Homeಮುಖಪುಟ‘ಸಿಖ್ಖರ ಭಾವನೆ’ಗಳಿಗೆ ಧಕ್ಕೆ ಆರೋಪ: ಕ್ಷಮೆಯಾಚಿಸಿದ ಕಿರಣ್‌ ಬೇಡಿ

‘ಸಿಖ್ಖರ ಭಾವನೆ’ಗಳಿಗೆ ಧಕ್ಕೆ ಆರೋಪ: ಕ್ಷಮೆಯಾಚಿಸಿದ ಕಿರಣ್‌ ಬೇಡಿ

- Advertisement -
- Advertisement -

ಚೆನ್ನೈನಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪುದುಚೇರಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿಯವರು ಸಿಖ್ಖರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಮಂಗಳವಾರ ಆರೋಪಿಸಿದೆ.

ಸೋಮವಾರದಂದು ಅವರ ‘ಫಿಯರ್‌ಲೆಸ್ ಗವರ್ನೆನ್ಸ್’ ಪುಸ್ತಕದ ಬಿಡುಗಡೆ ಸಮಾರಂಭದಲ್ಲಿ ಐಪಿಎಸ್‌ ಮಾಜಿ ಅಧಿಕಾರಿ ಕಿರಣ್‌ ಬೇಡಿ ಸಿಖ್ಖರ ಕುರಿತು ತಮಾಷೆ ಮಾಡಿದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಂಡ ನಂತರ ವಿವಾದವು ಸ್ಫೋಟಗೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಎಪಿ ಪಂಜಾಬ್ ಉಸ್ತುವಾರಿ ಜರ್ನೈಲ್ ಸಿಂಗ್ ಅವರು, ಬೇಡಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. “ಮೊಘಲರು ಭಾರತವನ್ನು ಲೂಟಿ ಮಾಡುವಾಗ ಮತ್ತು ಮಹಿಳೆಯರನ್ನು ಅಪಹರಿಸುವಾಗ, ಸಿಖ್ಖರು ಅವರೊಂದಿಗೆ ಹೋರಾಡಿದರು. ಹೆಣ್ಣುಮಕ್ಕಳನ್ನು ರಕ್ಷಿಸಿದರು. 12 ಗಂಟೆ ಸಮಯದಲ್ಲಿ ಮೊಘಲರ ಮೇಲೆ ದಾಳಿ ಮಾಡಲಾಗುತ್ತಿತ್ತು. ಇದು 12 ಗಂಟೆಯ ಇತಿಹಾಸ” ಎಂದು ಜರ್ನೈಲ್‌ ತಿರುಗೇಟು ನೀಡಿದ್ದಾರೆ.

“ಸಿಖ್ಖರಿಗೆ ಗೌರವ ನೀಡುವ ಬದಲು ಗೇಲಿ ಮಾಡುವ ಅಗ್ಗದ ಮನಸ್ಥಿತಿ ಹೊಂದಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು” ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

“ಯಾರ ಭಾವನೆಗಳಿಗೂ ಧಕ್ಕೆ ತರುವ ಉದ್ದೇಶವಿಲ್ಲ” ಎಂದು ಬೇಡಿ ಪ್ರತಿಕ್ರಿಯೆ ನೀಡಿದ್ದಾರೆ.

“ನನ್ನ ಸಮುದಾಯದ ಬಗ್ಗೆ ನನಗೆ ಹೆಚ್ಚಿನ ಗೌರವವಿದೆ. ನಾನು ಬಾಬಾ ನಾನಕ್ ದೇವ್‌ಜಿ ಭಕ್ತೆ. ನಾನು ಹೇಳಿದ್ದನ್ನು ತಪ್ಪಾಗಿ ಅರ್ಥೈಸಬೇಡಿ. ಇದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ. ಯಾವುದೇ ನೋವನ್ನು ಉಂಟು ಮಾಡುವ ಕೊನೆಯ ವ್ಯಕ್ತಿ ನಾನಾಗಿರುತ್ತೇನೆ. ನಾನು ಸೇವೆ, ಪ್ರೀತಿ, ದಯೆಯಲ್ಲಿ ನಂಬಿಕೆ ಉಳ್ಳವಳು” ಎಂದು ಬೇಡಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

“ನಾನು ಇಂದು ಬೆಳಿಗ್ಗೆ ಪೂಜಾ ಕೈಂಕರ್ಯ ನೆರವೇರಿಸಿದ್ದೇನೆ. ನಾನು ಭಕ್ತಳಾಗಿದ್ದು, ಎಲ್ಲಾ ರೀತಿಯಲ್ಲಿಯೂ ಬಾಬಾರ ಆಶೀರ್ವಾದವನ್ನು ಕೋರುತ್ತೇನೆ. ನಾನು ಮನೆಯಲ್ಲಿ ಪೂಜಾ ಕೈಂಕರ್ಯದೊಂದಿಗೆ ದಿನವನ್ನು ಪ್ರಾರಂಭಿಸಿವೆ. ದಯವಿಟ್ಟು ನನ್ನ ಉದ್ದೇಶವನ್ನು ಅನುಮಾನಿಸಬೇಡಿ. ನನ್ನ ಸಮುದಾಯದ ಬಗ್ಗೆ ನನಗೆ ಹೆಚ್ಚಿನ ಗೌರವ ಮತ್ತು ಅಭಿಮಾನವಿದೆ” ಎಂದಿದ್ದಾರೆ.

ಟ್ವಿಟರ್‌ನಲ್ಲಿ ಟ್ರೋಲ್‌ಗೆ ಒಳಗಾದ ಬೇಡಿ, ಸಾಮಾಜಿಕ ಮಾಧ್ಯಮದಲ್ಲಿ ನಿಂದನಾತ್ಮಕ ಪ್ರತಿಕ್ರಿಯೆ ನೀಡದಂತೆ ಕೋರಿದರು. ಕ್ರಮ ತೆಗೆದುಕೊಳ್ಳುವುದಾಗಿಯೂ ಎಚ್ಚರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....