“ತಾಳ್ಮೆ ಹಾಗೂ ಘನತೆಯಿಂದ ಕೂಡಿದ ನಾಲ್ಕು ತಲೆಯ ಸಿಂಹವನ್ನು ಶತಮಾನದಿಂದ ನೋಡುತ್ತಿದ್ದೇವೆ. ಆದರೆ ಅಶೋಕ ಚಕ್ರವರ್ತಿಯ ಸಿಂಹಗಳು ಸಹ ಈಗ ಕೋಪಗೊಂಡಿವೆ…” ಎಂಬ ಟೀಕೆಗಳು ವ್ಯಕ್ತವಾಗಿವೆ.
ಹೊಸ ಸಂಸತ್ ಭವನದ ಮೇಲ್ಛಾವಣಿಯ ಮೇಲೆ ರಾಷ್ಟ್ರೀಯ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅನಾವರಣಗೊಳಿಸಿದರು. ಆದರೆ ರಾಷ್ಟ್ರೀಯ ಲಾಂಛನವು ಮೂಲವನ್ನು ಹೋಲುತ್ತಿಲ್ಲ ಎಂಬ ಆಕ್ಷೇಪಗಳು ಕೇಳಿಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಟ್ವೀಟ್ ಮಾಡಿ, “ರಾಷ್ಟ್ರೀಯ ಲಾಂಛನದಲ್ಲಿರುವ ಸಿಂಹಗಳು ಸೌಮ್ಯವಾದ ಅಭಿವ್ಯಕ್ತಿಯನ್ನು ಹೊಂದಿವೆ. ಆದರೆ ಹೊಸ ಶಿಲ್ಪದಲ್ಲಿ ನರಭಕ್ಷಕ ಪ್ರವೃತ್ತಿ ಕಾಣಬಹುದು” ಎಂದು ಟೀಕಿಸಿದೆ.
मूल कृति के चेहरे पर सौम्यता का भाव तथा अमृत काल में बनी मूल कृति की नक़ल के चेहरे पर इंसान, पुरखों और देश का सबकुछ निगल जाने की आदमखोर प्रवृति का भाव मौजूद है।
हर प्रतीक चिन्ह इंसान की आंतरिक सोच को प्रदर्शित करता है। इंसान प्रतीकों से आमजन को दर्शाता है कि उसकी फितरत क्या है। pic.twitter.com/EaUzez104N
— Rashtriya Janata Dal (@RJDforIndia) July 11, 2022
“ಆಕರ್ಷಕತೆಯಿಂದ ವಿರೂಪದ ಕಡೆಗೆ, ಫಿಟ್ನಿಂದ ಕೊಬ್ಬಿನ ಕಡೆಗೆ, ಸೌಂದರ್ಯದಿಂದ ಕುರೂಪದ ಕಡೆಗೆ ರಾಷ್ಟ್ರೀಯ ಲಾಂಛನವೂ ಏಕೆ ಕೆಟ್ಟ ಸ್ವಭಾವವನ್ನು ಹೊಂದಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ರಾಷ್ಟ್ರವು ವಿಫಲವಾಗಿದೆ” ಎಂದು ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ಆಶಿಷ್ ದುಅ ತಿಳಿಸಿದ್ದಾರೆ.
From graceful to distorted, from fit to fat, from beautiful to ugly, nation fails to understand why #NationalEmblem too is bad tempered… pic.twitter.com/2pwTbgbMza
— Ashish Dua (@ashishdua_INC) July 11, 2022
ತೃಣಮೂಲ ಕಾಂಗ್ರೆಸ್ನ ರಾಜ್ಯಸಭಾ ಸಂಸದ ಜವಾಹರ್ ಸಿರ್ಕಾರ್ ಪ್ರತಿಕ್ರಿಯೆ ನೀಡಿದ್ದು, “ನಮ್ಮ ರಾಷ್ಟ್ರೀಯ ಲಾಂಛನಕ್ಕೆ ಮಾಡಿದ ಅವಮಾನ” ಎಂದಿದ್ದಾರೆ.
