Homeಮುಖಪುಟರಾಷ್ಟ್ರೀಯ ಲಾಂಛನ ವಿರೂಪ; ಬಿಜೆಪಿ ವಿರುದ್ಧ ಪ್ರತಿಪಕ್ಷಗಳಿಂದ ವಾಗ್ದಾಳಿ

ರಾಷ್ಟ್ರೀಯ ಲಾಂಛನ ವಿರೂಪ; ಬಿಜೆಪಿ ವಿರುದ್ಧ ಪ್ರತಿಪಕ್ಷಗಳಿಂದ ವಾಗ್ದಾಳಿ

- Advertisement -
- Advertisement -

“ತಾಳ್ಮೆ ಹಾಗೂ ಘನತೆಯಿಂದ ಕೂಡಿದ ನಾಲ್ಕು ತಲೆಯ ಸಿಂಹವನ್ನು ಶತಮಾನದಿಂದ ನೋಡುತ್ತಿದ್ದೇವೆ. ಆದರೆ ಅಶೋಕ ಚಕ್ರವರ್ತಿಯ ಸಿಂಹಗಳು ಸಹ ಈಗ ಕೋಪಗೊಂಡಿವೆ…” ಎಂಬ ಟೀಕೆಗಳು ವ್ಯಕ್ತವಾಗಿವೆ.

ಹೊಸ ಸಂಸತ್ ಭವನದ ಮೇಲ್ಛಾವಣಿಯ ಮೇಲೆ ರಾಷ್ಟ್ರೀಯ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅನಾವರಣಗೊಳಿಸಿದರು. ಆದರೆ ರಾಷ್ಟ್ರೀಯ ಲಾಂಛನವು ಮೂಲವನ್ನು ಹೋಲುತ್ತಿಲ್ಲ ಎಂಬ ಆಕ್ಷೇಪಗಳು ಕೇಳಿಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಟ್ವೀಟ್ ಮಾಡಿ, “ರಾಷ್ಟ್ರೀಯ ಲಾಂಛನದಲ್ಲಿರುವ ಸಿಂಹಗಳು ಸೌಮ್ಯವಾದ ಅಭಿವ್ಯಕ್ತಿಯನ್ನು ಹೊಂದಿವೆ. ಆದರೆ ಹೊಸ ಶಿಲ್ಪದಲ್ಲಿ ನರಭಕ್ಷಕ ಪ್ರವೃತ್ತಿ ಕಾಣಬಹುದು” ಎಂದು ಟೀಕಿಸಿದೆ.

“ಆಕರ್ಷಕತೆಯಿಂದ ವಿರೂಪದ ಕಡೆಗೆ, ಫಿಟ್‌ನಿಂದ ಕೊಬ್ಬಿನ ಕಡೆಗೆ, ಸೌಂದರ್ಯದಿಂದ ಕುರೂಪದ ಕಡೆಗೆ ರಾಷ್ಟ್ರೀಯ ಲಾಂಛನವೂ ಏಕೆ ಕೆಟ್ಟ ಸ್ವಭಾವವನ್ನು ಹೊಂದಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ರಾಷ್ಟ್ರವು ವಿಫಲವಾಗಿದೆ” ಎಂದು ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ಆಶಿಷ್‌ ದುಅ ತಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭಾ ಸಂಸದ ಜವಾಹರ್ ಸಿರ್ಕಾರ್ ಪ್ರತಿಕ್ರಿಯೆ ನೀಡಿದ್ದು, “ನಮ್ಮ ರಾಷ್ಟ್ರೀಯ ಲಾಂಛನಕ್ಕೆ ಮಾಡಿದ ಅವಮಾನ” ಎಂದಿದ್ದಾರೆ.

