Homeಮುಖಪುಟರಾಷ್ಟ್ರೀಯ ಲಾಂಛನ ವಿರೂಪ; ಬಿಜೆಪಿ ವಿರುದ್ಧ ಪ್ರತಿಪಕ್ಷಗಳಿಂದ ವಾಗ್ದಾಳಿ

ರಾಷ್ಟ್ರೀಯ ಲಾಂಛನ ವಿರೂಪ; ಬಿಜೆಪಿ ವಿರುದ್ಧ ಪ್ರತಿಪಕ್ಷಗಳಿಂದ ವಾಗ್ದಾಳಿ

- Advertisement -
- Advertisement -

“ತಾಳ್ಮೆ ಹಾಗೂ ಘನತೆಯಿಂದ ಕೂಡಿದ ನಾಲ್ಕು ತಲೆಯ ಸಿಂಹವನ್ನು ಶತಮಾನದಿಂದ ನೋಡುತ್ತಿದ್ದೇವೆ. ಆದರೆ ಅಶೋಕ ಚಕ್ರವರ್ತಿಯ ಸಿಂಹಗಳು ಸಹ ಈಗ ಕೋಪಗೊಂಡಿವೆ…” ಎಂಬ ಟೀಕೆಗಳು ವ್ಯಕ್ತವಾಗಿವೆ.

ಹೊಸ ಸಂಸತ್ ಭವನದ ಮೇಲ್ಛಾವಣಿಯ ಮೇಲೆ ರಾಷ್ಟ್ರೀಯ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅನಾವರಣಗೊಳಿಸಿದರು. ಆದರೆ ರಾಷ್ಟ್ರೀಯ ಲಾಂಛನವು ಮೂಲವನ್ನು ಹೋಲುತ್ತಿಲ್ಲ ಎಂಬ ಆಕ್ಷೇಪಗಳು ಕೇಳಿಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಟ್ವೀಟ್ ಮಾಡಿ, “ರಾಷ್ಟ್ರೀಯ ಲಾಂಛನದಲ್ಲಿರುವ ಸಿಂಹಗಳು ಸೌಮ್ಯವಾದ ಅಭಿವ್ಯಕ್ತಿಯನ್ನು ಹೊಂದಿವೆ. ಆದರೆ ಹೊಸ ಶಿಲ್ಪದಲ್ಲಿ ನರಭಕ್ಷಕ ಪ್ರವೃತ್ತಿ ಕಾಣಬಹುದು” ಎಂದು ಟೀಕಿಸಿದೆ.

“ಆಕರ್ಷಕತೆಯಿಂದ ವಿರೂಪದ ಕಡೆಗೆ, ಫಿಟ್‌ನಿಂದ ಕೊಬ್ಬಿನ ಕಡೆಗೆ, ಸೌಂದರ್ಯದಿಂದ ಕುರೂಪದ ಕಡೆಗೆ ರಾಷ್ಟ್ರೀಯ ಲಾಂಛನವೂ ಏಕೆ ಕೆಟ್ಟ ಸ್ವಭಾವವನ್ನು ಹೊಂದಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ರಾಷ್ಟ್ರವು ವಿಫಲವಾಗಿದೆ” ಎಂದು ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ಆಶಿಷ್‌ ದುಅ ತಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭಾ ಸಂಸದ ಜವಾಹರ್ ಸಿರ್ಕಾರ್ ಪ್ರತಿಕ್ರಿಯೆ ನೀಡಿದ್ದು, “ನಮ್ಮ ರಾಷ್ಟ್ರೀಯ ಲಾಂಛನಕ್ಕೆ ಮಾಡಿದ ಅವಮಾನ” ಎಂದಿದ್ದಾರೆ.

