ಮಗ್ಗಲ ಮುಳ್ಳು.. ಆದ್ದರಿಂದ ಒಂದು ಕಣ್ಣಿಗೆ ಸುಪ್ರೀಂ ಬೆಣ್ಣೆ …ಒಂದು ಕಣ್ಣಿಗೆ ಸುಪ್ರೀಂ ಸುಣ್ಣ .. ಇದು ಸರಿಯೇ, ಯುವರ್ ಆನರ್? ಜಸ್ಟ್ ಆಸ್ಕಿಂಗ್ ಎಂದು ಶಿವಸುಂದರ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ; ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...