ಎನ್‌ಡಿಟಿವಿ ಜೊತೆ ಮಾತನಾಡಿದ ಅವರು, “ಸಿಂಹದ ಮುಖದ ನೋಟದಲ್ಲಿ ಆಕ್ರಮಣಶೀಲತೆ ಇದೆ ಎಂದು ಸೂಕ್ಷ್ಮವಾಗಿ ಗಮನಿಸಬಹುದು, ಆದರೆ ಸಾಮ್ರಾಟ್ ಅಶೋಕ ಹೇಳಲು ಪ್ರಯತ್ನಿಸಿದ್ದು ಇದಲ್ಲ. ತುಂಬಾ ಆಕ್ರಮಣಕಾರಿ ಜೀವಿಗಳ ಮುಖದಲ್ಲಿನ ಶಾಂತ ಅಭಿವ್ಯಕ್ತಿಯನ್ನು ಸಾಮ್ರಾಟ್ ಅಶೋಕ ತೆರೆದಿಟ್ಟಿದ್ದನು. ಅಶೋಕನು ನೀಡಲು ಪ್ರಯತ್ನಿಸುತ್ತಿದ್ದ ಶಾಂತಿಯ ಸಂದೇಶದ ಸಾಕಾರವಾಗಿ ಸಿಂಹಗಳನ್ನು ನೋಡಬಹುದು” ಎಂದು ಸ್ಪಷ್ಟಪಡಿಸಿದ್ದಾರೆ.

“ಭವ್ಯವಾದ, ಶಾಂತಿಪ್ರಿಯ, ತಾಳ್ಮೆ ಮತ್ತು ವೈಭವದಿಂದ ಕೂಡಿದ ಸಿಂಹವು ಈಗ ತನ್ನ ಹೊಸ ನೋಟದಲ್ಲಿ ಕೋಪಗೊಂಡಿದೆ, ಕ್ರೂರವಾಗಿದೆ, ಬೆದರಿಸುತ್ತಿದೆ ಮತ್ತು ಹಿಂಸಾತ್ಮಕವಾಗಿ ಕಾಣುತ್ತಿದೆ. ಬಹುತೇಕ ದ್ವೇಷವನ್ನು ಹುಟ್ಟುಹಾಕುವ ರಂಗಾ ಬಿಲ್ಲಾ ಮತ್ತು ಅವರ 8 ವರ್ಷಗಳ ವಿಶ್ವಾಸಘಾತುಕ ಆಡಳಿತವನ್ನು ಇದು ಪುನರಾವರ್ತಿಸುತ್ತದೆ. ಮೋದಿ ಸರ್ಕಾರ ನಮ್ಮ ರಾಷ್ಟ್ರೀಯ ಲಾಂಛನವನ್ನು ಏಕೆ ವಿರೂಪಗೊಳಿಸಿದೆ ಎಂದು ನಾವು ಪ್ರಶ್ನಿಸಬಹುದೇ?” ಎಂದು ಕಾಂಗ್ರೆಸ್ ನಾಯಕ ವಿನಯ್‌ ಕುಮಾರ್‌ ದೊಕನಿಯ ಪ್ರಶ್ನಿಸಿದ್ದಾರೆ.

“ಈ ದೇಶದಲ್ಲಿ ಏನಾದ್ರೂ ಆಗ್ತಿದೆ ಎಲ್ಲರೂ ಸುಮ್ಮನಿರ್ತಾರಾ? ಇದು ರಾಷ್ಟ್ರೀಯ ಚಿಹ್ನೆಗೆ ಮಾಡಿದ ಅವಮಾನ” ಎಂದು ಚಲನಚಿತ್ರ ನಿರ್ದೇಶಕ ವಿನೋದ್ ಕಾಪ್ರಿ ಟ್ವೀಟ್ ಮಾಡಿದ್ದಾರೆ.