ಎನ್‌ಡಿಟಿವಿ ಜೊತೆ ಮಾತನಾಡಿದ ಅವರು, “ಸಿಂಹದ ಮುಖದ ನೋಟದಲ್ಲಿ ಆಕ್ರಮಣಶೀಲತೆ ಇದೆ ಎಂದು ಸೂಕ್ಷ್ಮವಾಗಿ ಗಮನಿಸಬಹುದು, ಆದರೆ ಸಾಮ್ರಾಟ್ ಅಶೋಕ ಹೇಳಲು ಪ್ರಯತ್ನಿಸಿದ್ದು ಇದಲ್ಲ. ತುಂಬಾ ಆಕ್ರಮಣಕಾರಿ ಜೀವಿಗಳ ಮುಖದಲ್ಲಿನ ಶಾಂತ ಅಭಿವ್ಯಕ್ತಿಯನ್ನು ಸಾಮ್ರಾಟ್ ಅಶೋಕ ತೆರೆದಿಟ್ಟಿದ್ದನು. ಅಶೋಕನು ನೀಡಲು ಪ್ರಯತ್ನಿಸುತ್ತಿದ್ದ ಶಾಂತಿಯ ಸಂದೇಶದ ಸಾಕಾರವಾಗಿ ಸಿಂಹಗಳನ್ನು ನೋಡಬಹುದು” ಎಂದು ಸ್ಪಷ್ಟಪಡಿಸಿದ್ದಾರೆ.

“ಭವ್ಯವಾದ, ಶಾಂತಿಪ್ರಿಯ, ತಾಳ್ಮೆ ಮತ್ತು ವೈಭವದಿಂದ ಕೂಡಿದ ಸಿಂಹವು ಈಗ ತನ್ನ ಹೊಸ ನೋಟದಲ್ಲಿ ಕೋಪಗೊಂಡಿದೆ, ಕ್ರೂರವಾಗಿದೆ, ಬೆದರಿಸುತ್ತಿದೆ ಮತ್ತು ಹಿಂಸಾತ್ಮಕವಾಗಿ ಕಾಣುತ್ತಿದೆ. ಬಹುತೇಕ ದ್ವೇಷವನ್ನು ಹುಟ್ಟುಹಾಕುವ ರಂಗಾ ಬಿಲ್ಲಾ ಮತ್ತು ಅವರ 8 ವರ್ಷಗಳ ವಿಶ್ವಾಸಘಾತುಕ ಆಡಳಿತವನ್ನು ಇದು ಪುನರಾವರ್ತಿಸುತ್ತದೆ. ಮೋದಿ ಸರ್ಕಾರ ನಮ್ಮ ರಾಷ್ಟ್ರೀಯ ಲಾಂಛನವನ್ನು ಏಕೆ ವಿರೂಪಗೊಳಿಸಿದೆ ಎಂದು ನಾವು ಪ್ರಶ್ನಿಸಬಹುದೇ?” ಎಂದು ಕಾಂಗ್ರೆಸ್ ನಾಯಕ ವಿನಯ್‌ ಕುಮಾರ್‌ ದೊಕನಿಯ ಪ್ರಶ್ನಿಸಿದ್ದಾರೆ.

“ಈ ದೇಶದಲ್ಲಿ ಏನಾದ್ರೂ ಆಗ್ತಿದೆ ಎಲ್ಲರೂ ಸುಮ್ಮನಿರ್ತಾರಾ? ಇದು ರಾಷ್ಟ್ರೀಯ ಚಿಹ್ನೆಗೆ ಮಾಡಿದ ಅವಮಾನ” ಎಂದು ಚಲನಚಿತ್ರ ನಿರ್ದೇಶಕ ವಿನೋದ್ ಕಾಪ್ರಿ ಟ್ವೀಟ್ ಮಾಡಿದ್ದಾರೆ.

