Homeಕರ್ನಾಟಕಸುಡುಗಾಡುಸಿದ್ದರಿಗೆ ಅವಮಾನ: ಸಚಿವ ವಿ.ಸೋಮಣ್ಣ ವಿರುದ್ಧ ದೂರು ದಾಖಲು

ಸುಡುಗಾಡುಸಿದ್ದರಿಗೆ ಅವಮಾನ: ಸಚಿವ ವಿ.ಸೋಮಣ್ಣ ವಿರುದ್ಧ ದೂರು ದಾಖಲು

- Advertisement -
- Advertisement -

“ಸುಡುಗಾಡುಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ” ಎಂದು ವಸತಿ ಸಚಿವ ವಿ.ಸೋಮಣ್ಣ ನೀಡಿರುವ ಹೇಳಿಕೆಯ ವಿರುದ್ಧ ಕರ್ನಾಟಕ ರಾಜ್ಯ ಸುಡುಗಾಡುಸಿದ್ಧ ಮಹಾ ಸಂಘವು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗಕ್ಕೆ ದೂರು ನೀಡಿದೆ.

“ಸುಡುಗಾಡುಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ” ಎಂದು ರಾಜ್ಯ ಸರ್ಕಾರದ ವಸತಿ ಸಚಿವ ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಅವರು ಯಾರ ಮೇಲೆಯೇ ನೀಡಿರಲಿ ಅಥವಾ ಯಾವ ಕಾರಣಕ್ಕೆ ನೀಡಿರಲಿ ಅದು ಸುಡುಗಾಡುಸಿದ್ದ ಸಮುದಾಯದ ಮೇಲೆ ಕಳಂಕ ನೀಡುವಂತಹ ಹೇಯ ಹೇಳಿಕೆಯಾಗಿದೆ” ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಹನುಮಂತಪ್ಪ ದೂರಿನಲ್ಲಿ ಆರೋಪಿಸಿದ್ದಾರೆ.

ಸುಡುಗಾಡುಸಿದ್ಧ ಸಮುದಾಯ ಈ ನೆಲದ ಅತ್ಯಂತ ಪ್ರಾಚೀನ ಸಮುದಾಯವಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿದ್ದು, ಪಾರಂಪರಿಕ ಸಿದ್ಧ ಔಷಧಿಯನ್ನು ನೀಡುತ್ತಾ ತಲೆತಲಾಂತರಗಳಿಂದ ಸಮಾಜದ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು ಕಾಪಾಡಿಕೊಂಡು ಬಂದಿದೆ. ನಾಡಿನಲ್ಲಿ ಸುಮಾರು 20 ಲಕ್ಷ ಜನರು ಈ ಪರಂಪರೆಯಿಂದ ಬಂದವರಾಗಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ನನ್ನ ಸಮುದಾಯದ ಕುರಿತು ಅತ್ಯಂತ ನೀಚವಾಗಿ ಮಾತನಾಡಿರುವುದರಿಂದ ನನ್ನ ಇಡೀ ಸಮುದಾಯಕ್ಕೆ ಜಾತಿ ನಿಂದನೆಯಾಗಿದೆ. ಅಪಾರ ಅವಮಾನ, ಮಾನನಷ್ಟ ಹಾಗೂ ಜನಾಂಗಕ್ಕೆ ಕಳಂಕ ಉಂಟಾಗಿದೆ. ಈ ಕಾರಣಕ್ಕೆ ತಪ್ಪಿತಸ್ಥ ವಿ.ಸೋಮಣ್ಣನವರ ವಿರುದ್ಧ ತೀವ್ರ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ವಿನಂತಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡುತ್ತಾ ವಿ.ಸೋಮಣ್ಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಹೇಳಿಕೆ ನೀಡಿದ್ದರು. “ಅವರ ಕಾಲದಲ್ಲಿ ಬರೀ ಘೋಷಣೆ ಆಗಿತ್ತು. ನಾವು ಮನೆ ಕಟ್ಟಿಕೊಡುತ್ತಿದ್ದೇವೆ. ಇದು ನಿರಂತರ ಪ್ರಕ್ರಿಯೆಯಾಗಿದೆ. ರಾಜಕಾರಣಕ್ಕಾಗಿ ನನ್ನ ಮೇಲೆ ಆರೋಪ ಮಾಡಬೇಡಿ” ಎನ್ನುತ್ತಾ, ಸುಡುಗಾಡು ಸಿದ್ಧ ಜಾತಿಯನ್ನು ಅಪಮಾನಿಸಿ ಹೇಳಿಕೆ ನೀಡಿದ್ದರು.