‌ಈ ಲಾಂಛನವು ಒಟ್ಟು 9,500 ಕೆಜಿ ತೂಕದ ಕಂಚಿನಿಂದ ಮಾಡಲ್ಪಟ್ಟಿದೆ, 6.5 ಮೀಟರ್ ಎತ್ತರವಿದೆ. ಲಾಂಛನವನ್ನು ಈಗಿನಂತೆ ಕಾಣುವಂತೆ ಮಾಡಲು 100ಕ್ಕೂ ಹೆಚ್ಚು ಕುಶಲಕರ್ಮಿಗಳು ಆರು ತಿಂಗಳ ಕಾಲ ಕೆಲಸ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಸಾಮ್ರಾಟ್ ಅಶೋಕನ ಕಾಲದ ನಾಲ್ಕು ತಲೆಯ ಸಿಂಹಕ್ಕೂ, ಹೊಸ ಸಂಸತ್‌‌ ಭವನದ ಮೇಲೆ ನಿರ್ಮಿಸಲಾಗಿರುವ ಸಿಂಹಕ್ಕೂ ವ್ಯತ್ಯಾಸಗಳು ಕಂಡು ಬರುತ್ತಿವೆ.

ಭಾರತದ ಲಾಂಛನವನ್ನು ಜನವರಿ 26, 1950ರಂದು ಅಂದರೆ ಭಾರತದ ಸಂವಿಧಾನವು ಜಾರಿಗೆ ಬಂದ ದಿನ ಅಂಗೀಕರಿಸಲಾಗಿದೆ.

ಬಿಜೆಪಿ ನಾಯಕನ ಸಮರ್ಥನೆ

ಬಿಜೆಪಿ ನಾಯಕ ಚಂದ್ರಕುಮಾರ್ ಬೋಸ್ ಪ್ರತಿಕ್ರಿಯೆ ನೀಡಿದ್ದು, “ಸಮಾಜದಲ್ಲಿ ಎಲ್ಲವೂ ವಿಕಸನವಾಗುತ್ತಿದೆ. ಸ್ವಾತಂತ್ರ್ಯದ 75 ವರ್ಷಗಳ ನಂತರ ನಾವು ಕೂಡ ವಿಕಸನಗೊಂಡಿದ್ದೇವೆ. ಕಲಾವಿದನ ಅಭಿವ್ಯಕ್ತಿಗೆ ಸರ್ಕಾರದ ಅನುಮೋದನೆ ಅಗತ್ಯವಿಲ್ಲ. ಎಲ್ಲದಕ್ಕೂ ನೀವು ಭಾರತ ಸರ್ಕಾರವನ್ನು, ಪ್ರಧಾನಿ ಮೋದಿಯನ್ನು ದೂಷಿಸಲು ಸಾಧ್ಯವಿಲ್ಲ. ಸಂರಚನೆಯಲ್ಲಿ ಬದಲಾವಣೆ, ಮಾರ್ಪಾಡು ಇದೆ ಎಂಬ ವಾದವನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ನಾವು ಯಾವಾಗಲೂ ಟೀಕಿಸಬಾರದು. ಬಹುಶಃ ಭಾರತ ಇಂದು ವಿಭಿನ್ನವಾಗಿದೆ” ಎಂದು ಸಮರ್ಥಿಸಿದ್ದಾರೆ.

‘ರಾಷ್ಟ್ರ ಲಾಂಛನ ತಿರುಚುವುದು ಶಿಕ್ಷಾರ್ಹ ಅಪರಾಧ’

