Homeಕರ್ನಾಟಕಕುವೆಂಪು, ಕೆಂಪೇಗೌಡರಿಗೆ ಅವಮಾನ ಆರೋಪ; ಕಾಳಿ ಸ್ವಾಮೀಜಿ ಮುಖಕ್ಕೆ ಮಸಿ ಬಳಿದು ಆಕ್ರೋಶ

ಕುವೆಂಪು, ಕೆಂಪೇಗೌಡರಿಗೆ ಅವಮಾನ ಆರೋಪ; ಕಾಳಿ ಸ್ವಾಮೀಜಿ ಮುಖಕ್ಕೆ ಮಸಿ ಬಳಿದು ಆಕ್ರೋಶ

- Advertisement -
- Advertisement -

ರಾಷ್ಟ್ರಕವಿ ಕುವೆಂಪು ಹಾಗೂ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಕಾಳಿ ಸ್ವಾಮಿ (ಋಷಿ ಕುಮಾರ ಸ್ವಾಮೀಜಿ) ಅವರಿಗೆ ಮಸಿ ಬಳಿಯಲಾಗಿದೆ.

ಶಿವರಾಮೇಗೌಡ ಬಣದ ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲ್ಲೇಶ್ವರದ ಗಂಗಮ್ಮ ದೇವಾಲಯಕ್ಕೆ ಋಷಿಕುಮಾರ ಸ್ವಾಮಿ ಬಂದಿದ್ದ ವೇಳೆ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಋಷಿಕುಮಾರ ಸ್ವಾಮೀಜಿಗೆ ಧಿಕ್ಕಾರ ಕೂಗಿ ಮುಖಕ್ಕೆ ಕಪ್ಪುಮಸಿ ಬಳಿದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಡಗೀತೆಯ ಕುರಿತು ಋಷಿಕುಮಾರ ಸ್ವಾಮೀಜಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಲಾಗಿದೆ. ಘಟನೆಯನ್ನು ಶಿವರಾಮೇಗೌಡರ ಬಣದ ಕರವೇ ಸಮರ್ಥಿಸಿಕೊಂಡಿದೆ.

ಘಟನೆ ಕುರಿತು ಕಾಳಿ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, “ನಾನು ಯಾರನ್ನು ಅವಮಾನಿಸಿಲ್ಲ. ದಾಖಲೆಗಳಿದ್ದರೆ ಕೋರ್ಟ್‌ನಲ್ಲಿ ದಾವೆ ಹೂಡಲಿ. ಇದರಿಂದ ನಾನೇನು ವಿಚಲಿತನಾಗಿಲ್ಲ” ಎಂದಿದ್ದಾರೆ.

ಋಷಿ ಕುಮಾರ ಸ್ವಾಮೀಜಿ ಕಾಲಿಗೆ ಪೆಟ್ಟು ಬಿದ್ದಿದೆ ಎಂದು ಆರೋಪಿಸಲಾಗಿದ್ದು, ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ.

“ನಾಡಗೀತೆಯನ್ನು ಅನುಸರಿಸುತ್ತಿರುವ ಕನ್ನಡಪರ ಹೋರಾಟಗಾರರನ್ನು ಗುಂಡಿಕ್ಕಿ ಕೊಲ್ಲಬೇಕು” ಎಂದು ಕಾಳಿ ಸ್ವಾಮೀಜಿ ಹೇಳಿದ್ದರೆಂದು ದೂರಲಾಗುತ್ತಿದೆ.

ಸ್ವಾಮೀಜಿ ಹೇಳಿದ್ದೇನು?