ಎನ್ಡಿಟಿವಿ ಜೊತೆ ಮಾತನಾಡಿದ ಅವರು, “ಸಿಂಹದ ಮುಖದ ನೋಟದಲ್ಲಿ ಆಕ್ರಮಣಶೀಲತೆ ಇದೆ ಎಂದು ಸೂಕ್ಷ್ಮವಾಗಿ ಗಮನಿಸಬಹುದು, ಆದರೆ ಸಾಮ್ರಾಟ್ ಅಶೋಕ ಹೇಳಲು ಪ್ರಯತ್ನಿಸಿದ್ದು ಇದಲ್ಲ. ತುಂಬಾ ಆಕ್ರಮಣಕಾರಿ ಜೀವಿಗಳ ಮುಖದಲ್ಲಿನ ಶಾಂತ ಅಭಿವ್ಯಕ್ತಿಯನ್ನು ಸಾಮ್ರಾಟ್ ಅಶೋಕ ತೆರೆದಿಟ್ಟಿದ್ದನು. ಅಶೋಕನು ನೀಡಲು ಪ್ರಯತ್ನಿಸುತ್ತಿದ್ದ ಶಾಂತಿಯ ಸಂದೇಶದ ಸಾಕಾರವಾಗಿ ಸಿಂಹಗಳನ್ನು ನೋಡಬಹುದು” ಎಂದು ಸ್ಪಷ್ಟಪಡಿಸಿದ್ದಾರೆ.
Insult to our national symbol, the majestic Ashokan Lions. Original is on the left, graceful, regally confident. The one on the right is Modi’s version, put above new Parliament building — snarling, unnecessarily aggressive and disproportionate. Shame! Change it immediately! pic.twitter.com/luXnLVByvP
— Jawhar Sircar (@jawharsircar) July 12, 2022
“ಭವ್ಯವಾದ, ಶಾಂತಿಪ್ರಿಯ, ತಾಳ್ಮೆ ಮತ್ತು ವೈಭವದಿಂದ ಕೂಡಿದ ಸಿಂಹವು ಈಗ ತನ್ನ ಹೊಸ ನೋಟದಲ್ಲಿ ಕೋಪಗೊಂಡಿದೆ, ಕ್ರೂರವಾಗಿದೆ, ಬೆದರಿಸುತ್ತಿದೆ ಮತ್ತು ಹಿಂಸಾತ್ಮಕವಾಗಿ ಕಾಣುತ್ತಿದೆ. ಬಹುತೇಕ ದ್ವೇಷವನ್ನು ಹುಟ್ಟುಹಾಕುವ ರಂಗಾ ಬಿಲ್ಲಾ ಮತ್ತು ಅವರ 8 ವರ್ಷಗಳ ವಿಶ್ವಾಸಘಾತುಕ ಆಡಳಿತವನ್ನು ಇದು ಪುನರಾವರ್ತಿಸುತ್ತದೆ. ಮೋದಿ ಸರ್ಕಾರ ನಮ್ಮ ರಾಷ್ಟ್ರೀಯ ಲಾಂಛನವನ್ನು ಏಕೆ ವಿರೂಪಗೊಳಿಸಿದೆ ಎಂದು ನಾವು ಪ್ರಶ್ನಿಸಬಹುದೇ?” ಎಂದು ಕಾಂಗ್ರೆಸ್ ನಾಯಕ ವಿನಯ್ ಕುಮಾರ್ ದೊಕನಿಯ ಪ್ರಶ್ನಿಸಿದ್ದಾರೆ.
The magnificent, peace loving, calm and glorious lion now looks angry, Cruel, threatening and violent in its new look, almost replicating the hate mongering Ranga Billa and their 8 yrs of treacherous rule…
Can we question Why the Modi govt distorted our #NationalEmblem ? pic.twitter.com/ddjJDKKajz— Vinay Kumar Dokania (@VinayDokania) July 12, 2022
“ಈ ದೇಶದಲ್ಲಿ ಏನಾದ್ರೂ ಆಗ್ತಿದೆ ಎಲ್ಲರೂ ಸುಮ್ಮನಿರ್ತಾರಾ? ಇದು ರಾಷ್ಟ್ರೀಯ ಚಿಹ್ನೆಗೆ ಮಾಡಿದ ಅವಮಾನ” ಎಂದು ಚಲನಚಿತ್ರ ನಿರ್ದೇಶಕ ವಿನೋದ್ ಕಾಪ್ರಿ ಟ್ವೀಟ್ ಮಾಡಿದ್ದಾರೆ.