‘ರಾಷ್ಟ್ರ ಲಾಂಛನವನ್ನು ತಿರುಚುವುದು ಶಿಕ್ಷಾರ್ಹ ಅಪರಾಧ’ ಎಂದು ಚಿಂತಕ, ರಾಜಕೀಯ ವಿಶ್ಲೇಷಕರಾದ ರಾಜಾರಾಮ್ ತಲ್ಲೂರು ತಿಳಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ ಪೋಸ್ಟ್ ಮಾಡಿರುವ ಅವರು, “ಸಾರನಾಥದ ಮ್ಯೂಸಿಯಂನಲ್ಲಿ ಸಂರಕ್ಷಿಸಲಾಗಿರುವ ಅಶೋಕ ಚಕ್ರವರ್ತಿಯ -ಲಯನ್ ಕ್ಯಾಪಿಟಲ್- ಈ ದೇಶದ ಲಾಂಛನ. THE STATE EMBLEM OF INDIA (PROHIBITION OF IMPROPER USE) ACT, 2005 ACT NO. 50 OF 2005 ಎಂಬ ಸಾಂವಿಧಾನಿಕ ರಕ್ಷಣೆ ಈ ಲಾಂಛನಕ್ಕಿದೆ. ಈ ಲಾಂಛನವನ್ನು ವಿರೂಪಗೊಳಿಸುವುದು ಶಿಕ್ಷಾರ್ಹ ಅಪರಾಧ” ಎಂದು ಎಚ್ಚರಿಸಿದ್ದಾರೆ.

“ಒಕ್ಕೂಟ ಸರ್ಕಾರಕ್ಕೆ ಈ ಲಾಂಛನದ ಬಳಕೆಯನ್ನು ನಿರ್ದೇಶಿಸುವ ಕಾನೂನುಬದ್ಧ ಅಧಿಕಾರ ಇದೆಯೇ ಹೊರತು ಇದನ್ನು ವಿರೂಪಗೊಳಿಸುವ ಅಥವಾ ತನ್ನ ಮನಸ್ಸಿಗೆ ಬಂದಂತೆ ಸ್ವರೂಪದಲ್ಲಿ ಬದಲಾವಣೆಗಳನ್ನು ಮಾಡುವ ಹಕ್ಕಿಲ್ಲ. ಈಗ ಹೊಸ ಸಂಸತ್ ಭವನದ ಮೇಲುಭಾಗದಲ್ಲಿ ಉದ್ಘಾಟನೆಗೊಂಡಿರುವ ವ್ಯಗ್ರ ಸಿಂಹಗಳನ್ನು ಹೊಂದಿರುವ ಪ್ರತಿಮೆಗೂ ಮತ್ತು ಸಾರನಾಥದ ಪ್ರಶಾಂತ ಮುದ್ರೆಯ ಘನಗಂಭೀರ ಸಿಂಹಗಳಿರುವ ದೇಶದ ಲಾಂಛನಕ್ಕೂ ಎದ್ದು ಕಾಣುವ ವ್ಯತ್ಯಾಸ ತೋರುತ್ತಿದೆ. ಇದನ್ನು ಉದ್ಘಾಟನೆಗೆ ಮುನ್ನ ಒಕ್ಕೂಟ ಸರ್ಕಾರ ಗಮನಿಸಬೇಕಿತ್ತು. ಇದೊಂದು ಲೋಪವೇ ಸರಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಲೇ ಗಾಂಡುಗಳ,ಇಷ್ಟು ದಿನ ಸಿಂಹ ಸೈಲಾಂಟಾಗಿ ಕುಳಿತಿತ್ತು,ಆದರೆ ಈಗ ಸಿಂಹ ಘರ್ಜನೆ ಮಾಡ್ತಿದೆ ಪ್ರಪಂಚದಾದ್ಯಂತ ಆ ಸಂಕೇತ ಕಣ್ರೋ ಇದು ಕಲಬೆರಕೆಗಳಾ

  2. ರಾಷ್ಟ್ರೀಯ ಲಾಂಚನವನ್ನು ಬೇಕಾಬಿಟ್ಟಿಯಾಗಿ ತಮಗಿಶ್ಟ ಬಂದಂತೆ ಬದಲಾಯಿಸುವ ಯಾವ ಅದಿಕಾರವೂ, ಯಾವ ಸರ್ಕಾರಕ್ಕೂ ಇಲ್ಲ. ಆದ್ದರಿಂದ ಮೋದಿ ಸರ್ಕಾರದ ಈ ಕ್ರಮ ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...