ಇದನ್ನೂ ಓದಿರಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ಬೈಗುಳಗಳಿಗೂ ಈ ಸಮುದಾಯಗಳೇ ಬೇಕಾ?: ಸಿ.ಎಸ್.ದ್ವಾರಕನಾಥ್‌

ವಿ.ಸೋಮಣ್ಣ ಅವರ ಹೇಳಿಕೆಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು, ಅಲೆಮಾರಿ ಬುಡಕಟ್ಟು ಮಹಾಸಭಾ ಗೌರವಾಧ್ಯಕ್ಷರೂ ಆದ ಸಿ.ಎಸ್.ದ್ವಾರಕನಾಥ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಯಾರನ್ನು ಬೈಯಬೇಕಾದರೂ ಸುಡುಗಾಡು ಸಿದ್ದರನ್ನು ತೆಗೆದುಕೊಳ್ಳುತ್ತಾರೆ, ದೊಂಬರನ್ನು ತೆಗೆದುಕೊಳ್ಳುತ್ತಾರೆ, ದರ್ವೇಸಿಗಳನ್ನು ತೆಗೆದುಕೊಳ್ಳುತ್ತಾರೆ, ಸವಿತಾ ಸಮಾಜವನ್ನು ತೆಗೆದುಕೊಳ್ಳುತ್ತಾರೆ. ಬೈಗುಳಗಳಿಗೂ ಇದೇ ಸಮುದಾಯಗಳು ಇವರಿಗೆ ಬೇಕಾ?” ಎಂದು ಪ್ರಶ್ನಿಸಿದರು.

“ಆ ಸಮುದಾಯಗಳ ಬಗ್ಗೆ ಇವರಿಗೆ ಸ್ಪಷ್ಟವಾದ ಅರಿವು ಹಾಗೂ ಗೌರವ ಇರಬೇಕು. ಇಲ್ಲದಿದ್ದರೆ ಜಾತಿ ಅಹಂಕಾರದಿಂದ ಹೀಗೆ ಮಾತನಾಡುತ್ತಾರೆ. ಸೋಮಣ್ಣ ಅವರ ಅವರ ಹೇಳಿಕೆ ಜಾತಿ ನಿಂದನೆಯ ಅಡಿಯಲ್ಲಿ ಬರುತ್ತದೆ” ಎಂದರು.

‘ಸಹಜವಾಗಿ ಸುಡುಗಾಡುಸಿದ್ದರು ತಪ್ಪು ಮಾಡಿತ್ತಾರೆ ನಾವು ಅದನ್ನು ಸರಿಪಡಿಸಿದ್ದೇವೆ’ ಎಂಬ ಅರ್ಥ ಸೋಮಣ್ಣನವರ ಹೇಳಿಕೆಯಲ್ಲಿದೆ. ಇದರ ಮೂಲಾರ್ಥ ‘ಸುಡುಗಾಡುಸಿದ್ದರು ಸದಾ ತಪ್ಪು ಮಾಡುವವರು’ ಎಂದಾಗುತ್ತದೆ. ಹೀಗೆ ಒಂದು ಇಡೀ ಸಮುದಾಯವನ್ನು ತಪ್ಪಿತಸ್ಥರು ಎಂದು ಪರಿಗಣಿಸಿ ಕಟಕಟೆಯಲ್ಲಿ ನಿಲ್ಲಿಸಿರುವ ಸೋಮಣ್ಣನವರ ಹೇಳಿಕೆ ಅಕ್ಷಮ್ಯವಾದುದು ಎಂದು ಅಭಿಪ್ರಾಯಪಟ್ಟಿದ್ದಾರೆ.