‌ಈ ಲಾಂಛನವು ಒಟ್ಟು 9,500 ಕೆಜಿ ತೂಕದ ಕಂಚಿನಿಂದ ಮಾಡಲ್ಪಟ್ಟಿದೆ, 6.5 ಮೀಟರ್ ಎತ್ತರವಿದೆ. ಲಾಂಛನವನ್ನು ಈಗಿನಂತೆ ಕಾಣುವಂತೆ ಮಾಡಲು 100ಕ್ಕೂ ಹೆಚ್ಚು ಕುಶಲಕರ್ಮಿಗಳು ಆರು ತಿಂಗಳ ಕಾಲ ಕೆಲಸ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಸಾಮ್ರಾಟ್ ಅಶೋಕನ ಕಾಲದ ನಾಲ್ಕು ತಲೆಯ ಸಿಂಹಕ್ಕೂ, ಹೊಸ ಸಂಸತ್‌‌ ಭವನದ ಮೇಲೆ ನಿರ್ಮಿಸಲಾಗಿರುವ ಸಿಂಹಕ್ಕೂ ವ್ಯತ್ಯಾಸಗಳು ಕಂಡು ಬರುತ್ತಿವೆ.

ಭಾರತದ ಲಾಂಛನವನ್ನು ಜನವರಿ 26, 1950ರಂದು ಅಂದರೆ ಭಾರತದ ಸಂವಿಧಾನವು ಜಾರಿಗೆ ಬಂದ ದಿನ ಅಂಗೀಕರಿಸಲಾಗಿದೆ.

ಬಿಜೆಪಿ ನಾಯಕನ ಸಮರ್ಥನೆ

ಬಿಜೆಪಿ ನಾಯಕ ಚಂದ್ರಕುಮಾರ್ ಬೋಸ್ ಪ್ರತಿಕ್ರಿಯೆ ನೀಡಿದ್ದು, “ಸಮಾಜದಲ್ಲಿ ಎಲ್ಲವೂ ವಿಕಸನವಾಗುತ್ತಿದೆ. ಸ್ವಾತಂತ್ರ್ಯದ 75 ವರ್ಷಗಳ ನಂತರ ನಾವು ಕೂಡ ವಿಕಸನಗೊಂಡಿದ್ದೇವೆ. ಕಲಾವಿದನ ಅಭಿವ್ಯಕ್ತಿಗೆ ಸರ್ಕಾರದ ಅನುಮೋದನೆ ಅಗತ್ಯವಿಲ್ಲ. ಎಲ್ಲದಕ್ಕೂ ನೀವು ಭಾರತ ಸರ್ಕಾರವನ್ನು, ಪ್ರಧಾನಿ ಮೋದಿಯನ್ನು ದೂಷಿಸಲು ಸಾಧ್ಯವಿಲ್ಲ. ಸಂರಚನೆಯಲ್ಲಿ ಬದಲಾವಣೆ, ಮಾರ್ಪಾಡು ಇದೆ ಎಂಬ ವಾದವನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ನಾವು ಯಾವಾಗಲೂ ಟೀಕಿಸಬಾರದು. ಬಹುಶಃ ಭಾರತ ಇಂದು ವಿಭಿನ್ನವಾಗಿದೆ” ಎಂದು ಸಮರ್ಥಿಸಿದ್ದಾರೆ.

‘ರಾಷ್ಟ್ರ ಲಾಂಛನ ತಿರುಚುವುದು ಶಿಕ್ಷಾರ್ಹ ಅಪರಾಧ’