सदियों से धीर-गंभीर , गरिमापूर्ण उपस्थिति से अपनी मौजूदगी का एहसास करा रहे सम्राट अशोक के शेरों को भी उग्र कर दिया गया है।
इस देश में कुछ भी हो रहा है और सब लोग चुप हैं ?? ये राष्ट्रीय चिन्ह का अपमान है। #NationalEmblem pic.twitter.com/wGqCYX2nVU
— Vinod Kapri (@vinodkapri) July 11, 2022
ಈ ಲಾಂಛನವು ಒಟ್ಟು 9,500 ಕೆಜಿ ತೂಕದ ಕಂಚಿನಿಂದ ಮಾಡಲ್ಪಟ್ಟಿದೆ, 6.5 ಮೀಟರ್ ಎತ್ತರವಿದೆ. ಲಾಂಛನವನ್ನು ಈಗಿನಂತೆ ಕಾಣುವಂತೆ ಮಾಡಲು 100ಕ್ಕೂ ಹೆಚ್ಚು ಕುಶಲಕರ್ಮಿಗಳು ಆರು ತಿಂಗಳ ಕಾಲ ಕೆಲಸ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಸಾಮ್ರಾಟ್ ಅಶೋಕನ ಕಾಲದ ನಾಲ್ಕು ತಲೆಯ ಸಿಂಹಕ್ಕೂ, ಹೊಸ ಸಂಸತ್ ಭವನದ ಮೇಲೆ ನಿರ್ಮಿಸಲಾಗಿರುವ ಸಿಂಹಕ್ಕೂ ವ್ಯತ್ಯಾಸಗಳು ಕಂಡು ಬರುತ್ತಿವೆ.
ಭಾರತದ ಲಾಂಛನವನ್ನು ಜನವರಿ 26, 1950ರಂದು ಅಂದರೆ ಭಾರತದ ಸಂವಿಧಾನವು ಜಾರಿಗೆ ಬಂದ ದಿನ ಅಂಗೀಕರಿಸಲಾಗಿದೆ.
ಬಿಜೆಪಿ ನಾಯಕನ ಸಮರ್ಥನೆ
ಬಿಜೆಪಿ ನಾಯಕ ಚಂದ್ರಕುಮಾರ್ ಬೋಸ್ ಪ್ರತಿಕ್ರಿಯೆ ನೀಡಿದ್ದು, “ಸಮಾಜದಲ್ಲಿ ಎಲ್ಲವೂ ವಿಕಸನವಾಗುತ್ತಿದೆ. ಸ್ವಾತಂತ್ರ್ಯದ 75 ವರ್ಷಗಳ ನಂತರ ನಾವು ಕೂಡ ವಿಕಸನಗೊಂಡಿದ್ದೇವೆ. ಕಲಾವಿದನ ಅಭಿವ್ಯಕ್ತಿಗೆ ಸರ್ಕಾರದ ಅನುಮೋದನೆ ಅಗತ್ಯವಿಲ್ಲ. ಎಲ್ಲದಕ್ಕೂ ನೀವು ಭಾರತ ಸರ್ಕಾರವನ್ನು, ಪ್ರಧಾನಿ ಮೋದಿಯನ್ನು ದೂಷಿಸಲು ಸಾಧ್ಯವಿಲ್ಲ. ಸಂರಚನೆಯಲ್ಲಿ ಬದಲಾವಣೆ, ಮಾರ್ಪಾಡು ಇದೆ ಎಂಬ ವಾದವನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ನಾವು ಯಾವಾಗಲೂ ಟೀಕಿಸಬಾರದು. ಬಹುಶಃ ಭಾರತ ಇಂದು ವಿಭಿನ್ನವಾಗಿದೆ” ಎಂದು ಸಮರ್ಥಿಸಿದ್ದಾರೆ.
‘ರಾಷ್ಟ್ರ ಲಾಂಛನ ತಿರುಚುವುದು ಶಿಕ್ಷಾರ್ಹ ಅಪರಾಧ’
‘ರಾಷ್ಟ್ರ ಲಾಂಛನವನ್ನು ತಿರುಚುವುದು ಶಿಕ್ಷಾರ್ಹ ಅಪರಾಧ’ ಎಂದು ಚಿಂತಕ, ರಾಜಕೀಯ ವಿಶ್ಲೇಷಕರಾದ ರಾಜಾರಾಮ್ ತಲ್ಲೂರು ತಿಳಿಸಿದ್ದಾರೆ.