“ಒಬ್ಬ ಸಚಿವರಾಗಿ ಸಂವಿಧಾನದ ಮೇಲೆ ಪ್ರಮಾಣ ಮಾಡಿ ಸರ್ಕಾರಿ ಆಡಳಿತಕ್ಕೆ ಬಂದಿರುವ ಮಂತ್ರಿಗೆ ಸಂವಿಧಾನದತ್ತವಾಗಿ ಈ ದೇಶದ ಸಭ್ಯ ನಾಗರಿಕರೆಂದು ಪರಿಗಣಿಸಲ್ಪಟ್ಟ ಇಡೀ ಒಂದು ಸಮುದಾಯವನ್ನೇ ತಪ್ಪಿತಸ್ಥರೆಂದು ಅಪಾದಿಸಿ ಹೇಳಿಕೆ ನೀಡಿರುವುದು ಆ ವ್ಯಕ್ತಿಯ ಅರಿವುಗೇಡಿತನ ಮತ್ತು ದುಷ್ಟತನವನ್ನು ತೋರುತ್ತದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಸುಡುಗಾಡುಸಿದ್ದ ಸಮುದಾಯದ ಸಾಮಾಜಿಕ ಕಾರ್ಯಕರ್ತ ಮಂಜುನಾಥ ಕಡೂರು, “ಸೋಮಣ್ಣ ಅವರ ಮೇಲೆ ಗೌರವವಿದೆ. ಅತ್ಯಂತ ಶೋಷಿತ ಸಮುದಾಯದ ಕುರಿತು ಯಾಕೆ ಹೀಗೆ ಮಾತನಾಡುತ್ತಾರೆ. ಇದು ನೋವು ತಂದಿದೆ. ಸೋಮಣ್ಣ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದೆವು. ಆದರೆ ನಮ್ಮ ಆಗ್ರಹಕ್ಕೆ ಬೆಲೆಯನ್ನೇ ನೀಡಲಿಲ್ಲ. ಹೀಗಾಗಿ ಆಯೋಗಕ್ಕೆ ದೂರು ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಿದ್ದೇವೆ” ಎಂದು ಎಚ್ಚರಿಸಿದ್ದಾರೆ.


ಇದನ್ನೂ ಓದಿರಿ: ಗುಜರಾತ್: ಮದುವೆಯಲ್ಲಿ ಸಾಂಪ್ರದಾಯಿಕ ಪೇಟ ಧರಿಸಿದ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಾಜಕೀಯ ವೆಕ್ತಿಗಳಿಗೆ ಇಂತಹ ಸಮುದಾಯದ ಬಗ್ಗೆ ಮಾತಿಗೂ ಹೀಯಾಳಿಸುವ ನೀಚ ರಾಜಕಾರಣಿ ಗೇ ಧಿಕ್ಕಾರ ಚುನಾವಣೆ ಸಮಯದಲ್ಲಿ ಜನಸಾಮಾನ್ಯರು ಮತದಾರರು ದೇವರು ಎನ್ನುತ್ತಾರೆ ಗೆದ್ದಮೇಲೆ ಜಾತಿ ನಿಂದಿಸುತ್ತಾರೆ ಇಂತಹವರನ್ನು ಸುಮ್ಮನೆ ಬಿಡಬಾರದು 🙏🌹🌹🌹🙏ಜೈ ಸುಡುಗಾಡು ಸಿದ್ದ ಜೈ ಅಲೆಮಾರಿ ಇಂತಿ ಧನಂಜಯ ಎಸ್ ಕಲ್ಯಾಣದವರ್ ಜಿಲ್ಲಾ ಅಧ್ಯಕ್ಷರು ಕರ್ನಾಟಕ ರಾಜ್ಯ ಸುಡುಗಾಡು ಸಿದ್ದ ಮಹಾ ಸಂಘ ಬೆಂಗಳೂರು ಜಿಲ್ಲಾ ಶಾಖೆ

  2. ಸಚಿವ ವಿ ಸೋಮಣ್ಣನವರು ಸುಡುಗಾಡು ಸಿದ್ಧ ಸಮುದಾಯದ ಬಗ್ಗೆ ಅತಿ ಕೀಳಾಗಿ ಮಾತನಾಡಿ ಆ ಸಮುದಾಯದ ಜನರಿಗೆ ತುಂಬಾ ನೋವುಂಟು ಮಾಡಿದ್ದಾರೆ ಹೀಗಾಗಿ ಅವರು ಅತಿ ಶೀಘ್ರದಲ್ಲಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಇಲ್ಲವಾದರೆ ರಾಜ್ಯದ ತಾಲೂಕು ಜಿಲ್ಲಾ ಮಟ್ಟದಲ್ಲಿ ಹೋರಾಟ ಮಾಡಬೇಕಾಗುತ್ತದೆ ಇಂತಿ ಹನುಮಂತ ಒಂಟೆತ್ತನವರ ರಾಜ್ಯ ಸಂಘಟನಾ ಕಾರ್ಯದರ್ಶಿ ಕರ್ನಾಟಕ ರಾಜ್ಯ ಸುಡುಗಾಡು ಸಿದ್ದ ಮಹಾಸಂಘ ಬೆಂಗಳೂರು

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...