Homeಕರ್ನಾಟಕಸುಡುಗಾಡುಸಿದ್ದರಿಗೆ ಅವಮಾನ: ಸಚಿವ ವಿ.ಸೋಮಣ್ಣ ವಿರುದ್ಧ ದೂರು ದಾಖಲು

ಸುಡುಗಾಡುಸಿದ್ದರಿಗೆ ಅವಮಾನ: ಸಚಿವ ವಿ.ಸೋಮಣ್ಣ ವಿರುದ್ಧ ದೂರು ದಾಖಲು

- Advertisement -
- Advertisement -

“ಸುಡುಗಾಡುಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ” ಎಂದು ವಸತಿ ಸಚಿವ ವಿ.ಸೋಮಣ್ಣ ನೀಡಿರುವ ಹೇಳಿಕೆಯ ವಿರುದ್ಧ ಕರ್ನಾಟಕ ರಾಜ್ಯ ಸುಡುಗಾಡುಸಿದ್ಧ ಮಹಾ ಸಂಘವು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗಕ್ಕೆ ದೂರು ನೀಡಿದೆ.

“ಸುಡುಗಾಡುಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ” ಎಂದು ರಾಜ್ಯ ಸರ್ಕಾರದ ವಸತಿ ಸಚಿವ ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಅವರು ಯಾರ ಮೇಲೆಯೇ ನೀಡಿರಲಿ ಅಥವಾ ಯಾವ ಕಾರಣಕ್ಕೆ ನೀಡಿರಲಿ ಅದು ಸುಡುಗಾಡುಸಿದ್ದ ಸಮುದಾಯದ ಮೇಲೆ ಕಳಂಕ ನೀಡುವಂತಹ ಹೇಯ ಹೇಳಿಕೆಯಾಗಿದೆ” ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಹನುಮಂತಪ್ಪ ದೂರಿನಲ್ಲಿ ಆರೋಪಿಸಿದ್ದಾರೆ.

ಸುಡುಗಾಡುಸಿದ್ಧ ಸಮುದಾಯ ಈ ನೆಲದ ಅತ್ಯಂತ ಪ್ರಾಚೀನ ಸಮುದಾಯವಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿದ್ದು, ಪಾರಂಪರಿಕ ಸಿದ್ಧ ಔಷಧಿಯನ್ನು ನೀಡುತ್ತಾ ತಲೆತಲಾಂತರಗಳಿಂದ ಸಮಾಜದ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು ಕಾಪಾಡಿಕೊಂಡು ಬಂದಿದೆ. ನಾಡಿನಲ್ಲಿ ಸುಮಾರು 20 ಲಕ್ಷ ಜನರು ಈ ಪರಂಪರೆಯಿಂದ ಬಂದವರಾಗಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ನನ್ನ ಸಮುದಾಯದ ಕುರಿತು ಅತ್ಯಂತ ನೀಚವಾಗಿ ಮಾತನಾಡಿರುವುದರಿಂದ ನನ್ನ ಇಡೀ ಸಮುದಾಯಕ್ಕೆ ಜಾತಿ ನಿಂದನೆಯಾಗಿದೆ. ಅಪಾರ ಅವಮಾನ, ಮಾನನಷ್ಟ ಹಾಗೂ ಜನಾಂಗಕ್ಕೆ ಕಳಂಕ ಉಂಟಾಗಿದೆ. ಈ ಕಾರಣಕ್ಕೆ ತಪ್ಪಿತಸ್ಥ ವಿ.ಸೋಮಣ್ಣನವರ ವಿರುದ್ಧ ತೀವ್ರ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ವಿನಂತಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡುತ್ತಾ ವಿ.ಸೋಮಣ್ಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಹೇಳಿಕೆ ನೀಡಿದ್ದರು. “ಅವರ ಕಾಲದಲ್ಲಿ ಬರೀ ಘೋಷಣೆ ಆಗಿತ್ತು. ನಾವು ಮನೆ ಕಟ್ಟಿಕೊಡುತ್ತಿದ್ದೇವೆ. ಇದು ನಿರಂತರ ಪ್ರಕ್ರಿಯೆಯಾಗಿದೆ. ರಾಜಕಾರಣಕ್ಕಾಗಿ ನನ್ನ ಮೇಲೆ ಆರೋಪ ಮಾಡಬೇಡಿ” ಎನ್ನುತ್ತಾ, ಸುಡುಗಾಡು ಸಿದ್ಧ ಜಾತಿಯನ್ನು ಅಪಮಾನಿಸಿ ಹೇಳಿಕೆ ನೀಡಿದ್ದರು.

