Homeಕರ್ನಾಟಕಸುಡುಗಾಡುಸಿದ್ದರಿಗೆ ಅವಮಾನ: ಸಚಿವ ವಿ.ಸೋಮಣ್ಣ ವಿರುದ್ಧ ದೂರು ದಾಖಲು

ಸುಡುಗಾಡುಸಿದ್ದರಿಗೆ ಅವಮಾನ: ಸಚಿವ ವಿ.ಸೋಮಣ್ಣ ವಿರುದ್ಧ ದೂರು ದಾಖಲು

- Advertisement -
- Advertisement -

“ಸುಡುಗಾಡುಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ” ಎಂದು ವಸತಿ ಸಚಿವ ವಿ.ಸೋಮಣ್ಣ ನೀಡಿರುವ ಹೇಳಿಕೆಯ ವಿರುದ್ಧ ಕರ್ನಾಟಕ ರಾಜ್ಯ ಸುಡುಗಾಡುಸಿದ್ಧ ಮಹಾ ಸಂಘವು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗಕ್ಕೆ ದೂರು ನೀಡಿದೆ.

“ಸುಡುಗಾಡುಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ” ಎಂದು ರಾಜ್ಯ ಸರ್ಕಾರದ ವಸತಿ ಸಚಿವ ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಅವರು ಯಾರ ಮೇಲೆಯೇ ನೀಡಿರಲಿ ಅಥವಾ ಯಾವ ಕಾರಣಕ್ಕೆ ನೀಡಿರಲಿ ಅದು ಸುಡುಗಾಡುಸಿದ್ದ ಸಮುದಾಯದ ಮೇಲೆ ಕಳಂಕ ನೀಡುವಂತಹ ಹೇಯ ಹೇಳಿಕೆಯಾಗಿದೆ” ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಹನುಮಂತಪ್ಪ ದೂರಿನಲ್ಲಿ ಆರೋಪಿಸಿದ್ದಾರೆ.

ಸುಡುಗಾಡುಸಿದ್ಧ ಸಮುದಾಯ ಈ ನೆಲದ ಅತ್ಯಂತ ಪ್ರಾಚೀನ ಸಮುದಾಯವಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿದ್ದು, ಪಾರಂಪರಿಕ ಸಿದ್ಧ ಔಷಧಿಯನ್ನು ನೀಡುತ್ತಾ ತಲೆತಲಾಂತರಗಳಿಂದ ಸಮಾಜದ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು ಕಾಪಾಡಿಕೊಂಡು ಬಂದಿದೆ. ನಾಡಿನಲ್ಲಿ ಸುಮಾರು 20 ಲಕ್ಷ ಜನರು ಈ ಪರಂಪರೆಯಿಂದ ಬಂದವರಾಗಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ನನ್ನ ಸಮುದಾಯದ ಕುರಿತು ಅತ್ಯಂತ ನೀಚವಾಗಿ ಮಾತನಾಡಿರುವುದರಿಂದ ನನ್ನ ಇಡೀ ಸಮುದಾಯಕ್ಕೆ ಜಾತಿ ನಿಂದನೆಯಾಗಿದೆ. ಅಪಾರ ಅವಮಾನ, ಮಾನನಷ್ಟ ಹಾಗೂ ಜನಾಂಗಕ್ಕೆ ಕಳಂಕ ಉಂಟಾಗಿದೆ. ಈ ಕಾರಣಕ್ಕೆ ತಪ್ಪಿತಸ್ಥ ವಿ.ಸೋಮಣ್ಣನವರ ವಿರುದ್ಧ ತೀವ್ರ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ವಿನಂತಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡುತ್ತಾ ವಿ.ಸೋಮಣ್ಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಹೇಳಿಕೆ ನೀಡಿದ್ದರು. “ಅವರ ಕಾಲದಲ್ಲಿ ಬರೀ ಘೋಷಣೆ ಆಗಿತ್ತು. ನಾವು ಮನೆ ಕಟ್ಟಿಕೊಡುತ್ತಿದ್ದೇವೆ. ಇದು ನಿರಂತರ ಪ್ರಕ್ರಿಯೆಯಾಗಿದೆ. ರಾಜಕಾರಣಕ್ಕಾಗಿ ನನ್ನ ಮೇಲೆ ಆರೋಪ ಮಾಡಬೇಡಿ” ಎನ್ನುತ್ತಾ, ಸುಡುಗಾಡು ಸಿದ್ಧ ಜಾತಿಯನ್ನು ಅಪಮಾನಿಸಿ ಹೇಳಿಕೆ ನೀಡಿದ್ದರು.