ಈ ಕುರಿತು ಫೇಸ್ಬುಕ್ ಪೋಸ್ಟ್ ಮಾಡಿರುವ ಅವರು, “ಸಾರನಾಥದ ಮ್ಯೂಸಿಯಂನಲ್ಲಿ ಸಂರಕ್ಷಿಸಲಾಗಿರುವ ಅಶೋಕ ಚಕ್ರವರ್ತಿಯ -ಲಯನ್ ಕ್ಯಾಪಿಟಲ್- ಈ ದೇಶದ ಲಾಂಛನ. THE STATE EMBLEM OF INDIA (PROHIBITION OF IMPROPER USE) ACT, 2005 ACT NO. 50 OF 2005 ಎಂಬ ಸಾಂವಿಧಾನಿಕ ರಕ್ಷಣೆ ಈ ಲಾಂಛನಕ್ಕಿದೆ. ಈ ಲಾಂಛನವನ್ನು ವಿರೂಪಗೊಳಿಸುವುದು ಶಿಕ್ಷಾರ್ಹ ಅಪರಾಧ” ಎಂದು ಎಚ್ಚರಿಸಿದ್ದಾರೆ.
“ಒಕ್ಕೂಟ ಸರ್ಕಾರಕ್ಕೆ ಈ ಲಾಂಛನದ ಬಳಕೆಯನ್ನು ನಿರ್ದೇಶಿಸುವ ಕಾನೂನುಬದ್ಧ ಅಧಿಕಾರ ಇದೆಯೇ ಹೊರತು ಇದನ್ನು ವಿರೂಪಗೊಳಿಸುವ ಅಥವಾ ತನ್ನ ಮನಸ್ಸಿಗೆ ಬಂದಂತೆ ಸ್ವರೂಪದಲ್ಲಿ ಬದಲಾವಣೆಗಳನ್ನು ಮಾಡುವ ಹಕ್ಕಿಲ್ಲ. ಈಗ ಹೊಸ ಸಂಸತ್ ಭವನದ ಮೇಲುಭಾಗದಲ್ಲಿ ಉದ್ಘಾಟನೆಗೊಂಡಿರುವ ವ್ಯಗ್ರ ಸಿಂಹಗಳನ್ನು ಹೊಂದಿರುವ ಪ್ರತಿಮೆಗೂ ಮತ್ತು ಸಾರನಾಥದ ಪ್ರಶಾಂತ ಮುದ್ರೆಯ ಘನಗಂಭೀರ ಸಿಂಹಗಳಿರುವ ದೇಶದ ಲಾಂಛನಕ್ಕೂ ಎದ್ದು ಕಾಣುವ ವ್ಯತ್ಯಾಸ ತೋರುತ್ತಿದೆ. ಇದನ್ನು ಉದ್ಘಾಟನೆಗೆ ಮುನ್ನ ಒಕ್ಕೂಟ ಸರ್ಕಾರ ಗಮನಿಸಬೇಕಿತ್ತು. ಇದೊಂದು ಲೋಪವೇ ಸರಿ” ಎಂದು ಅಭಿಪ್ರಾಯಪಟ್ಟಿದ್ದಾರೆ.
ಲೇ ಗಾಂಡುಗಳ,ಇಷ್ಟು ದಿನ ಸಿಂಹ ಸೈಲಾಂಟಾಗಿ ಕುಳಿತಿತ್ತು,ಆದರೆ ಈಗ ಸಿಂಹ ಘರ್ಜನೆ ಮಾಡ್ತಿದೆ ಪ್ರಪಂಚದಾದ್ಯಂತ ಆ ಸಂಕೇತ ಕಣ್ರೋ ಇದು ಕಲಬೆರಕೆಗಳಾ
ರಾಷ್ಟ್ರೀಯ ಲಾಂಚನವನ್ನು ಬೇಕಾಬಿಟ್ಟಿಯಾಗಿ ತಮಗಿಶ್ಟ ಬಂದಂತೆ ಬದಲಾಯಿಸುವ ಯಾವ ಅದಿಕಾರವೂ, ಯಾವ ಸರ್ಕಾರಕ್ಕೂ ಇಲ್ಲ. ಆದ್ದರಿಂದ ಮೋದಿ ಸರ್ಕಾರದ ಈ ಕ್ರಮ ಕಂಡನಾರ್ಹ.