ಇದನ್ನೂ ಓದಿರಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ಬೈಗುಳಗಳಿಗೂ ಈ ಸಮುದಾಯಗಳೇ ಬೇಕಾ?: ಸಿ.ಎಸ್.ದ್ವಾರಕನಾಥ್‌

ವಿ.ಸೋಮಣ್ಣ ಅವರ ಹೇಳಿಕೆಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು, ಅಲೆಮಾರಿ ಬುಡಕಟ್ಟು ಮಹಾಸಭಾ ಗೌರವಾಧ್ಯಕ್ಷರೂ ಆದ ಸಿ.ಎಸ್.ದ್ವಾರಕನಾಥ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಯಾರನ್ನು ಬೈಯಬೇಕಾದರೂ ಸುಡುಗಾಡು ಸಿದ್ದರನ್ನು ತೆಗೆದುಕೊಳ್ಳುತ್ತಾರೆ, ದೊಂಬರನ್ನು ತೆಗೆದುಕೊಳ್ಳುತ್ತಾರೆ, ದರ್ವೇಸಿಗಳನ್ನು ತೆಗೆದುಕೊಳ್ಳುತ್ತಾರೆ, ಸವಿತಾ ಸಮಾಜವನ್ನು ತೆಗೆದುಕೊಳ್ಳುತ್ತಾರೆ. ಬೈಗುಳಗಳಿಗೂ ಇದೇ ಸಮುದಾಯಗಳು ಇವರಿಗೆ ಬೇಕಾ?” ಎಂದು ಪ್ರಶ್ನಿಸಿದರು.

“ಆ ಸಮುದಾಯಗಳ ಬಗ್ಗೆ ಇವರಿಗೆ ಸ್ಪಷ್ಟವಾದ ಅರಿವು ಹಾಗೂ ಗೌರವ ಇರಬೇಕು. ಇಲ್ಲದಿದ್ದರೆ ಜಾತಿ ಅಹಂಕಾರದಿಂದ ಹೀಗೆ ಮಾತನಾಡುತ್ತಾರೆ. ಸೋಮಣ್ಣ ಅವರ ಅವರ ಹೇಳಿಕೆ ಜಾತಿ ನಿಂದನೆಯ ಅಡಿಯಲ್ಲಿ ಬರುತ್ತದೆ” ಎಂದರು.

‘ಸಹಜವಾಗಿ ಸುಡುಗಾಡುಸಿದ್ದರು ತಪ್ಪು ಮಾಡಿತ್ತಾರೆ ನಾವು ಅದನ್ನು ಸರಿಪಡಿಸಿದ್ದೇವೆ’ ಎಂಬ ಅರ್ಥ ಸೋಮಣ್ಣನವರ ಹೇಳಿಕೆಯಲ್ಲಿದೆ. ಇದರ ಮೂಲಾರ್ಥ ‘ಸುಡುಗಾಡುಸಿದ್ದರು ಸದಾ ತಪ್ಪು ಮಾಡುವವರು’ ಎಂದಾಗುತ್ತದೆ. ಹೀಗೆ ಒಂದು ಇಡೀ ಸಮುದಾಯವನ್ನು ತಪ್ಪಿತಸ್ಥರು ಎಂದು ಪರಿಗಣಿಸಿ ಕಟಕಟೆಯಲ್ಲಿ ನಿಲ್ಲಿಸಿರುವ ಸೋಮಣ್ಣನವರ ಹೇಳಿಕೆ ಅಕ್ಷಮ್ಯವಾದುದು ಎಂದು ಅಭಿಪ್ರಾಯಪಟ್ಟಿದ್ದಾರೆ.