ಇದನ್ನೂ ಓದಿರಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ಬೈಗುಳಗಳಿಗೂ ಈ ಸಮುದಾಯಗಳೇ ಬೇಕಾ?: ಸಿ.ಎಸ್.ದ್ವಾರಕನಾಥ್‌

ವಿ.ಸೋಮಣ್ಣ ಅವರ ಹೇಳಿಕೆಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು, ಅಲೆಮಾರಿ ಬುಡಕಟ್ಟು ಮಹಾಸಭಾ ಗೌರವಾಧ್ಯಕ್ಷರೂ ಆದ ಸಿ.ಎಸ್.ದ್ವಾರಕನಾಥ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಯಾರನ್ನು ಬೈಯಬೇಕಾದರೂ ಸುಡುಗಾಡು ಸಿದ್ದರನ್ನು ತೆಗೆದುಕೊಳ್ಳುತ್ತಾರೆ, ದೊಂಬರನ್ನು ತೆಗೆದುಕೊಳ್ಳುತ್ತಾರೆ, ದರ್ವೇಸಿಗಳನ್ನು ತೆಗೆದುಕೊಳ್ಳುತ್ತಾರೆ, ಸವಿತಾ ಸಮಾಜವನ್ನು ತೆಗೆದುಕೊಳ್ಳುತ್ತಾರೆ. ಬೈಗುಳಗಳಿಗೂ ಇದೇ ಸಮುದಾಯಗಳು ಇವರಿಗೆ ಬೇಕಾ?” ಎಂದು ಪ್ರಶ್ನಿಸಿದರು.

“ಆ ಸಮುದಾಯಗಳ ಬಗ್ಗೆ ಇವರಿಗೆ ಸ್ಪಷ್ಟವಾದ ಅರಿವು ಹಾಗೂ ಗೌರವ ಇರಬೇಕು. ಇಲ್ಲದಿದ್ದರೆ ಜಾತಿ ಅಹಂಕಾರದಿಂದ ಹೀಗೆ ಮಾತನಾಡುತ್ತಾರೆ. ಸೋಮಣ್ಣ ಅವರ ಅವರ ಹೇಳಿಕೆ ಜಾತಿ ನಿಂದನೆಯ ಅಡಿಯಲ್ಲಿ ಬರುತ್ತದೆ” ಎಂದರು.

‘ಸಹಜವಾಗಿ ಸುಡುಗಾಡುಸಿದ್ದರು ತಪ್ಪು ಮಾಡಿತ್ತಾರೆ ನಾವು ಅದನ್ನು ಸರಿಪಡಿಸಿದ್ದೇವೆ’ ಎಂಬ ಅರ್ಥ ಸೋಮಣ್ಣನವರ ಹೇಳಿಕೆಯಲ್ಲಿದೆ. ಇದರ ಮೂಲಾರ್ಥ ‘ಸುಡುಗಾಡುಸಿದ್ದರು ಸದಾ ತಪ್ಪು ಮಾಡುವವರು’ ಎಂದಾಗುತ್ತದೆ. ಹೀಗೆ ಒಂದು ಇಡೀ ಸಮುದಾಯವನ್ನು ತಪ್ಪಿತಸ್ಥರು ಎಂದು ಪರಿಗಣಿಸಿ ಕಟಕಟೆಯಲ್ಲಿ ನಿಲ್ಲಿಸಿರುವ ಸೋಮಣ್ಣನವರ ಹೇಳಿಕೆ ಅಕ್ಷಮ್ಯವಾದುದು ಎಂದು ಅಭಿಪ್ರಾಯಪಟ್ಟಿದ್ದಾರೆ.