“ಕಾಳಿಕಾ ಸೇನೆಯ ವತಿಯಿಂದ ಮಲ್ಲೇಶ್ವರಂನಲ್ಲಿ ಗಂಗಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಇತ್ತು. ಪೂಜೆ ಬಹಳ ಚೆನ್ನಾಗಿ ಆಯ್ತು. ನನಗೆ ಬಹಳ ಖುಷಿ ಆಯ್ತು. ಪೂಜೆ ಮುಗಿಸಿ ಹೊರ ಬರುವ ವೇಳೆ ಕೆಲವರು ಬಂದು ನೀವು ಕುವೆಂಪು ಅವರನ್ನು ಮತ್ತು ಕನ್ನಡ ಪಡೆಗಳನ್ನು ನಿಂದಿಸಿದ್ದೀರಾ ಎಂದು ಸೃಷ್ಟಿ ಮಾಡಿಕೊಂಡು ನನ್ನ ಬಳಿ ಜಗಳ ಮಾಡಿದ್ರು. ಕುವೆಂಪು ಅವರನ್ನು ಕನ್ನಡ ಪಡೆಗಳನ್ನು ನಾನು ಯಾವತ್ತಿಗೂ ನಿಂದಿಸಿಲ್ಲ. ನಿಮ್ಮ ಬಳಿ ದಾಖಲೆಗಳಿದ್ರೆ ಅದನ್ನು ತರಬೇಕು. ಅದನ್ನು ಬಿಟ್ಟು ಕಪ್ಪು ಮಸಿ ಬಳಿದ್ರೆ ಹೇಗೆ” ಎಂದು ಕಾಳಿ ಸ್ವಾಮೀಜಿ ಕೇಳಿದ್ದಾರೆ.

ಇದನ್ನೂ ಓದಿರಿ: ದೇಶದಲ್ಲಿ ಹಿಜಾಬ್‌ ನಿಷೇಧಿಸಬೇಕು: ಕಾಳಿ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ

ವಿವಾದಗಳನ್ನು ಸೃಷ್ಟಿಸುತ್ತಿರುವ ಕಾಳಿ ಸ್ವಾಮೀಜಿ

ಕನ್ನಡ ನಾಡನ್ನು ರಾಷ್ಟ್ರಕವಿ ಕುವೆಂಪು ಅವರು “ಸರ್ವ ಜನಾಂಗದ ಶಾಂತಿ ತೋಟ” ಎಂದು ಕರೆದಿದ್ದಾರೆ. ನಾಡಗೀತೆಯ ಎಲ್ಲ ಜನವರ್ಗವನ್ನು ಸೌಹಾರ್ದತೆಯಿಂದ ಬದುಕಲು ಪ್ರೇರೇಪಿಸುತ್ತದೆ. ಅನೇಕ ಮಹನೀಯರು ಇದನ್ನೇ ಸಾರಿದ್ದಾರೆ. ಆದರೆ ಕಾಳಿ ಸ್ವಾಮೀಜಿ ಒಂದಲ್ಲ ಒಂದು ವಿವಾದವನ್ನು ಸೃಷ್ಟಿಸುತ್ತಾ “ಸರ್ವಜನಾಂಗದ ಶಾಂತಿಯ ತೋಟ”ವನ್ನು ಹದಗೆಡಿಸುತ್ತಿರುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಹಿಂದೂ ಮುಸ್ಲಿಂ ಸಮುದಾಯದ ನಡುವೆ ಬೆಂಕಿ ಹಚ್ಚುವ ಕೆಲಸವನ್ನು ಕಾಳಿ ಸ್ವಾಮೀಜಿ ಎಗ್ಗಿಲ್ಲದೆ ಮಾಡುತ್ತಿರುವುದು ಕಂಡು ಬರುತ್ತಿದೆ ಎಂಬ ಆರೋಪಗಳು ಬರುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಜರುಗಿಸುತ್ತಿಲ್ಲ.

“ಬಾಬ್ರಿ ಮಸೀದಿಯಂತೆ ಶ್ರೀರಂಗಪಟ್ಟಣದ ಮಸೀದಿಯನ್ನೂ ಕೆಡವಬೇಕು” ಎಂದು ಕಾಳಿ ಸ್ವಾಮೀಜಿ ಹೇಳಿಕೆ ನೀಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಕೆಲಸ ಮಾಡಿದ್ದರು. ಪ್ರಕರಣ ಕೂಡ ದಾಖಲಾಗಿತ್ತು. ನಂತರದಲ್ಲೂ ಕೋಮುದ್ವೇಷವನ್ನು ಮುಂದುವರಿಸಿದ ಸ್ವಾಮೀಜಿ, “ಅದಾನ್‌ ವಿರುದ್ಧ ಸುಪ್ರಬಾತ” ಎಂಬ ವಿವಾದದಲ್ಲೂ ಪಾಲ್ಗೊಂಡಿದ್ದರು. “ಹಲಾಲ್‌ ಕಟ್‌ಗೆ ವಿರೋಧ ವ್ಯಕ್ತಪಡಿಸಿ ಜಟ್ಕಾ ಕಟ್‌” ಎಂದು ಕೋಳಿಯನ್ನು ಕೊಯ್ದು ಪ್ರಚಾರ ಪಡೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...