“ಒಬ್ಬ ಸಚಿವರಾಗಿ ಸಂವಿಧಾನದ ಮೇಲೆ ಪ್ರಮಾಣ ಮಾಡಿ ಸರ್ಕಾರಿ ಆಡಳಿತಕ್ಕೆ ಬಂದಿರುವ ಮಂತ್ರಿಗೆ ಸಂವಿಧಾನದತ್ತವಾಗಿ ಈ ದೇಶದ ಸಭ್ಯ ನಾಗರಿಕರೆಂದು ಪರಿಗಣಿಸಲ್ಪಟ್ಟ ಇಡೀ ಒಂದು ಸಮುದಾಯವನ್ನೇ ತಪ್ಪಿತಸ್ಥರೆಂದು ಅಪಾದಿಸಿ ಹೇಳಿಕೆ ನೀಡಿರುವುದು ಆ ವ್ಯಕ್ತಿಯ ಅರಿವುಗೇಡಿತನ ಮತ್ತು ದುಷ್ಟತನವನ್ನು ತೋರುತ್ತದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಸುಡುಗಾಡುಸಿದ್ದ ಸಮುದಾಯದ ಸಾಮಾಜಿಕ ಕಾರ್ಯಕರ್ತ ಮಂಜುನಾಥ ಕಡೂರು, “ಸೋಮಣ್ಣ ಅವರ ಮೇಲೆ ಗೌರವವಿದೆ. ಅತ್ಯಂತ ಶೋಷಿತ ಸಮುದಾಯದ ಕುರಿತು ಯಾಕೆ ಹೀಗೆ ಮಾತನಾಡುತ್ತಾರೆ. ಇದು ನೋವು ತಂದಿದೆ. ಸೋಮಣ್ಣ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದೆವು. ಆದರೆ ನಮ್ಮ ಆಗ್ರಹಕ್ಕೆ ಬೆಲೆಯನ್ನೇ ನೀಡಲಿಲ್ಲ. ಹೀಗಾಗಿ ಆಯೋಗಕ್ಕೆ ದೂರು ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಿದ್ದೇವೆ” ಎಂದು ಎಚ್ಚರಿಸಿದ್ದಾರೆ.


ಇದನ್ನೂ ಓದಿರಿ: ಗುಜರಾತ್: ಮದುವೆಯಲ್ಲಿ ಸಾಂಪ್ರದಾಯಿಕ ಪೇಟ ಧರಿಸಿದ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಾಜಕೀಯ ವೆಕ್ತಿಗಳಿಗೆ ಇಂತಹ ಸಮುದಾಯದ ಬಗ್ಗೆ ಮಾತಿಗೂ ಹೀಯಾಳಿಸುವ ನೀಚ ರಾಜಕಾರಣಿ ಗೇ ಧಿಕ್ಕಾರ ಚುನಾವಣೆ ಸಮಯದಲ್ಲಿ ಜನಸಾಮಾನ್ಯರು ಮತದಾರರು ದೇವರು ಎನ್ನುತ್ತಾರೆ ಗೆದ್ದಮೇಲೆ ಜಾತಿ ನಿಂದಿಸುತ್ತಾರೆ ಇಂತಹವರನ್ನು ಸುಮ್ಮನೆ ಬಿಡಬಾರದು 🙏🌹🌹🌹🙏ಜೈ ಸುಡುಗಾಡು ಸಿದ್ದ ಜೈ ಅಲೆಮಾರಿ ಇಂತಿ ಧನಂಜಯ ಎಸ್ ಕಲ್ಯಾಣದವರ್ ಜಿಲ್ಲಾ ಅಧ್ಯಕ್ಷರು ಕರ್ನಾಟಕ ರಾಜ್ಯ ಸುಡುಗಾಡು ಸಿದ್ದ ಮಹಾ ಸಂಘ ಬೆಂಗಳೂರು ಜಿಲ್ಲಾ ಶಾಖೆ

  2. ಸಚಿವ ವಿ ಸೋಮಣ್ಣನವರು ಸುಡುಗಾಡು ಸಿದ್ಧ ಸಮುದಾಯದ ಬಗ್ಗೆ ಅತಿ ಕೀಳಾಗಿ ಮಾತನಾಡಿ ಆ ಸಮುದಾಯದ ಜನರಿಗೆ ತುಂಬಾ ನೋವುಂಟು ಮಾಡಿದ್ದಾರೆ ಹೀಗಾಗಿ ಅವರು ಅತಿ ಶೀಘ್ರದಲ್ಲಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಇಲ್ಲವಾದರೆ ರಾಜ್ಯದ ತಾಲೂಕು ಜಿಲ್ಲಾ ಮಟ್ಟದಲ್ಲಿ ಹೋರಾಟ ಮಾಡಬೇಕಾಗುತ್ತದೆ ಇಂತಿ ಹನುಮಂತ ಒಂಟೆತ್ತನವರ ರಾಜ್ಯ ಸಂಘಟನಾ ಕಾರ್ಯದರ್ಶಿ ಕರ್ನಾಟಕ ರಾಜ್ಯ ಸುಡುಗಾಡು ಸಿದ್ದ ಮಹಾಸಂಘ ಬೆಂಗಳೂರು

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...