‘ರಾಷ್ಟ್ರ ಲಾಂಛನವನ್ನು ತಿರುಚುವುದು ಶಿಕ್ಷಾರ್ಹ ಅಪರಾಧ’ ಎಂದು ಚಿಂತಕ, ರಾಜಕೀಯ ವಿಶ್ಲೇಷಕರಾದ ರಾಜಾರಾಮ್ ತಲ್ಲೂರು ತಿಳಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ ಪೋಸ್ಟ್ ಮಾಡಿರುವ ಅವರು, “ಸಾರನಾಥದ ಮ್ಯೂಸಿಯಂನಲ್ಲಿ ಸಂರಕ್ಷಿಸಲಾಗಿರುವ ಅಶೋಕ ಚಕ್ರವರ್ತಿಯ -ಲಯನ್ ಕ್ಯಾಪಿಟಲ್- ಈ ದೇಶದ ಲಾಂಛನ. THE STATE EMBLEM OF INDIA (PROHIBITION OF IMPROPER USE) ACT, 2005 ACT NO. 50 OF 2005 ಎಂಬ ಸಾಂವಿಧಾನಿಕ ರಕ್ಷಣೆ ಈ ಲಾಂಛನಕ್ಕಿದೆ. ಈ ಲಾಂಛನವನ್ನು ವಿರೂಪಗೊಳಿಸುವುದು ಶಿಕ್ಷಾರ್ಹ ಅಪರಾಧ” ಎಂದು ಎಚ್ಚರಿಸಿದ್ದಾರೆ.

“ಒಕ್ಕೂಟ ಸರ್ಕಾರಕ್ಕೆ ಈ ಲಾಂಛನದ ಬಳಕೆಯನ್ನು ನಿರ್ದೇಶಿಸುವ ಕಾನೂನುಬದ್ಧ ಅಧಿಕಾರ ಇದೆಯೇ ಹೊರತು ಇದನ್ನು ವಿರೂಪಗೊಳಿಸುವ ಅಥವಾ ತನ್ನ ಮನಸ್ಸಿಗೆ ಬಂದಂತೆ ಸ್ವರೂಪದಲ್ಲಿ ಬದಲಾವಣೆಗಳನ್ನು ಮಾಡುವ ಹಕ್ಕಿಲ್ಲ. ಈಗ ಹೊಸ ಸಂಸತ್ ಭವನದ ಮೇಲುಭಾಗದಲ್ಲಿ ಉದ್ಘಾಟನೆಗೊಂಡಿರುವ ವ್ಯಗ್ರ ಸಿಂಹಗಳನ್ನು ಹೊಂದಿರುವ ಪ್ರತಿಮೆಗೂ ಮತ್ತು ಸಾರನಾಥದ ಪ್ರಶಾಂತ ಮುದ್ರೆಯ ಘನಗಂಭೀರ ಸಿಂಹಗಳಿರುವ ದೇಶದ ಲಾಂಛನಕ್ಕೂ ಎದ್ದು ಕಾಣುವ ವ್ಯತ್ಯಾಸ ತೋರುತ್ತಿದೆ. ಇದನ್ನು ಉದ್ಘಾಟನೆಗೆ ಮುನ್ನ ಒಕ್ಕೂಟ ಸರ್ಕಾರ ಗಮನಿಸಬೇಕಿತ್ತು. ಇದೊಂದು ಲೋಪವೇ ಸರಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಲೇ ಗಾಂಡುಗಳ,ಇಷ್ಟು ದಿನ ಸಿಂಹ ಸೈಲಾಂಟಾಗಿ ಕುಳಿತಿತ್ತು,ಆದರೆ ಈಗ ಸಿಂಹ ಘರ್ಜನೆ ಮಾಡ್ತಿದೆ ಪ್ರಪಂಚದಾದ್ಯಂತ ಆ ಸಂಕೇತ ಕಣ್ರೋ ಇದು ಕಲಬೆರಕೆಗಳಾ

  2. ರಾಷ್ಟ್ರೀಯ ಲಾಂಚನವನ್ನು ಬೇಕಾಬಿಟ್ಟಿಯಾಗಿ ತಮಗಿಶ್ಟ ಬಂದಂತೆ ಬದಲಾಯಿಸುವ ಯಾವ ಅದಿಕಾರವೂ, ಯಾವ ಸರ್ಕಾರಕ್ಕೂ ಇಲ್ಲ. ಆದ್ದರಿಂದ ಮೋದಿ ಸರ್ಕಾರದ ಈ ಕ್ರಮ ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...