“ಒಬ್ಬ ಸಚಿವರಾಗಿ ಸಂವಿಧಾನದ ಮೇಲೆ ಪ್ರಮಾಣ ಮಾಡಿ ಸರ್ಕಾರಿ ಆಡಳಿತಕ್ಕೆ ಬಂದಿರುವ ಮಂತ್ರಿಗೆ ಸಂವಿಧಾನದತ್ತವಾಗಿ ಈ ದೇಶದ ಸಭ್ಯ ನಾಗರಿಕರೆಂದು ಪರಿಗಣಿಸಲ್ಪಟ್ಟ ಇಡೀ ಒಂದು ಸಮುದಾಯವನ್ನೇ ತಪ್ಪಿತಸ್ಥರೆಂದು ಅಪಾದಿಸಿ ಹೇಳಿಕೆ ನೀಡಿರುವುದು ಆ ವ್ಯಕ್ತಿಯ ಅರಿವುಗೇಡಿತನ ಮತ್ತು ದುಷ್ಟತನವನ್ನು ತೋರುತ್ತದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಸುಡುಗಾಡುಸಿದ್ದ ಸಮುದಾಯದ ಸಾಮಾಜಿಕ ಕಾರ್ಯಕರ್ತ ಮಂಜುನಾಥ ಕಡೂರು, “ಸೋಮಣ್ಣ ಅವರ ಮೇಲೆ ಗೌರವವಿದೆ. ಅತ್ಯಂತ ಶೋಷಿತ ಸಮುದಾಯದ ಕುರಿತು ಯಾಕೆ ಹೀಗೆ ಮಾತನಾಡುತ್ತಾರೆ. ಇದು ನೋವು ತಂದಿದೆ. ಸೋಮಣ್ಣ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದೆವು. ಆದರೆ ನಮ್ಮ ಆಗ್ರಹಕ್ಕೆ ಬೆಲೆಯನ್ನೇ ನೀಡಲಿಲ್ಲ. ಹೀಗಾಗಿ ಆಯೋಗಕ್ಕೆ ದೂರು ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಿದ್ದೇವೆ” ಎಂದು ಎಚ್ಚರಿಸಿದ್ದಾರೆ.


ಇದನ್ನೂ ಓದಿರಿ: ಗುಜರಾತ್: ಮದುವೆಯಲ್ಲಿ ಸಾಂಪ್ರದಾಯಿಕ ಪೇಟ ಧರಿಸಿದ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಾಜಕೀಯ ವೆಕ್ತಿಗಳಿಗೆ ಇಂತಹ ಸಮುದಾಯದ ಬಗ್ಗೆ ಮಾತಿಗೂ ಹೀಯಾಳಿಸುವ ನೀಚ ರಾಜಕಾರಣಿ ಗೇ ಧಿಕ್ಕಾರ ಚುನಾವಣೆ ಸಮಯದಲ್ಲಿ ಜನಸಾಮಾನ್ಯರು ಮತದಾರರು ದೇವರು ಎನ್ನುತ್ತಾರೆ ಗೆದ್ದಮೇಲೆ ಜಾತಿ ನಿಂದಿಸುತ್ತಾರೆ ಇಂತಹವರನ್ನು ಸುಮ್ಮನೆ ಬಿಡಬಾರದು 🙏🌹🌹🌹🙏ಜೈ ಸುಡುಗಾಡು ಸಿದ್ದ ಜೈ ಅಲೆಮಾರಿ ಇಂತಿ ಧನಂಜಯ ಎಸ್ ಕಲ್ಯಾಣದವರ್ ಜಿಲ್ಲಾ ಅಧ್ಯಕ್ಷರು ಕರ್ನಾಟಕ ರಾಜ್ಯ ಸುಡುಗಾಡು ಸಿದ್ದ ಮಹಾ ಸಂಘ ಬೆಂಗಳೂರು ಜಿಲ್ಲಾ ಶಾಖೆ

  2. ಸಚಿವ ವಿ ಸೋಮಣ್ಣನವರು ಸುಡುಗಾಡು ಸಿದ್ಧ ಸಮುದಾಯದ ಬಗ್ಗೆ ಅತಿ ಕೀಳಾಗಿ ಮಾತನಾಡಿ ಆ ಸಮುದಾಯದ ಜನರಿಗೆ ತುಂಬಾ ನೋವುಂಟು ಮಾಡಿದ್ದಾರೆ ಹೀಗಾಗಿ ಅವರು ಅತಿ ಶೀಘ್ರದಲ್ಲಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಇಲ್ಲವಾದರೆ ರಾಜ್ಯದ ತಾಲೂಕು ಜಿಲ್ಲಾ ಮಟ್ಟದಲ್ಲಿ ಹೋರಾಟ ಮಾಡಬೇಕಾಗುತ್ತದೆ ಇಂತಿ ಹನುಮಂತ ಒಂಟೆತ್ತನವರ ರಾಜ್ಯ ಸಂಘಟನಾ ಕಾರ್ಯದರ್ಶಿ ಕರ್ನಾಟಕ ರಾಜ್ಯ ಸುಡುಗಾಡು ಸಿದ್ದ ಮಹಾಸಂಘ ಬೆಂಗಳೂರು

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...